ದಿನದ ಸುದ್ದಿ
ತಂಬಾಕು ಉತ್ಪನ್ನಗಳು ಮಕ್ಕಳಿಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯಕ್ಕೆ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಒತ್ತಾಯ
ಸುದ್ದಿದಿನ,ಬೆಂಗಳೂರು: ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಕೈಗೆಟುಕದಂತೆ ಮಾಡುವ ಉದ್ದೇಶದಿಂದ, ಸಾರ್ವಜನಿಕ ಆರೋಗ್ಯ ತಜ್ಞರು, ಶಿಕ್ಷಣ ತಜ್ಞರು, ಪೋಷಕರು ಮತ್ತು ಮಕ್ಕಳು ಕರ್ನಾಟಕದಲ್ಲಿ ತಂಬಾಕು ಮಾರಾಟಕ್ಕೆ ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಿ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಕೂಡಲೇ ಅಧಿಸೂಚನೆ ಹೊರಡಿಸಿ ‘ಮಾರಾಟಗಾರರ ಪರವಾನಗಿ’ಯನ್ನು ಶೀಘ್ರವೇ ಜಾರಿಗೆ ತರಬೇಕೆಂದು ತಜ್ಞರು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. ‘ಮಾರಾಟಗಾರರ ಪರವಾನಗಿ’ಯ ಶೀಘ್ರ ಜಾರಿಗೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವ ಶ್ರೀ ಭೈರತಿ ಬಸವರಾಜ್ ಅವರಿಗೆ ಈವರೆಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು 3,000 ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ 21 ಸೆಪ್ಟೆಂಬರ್, 2017ರಂದು (D O No. P – 16012 /14 /2017 –TC)ನೀಡಿರುವ ಸೂಚನೆಯಂತೆ ಸೂಕ್ತ ಅನುಮತಿ ಮತ್ತು ತಂಬಾಕು ಮಾರಾಟಗಾರರ ನೋಂದಣಿ ಮೂಲಕ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸಲು ಹೇಳಿದೆ.
ಕಠಿಣ ನಿಯಮಗಳ ಅನುಪಸ್ಥಿತಿಯಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ವಸ್ತುಗಳನ್ನು ರಾಜ್ಯದ ಮೂಲೆಮೂಲೆಗಳಲ್ಲಿ ಗೂಡಂಗಡಿ, ಚಿಲ್ಲರೆ ಅಂಗಡಿ, ಮಿಲ್ಕ್ ಪಾರ್ಲರ್, ಕಾಫಿ-ಟೀ ಅಂಗಡಿ, ಬೇಕರಿ ಮತ್ತು ಇತರೆ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ತಂಬಾಕು ಉದ್ಯಮ ಕಾನೂನುಬಾಹಿರವಾಗಿ ಪ್ರಕಾಶಮಾನ ಬೋರ್ಡ್ ಮತ್ತು ಪೋಸ್ಟರ್ಗಳ ಮೂಲಕ ತಮ್ಮ ಉತ್ಪನ್ನಗಳ ಜಾಹೀರಾತು ಮಾಡುತ್ತವೆ. ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳಲ್ಲಿ (ಪಾಯಿಂಟ್ ಆಫ್ ಸೇಲ್) ತಂಬಾಕು ಕಂಪೆನಿಗಳ ತಂತ್ರದಂತೆ ಮಕ್ಕಳು ಸಹಜ ಮತ್ತು ಸಾಮಾನ್ಯವಾಗಿ ಖರೀದಿಸುವಂತಹ ತಿನಿಸುಗಳಾದ ಬಿಸ್ಕತ್ತು, ಮಿಠಾಯಿ, ಚಿಪ್ಸ್, ಇತ್ಯಾದಿಗಳ ಪಕ್ಕದಲ್ಲಿ ತಂಬಾಕು ಪದಾರ್ಥಗಳನ್ನು ಇರಿಸಲಾಗುತ್ತಿದೆ.
ಯುವಜನರಲ್ಲಿ ತಂಬಾಕಿನ ಸೇವನೆ ಮತ್ತು ಚಟಕ್ಕೆ ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆ, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ದೊರೆಯುವಿಕೆ, ಮುಖ್ಯ ಕಾರಣಗಳಲ್ಲೊಂದಾಗಿದೆ. ಹದಿಹರೆಯದ ವಯಸ್ಸಿನಲ್ಲೇ ವ್ಯಸನಗಳಿಗೆ ಹೆಚ್ಚು ತುತ್ತಾಗುವುದರಿಂದ ತಂಬಾಕು ಕಂಪನಿಗಳು ಮಕ್ಕಳನ್ನು ಗುರಿಯಾಗಿಸುತ್ತವೆ ಎಂಬುದು ಸಾಬೀತಾಗಿದ್ದು, ತರ್ಕಬದ್ಧ ನಿರ್ಧಾರ ತೆಗೆದುಕೊಳ್ಳುವಲ್ಲಿ ಮಕ್ಕಳ ಅಸಮರ್ಥತೆಯ ಲಾಭ ಪಡೆದು, ಅವರು ತಮ್ಮ ಉತ್ಪನ್ನಗಳೊಂದಿಗೆ ಪ್ರಯೋಗ ಮಾಡಿ ವ್ಯಸನಿಗಳಾಗುವಂತೆ ತಂಬಾಕು ಕಂಪನಿಗಳು ಮಾಡುತ್ತಿವೆ.
ಭಾರತದಲ್ಲಿ ಶೇ. ೧೪.೬ ಕ್ಕಿಂತಲೂ ಹೆಚ್ಚು ಹದಿಹರೆಯದವರು ( 13-15ವರ್ಷದವರು) ಯಾವುದಾದರೊಂದು ರೀತಿಯಲ್ಲಿ ತಂಬಾಕನ್ನು ಬಳಸುತ್ತಾರೆ (GYTS). ಅದರಂತೆ, ಪ್ರತಿದಿನ 5.500ಕ್ಕೂ ಹೆಚ್ಚು ಮಕ್ಕಳು ತಂಬಾಕು ಬಳಕೆಯನ್ನು ಆರಂಭಿಸುತ್ತಿದ್ದಾರೆ.
ರಾಜ್ಯ ಅಬಕಾರಿ ಇಲಾಖೆ ಪರವಾನಗಿ ಮೂಲಕ ಮದ್ಯ ಮಾರಾಟವನ್ನು ಹೇಗೆ ನಿಯಂತ್ರಿಸುತ್ತದೋ, ಹಾಗೆಯೇ ‘ಮಾರಾಟಗಾರರ ಪರವಾನಗಿ’ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಇಚ್ಛಿಸುವವರು ಕೇವಲ ‘ವ್ಯಾಪಾರ ಪರವಾನಗಿ’ ಮಾತ್ರವಲ್ಲದೆ, ಆಯಾ ನಗರ ಸ್ಥಳೀಯ ಸಂಸ್ಥೆಗಳಿಂದ ‘ವಿಶೇಷ ಪರವಾನಗಿ’ ಪಡೆಯಬೇಕು.
ಇದರಿಂದ ಸಾಮಾನ್ಯವಾಗಿರುವ ತಂಬಾಕು ನಿಯಂತ್ರಣ ಕಾನೂನುಗಳ ಉಲ್ಲಂಘನೆಗಳನ್ನು ಪರಿಶೀಲಿಸಲು ಸ್ಥಳೀಯ ಸಂಸ್ಥೆಗಳಿಗೆ ಸಹಾಯಕವಾಗುತ್ತದೆ. ‘ಮಾರಾಟಗಾರರ ಪರವಾನಗಿ’ ಜಾರಿಗೊಳಿಸಲು ಸಾರ್ವಜನಿಕ ಆರೋಗ್ಯ ತಜ್ಞರು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದು ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆಯನ್ನು ತಡೆಗಟ್ಟಿ ಯುವಕರನ್ನು ಆಮಿಷಕ್ಕೆ ಒಡ್ಡುವ ತಂತ್ರಗಳಿಗೆ ಅಂತ್ಯ ಹಾಡಬಹುದು.
“ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದ್ದರೂ ತಂಬಾಕು ಉದ್ಯಮವು ಅದನ್ನು ಅಗತ್ಯವೆನ್ನುವಂತೆ ಸೇವಿಸಲು ನಮ್ಮನ್ನುದಿಕ್ಕುತಪ್ಪಿಸಿದೆ. ಇದು ಯುವಜನರನ್ನು ಗುರಿಯಾಗಿಸಿಕೊಂಡು ಹೆಣೆದಿರುವ ಮಾರುಕಟ್ಟೆ ತಂತ್ರದ ಫಲ. ಮಾರಾಟಗಾರರ ಪರವಾನಗಿಯು ಈ ಶೋಷಣೆಯ ವಿರುದ್ಧ ಗುರಾಣಿಯಾಗಲಿದ್ದು ಈ ದೇಶದ ರಚನಾತ್ಮಕ ಭವಿಷ್ಯಕ್ಕೆ ಅವಶ್ಯಕವಾಗಿದೆ”, ಎಂದು ಡೆಲ್ಲಿ ಪಬ್ಲಿಕ್ ಸ್ಕೂಲ್, ಬೆಂಗಳೂರು ನಾರ್ಥ್ ನ 12ನೇ ತರಗತಿ ವಿದ್ಯಾರ್ಥಿ ಆದಿತ್ಯ ಹರಿ ಹೇಳಿದರು.
“ಮಕ್ಕಳು ತಂಬಾಕು ಉದ್ಯಮದ ಮುಖ್ಯ ಗುರಿಯಾಗಿದೆ. ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆ ಯುವಜನರು ತಂಬಾಕಿನೊಂದಿಗೆ ಪ್ರಯೋಗಕ್ಕಿಳಿಯಲು ಆಮಿಷವಾಗಿದ್ದು, ಅಂತಿಮವಾಗಿ ಅದಕ್ಕೆ ವ್ಯಸನಿಯಾಗುತ್ತಾರೆ. ಇದು ಬಹಳ ಅಪಾಯಕಾರಿಯಾಗಿದ್ದು ಯುವಪೀಳಿಗೆಯನ್ನು ತಂಬಾಕು ಉತ್ಪನ್ನಗಳಿಂದ ದೂರವಿರಿಸುವ ತುರ್ತು ಎದುರಾಗಿದೆ.
ಮಾರಾಟಗಾರರ ಪರವಾನಗಿ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆಗಳಲ್ಲೊಂದಾಗಿದ್ದು, ಇದರಿಂದ ತಂಬಾಕು ಮಾರಾಟದ ಮೇಲೆ ನಿಗಾ ಮತ್ತು ನಿಯಂತ್ರಣ ಸಾಧ್ಯವಾಗುವುದಲ್ಲದೆ, ಯುವಜನರನ್ನು ವ್ಯಸನದಿಂದ ರಕ್ಷಿಸಬಹುದು,” ಎಂದು ಪ್ರಸಿದ್ಧ ಕ್ಯಾನ್ಸರ್ ತಜ್ಞರು ಮತ್ತು ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕದ (ಸಿಎಫ್ಟಿಎಫ್ಕೆ) ಸಲಹೆಗಾರರಾದ ಡಾ. ರಮೇಶ್ ಬಿಳಿಮಗ್ಗ ತಿಳಿಸಿದರು.
ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕೆಎಎಂಎಸ್), ಅವರು ಮಾತನಾಡಿ, “ಮಾರಾಟಗಾರರ ಪರವಾನಗಿ ಜಾರಿಗೆ ಬಂದರೆ, ‘ಬಿಡಿ’ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಪ್ರಸ್ತುತ, ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು (ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ) ಮಾರಾಟ ಮಾಡುತ್ತಿರುವವರು ಸಣ್ಣ ಮೊತ್ತದ ದಂಡ ಕಟ್ಟಿ ಬಚಾವಾಗುತ್ತಿದ್ದಾರೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ
(COTPA) 2003ರ ಅನ್ವಯ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ಮಾರಾಟಗಾರರ ಪರವಾನಗಿಯನ್ನು ಸಹ ರದ್ದುಗೊಳಿಸಬಹುದು,” ಎಂದರು.
“ಮಾರಾಟಗಾರರ ಪರವಾನಗಿ ಪ್ರಕ್ರಿಯೆ ಆರಂಭಿಸಿದಕ್ಕೆ ನಾವು ರಾಜ್ಯ ಸರ್ಕಾರವನ್ನು ಪ್ರಶಂಸಿಸುತ್ತೇವೆ ಮತ್ತು ಇದನ್ನು ಕೂಡಲೇ ಕಾರ್ಯಗತಗೊಳಿಸಬೇಕೆಂದು ಒತ್ತಾಯಿಸುತ್ತೇವೆ. ಮಾರಾಟಗಾರರ ಪರವಾನಗಿ ಜಾರಿಯಾದರೆ ರೈತರು ಮತ್ತು ಮಾರಾಟಗಾರರ ಜೀವನೋಪಾಯಕ್ಕೆ ತೊಂದರೆಯಾಗಲಿದೆ ಎಂದು ತಂಬಾಕು ಉದ್ಯಮವು ಬಿಂಬಿಸುತ್ತಾ ಬಂದಿರುವುದರಿಂದ ಮತ್ತು ಅದು ಸುಳ್ಳಾಗಿರುವುದರಿಂದ, ಪೋಷಕರು, ಶಿಕ್ಷಕರು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಆಸಕ್ತಿಯುಳ್ಳವರು ನಗರಾಭಿವೃದ್ಧಿ ಇಲಾಖೆಗೆ ಪತ್ರಗಳನ್ನು ಬರೆಯುವ ಮೂಲಕ ಬೆಂಬಲ ವ್ಯಕ್ತಪಡಿಸಬೇಕೆಂದು ವಿನಂತಿಸುತ್ತೇವೆ,” ಎಂದು ಶ್ರೀ ಎಸ್ ಜೆ ಚಂದರ್, ಸಂಚಾಲಕರು, ಸಿಎಫ್ಟಿಎಫ್ಕೆ, ತಿಳಿಸಿದರು.
ಈಗಾಗಲೇ ಹಿಮಾಚಲ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟç, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮಾರಾಟಗಾರರ ಪರವಾನಗಿಯನ್ನು ಜಾರಿಗೆ ತರುವ ಮೂಲಕ ಆದರ್ಶಪ್ರಾಯವಾಗಿವೆ ಎಂದರು.
ವಿಡಿಯೋ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ