ಬಹಿರಂಗ
ಮಕ್ಕಳು-ಮಾಧ್ಯಮ ಪ್ರಜ್ಞೆ ಮತ್ತು ಪ್ರಜ್ಞಾವಂತ ಮಾಧ್ಯಮ
- ನಾ ದಿವಾಕರ
ಡಾ. ಎಚ್. ಕೆ. ರಂಗನಾಥ್ ಅವರ ಕರ್ನಾಟಕ ರಂಗಭೂಮಿ ಕೃತಿಯ, ವಿಲಾಸಿ ರಂಗಭೂಮಿ ಅಧ್ಯಾಯದ ಒಂದೆಡೆ ಕೃತಿಕಾರರು ಹೀಗೆ ಹೇಳುತ್ತಾರೆ : “ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿ ವಿಕಾಸಗೊಳಿಸುವ ಪ್ರಯತ್ನವನ್ನು ಕನ್ನಡ ರಂಗಭೂಮಿ ಇತ್ತೀಚಿನವರೆಗೆ ಮಾಡಲಿಲ್ಲ ಅಂದರೆ ಸಲ್ಲುತ್ತದೆ,,,,,,,,ಮಕ್ಕಳ ರಂಗಭೂಮಿಯನ್ನು ನಿರ್ಮಿಸುವಲ್ಲಿ ಕರ್ನಾಟಕ ಹಿಂದೆಯೇ ಉಳಿಯಿತು.
ದೊಡ್ಡವರು ಆಡುತ್ತಿದ್ದ ನಾಟಕಗಳನ್ನೇ ಮಕ್ಕಳೂ ನೋಡಿಕೊಂಡು ತೃಪ್ತಿಪಟ್ಟುಕೊಳ್ಳಬೇಕಾಗಿತ್ತು. ದೊಡ್ಡವರಿಗಾಗಿ ಸಣ್ಣ ಅಕ್ಷರದಲ್ಲಿ ಅಚ್ಚು ಮಾಡಿದ ದಿನಪತ್ರಿಕೆಯನ್ನು ಒಲ್ಲದ ಮಕ್ಕಳೂ ಓದಬೇಕಲ್ಲವೇ ? ಹಾಗೆ ! ಮಕ್ಕಳಿಗಾಗಿಯೇ ಮೀಸಲುಗೊಂಡ ದಿನಪತ್ರಿಕೆ ಚಿತ್ರಗಳೊಡನೆ ದೊಡ್ಡ ಅಕ್ಷರದಲ್ಲಿ ಅಚ್ಚು ಆಗುವವರೆಗೆ “ ನಮ್ಮ ಮಕ್ಕಳಿಗೆ ಪ್ರಪಂಚದ ವಿದ್ಯಮಾನಗಳೇ ಗೊತ್ತಿಲ್ಲ ” ಎಂದುತಪ್ಪು ಹೊರಿಸುವುದು ಅಪರಾಧ ತಾನೇ ? ” (ಪುಟ 393 ಕರ್ನಾಟಕ ರಂಗಭೂಮಿ 1978 ಸುರುಚಿ ಪ್ರಕಾಶನ)
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ನಾ. ಡಿಸೋಜ
ಇಲ್ಲಿ ರಂಗಭೂಮಿಯ ಪ್ರಶ್ನೆಯನ್ನು ಪಕ್ಕಕ್ಕಿಡೋಣ. ಏಕೆಂದರೆ 1978ರ ನಂತರದಲ್ಲಿ ಮಕ್ಕಳಿಗಾಗಿಯೇ ನಾಟಕಗಳನ್ನು ರಚಿಸುವಲ್ಲಿ ಯಶಸ್ವಿ ಪ್ರಯತ್ನಗಳು ನಡೆದಿವೆ. ಈ ಮಾತುಗಳಲ್ಲಿ ನಾವು ಗಮನಿಸಬೇಕಿರುವುದು ದಿನಪತ್ರಿಕೆಗಳ ಬಗ್ಗೆ ರಂಗನಾಥ್ ಅವರು ಹೇಳಿರುವ ಮಾತುಗಳನ್ನು.
ಈ ಪ್ರಶ್ನೆ ಇಂದಿಗೂ ಪ್ರಶ್ನೆಯಾಗೇ ಉಳಿದಿದ್ದರೆ ಅಥವಾ ಉತ್ತರಗಳು ದೊರೆತು ಮತ್ತದೇ ಪ್ರಶ್ನೆಯ ಪುನರಾರ್ತನೆಯಾಗುವ ಪರಿಸ್ಥಿತಿ ಉಂಟಾಗಿದ್ದರೆ ಇದು ಖಂಡಿತವಾಗಿಯೂ ಯೋಚಿಸಬೇಕಾದ ವಿಚಾರ. 1978ರ ಸಂದರ್ಭದ ಮಕ್ಕಳು ಎನ್ನುವ ಪರಿಕಲ್ಪನೆಗೂ ಇಂದಿನ ಪರಿಕಲ್ಪನೆಗೂ ಹೆಚ್ಚಿನ ವ್ಯತ್ಯಾಸವೇನೂ ಆಗಿಲ್ಲ. ನವ ಶತಮಾನದ ಮಕ್ಕಳ ಮನಸ್ಸು ಹೊರ ಪ್ರಪಂಚಕ್ಕೆ ಬೇಗನೆ ತೆರೆದುಕೊಳ್ಳುತ್ತದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಮಕ್ಕಳು ಹಾಗೆಯೇ ಇರಲಿಕ್ಕೆ ಸಾಧ್ಯ.
ನಾವೂ ದಶಕಗಳ ಕಾಲ ದಿನಪತ್ರಿಕೆಗಳನ್ನು ಓದುತ್ತಲೇ ಬಂದಿದ್ದೇವೆ. ಬಹುಶಃ 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1980ರ ದಶಕದಲ್ಲಿ ಶಾಲೆಗಳಲ್ಲಿ ದಿನಪತ್ರಿಕೆಗಳ ಮುಖ್ಯ ಸುದ್ದಿ ಓದುವ ಒಂದು ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಇದೂ ಸಹ ಪ್ರೌಢಶಾಲೆಯ ಹಂತದಿಂದ ಆರಂಭವಾಯಿತು ಎನಿಸುತ್ತದೆ. ಪ್ರಾಥಮಿಕ ಶಾಲೆಯ ಹಂತದಲ್ಲಿ ಇತ್ತೀಚೆಗೆ ಇದು ಚಾಲ್ತಿಯಲ್ಲಿರಬಹುದು.
ಇಲ್ಲಿ ರಂಗನಾಥ್ ಅವರು ಎತ್ತಿರುವ ಪ್ರಶ್ನೆ ನಮ್ಮಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇಂದಿನ ಮಕ್ಕಳು ಪತ್ರಿಕೆಗಳನ್ನು ಓದುವುದಿಲ್ಲ, ನಿತ್ಯ ಸುದ್ದಿಗಳನ್ನು ತಿಳಿದುಕೊಳ್ಳುವುದಿಲ್ಲ, ತಮ್ಮ ಸುತ್ತಲಿನ ಸಾಮಾಜಿಕ, ರಾಜಕೀಯ ವಿದ್ಯಮಾನಗಳ ಪರಿವೆ ಇರುವುದಿಲ್ಲ ಎಂಬ ಆರೋಪ ಕೇಳಿಬರುತ್ತಲೇ ಇದೆ.
ಇಲ್ಲಿ ಮಕ್ಕಳು ಎಂದರೆ ಯಾವ ಓರಿಗೆಯವರು ? ಪ್ರಾತಮಿಕ ಶಾಲೆಯ ಮಕ್ಕಳಿಗೆ ಈ ತಿಳುವಳಿಕೆ ಬೇಕೋ ಬೇಡವೋ ಎನ್ನುವ ಜಿಜ್ಞಾಸೆಯನ್ನು ಬದಿಗಿಟ್ಟು ಯೋಚಿಸಿದಾಗ ಆಧುನಿಕ ಜಗತ್ತಿನ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು, ವಿಕಸನದ ಹಂತದಲ್ಲಿರುವ ಮಕ್ಕಳನ್ನು ತಲುಪುತ್ತಿವೆಯೇ ಎಂಬ ಪ್ರಶ್ನೆ ಹೆಚ್ಚು ಪ್ರಸ್ತುತ ಎನಿಸುತ್ತದೆ.
ಇಂದಿನ ವಿದ್ಯುನ್ಮಾನ ತಂತ್ರಜ್ಞಾನ ಯುಗದಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಅಂತರ್ಜಾಲ ಕೇಂದ್ರಿತ ಮಾಹಿತಿ ಕಣಜ ಇರುವುದನ್ನು ಕಾಣಬಹುದು. ಗೂಗಲ್ ಇಂದು ಸಕಲ ಜ್ಞಾನದ ಆಕರದಂತೆ ಕಾಣುತ್ತಿದ್ದು ಎಂಟು ಹತ್ತು ವರ್ಷದ ಮಕ್ಕಳೂ ಸಹ ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಲು ಗೂಗಲ್ ಹುಡುಕಾಟದಲ್ಲಿ ತೊಡಗಿರುತ್ತಾರೆ.
ತಮ್ಮ ಅಥವಾ ತಮ್ಮ ಪೋಷಕರ, ಕುಟುಂಬದ ಹಿರಿಯ ಕೈಯ್ಯಲ್ಲಿನ ಮೊಬೈಲ್ ಅಥವಾ ಲ್ಯಾಪ್ಟಾಪ್ ಈ ಮಕ್ಕಳಿಗೆ ಹೊರ ಜಗತ್ತನ್ನು ಕಂಡುಕೊಳ್ಳುವ ಮಹಾದ್ವಾರದಂತೆ ಕಾಣುತ್ತದೆ. ಕೊರೋನಾ ಸಂದರ್ಭದ ಆನ್ ಲೈನ್ ಶಿಕ್ಷಣದಿಂದ ಈಗ ಮಧ್ಯಮ ವರ್ಗಗಳ ಎಳೆಯ ಮಕ್ಕಳ ಬಳಿಯೂ ಒಂದು ಸ್ಮಾರ್ಟ್ ಫೋನ್ ಇರುವುದು ಸಾಮಾನ್ಯ ಸಂಗತಿಯಾಗಿದೆ.
ಆದರೆ ಈ ಮಕ್ಕಳಲ್ಲಿನ ಪ್ರಾಪಂಚಿಕ ತಿಳುವಳಿಕೆ ಅಥವಾ ಸುತ್ತಲಿನ ನಿತ್ಯದ ವಿದ್ಯಮಾನಗಳ ಬಗ್ಗೆ ಅರಿವು ಮತ್ತು ತಾವು ಬದುಕುತ್ತಿರುವ ಒಂದು ಸಮಾಜದ ಪರಿವೆ ಇವುಗಳನ್ನು ಪರೀಕ್ಷಿಸಲು ಹೋದಾಗ ನಿರಾಸೆಯಾಗುವುದೇ ಹೆಚ್ಚು. ಏಕೆಂದರೆ ಬಹುತೇಕ ಮಕ್ಕಳನ್ನು ಪೋಷಕರು ಶಿಕ್ಷಣ ಬಂಧಿಗಳನ್ನಾಗಿ ಮಾಡಿರುತ್ತಾರೆ.
ಶಾಲೆ-ಟ್ಯೂಷನ್-ಶಾಲೆ ವ್ಯೂಹದಿಂದ ಹೊರಬರಲು ಸಮಯ ಸಿಕ್ಕಾಗಲೆಲ್ಲಾ ಈ ಮಕ್ಕಳು ಪರದೆಯ ಮೊರೆ ಹೋಗುತ್ತಾರೆ. ಟಿವಿ, ಲ್ಯಾಪ್ಟಾಪ್ ಅಥವಾ ಸ್ಮಾರ್ಟ್ಫೋನ್ ಅವರ ಮತ್ತೊಂದು ಪ್ರಪಂಚವಾಗಿ ಪರಿಣಮಿಸುತ್ತದೆ. ಈ ಪ್ರವೃತ್ತಿಯನ್ನು ನಗರ ಪ್ರದೇಶಗಳ ಕೆಳಮಧ್ಯಮ ವರ್ಗಗಳಲ್ಲೂ ಕಾಣಬಹುದು, ಕೆಲವೆಡೆ ಗ್ರಾಮೀಣ ಪ್ರದೇಶಗಳಲ್ಲೂ ಕಾಣಬಹುದು.
ಇಲ್ಲಿ ಬಲಿಯಾಗುತ್ತಿರುವುದು ಓದು ಮತ್ತು ಓದಿನ ಹವ್ಯಾಸ. ಪಠ್ಯೇತರ ಓದು ಎನ್ನುವುದನ್ನು ನಮ್ಮ ಆಧುನಿಕ ಶಿಕ್ಷಣ ವ್ಯವಸ್ಥೆ ಹಂತಹಂತವಾಗಿ ಕೊಲ್ಲುತ್ತಲೇ ಬಂದಿದ್ದು ಸ್ಮಾರ್ಟ್ ಫೋನ್ ಯುಗದಲ್ಲಿ ಮಕ್ಕಳಿಗೆ ದಿನಪತ್ರಿಕೆಗಳೂ ಸಹ ಓದಿಗೆ ಸಹ್ಯ ಎನಿಸುವುದಿಲ್ಲ. ಈ ಸಂದರ್ಭದಲ್ಲೇ ಡಾ ರಂಗನಾಥ್ ಅವರ ಪ್ರಶ್ನೆ ಮಹತ್ವ ಪಡೆಯುತ್ತದೆ.
ಮಕ್ಕಳ ಚಂಚಲ ಮನಸಿಗೆ ನಿಲುಕುವಂತೆ ದಿನನಿತ್ಯದ ಸುದ್ದಿಗಳನ್ನು ನೀಡುವಂತಹ ಪತ್ರಿಕೆಗಳು ಸಾಧ್ಯವಿಲ್ಲವೇ ? ಮಕ್ಕಳಿಗಾಗಿ ಒಂದು ಪುರವಣಿಯನ್ನೋ ಅಥವಾ ವಾರಪತ್ರಿಕೆಗಳಲ್ಲಿ ಒಂದೆರಡು ಪುಟಗಳನ್ನೋ ಮೀಸಲಿಡುವ ಮೂಲಕ ಮಕ್ಕಳ ಹಾಡು, ಕಥೆ, ವಿನೋದ ಇತ್ಯಾದಿಗಳನ್ನು ನೋಡುತ್ತಿದ್ದೇವೆ.
ಆದರೆ ಇವು ಮನರಂಜನೆಯ ಸರಕುಗಳಷ್ಟೇ. ತಮ್ಮ ಸುತ್ತಲಿನ ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಮಕ್ಕಳ ಗ್ರಹಿಕೆಗೆ ನಿಲುಕುವಂತೆ ಪತ್ರಿಕೆಯನ್ನು ರೂಪಿಸಲು ಸಾಧ್ಯವೇ ? ಇದಕ್ಕೆ ನೇರ ಉತ್ತರ ಕಷ್ಟವಾಗಬಹುದು. ಆದರೆ ಚರ್ಚೆ ಮಾಡಲು ಅಡ್ಡಿಯಿಲ್ಲ.
ಆದರೆ ಸಮಸ್ಯೆಯಿಂದ ಅಥವಾ ಪ್ರಶ್ನೆಯಿಂದ ನಾವು ವಿಮುಖರಾಗುವಂತಿಲ್ಲ. ರಾಜಕೀಯ ಎಂದರೆ ಹೊಲಸು ಎಂದು ಮೂಗುಮುರಿಯುವ ಸಂದರ್ಭದಲ್ಲಿ ನಾವಿರುವಾಗಲೇ ಹೊಲಸು ರಾಜಕಾರಣ ಮನೆಮನೆಯನ್ನೂ ತಲುಪುತ್ತಿದೆ. ಮಕ್ಕಳಿಗೇಕೆ ರಾಜಕೀಯ ಎನ್ನುವ ಕಾಲವೂ ಒಂದಿತ್ತು ಆದರೆ ಇಂದಿನ ಸಾಂಸ್ಕೃತಿಕ-ಮತೀಯ ರಾಜಕಾರಣ ಮಕ್ಕಳ ಮನಸುಗಳನ್ನೂ ಹೊಕ್ಕಿದೆ.
ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಅಸ್ಮಿತೆಗಳ ಲೋಕ ತಾಂಡವಾಡುತ್ತಿದೆ. ‘ ನಮ್ಮವರು ’ ಮತ್ತು ‘ ಅನ್ಯ ’ರನ್ನು ಗುರುತಿಸುವಷ್ಟು ಮಟ್ಟಿಗೆ ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಮತಾಂಧತೆ, ಜಾತೀಯತೆಯ ವಿಷಬೀಜಗಳನ್ನು ಬಿತ್ತಲಾಗುತ್ತಿದೆ. ಈ ವಿಷಬೀಜಗಳಿಂದಲೇ ಮುಗಿಲೆತ್ತರಕೆ ಬೆಳೆದಿರುವ ವಿಷವೃಕ್ಷಗಳೇ ಆಡಳಿತ ವ್ಯವಸ್ಥೆಯ ಮೇಲೆ ಅಧಿಪತ್ಯ ಸಾಧಿಸುತ್ತಿದೆ. ಅಂದರೆ ಇಂದಿನ ಮಕ್ಕಳು ನಾಳಿನ ಪ್ರಜೆಗಳು ಎನ್ನುತ್ತಿದ್ದವರೇ ಈಗ ಆ ಪ್ರಜೆಗಳನ್ನು ಅಸ್ಮಿತೆಗಳ ಮೂಲಕ ಗುರುತಿಸಲು ಸಜ್ಜಾಗಬೇಕಿದೆ.
ಈ ಅಸ್ಮಿತೆಗಳ ವಿಷವರ್ತುಲದಿಂದ ಮಕ್ಕಳನ್ನು ಹೊರತರಬೇಕಾದರೆ ಎಳೆಯ ಮಕ್ಕಳಿಗೂ ತಮ್ಮ ಸುತ್ತಲಿನ ಸಾಮಾಜಿಕ, ಸಾಂಸ್ಕೃತಿಕ , ರಾಜಕೀಯ ವಿದ್ಯಮಾನಗಳು ಅರ್ಥವಾಗುವಂತೆ ತಿಳಿಸಬೇಕಾಗುತ್ತದೆ. ಸಾಂಸ್ಕೃತಿಕ ನೆಲೆಯಲ್ಲಿ, ಮತಧಾರ್ಮಿಕ ಚೌಕಟ್ಟಿನಲ್ಲಿ ಇದು ವ್ಯವಸ್ಥಿತವಾಗಿ ನಡೆಯುತ್ತಿದೆ. ಇದು ಕ್ರಮೇಣ ಸಾಮಾಜಿಕ ಮತ್ತು ರಾಜಕೀಯ ಫಲ ನೀಡುವಷ್ಟರಲ್ಲಿ ವಿಷಬೇರುಗಳು ಮತ್ತಷ್ಟು ವ್ಯಾಪಕವಾಗಿ ಹರಡಿರುತ್ತವೆ.
ಆದರೆ ಇದಕ್ಕೆ ಪ್ರತಿಯಾಗಿ ಸಂವೇದನಾಶೀಲ ಸಾಂಸ್ಕೃತಿಕ ನೆಲೆಗಳನ್ನು ಮಕ್ಕಳ ನಡುವೆ ಸ್ಥಾಪಿಸುವಲ್ಲಿ ಬಹುಶಃ ನಾವು ಎಡವಿದ್ದೇವೆ ಎನಿಸುತ್ತದೆ. ಈ ವೈಫಲ್ಯದ ಪರಿಣಾಮವನ್ನು ಶತಮಾನದ ಮಕ್ಕಳ ಸಮೂಹ ಸಾಂಸ್ಕೃತಿಕ ವಲಸೆಯಲ್ಲಿ ಕಾಣುತ್ತಿದ್ದೇವೆ. ಇಂದಿನ ಎಳೆಯ ಮಕ್ಕಳು ಒಂದು ದಶಕದ ನಂತರ ಇದೇ ವಲಸೆಯ ಮುಂದುವರೆದ ಭಾಗವಾಗಿ ಕಂಡರೆ ಅಚ್ಚರಿಯೇನಿಲ್ಲ ಅಲ್ಲವೇ ?
ಇಲ್ಲಿ ನಮಗೆ ಪ್ರಜಾತಂತ್ರ ವ್ಯವಸ್ಥೆಯ ಮತ್ತು ಪ್ರಜ್ಞಾವಂತ ಸಮಾಜದ ನಾಲ್ಕನೆಯ ಸ್ತಂಭ, ಮಾಧ್ಯಮ ಲೋಕ ಮುಖ್ಯವಾಗುತ್ತದೆ. ಸ್ಮಾರ್ಟ್ ಫೋನ್ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳು ಇಂದು ಪ್ರತಿಯೊಬ್ಬ ವ್ಯಕ್ತಿಗೂ ನೇರವಾಗಿ ತಲುಪುವ ಸುಲಭ ಸಾಧನಗಳಾಗಿವೆ. ಮಕ್ಕಳೂ ಸಹ ಇದನ್ನೇ ಬಳಸಿಕೊಳ್ಳುತ್ತಿದ್ದಾರೆ. ಇಡೀ ಪ್ರಪಂಚದ ವಿದ್ಯಮಾನಗಳನ್ನು ಒಂದು ಪರದೆಯಲ್ಲಿ ಸೆರೆಹಿಡಿದು ಮಕ್ಕಳ ಮುಂದಿಟ್ಟರೂ ಅವರ ಗಮನ ಹರಿಯುವುದು ಆಕರ್ಷಣೀಯ ಆಟಗಳ ಕಡೆಗೆ.
ಈ ಆಟಗಳೂ ಸಹ ಮಕ್ಕಳಿಗಾಗಿ ದೊಡ್ಡವರ ಮನಸ್ಥಿತಿಯಲ್ಲಿ ರೂಪಿಸಲಾಗಿರುತ್ತದೆ. ಹೊಡೆದುರುಳಿಸುವುದು, ತೊಡೆದುಹಾಕುವುದು, ಗೆಲ್ಲುವ ಹಪಹಪಿ , ಸಾಫಲ್ಯ ಮತ್ತು ವೈಫಲ್ಯ ಹೀಗೆ ವಯಸ್ಕ ಬದುಕಿನ ವಿದ್ಯಮಾನಗಳನ್ನೇ ಮಕ್ಕಳ ಆಟಗಳ ರೂಪದಲ್ಲಿ ಅಳವಡಿಸಲಾಗಿರುತ್ತದೆ. ಮಕ್ಕಳು ಇಡೀ ದಿನ ಇಂತಹ ಆಟಗಳ ನಡುವೆಯೇ ಕಾಲ ಕಳೆಯುತ್ತಾರೆ.
ಕರ್ನಾಟಕದ ಮಟ್ಟಿಗೇ ಹೇಳುವುದಾದರೆ ಮುದ್ರಣ ಮಾಧ್ಯಮದ ಯಾವುದೇ ಪತ್ರಿಕೆಗಳೂ ಮಕ್ಕಳ ಮನಸನ್ನು ತಲುಪುವಂತಹ ಪುಟಗಳನ್ನು ಹೊಂದಿರುವುದಿಲ್ಲ. ಭಾನುವಾರದ ಪುರವಣಿಗಳಲ್ಲಿನ ಹಳೆಯ ವಿನ್ಯಾಸದ ಹಾಡು, ಪದ್ಯ, ಸಣ್ಣ ಕಥೆ ಮತ್ತು ಮನರಂಜನೆಯ ಸರಕುಗಳನ್ನು ಬಿಟ್ಟರೆ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನಕ್ಕೆ ಪೂರಕವಾದಂತಹ ಸರಕುಗಳು ಇರುವುದಿಲ್ಲ.
ಕೋವಿದ್ 19 ಸಂದರ್ಭದಲ್ಲಿ ಬಹುಪಾಲು ಎಲ್ಲ ಪತ್ರಿಕೆಗಳ ಪುರವಣಿಗಳೇ ತಮ್ಮ ಮೂಲ ಅಸ್ತಿತ್ವ ಕಳೆದುಕೊಂಡಿದ್ದು, ಮಕ್ಕಳ ಅವಶ್ಯಕತೆಗಳು ನಿರ್ಲಕ್ಷಿತವಾಗಿವೆ. ಮಕ್ಕಳಿಗಾಗಿಯೇ ವರುಷಕ್ಕೊಮ್ಮೆ ಹೊರತರುವ ವಿಶೇಷ ಸಂಚಿಕೆಗಳು ಇದ್ದುದರಲ್ಲಿ ಕೊಂಚ ಆಶಾಭಾವನೆ ಮೂಡಿಸುವಂತಿವೆ.
ಆದರೆ ಮುದ್ರಣ ಮಾಧ್ಯಮದಿಂದ ಬಹುಪಾಲು ವಿಮುಖವಾಗಿರುವ ಮಕ್ಕಳಿಗೆ ವಿದ್ಯುನ್ಮಾನ ಮಾಧ್ಯಮಗಳು ಕನಿಷ್ಟ ಮಟ್ಟದಲ್ಲಿ ತಲುಪುವ ಪ್ರಯತ್ನಗಳನ್ನೂ ಮಾಡುತ್ತಿಲ್ಲ ಎನ್ನುವುದು ಸ್ಪಷ್ಟ. ಅನ್ಯ ಭಾಷೆಯ ಮತ್ತು ಕನ್ನಡದಲ್ಲಿ ಡಬ್ ಆದ ಕಾರ್ಟೂನ್ ವಾಹಿನಿಗಳ ಪುನರಾವರ್ತಿತ ಕಾರ್ಯಕ್ರಮಗಳನ್ನು ಹೊರತುಪಡಿಸಿದರೆ, ಬೌದ್ಧಿಕ ವಿಕಸನಕ್ಕೆ ಮತ್ತು ಮಕ್ಕಳ ಪಠ್ಯೇತರ ಜ್ಞಾನಾರ್ಜನೆಗೆ ಪೂರಕವಾದಂತಹ ಕಾರ್ಯಕ್ರಮಗಳು ಯಾವುದೇ ಕಾರ್ಟೂನ್ ವಾಹಿನಿಗಳಲ್ಲೂ ಕಾಣುವುದಿಲ್ಲ. ಸಾಂಪ್ರದಾಯಿಕ ಕಲೆಗಳಾದ ಸೂತ್ರದ ಬೊಂಬೆ, ತೊಗಲು ಬೊಂಬೆ, ಛಾಯಾ ಬೊಂಬೆಯಾಟ ಮುಂತಾದವುಗಳಿಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅವಕಾಶವೇ ಇಲ್ಲದಿರುವುದು ದುರಂತ.
ಶೈಕ್ಷಣಿಕ ನೋಡಿದಾಗಲೂ, ಶಾಲಾ ಪಠ್ಯಗಳಲ್ಲಿ ಈಗಲೂ ಮಕ್ಕಳಿಗೆ ಕಬ್ಬಿಣದ ಕಡಲೆ ಎನಿಸುವ ವಿಜ್ಞಾನ ಮತ್ತು ಗಣಿತವನ್ನು, ಮಕ್ಕಳು ಅನವಶ್ಯಕ ಎಂದು ಭಾವಿಸುವ ಚರಿತ್ರೆಯ ಮಜಲುಗಳನ್ನು, ಅವರ ವಯೋಮಿತಿಗೆ ಅನುಗುಣವಾಗಿ ಮನಮುಟ್ಟುವಂತೆ ತಿಳಿಸಿಕೊಡುವ ಕಾರ್ಯಕ್ರಮಗಳು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಂಡುಬರುವುದಿಲ್ಲ.
ಮಕ್ಕಳು ತಮ್ಮದೇ ಆದ ಬೌದ್ಧಿಕ ನೆಲೆಯಲ್ಲಿ ಗ್ರಹಣ ಶಕ್ತಿಯನ್ನು ಹೊಂದಿರುತ್ತಾರೆ. ಈ ಗ್ರಹಿಕೆಯ ಸಾಮಥ್ರ್ಯಕ್ಕೆ ಪೂರಕವಾದ ಬೌದ್ಧಿಕ, ಶೈಕ್ಷಣಿಕ ಸರಕುಗಳನ್ನು ಒದಗಿಸುವುದು ಒಂದು ಸ್ವಸ್ಥ ಸಮಾಜದ ಆದ್ಯತೆಯಾಗಿರಬೇಕಲ್ಲವೇ ? ತಂತ್ರಜ್ಞಾನ ಯುಗದ ನಾಗಾಲೋಟದಲ್ಲಿ ಇದನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ.
ಒಂದೆಡೆ ಬೈಜೂದಂತಹ ಶೈಕ್ಷಣಿಕ ವೆಬ್ ಸಾಧನಗಳು ಮಕ್ಕಳಿಗೆ ಅವರ ವಯೋಸಹಜ ಇತಿಮಿತಿಗಳನ್ನೂ ಮೀರಿದಂತೆ ಸರಕುಗಳನ್ನು ಉಣಬಡಿಸುತ್ತಿವೆ, ಮಧ್ಯಮ ವರ್ಗದ ಮಕ್ಕಳ ಮಿದುಳಿನಲ್ಲಿ ಅವಶ್ಯಕತೆಗಿಂತಲೂ ಹೆಚ್ಚು ಸರಕುಗಳನ್ನು ತುಂಬುತ್ತಿವೆ. ಮತ್ತೊಂದೆಡೆ ಮಕ್ಕಳು ತಮ್ಮ ಸಹಜ ವಿಕಸನಕ್ಕೆ ಅತ್ಯವಶ್ಯವಾದ ವಸ್ತುಗಳಿಂದ ವಂಚಿತರಾಗುತ್ತಿದ್ದಾರೆ.
ಕನ್ನಡದ ಹತ್ತಾರು ವಾಹಿನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನೇ ಮರೆತು ಮಾರುಕಟ್ಟೆಯ ಗುಲಾಮಗಿರಿಗೆ ಒಳಗಾಗಿರುವುದರಿಂದ ಮಕ್ಕಳ ಮನೋವಿಕಾಸಕ್ಕೆ ಪೂರಕವಾದಂತಹ ಯಾವುದೇ ಕಾರ್ಯಕ್ರಮಗಳನ್ನು ನಿರೀಕ್ಷಿಸಲು ಸಾಧ್ಯವೇ ಇಲ್ಲದಂತಾಗಿದೆ.
ಮುಂಜಾನೆಯಲ್ಲಿ ಜ್ಯೋತಿಷ್ಯ, ಆಗಮ, ಆರಾಧನೆ ಮತ್ತು ವಾಸ್ತು ಮುಂತಾದ ಮೌಢ್ಯ ಬಿತ್ತನೆ ಪ್ರಧಾನವಾಗಿದ್ದರೆ ರಾತ್ರಿ ವೇಳೆ ಕದನ ಕುತೂಹಲ ಕೆರಳಿಸುವ ಯುದ್ಧ, ಮಹಾಸಮರ, ಪ್ರವಾಹ, ವಿಶ್ವ ವಿನಾಶ ಹೀಗೆ ಭೀತಿ ಬಿತ್ತನೆಯ ಕಾರ್ಯಕ್ರಮಗಳು ಪ್ರಧಾನವಾಗಿರುತ್ತವೆ. ಈ ನಡುವೆ ಪ್ರಸಾರವಾಗುವ ಧಾರಾವಾಹಿಗಳು ಮಕ್ಕಳಿಗೆ ತಲುಪುವುದಕ್ಕಿಂತಲೂ ಹೆಚ್ಚಾಗಿ ಅವರಲ್ಲಿನ ಸೂಕ್ಷ್ಮತೆಯನ್ನೂ ನಾಶಪಡಿಸುವಂತಿರುತ್ತವೆ.
ಕನ್ನಡದ ಸುದ್ದಿಮನೆಗಳಿಂದ ಮಕ್ಕಳನ್ನು ದೂರ ಇರಿಸುವುದೇ ಕ್ಷೇಮ ಎನ್ನುವ ರೀತಿಯಲ್ಲಿ ಸುದ್ದಿ ವಾಹಿನಿಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ವಾಹಿನಿಯಲ್ಲಿ ಮಕ್ಕಳಿಗಾಗಿ ದಿನಕ್ಕೆ ಕನಿಷ್ಟ ಅರ್ಧಗಂಟೆಯಷ್ಟು ಅವಧಿಯನ್ನೂ ಒದಗಿಸಲು ಕನ್ನಡ ವಾಹಿನಿಗಳಿಗೆ ಸಾಧ್ಯವಾಗದಿರುವುದು ದುರಂತ.
ಚಲನ ಚಿತ್ರ ಕ್ಷೇತ್ರದಲ್ಲಿ ಬಹುಶಃ ಮಕ್ಕಳ ಕಲ್ಪನೆಯೇ ಮಾಯವಾಗಿದೆ. ಕನ್ನಡದಲ್ಲಿ ಒಂದು ಸುಂದರ ಮಕ್ಕಳ ಚಿತ್ರವನ್ನು ಕಂಡು ದಶಕಗಳೇ ಕಳೆದಿರಬಹುದು. ವಯಸ್ಕರಿಗಾಗಿ ಹೆಣೆಯುವ ಕತೆಗಳು, ಹೊಡಿಬಡಿ ದೃಶ್ಯಗಳು, ಅತಿಮಾನುಷ ಶಕ್ತಿಯ ನಾಯಕ ಮತ್ತು ಸತ್ವಹೀನ ನಾಯಕಿ ಹೀಗೆ ಹಳಸಲು ಸೂತ್ರಗಳನ್ನೇ ಬಳಸುತ್ತಿರುವ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಕೆಲವೇ ಚಿತ್ರಗಳು ಮಕ್ಕಳಿಗೆ ತಲುಪುವಂತಿರುವುದು ದುರಂತ.
ಮಕ್ಕಳಿಗಾಗಿಯೇ ಮನರಂಜನೆಯನ್ನೊಳಗೊಂಡ ಮನೋವಿಕಾಸ ಭೂಮಿಕೆಯ ಚಿತ್ರಗಳು ಕಾಣುತ್ತಲೇ ಇಲ್ಲ. ಇಲ್ಲಿ ಮತ್ತೊಮ್ಮೆ ಡಾ ರಂಗನಾಥ್ ನಾಟಕವನ್ನು ಕುರಿತು ಹೇಳಿದ ಮಾತುಗಳು ಹೆಚ್ಚು ಪ್ರಸ್ತುತ ಎನಿಸುತ್ತವೆ. ನಮ್ಮಲ್ಲಿ ಪ್ರತಿಭೆಗಳ ಕೊರತೆ ಇಲ್ಲ, ಅವಕಾಶಗಳ ಕೊರತೆ ಇದೆ. ಟಿ ಆರ್ ಪಿ ಮತ್ತು ಮಾರುಕಟ್ಟೆಯ ಚೌಕಟ್ಟಿನಿಂದಾಚೆಗೆ ಒಂದು ಉತ್ತಮ ಕೌಟುಂಬಿಕ ಧಾರಾವಾಹಿಯನ್ನೂ ತಯಾರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದು ದುರಂತ.
ವಿಕಸಿಸುವ ಕುಸುಮಗಳ ಪಕಳೆಗಳಿಗೆ ವಿಷದ ಲೇಪನ ಮಾಡುವ ಬೌದ್ಧಿಕ ಪ್ರಕ್ರಿಯೆಯಲ್ಲಿ ಸಾಂಸ್ಕೃತಿಕ ರಾಜಕಾರಣದ ಮತಾಂಧ ಶಕ್ತಿಗಳು ಸಕ್ರಿಯವಾಗಿರುವ ಈ ಸಂದರ್ಭದಲ್ಲಿ ನಮ್ಮ ಆದ್ಯತೆಗಳಿಗೆ ಎರಡು ಆಯಾಮಗಳಿರಬೇಕಾಗುತ್ತದೆ. ಮೊದಲನೆಯದು ಇಂದಿನ ಎಳೆ ಮಕ್ಕಳ ಮಿದುಳಿನಲ್ಲಿ ಸಮ ಸಮಾಜದ ಕಲ್ಪನೆಯನ್ನು ಜೀವಂತವಾಗಿರಿಸುವುದು ಮತ್ತು ವೈಜ್ಞಾನಿಕ-ವೈಚಾರಿಕ ಚಿಂತನೆಯ ನೆಲೆಯನ್ನು ಭವಿಷ್ಯಕ್ಕಾಗಿ ಕಾಪಾಡುವುದು.
ಈ ನಿಟ್ಟಿನಲ್ಲಿ ನಾವು ಯೋಚಿಸದೆ ಹೋದರೆ ಇಡೀ ಪೀಳಿಗೆಯನ್ನೇ ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳಲು ಮತಾಂಧ, ಜಾತಿವಾದಿ ಶಕ್ತಿಗಳು ಆವರಿಸುತ್ತವೆ. ಈ ಬೌದ್ಧಿಕ ವಿಕಸನದ ಮಾರ್ಗಗಳನ್ನು ಮರುಶೋಧಿಸುವ ಪ್ರಯತ್ನ ನಮ್ಮದಾಗಬೇಕಿದೆ. ಮಾಧ್ಯಮಗಳು ಪ್ರಜ್ಞೆ ಕಳೆದುಕೊಂಡಿವೆ ಆದರೆ ನಾಗರಿಕ ಸಮಾಜದ ಪ್ರಜ್ಞೆ ಜೀವಂತವಾಗಿದೆ ಅಲ್ಲವೇ ?
ಕೃಪೆ : ಬೆವರಹನಿ ಪತ್ರಿಕೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು