Connect with us

ಲೈಫ್ ಸ್ಟೈಲ್

ಚಿನ್ನರ ಲೋಕದಲ್ಲಿ ಮುಂಗಾರು ಮಿಂಚು

Published

on

ನ್ನು ಮಳೆಗಾಲದ ಆನಂದವನ್ನು ಆಸ್ವಾದಿಸಲು ಮಕ್ಕಳ ಫ್ಯಾಷನ್ ಬಜಾರ್ ನಲ್ಲಿ  ಚಿನ್ನರ  ರಂಗುರಂಗೀನ್ ಉಡುಪುಗಳ ಖರೀದಿ ಹೆಚ್ಚಿದೆ. ಮುದ್ದು ಮಕ್ಕಳು ಏನೇ ಉಡುಪು ಧರಿಸಿದರೂ ಮುದ್ದಾಗಿ ಕಾಣುತ್ತಾರೆ.

ಮಳೆಗಾಲಕ್ಕೆ ಹೊಂದುವಂತಹ ಬೆಚ್ಚನೆಯ ಜ್ಯಾಕೆಟ್, ಲಾಂಗ್ ಕೋಟ್, ಲೆಗ್ಗಿಂಗ್, ಸಾಕ್ಸ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.ಕಾಲ ಬದಲಾದಂತೆ, ಮಕ್ಕಳ ಫ್ಯಾಷನ್ ಕೂಡಾ ಬದಲಾಗಿದೆ. ಮಕ್ಕಳಿಗೆ ಇಷ್ಟ ವಾದ ಕಾರ್ಟೂನ್ ಗಳನ್ನು  ಅವರ ಉಡುಪುಗಳ  ಮೇಲೆ ಮುದ್ರಿಸಲಾಗುತ್ತಿದೆ. ಇದರಿಂದ ಆಕರ್ಷಿತರಾದ ಮಕ್ಕಳು ,ಇಂತಹ ಉಡುಪುಗಳ ಬೇಡಿಕೆ ಜೋರಾಗಿದೆ. ಈಗಂತೂ ಮಕ್ಕಳ ಪಾರ್ಟಿ ಗಳಲ್ಲಿ, ಸಿಂಡ್ರೆಲ್ಲಾ, ಬಾರ್ಬಿ, ಟಿಂಕರ್ ಬೆಲ್, ಎಲ್ಸಾ..ಹೀಗೇ ಕಾರ್ಟೂನ್ ಆಧಾರಿತ ಉಡುಪುಗಳ ಬೇಡಿಕೆ ಹೆಚ್ಚಿದ್ದು , ತಮ್ಮ ಮನೆಯ ಮುದ್ದು ಬೊಂಬೆಯನ್ನ ರಾಜಕುಮಾರಿಯಂತೆ ಸಿಂಗರಿಸಿ ಕಣ್ಣು ತುಂಬಾ ನೋಡುವ ಆಸೆ ಪೋಷಕರದು. ಇದಕ್ಕೆ ತಕ್ಕಂತೆ ರೆಡಿಮೇಡ್ ಫ್ರಾಂಕ್ ಮತ್ತು ಗೌನ್ಗಳು ಬಹಳ ವಿನೂತನ ಹಾಗೂ ಆಕರ್ಷಕ ವಿನ್ಯಾಸದಲ್ಲಿ ಮಕ್ಕಳು ಮತ್ತು ಪೋಷಕರನ್ನು ಸೆಳೆಯುತ್ತಿದೆ.

ಇನ್ನು ಗಂಡು ಮಕ್ಕಳ ಫೇವರಿಟ್ ಎನಿಸಿಕೊಂಡಿರುವ ಸೂಪರ್ ಹೀರೋ ಗಳ ಮಾದರಿಯಲ್ಲಿ ಉಡುಪುಗಳು, ಚೋಟಾ ಭೀಮ್, ಸೂಪರ್ ಮ್ಯಾನ್, ಡೋರೇಮಾನ್.. ಹೀಗೇ ಹಲವಾರು ವೆರೈಟಿಗಳಲ್ಲಿ ಉಡುಪುಗಳ ಖರೀದಿ ಹೆಚ್ಚಿದೆ.

ಹೆಸರಲ್ಲೇ ಕಲೆ ಬೆರತಿರುವವಳು ನಾನು ಚಿತ್ರಶ್ರೀ ಹರ್ಷ. ವೃತ್ತಿಯಲ್ಲಿ ಉಪನ್ಯಾಸಕಿ. ಹುಟ್ಟಿದ್ದು ಬೆಳೆದದ್ದು ಬೆಂಗಳೂರಿನಲ್ಲಿ. ಬೆಂಗಳೂರು ವಿಶ್ವವಿದ್ಯಾಲಯದ ದ M.A Economics ಪದವೀಧರೆ. M.phil ಕೂಡ ಮುಗಿದಿದ್ದು ಬಿ.ಬಿ.ಎಂ.ಪಿ ಕಾಲೇಜಿನಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಫ್ಯಾಷನ್ ಸೆಳೆತ ಚಿಕ್ಕಂದಿನಿಂದಲೂ ಇದ್ದೇ ಇತ್ತು. ಅದಕ್ಕೆ ತಕ್ಕಂತೆ ಫ್ಯಾಷನ್ ಲೋಕವೂ ಕೈ ಬೀಸಿ ಕರೆಯುತ್ತಿತ್ತು. ಬಾಲ್ಯದ ಆಸೆ ಈಗ ಈಡೇರಿದೆ. ಫ್ಯಾಷನ್ ಲೋಕದಲ್ಲಿ "ನೈಲ್ ಆರ್ಟ್ ಸ್ಪೆಷಲಿಸ್ಟ" ಎಂಬ ಬಿರದು ನನ್ನದಾಗಿದೆ. ಹಲವಾರು ಖಾಸಗಿ ವಾಹಿನಿಗಳಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆ ಗಳಿಗೆ ಫ್ಯಾಷನ್ ಲೇಖನ ಬರೆಯುತ್ತಿದ್ದೇನೆ. ಬ್ಯೂಟಿ ಟ್ರೆಂಡ್ ಹಾಗೂ ನೈಲ್ ಆರ್ಟ್ ನಲ್ಲಿ ವಿನೂತನ ಹಾಗೂ ಟ್ರೆಂಡೀ ಲುಕ್ ಸೃಷ್ಟಿಸುವುದು ನನ್ನ ಹವ್ಯಾಸ. ಹಲವಾರು ಕವನಗಳನ್ನು ಬರೆದಿದ್ದು, ಪ್ರತಿಷ್ಠಿತ ದಿನಪತ್ರಿಕೆ ಗಳಲ್ಲಿ ಪ್ರಕಟವಾಗಿದೆ.

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending