Connect with us

ಸಿನಿ ಸುದ್ದಿ

“ಚಾರ್ಲಿ” ಗೆದ್ದಳು ; ಸಂತಸ ತಂದಳು..!

Published

on

ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. “ಚಾರ್ಲಿ” ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ ಮುನ್ನಡೆಯುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ.

ಈವರೆಗೂ ಒಟ್ಟಾರೆ 150 ಕೋಟಿ ಗ್ರಾಸ್​ ಗಳಿಕೆಯಾಗಿದೆ. ಅದರಲ್ಲಿ 90ರಿಂದ 100 ಕೋಟಿವರೆಗೂ ಲಾಭ ಬಂದಿದೆ. ಅದರಲ್ಲಿ ಶೇ. 5ರಷ್ಟು ಚಾರ್ಲಿಗೆ ಸಲ್ಲುವಂತದ್ದು. ಅವಳ ಹೆಸರಿನಲ್ಲಿ ಭಾರತದಾದ್ಯಂತ ಶ್ವಾನಗಳ ಇಂಬ್ರಿಡಿಂಗ್​ ವಿರುದ್ಧ ಹೋರಾಡುತ್ತಿರುವ ಹಾಗೂ ಅದನ್ನು ದತ್ತು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್​ಜಿಓಗಳಿಗೆ ಸಹಾಯ ಮಾಡುವ ಕುರಿತು ಯೋಚನೆ ಮಾಡಿದ್ದೇವೆ. ಶೇ.5ರಷ್ಟು ಎಂದರೆ ಐದು ಕೋಟಿ ರೂಪಾಯಿಗಳಷ್ಟಾಗುತ್ತದೆ.

ಅದನ್ನು ನೇರವಾಗಿ ಹಂಚಿಕೆ ಮಾಡಬೇಕಾ? ಅಥವಾ ಚಾರ್ಲಿ ಹೆಸರಿನಲ್ಲಿ ಒಂದು ಅಕೌಂಟ್​ ಮಾಡಿ ದುಡ್ಡಿಟ್ಟು, ಪ್ರತಿ ತಿಂಗಳು ಸಿಗುವ ಬಡ್ಡಿಯಲ್ಲಿ ಸಹಾಯ ಮಾಡಬೇಕಾ? ಎಂಬ ವಿಷಯವಾಗಿ ಇನ್ನೂ ತೀರ್ಮಾನವಾಗಿಲ್ಲ. ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರಿಗೆ ಶೇ. 10ರಷ್ಟು ಲಾಭದಲ್ಲಿ ಹಂಚಿಕೆ ಮಾಡಲಿದ್ದೇವೆ. ಆ ಮೊತ್ತವೇ 10 ಕೋಟಿ ರೂಪಾಯಿಗಳಷ್ಟಾಗುತ್ತದೆ. ಈ ಪಟ್ಟಿಯಲ್ಲಿ ನಾನಿಲ್ಲ. ಏಕೆಂದರೆ, ನಾನು ಒಬ್ಬ ನಟ ಮತ್ತು ನಿರ್ಮಾಪಕನಾಗಿರುವುದರಿಂದ, ನನ್ನನ್ನು ಬಿಟ್ಟು ಮಿಕ್ಕವರಿಗೆ ಹಂಚಲಿದ್ದೇವೆ ಎಂದರು ರಕ್ಷಿತ್ ಶೆಟ್ಟಿ.

25 ದಿನ ಕರ್ನಾಟಕದಲ್ಲಿ 100 ಪ್ಲಸ್​ ಸೆಂಟರ್​ಗಳಲ್ಲಿ ಚಿತ್ರ ಪ್ರದರ್ಶನವಾಗುತ್ತಿದೆ. ಬೇರೆ ದೇಶಗಳಲ್ಲಿ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಬಿಡುಗಡೆಯಾಗಿ 15 ದಿನಗಳ ನಂತರ ಚಿತ್ರತಂಡದವರು ದುಬೈಗೆ ಹೋಗಿ ಬಂದಿದ್ದಾರೆ. ಮಾರಿಷಸ್​, ಜಪಾನ್​ ಮುಂತಾದ ಕಡೆ ಸಹ ಚಿತ್ರ ಪ್ರದರ್ಶನವಾಗುತ್ತಿದೆ. ಅಲ್ಲಿ ಪ್ರದರ್ಶನಗಳ ಪ್ರಮಾಣ ಕಡಿಮೆ ಇರಬಹುದು.

ಆದರೆ, ಕನ್ನಡಿಗರು ಎಲ್ಲೆಲ್ಲಿ ಇದ್ದಾರೋ, ಅಲ್ಲೆಲ್ಲ ಪ್ರದರ್ಶನವಾಗುತ್ತಿದೆ. ಸಾಮಾನ್ಯವಾಗಿ ಚಿತ್ರಕ್ಕೆ ಜನ ಬರುತ್ತಿಲ್ಲ ಎಂದು ಆರೋಪ ಮಾಡುತ್ತಾರೆ. ಆದರೆ, ಚಿತ್ರವನ್ನು ಚೆನ್ನಾಗಿ ಪ್ರಮೋಟ್​ ಮಾಡಿದರೆ, ಖಂಡಿತಾ ಜನ ಬರುತ್ತಾರೆ ಎಂದು “777 ಚಾರ್ಲಿ” ತೋರಿಸಿಕೊಟ್ಟಿದೆ. ಚಿತ್ರಕ್ಕೆ ಈಗಲೂ ಜನ ಬರುತ್ತಿದ್ದಾರೆ. ಭಾನುವಾರ 1 ಕೋಟಿಗೂ ಹೆಚ್ಚು ಗಳಿಕೆಯಾಗಿದೆ. ಚಿತ್ರ ಬಿಡುಗಡೆಯಾಗಿ 25 ದಿನಗಳ ನಂತರವೂ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಮಲ್ಟಿಪ್ಲೆಕ್ಸ್​ಗಳಲ್ಲಿ ಬೇಡಿಕೆ ಇದೆ ಎಂದರು ವಿತರಕ ಕಾರ್ತಿಕ್ ಗೌಡ.

ಸಾಮಾನ್ಯವಾಗಿ ನಾಯಕಿ ಅಂದರೆ ಪ್ರೇಮಕಥೆ ಇರುತ್ತದೆ. ಇಲ್ಲಿ ಹಾಗಿಲ್ಲ. ಆದರೂ ನನ್ನ ಪಾತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎನ್ನುವುದೇ ಸಂತೋಷ. ಅವಕಾಶ ಕೊಟ್ಟ ಎಲ್ಲರಿಗೂ ನಾಯಕಿ ಸಂಗೀತ ಶೃಂಗೇರಿ ಧನ್ಯವಾದಗಳನ್ನು ಸಲ್ಲಿಸಿದರು.

ಸ್ನೇಹಿತರು ಮತ್ತು ಸಂಬಂಧಿಕರು ಚಿತ್ರ ನೋಡಿ ಖುಷಿಪಟ್ಟರು. ನಾವು 65 ಜನ ಒಟ್ಟಿಗೆ ಸಿನಿಪೊಲಿಸ್​ಗೆ ಹೋಗಿ ಚಿತ್ರ ನೋಡಿ ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮ ಆಚರಿಸಿದ್ದೇವೆ. ನಾನು ಕ್ಲಾಸ್​ಗೆ ಹೋಗುವಾಗ ಚಾರ್ಲಿ ಹುಡುಗಿ ಅಂತ ಎಲ್ಲ ಹೇಳುತ್ತಾರೆ. ಸೆಲ್ಫಿ ತೆಗೆಸಿಕೊಂಡು ಆಲ್​ ದಿ ಬೆಸ್ಟ್​ ಹೇಳುತ್ತಾರೆ ಎಂದು ಪುಟಾಣಿ ಶಾರ್ವರಿ ತಮ್ಮ ಅನುಭವ ಹಂಚಿಕೊಂಡರು.

ಸೋಲು ಹಲವು ಪಾಠ ಕಲಿಸುತ್ತದೆ. ಗೆಲುವು ಹಲವು ದಾರಿಗಳನ್ನು ತೋರಿಸುತ್ತವೆ. ಸಹಾಯಕ ನಿರ್ದೇಶಕನಾಗಿ ಮೂರು ಸಿನಿಮಾಗಳನ್ನು ಮಾಡಿದ್ದೇನೆ. ಸೋಲು, ಗೆಲುವು ಎರಡನ್ನು ನೋಡಿದ್ದೀನಿ. ಸೋಲು ನೋಡಿರುವುದರಿಂದ ಗೆಲುವಿನ ಮಹತ್ವ ಗೊತ್ತಾಯಿತು. ಈ ಜರ್ನಿಯಲ್ಲಿ ಹಲವರಿದ್ದಾರೆ. ಒಂದೇ ಮನಸ್ಥಿತಿಯವರಾದ್ದರಿಂದ ಇಂಥದ್ದೊಂದು ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಯಿತು.

ಚಿತ್ರ 25 ದಿನ ಪೂರೈಸಿದೆ. ಮುಂದೆ ಸಹ ಇದೇ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಲಾಭ ಕೊಡುತ್ತದೆ ಎಂಬ ನಂಬಿಕೆ ಇದೆ. ಈ ಗೆಲುವಿನಿಂದ ಇನ್ನಷ್ಟು ಪ್ರಯತ್ನಗಳನ್ನು ಮಾಡುವುದಕ್ಕೆ ಸ್ಫೂರ್ತಿ ಸಿಕ್ಕಿದೆ. ಕಿರಿಕ್​ ಪಾರ್ಟಿ ಮಾಡಿದಾಗ ಹಣದ ಅಭಾವವಿತ್ತು. ಆಗ ರಕ್ಷಿತ್ ಎಲ್ಲರನ್ನೂ ಕರೆದು, ಚಿತ್ರ ಚೆನ್ನಾಗಿ ಹೋದರೆ ಇನ್ನಷ್ಟು ಕೊಡುವುದಾಗಿ ಹೇಳಿದ್ದರು. ಅದರಂತೆ ಚಿತ್ರ ಗೆದ್ದ ಮೇಲೆ ಹಲವರಿಗೆ ಅವರ ಪಾಲು ಕೊಟ್ಟರು. ಇದನ್ನು ನೋಡಿ ಕೆಲವರು ಕಣ್ಣೀರು ಹಾಕಿದ್ದು ನೆನಪಿದೆ. ಈಗಲೂ ರಕ್ಷಿತ್​ ಅದನ್ನೇ ಮುಂದುವರೆಸಿದ್ದಾರೆ ಎಂದರು ನಿರ್ದೇಶಕ ಕಿರಣ್ ರಾಜ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending