ದಿನದ ಸುದ್ದಿ

ಚಿಕ್ಕಮಗಳೂರು | ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕು ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಬಾಳೂರು ಮೀಸಲು ಅರಣ್ಯ ಪ್ರದೇಶದ ದೇವರಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿ 10 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ನಾಶವಾಗಿದೆ. ಕುಂದೂರು ಸಮೀಪದ ಕಣೇಗದ್ದೆ ಗ್ರಾಮದಲ್ಲಿ ಕಾಫಿತೋಟಕ್ಕೆ ಬೆಂಕಿ ಬಿದ್ದು ಸುಮಾರು 15 ಎಕರೆ ಕಾಫಿ ತೋಟ ನಾಶವಾಗಿದೆ. ಮೂಡಿಗೆರೆ ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಕಳಸ ತಾಲೂಕು ಬಲಿಗೆ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಸಾಕಷ್ಟು ಅರಣ್ಯ ನಾಶವಾಗಿದೆ. ಅರಣ್ಯಾಧಿಕಾರಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version