ದಿನದ ಸುದ್ದಿ
ಮತದಾರರ ಪಟ್ಟಿಯಲ್ಲಿ ಆಧಾರ್ ನಮೂದು ಪರೀಕ್ಷಿಸಿಕೊಳ್ಳಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ಸುದ್ದಿದಿನ,ದಾವಣಗೆರೆ : ಭಾರತ ಚುನಾವಣಾ ಆಯೋಗದ ( Election commission) ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ( Adhar card number) ನೀಡಿ, ಮತದಾರರ ಪಟ್ಟಿಯಲ್ಲಿ ನಮೂದಿಸಿರುವುದನ್ನು ದೃಢೀಕರಿಸಿಕೊಳ್ಳಲು ಮುಂದಾಗಬೇಕು. ಈ ಪ್ರಕ್ರಿಯೆ ಯಶಸ್ವಿಗೊಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ( shivananda kapashi) ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯಲ್ಲಿ ಮತದಾರರ ದೃಢೀಕರಣ, ಆಧಾರ್ ಜೋಡಣೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಏರ್ಪಡಿಸಲಾದ ರಾಜಕೀಯ ಪಕ್ಷಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಮತ್ತು ಮತದಾರರ ನೊಂದಣಿ ನಿಯಮಗಳು 1960 ರ ಪ್ರಕಾರ ಮತದಾರರ ನೋಂದಣಿಯ ನಮೂನೆಗಳಲ್ಲಿ ಪ್ರಸ್ತುತ ಬಹಳಷ್ಟು ಮಾರ್ಪಾಡುಗಳನ್ನು ಮಾಡಲಾಗಿದೆ. ಇದರಲ್ಲಿ ನಮೂನೆ 6-ಬಿ ಅನ್ನು ಹೊಸದಾಗಿ ಪರಿಚಯಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ನಮೂದುಗಳನ್ನು ದೃಢೀಕರಿಸಲು ಸಂಬಂಧಪಟ್ಟ ಮತದಾರರಿಂದ ಆಧಾರ್ ಸಂಖ್ಯೆ ಪಡೆಯಲು ಈ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆನ್ಲೈನ್ ಅಥವಾ ಆಫ್ಲೈನ್ ಮೂಲಕವೂ ಆಧಾರ್ ಜೋಡಣೆಗೆ ಅವಕಾಶ ಕಲ್ಪಿಸಲಾಗಿದ್ದು. ಆಫ್ಲೈನ್ ನಮೂನೆ 6-ಬಿ ಯನ್ನು ಸಂಬಂಧಪಟ್ಟ ಮತದಾರರ ನೋಂದಾಣಾಧಿಕಾರಿ, ತಹಶೀಲ್ದಾರರ ಕಛೇರಿ ಅಥವಾ ಬೂತ್ ಮಟ್ಟದ ಅಧಿಕಾರಿಗಳಿಂದ ಪಡೆದು ಸಲ್ಲಿಸಬಹುದು.
ಆನ್ಲೈನ್ ಮೂಲಕವೂ ಅವಕಾಶವಿದ್ದು, ಮತದಾರರು ಆಧಾರ್ ಸಂಖ್ಯೆಯನ್ನು ಎನ್ವಿಎಸ್ಪಿ ನ್ಯಾಷನಲ್ ವೋಟರ್ಸ ಸರ್ವಿಸ, ವಿಹೆಚ್ಎ ವೋಟರ್ ಹೆಲ್ಪ್ಲೈನ್ ಆ್ಯಪ್ ಹಾಗೂ ಗರುಡ ಆ್ಯಪ್ಗಳ ಮೂಲಕ ಅಥವಾ ವೋಟರ್ ಪೋರ್ಟಲ್ ಮುಖಾಂತರ ಮೊಬೈಲ್ ಮೂಲಕವೇ ಸ್ವಯಂ ದೃಢೀಕರಣದೊಂದಿಗೆ ಸಲ್ಲಿಸಬಹುದು.
ಮತದಾರರು ಸ್ವಯಂ ದೃಢೀಕರಣ ಬಯಸದಿದ್ದರೆ ಅಥವಾ ಆನ್ಲೈನ್ ಸ್ವಯಂ ದೃಢೀಕರಣ ವಿಫಲವಾದಲ್ಲಿ, ಮತದಾರರು ದೃಢೀಕರಣವಿಲ್ಲದೆ ಆಫ್ಲೈನ್ನಲ್ಲೆ ಅಗತ್ಯ ಲಗತ್ತುಗಳೊಂದಿಗೆ ನಮೂನೆ 6-ಬಿ ನಲ್ಲಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಜಿಲ್ಲೆಯಲ್ಲಿ ಬರುವ ಆಗಸ್ಟ್ 04 ರಿಂದ ವಿಶೇಷ ಜನಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಬೂತ್ ಮಟ್ಟದಲ್ಲಿ, ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿಯೂ ವ್ಯಾಪಕ ಪ್ರಚಾರ ನೀಡಲಾಗುವುದು.
ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬಿಎಲ್ಎ ರೊಂದಿಗೆ, ಬೂತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು, ಈ ಪ್ರಕ್ರಿಯೆಯ ಯಶಸ್ವಿಗೆ ಸಹಕಾರ ನೀಡಬೇಕು. ಅರ್ಹ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡುವ ಮತ್ತು ಅನರ್ಹ ಮತದಾರರನ್ನು ತೆಗೆದುಹಾಕುವ ಹಾಗೂ ಮತದಾರರಿಂದ ಸ್ವಯಂ ಪ್ರೇರಿತ ಆಧಾರ್ ಸಂಗ್ರಹಣೆ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ರಾಜಕೀಯ ಪಕ್ಷಗಳು ಭಾರತ ಚುನಾವಣಾ ಆಯೋಗದ ಶುದ್ಧ, ನಿಖರ ಮತ್ತು ದೋಷಮುಕ್ತ ಮತದಾರರ ಪಟ್ಟಿಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಹೇಳಿದರು.
ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
ಜಿಲ್ಲೆಯಲ್ಲಿ ಸದ್ಯ 1692 ಮತಗಟ್ಟೆಗಳಿದ್ದು ಪುರುಷರು 7,04,685 ಮಹಿಳೆಯರು 6,98,986 ಇತರೆ 122 ಸೇರಿದಂತೆ ಒಟ್ಟು 14,03,793 ಲಕ್ಷ ಮತದಾರರಿದ್ದಾರೆ. ಆಧಾರ್ ಸಂಖ್ಯೆ ನೀಡಿ ಮತದಾರರ ಪಟ್ಟಿ ದೃಢೀಕರಣ ಪ್ರಕ್ರಿಯೆ ಆಗಸ್ಟ್ 04 ರಿಂದ ಜಾರಿಗೆ ಬರಲಿದ್ದು, ಇದು ನಿರಂತರವಾಗಿ ಜಾರಿಯಲ್ಲಿರುತ್ತದೆ. ಮತದಾರರ ನೊಂದಣಿಗೆ ಜನವರಿ 01, ಏಪ್ರಿಲ್ 01, ಜುಲೈ 01 ಹಾಗೂ ಅಕ್ಟೋಬರ್ 01 ರಂತೆ ಒಟ್ಟು ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಿದ್ದು, ಮತದಾರರ ಪಟ್ಟಿಗೆ ಅರ್ಹರು ತಮ್ಮ ಹೆಸರು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ನಮೂನೆ 07 ರಲ್ಲಿ ಹೆಸರು ತೆಗೆದುಹಾಕಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 08 ರಲ್ಲಿ ಮತದಾರರ ನಿವಾಸ ಬದಲಾವಣೆ, ವಿವಿಧ ತಿದ್ದುಪಡಿಗಳು, ಮತದಾರರ ಗುರುತಿನ ಚೀಟಿ ಬದಲಾವಣೆ ಹಾಗೂ ವಿಕಲಚೇತನ ವ್ಯಕ್ತಿ ಗುರುತಿಸುವುದಕ್ಕಾಗಿ ಬಳಸಲಾಗುವುದು.
ಚುನಾವಣಾ ಕ್ಷೇತ್ರದೊಳಗೆ ಒಂದು ಭಾಗ ಸಂಖ್ಯೆಯಿಂದ ಮತ್ತೋಂದು ಭಾಗಸಂಖ್ಯೆಗೆ ವರ್ಗಾವಣೆ ಹೊಂದಲು ಹಾಗೂ ಒಂದು ಕ್ಷೇತ್ರದಿಂದ ಮತ್ತೋಂದು ಕ್ಷೇತ್ರಕ್ಕೆ ಬದಲಾವಣೆ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಮತಗಟ್ಟೆಗಳ ರ್ಯಾಷಲೈಜೇಷನ್ ಅಥವಾ ಮರು ವ್ಯವಸ್ಥೆ ಕಾರ್ಯ ಆಗಸ್ಟ್ 04 ರಿಂದ ಅಕ್ಟೋಬರ್ 24 ರವರೆಗೆ ನಡೆಯಲಿದ್ದು, ಮತದಾರರ ಕರಡು ಪಟ್ಟಿ ನವೆಂಬರ್ 09 ರಂದು ಪ್ರಕಟವಾಗಲಿದೆ.
ಆಗಸ್ಟ್ 08 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಡಿಸೆಂಬರ್ 26 ರ ಒಳಗೆ ವಿಲೇವಾರಿ ಮಾಡಲಾಗುವುದು, ಮತದಾರರ ಅಂತಿಮ ಪಟ್ಟಿ 2023 ರ ಜನವರಿ 05 ಕ್ಕೆ ಪ್ರಕಟಗೊಳ್ಳಲಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ