ದಿನದ ಸುದ್ದಿ
ಬಾಲಗೌರವ ಹಾಗೂ ಮಕ್ಕಳ ಚಂದಿರ ಪ್ರಶಸ್ತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ” ಗಾಗಿ ಅರ್ಜಿಗಳನ್ನು ಹಾಗೂ ಮಕ್ಕಳ ಕುರಿತಾಗಿ ರಚಿಸಲ್ಪಟ್ಟಿರುವ ಪುಸ್ತಕಗಳನ್ನು “ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿಗಾಗಿ ಲೇಖಕರಿಂದ ಆಹ್ವಾನಿಸಲಾಗಿದ್ದು, ಮಕ್ಕಳ ಕ್ಷೇತ್ರದಲ್ಲಿ ವಿವಿಧ ಪುಸ್ತಕಗಳನ್ನು ರಚಿಸಿದ ಲೇಖಕರಿಗೆ ಪ್ರಶಸ್ತಿಗಾಗಿ ಪುಸ್ತಕಗಳನ್ನು ಕಳುಹಿಸಿಕೊಡಲು ಅನುಕೂಲವಾಗುವಂತೆ ಅರ್ಜಿ ಸಲ್ಲಿಸುವ ದಿನಾಂಕವನ್ನು
ಏ.18 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243