Connect with us

ದಿನದ ಸುದ್ದಿ

ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ

Published

on

ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಎ. ವಿ.ಕೆ ಕಾಲೇಜ್ ರಸ್ತೆಯಲ್ಲಿನ ಗುರುಭವನದಲ್ಲಿ ಆಯೋಜಿಸಲಾಗಿದ್ದ ನಿಮ್ಮ ಹಕ್ಕು ನಿಮ್ಮ ಧ್ವನಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಸಮಾನತೆಯ ಹಕ್ಕು ಹೀಗೆ ತಮ್ಮ ಹಕ್ಕುಗಳು ನಾವು ತಾಯಿಯ ಗರ್ಭದಲ್ಲಿರುವಾಗಲೇ ಮಕ್ಕಳ ಹಕ್ಕುಗಳು ಆರಂಭವಾಗುತ್ತದೆ. ಅವುಗಳನ್ನು ರಕ್ಷಿಸುವ ಸಲುವಾಗಿಯೇ ಸರ್ಕಾರ ವಿವಿಧ ಯೋಜನೆ ರೂಪಿಸಿದೆ. ಮಕ್ಕಳ ರಕ್ಷಣಾ ಘಟಕ, ಕಲ್ಯಾಣ ಸಮಿತಿ ರಚಿಸಿದೆ. ನಿಮ್ಮ ಹಕ್ಕುಗಳಿಗೆ ಚ್ಯುತಿ ಉಂಟಾದಾಗ, ಉಲ್ಲಂಘನೆಯಾದಾಗ ಯಾವುದೇ ರೀತಿಯ ಸಮಸ್ಯೆಗಳು ಎದುರಾದಾಗ ಮಕ್ಕಳ ಸಹಾವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಬೇಕು.

ಎಂತಹದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಹೇಳಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ ಆಯೋಗವು ಸದಾ ನಿಮ್ಮೊಂದಿಗಿರಲಿದೆ ಎಂದರು.
ಶಿಕ್ಷಣ ಒಂದು ಹರಿತವಾದ ಆಯುಧವಿದ್ದಂತೆ, ಅದನ್ನು ಪ್ರತಿಯೊಬ್ಬರು ಸದ್ವಿನಿಯೋಗ ಪಡೆದು ಉತ್ತಮ ವ್ಯಕ್ತಿಯಾಗಬೇಕು.

ಜಿಲ್ಲೆಯಲ್ಲಿ ಇಂದಿಗೂ ಸಹ ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿವೆ. ಇನ್ನು ಮುಂದೆಯೂ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ಮದುವೆ ನಡೆಯುತ್ತವೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಲು ತಿಳಿಸಿದರು.

ವಿದ್ಯಾರ್ಥಿಯೊಬ್ಬರು ಮಾತನಾಡಿ, ಡ್ರಾಪ್ ಔಟ್ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವೇನು. ಅದಕ್ಕೆ ಪರಿಹಾರೋಪಾಯ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಡಿಡಿಪಿಐ ಮಾತನಾಡಿ, ವೈಯಕ್ತಿಕ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಬಡತನ, ಬಾಲಕಾರ್ಮಿಕತೆ ಹೀಗೆ ಮುಂತಾದ ಕಾರಣಗಳಿಂದ ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ ಎಂದರು.

ಇದಕ್ಕೆ ದನಿಗೂಡಿಸಿದ ಎಸ್ಪಿ ಉಮಾಪ್ರಶಾಂತ್, ಜಿಲ್ಲೆಯಲ್ಲಿ ಇಲಾಖೆಯ ಮಾಹಿತಿ ಪ್ರಕಾರ ಪ್ರಸ್ತುತ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಮನೆ ಮನೆಗೆ ಪೊಲೀಸ್ ಭೇಟಿ ನೀಡಿದಾಗ ವಿದ್ಯಾಭ್ಯಾಸದ ಕಡೆ ಒಲವಿಲ್ಲದಿರವುದು. ಬಾಲಕಾರ್ಮಿಕ ಪದ್ಧತಿ, ಬಡತನ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಯದಿರುವುದು, ಈ ಎಲ್ಲಾ ಕಾರಣಗಳಿಂದ ಹೊರಗುಳಿದಿದ್ದಾರೆ. ಆದರೂ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪೋಷಕರ ಮನವೊಲಿಸಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಪಡೆದು ನಮ್ಮಂತೆಯೇ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹುರಿದುಂಬಿಸಿದರು.

ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಇತ್ತೀಚೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣವೇನು ?. ಹೀಗೆ ಮುಂದುವರೆದರೆ ಬಡತನ ಮತ್ತು ಗ್ರಾಮೀಣ ಭಾಗದ ಮಕ್ಕಳು ಪಾಡೇನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಪ್ರಸ್ತುತ ಹೆಚ್ಚಿನ ಮಕ್ಕಳು ನಗರ ಮತ್ತು ಆಂಗ್ಲ ಮಾಧ್ಯಮದ ಮೇಲಿನ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ 10 ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ . ಅವುಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ದಾಖಲಾತಿ ಆರಂಭವಾದ ನಂತರ ಪುನಃ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ನಗರದ ಎಸ್‌ಪಿಎಸ್ ಶಾಲೆಯಲ್ಲಿ ಸುಸಜ್ಜಿತ ಕಟ್ಟಡ ಗುಣಮಟ್ಟದ ಶಿಕ್ಷಣವಿದೆ. ಆದರೆ ಆಟದ ಮೈದಾನವಿಲ್ಲ ಎಂದು ಬೇಸರಿಸಿದರು. ಸಂಬAಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ ನಗರದಲ್ಲಿ ಲಭ್ಯವಿರುವ ಸರ್ಕಾರಿ ನಿವೇಶನ ಪಡೆದು ನೀಡಲಾಗುವುದು ಭರವಸೆ ನೀಡಿದರು.

ಜಿಲ್ಲೆಯ ಸಂತೇಬೆನ್ನೂರಿನ ಎಸ್.ಎಸ್.ಜೆ.ವಿ.ಪಿ ಶಾಲೆಯ ಸುತ್ತಮುತ್ತಲೂ 200 ಮೀಟರ್ ತಂಬಾಕು, ದೂಮಪಾನ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಆದರೂ ಶಾಲೆಯ ತಡೆಗೋಡೆಯ ಸುತ್ತಮುತ್ತ ಎಗ್ಗಿಲ್ಲದೇ ತಂಬಾಕು ಉತ್ಪನ್ನ ಮಾರಾಟ, ಬಳಕೆ ಮಾಡಲಾಗುತ್ತಿದೆ. ಇದರಿಂದ ಶಾಲೆಯ ಮಕ್ಕಳು ಸಹ ದಾರಿ ತಪ್ಪುತ್ತಿದ್ದಾರೆ. ಹಾಗೆಯೇ ಸಂಜೆಯಾದರೆ ಶಾಲಾ ಆವರಣ ಕುಡುಕರ ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡಾಗುತ್ತಿದೆ. ಶಾಲೆಯ ಕೂಗಳತೆಯ ದೂರದಲ್ಲಿಯೇ ಪೊಲೀಸ್ ಠಾಣೆ ಇದೆ. ಆದರೂ ಯಾವುದೇ ರೀತಿಯ ಕ್ರಮವಹಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ಸಂಬAಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು ಎಂದರು.

ಇAದಿನ ಮಕ್ಕಳು ಹೆಚ್ಚು ಟಿವಿ, ಮೊಬೈಲ್ ಬಳಕೆ, ಆನ್ ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಓದುವ ಆಸಕ್ತಿ, ಏಕಾಗ್ರತೆ ಪಠ್ಯಗಳ ಜೊತೆಗಿನ ಒಡನಾಟವನ್ನೇ ಮರೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಮಕ್ಕಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದ ಜೊತೆಗೆ ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎಂಬAತೆ ಉತ್ತಮ ಸಂಸ್ಕಾರ, ಸಂಯಮ ತಾಳ್ಮೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಖಂಡಿತಾ ಯಶಸ್ವಿಯಾಗಬಹುದು ಎಂದು ಎಸ್ಪಿ ಉಮಾಪ್ರಶಾಂತ್ ಸಲಹೆ ನೀಡಿದರು.

ಪೋಕ್ಸೋ ಕಾಯ್ದೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಎಸ್ಪಿ ಅವರು ಪ್ರತೀ ವರ್ಷ ಸರಿ ಸುಮಾರು 90 ರಿಂದ 100 ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಪ್ರಕರಣ ಇತ್ಯರ್ಥಪಡಿಸುವ ಸಲುವಾಗಿ ವಿಶೇಷ ನ್ಯಾಯಾಲಯಗಳು ಸಹ ಸ್ಥಾಪಿಸಲಾಗಿದೆ ಎಂದ ಅವರು, ಪ್ರಸಕ್ತ ವರ್ಷದಲ್ಲಿ ಶೇ.94 ರಷ್ಟು ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣಗಳು ಹೆಚ್ಚಿನದಾಗಿ ಹದಿಹರೆಯದ ವಯಸ್ಸಿನಲ್ಲಿ ಅಥವಾ ಓದುವ ವಯಸ್ಸಿನಲ್ಲಿ ಪ್ರೀತಿ – ಪ್ರೇಮದ ಪಾಶಕ್ಕೆ ಬಲಯಾಗಿ ಅತೀ ಹೆಚ್ಚು ಪ್ರಕರಣ ದಾಖಲಾಗುತ್ತವೆ. ಆದ್ದರಿಂದ ಮಕ್ಕಳು ಓದುವ ವಯಸ್ಸಿನಲ್ಲಿ ಶ್ರದ್ಧೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಈ ಪ್ರೀತಿ ಪ್ರೇಮ ಅಮಲಿಗೆ ಬಿದ್ದು ತಮ್ಮ ಭವಿಷ್ಯದ ಜೀವನ ಆಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಬಡಾವಣೆ ಪೊಲೀಸ್ ಇನ್ಸ್ಪೆಕ್ಟರ್ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending