ದಿನದ ಸುದ್ದಿ
ದುರ್ಗದಲ್ಲಿ ನಡೆಯಲಿದೆ ಬಂಡಾಯ ಸಾಹಿತ್ಯ ಸಂವಾದ
![](https://suddidina.com/wp-content/uploads/2018/09/chitradurga-fort.jpg)
ಚಿತ್ರದುರ್ಗ, (ಅ.7) : ಬಂಡಾಯ ಸಾಹಿತ್ಯ ಸಂಘಟನೆ ವತಿಯಿಂದ ಅ.13 ಮತ್ತು 14 ರಂದು ಎರಡು ದಿನಗಳ ಕಾಲ ಚಿತ್ರದುರ್ಗದಲ್ಲಿ ಭಾರತೀಯ ಸಾಹಿತ್ಯ ಮತ್ತು ಬಂಡಾಯ ಪರಂಪರೆ ಪರಿಕಲ್ಪನಾತ್ಮಕ ಚಿಂತನೆ ಕುರಿತು ಸಾಹಿತ್ಯ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಜಿ.ಹಳ್ಳಿ ನಾಗರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಲವತ್ತು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯ ರಾಜ್ಯದಲ್ಲಿ ಪುಸ್ತಕ ಓದುವ ಪರಿಪಾಠ ಬೆಳೆಸಿತು. ಅನೇಕ ಪ್ರಶ್ನೆಗಳನ್ನು ಜನರ ಮುಂದಿಟ್ಟಿದೆ. ಇಂತಹ ಸಾಹಿತ್ಯದಲ್ಲಿ ಅನೇಕ ಉತ್ತಮ ಕೃತಿಗಳು ರಚನೆಯಾಗಿವೆ. ಬಂಡಾಯ ಸಾಹಿತ್ಯವನ್ನು ಯುವ ಜನಾಂಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಾದೇಶಿಕ ಭಾಷೆಗಳು, ನಿರ್ಧಿಷ್ಟ ವಿಷಯಗಳ ಕುರಿತು ಸಂವಾದ ನಡೆಸಲಾಗುವುದು ಎಂದರು.
ಅ.13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಪ್ರೊ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸುವರು. ಜಿ.ರಾಮಕೃಷ್ಣ ಅಧ್ಯಕ್ಷತೆ ವಹಿಸುವರು. ಬಾನು ಮುಷ್ತಾಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರೇಹಳ್ಳಿ ಮಲ್ಲಿಕಾರ್ಜುನ, ಕೆ.ಎಂ.ವೀರೇಶ್, ಸತೀಶ್ರೆಡ್ಡಿ, ವಿ.ಗುರುಮಲ್ಲಪ್ಪ ತುರುವನೂರು, ಕೆ.ಜಿ. ಜಗದೀಶ್ ಉಪಸ್ಥಿತರಿರುವರು. ಬೆಳಿಗ್ಗೆ 11.30ಕ್ಕೆ ಮೊದಲ ಗೋಷ್ಠಿ ನಡೆಯುವುದು. ಅದರಲ್ಲಿ ರಾಜಪ್ಪ ದಳವಾಯಿ ‘ಕನ್ನ ಸಾಹಿತ್ಯ’, ರಂಗನಾಥ ಆರನಕಟ್ಟೆ ‘ತಮಿಳು ಸಾಹಿತ್ಯ’ ಹಾಗೂ ನಗರಗೆರೆ ರಮೇಶ್ ‘ತೆಲುಗು ಸಾಹಿತ್ಯ’ ಕುರಿತು ಮಾತನಾಡುವರು. ಸಿದ್ದನಗೌಡ ಪಾಟೀಲ್ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 2.15 ಕ್ಕೆ ಎರಡನೇ ಗೋಷ್ಠಿ. ಮೋಹನ್ ಕುಂಟಾರ ‘ಮಲೆಯಾಳಿ ಸಾಹಿತ್ಯ’, ಬಿ.ಎಸ್.ಸುಮಿತ್ರಾಬಾಯಿ ‘ಸಂಸ್ಕೃತ ಸಾಹಿತ್ಯ’ ಹಾಗೂ ಗೀತಾ ಶಣೈ ‘ಕೊಂಕಣ ಸಾಹಿತ್ಯ’ ಕುರಿತು ಮಾತನಾಡುವರು. ಕೇಶವ ಶರ್ಮ ಅಧ್ಯಕ್ಷತೆ ವಹಿಸುವರು. ಸಂಜೆ 4.30ಕ್ಕೆ ಮೂರನೇ ಗೋಷ್ಠಿ. ಶಿವರಾಮ ಶೆಟ್ಟಿ ‘ತುಳು ಸಾಹಿತ್ಯ’, ಬಿ.ಎಂ.ಹನೀಫ್ ‘ಬ್ಯಾರಿ ಸಾಹಿತ್ಯ’ ಹಾಗೂ ವಿಜಯ್ ತಮ್ಮಂಡ ಪೂಣಚ್ಚ ‘ಕೊಡವ ಸಾಹಿತ್ಯ’ ಕುರಿತು ಮಾತನಾಡುವರು. ಬೋಳುವಾರು ಮಹಮದ್ ಕುಂಞ ಅಧ್ಯಕ್ಷತೆ ವಹಿಸುವರು.
ಅ.14 ರಂದು ಬೆಳಿಗ್ಗೆ 9.30ಕ್ಕೆ ನಾಲ್ಕನೇ ಗೋಷ್ಠಿ ನಡೆಯಲಿದೆ. ತಾರಣ ಶುಭದಾಯಿನಿ ‘ಬಂಗಾಳಿ ಸಾಹಿತ್ಯ’, ಕಾಶೀನಾಥ ಅಂಬಲಗಿ ‘ಹಿಂದಿ ಸಾಹಿತ್ಯ’ ಹಾಗೂ ಎಂ.ಜಿ.ಹೆಗಡೆ ‘ಗುಜರಾತಿ ಸಾಹಿತ್ಯ’ ಕುರಿತು ಮಾತನಾಡುವರು. ಅಲ್ಲಮಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸುವರು. ಬೆಳಿಗ್ಗೆ 11.30ಕ್ಕೆ ಐದನೇ ಗೋಷ್ಠಿ. ಮೆಹರ್ ಮನ್ಸೂರ್ ‘ಉರ್ದು ಸಾಹಿತ್ಯ’, ಭಾಗೀರತಿ ಬಾಯಿ ‘ಅಸ್ಸಾಮಿ ಸಾಹಿತ್ಯ’ ಹಾಗೂ ಚಂದ್ರಕಾಂತ ಪೋಕಳೆ ‘ಮರಾಠಿ ಸಾಹಿತ್ಯ’ ಕುರಿತು ಮಾತನಾಡುವರು. ಸುಕನ್ಯಾ ಮಾರುತಿ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 2.15ಕ್ಕೆ ಆರನೇ ಗೋಷ್ಠಿ. ಶ್ರೀಪಾದ ಭಟ್ ‘ಪಂಚಾಇ ಸಾಹಿತ್ಯ’, ಅರುಣ್ ಜೋಳದ ಕೂಡ್ಲಿಗಿ ‘ಕಾಶ್ಮೀರಿ ಸಾಹಿತ್ಯ’ ಹಾಗೂ ಶಾಂತಾನಾಯ್ಕ್ ಶೀರಗಾನಹಳ್ಳಿ ‘ಲಂಬಾಣ ಸಾಹಿತ್ಯ’ ಕುರಿತು ಮಾತನಾಡುವರು. ಸಿ.ಬಸವಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಸಂಜೆ 4.30ಕ್ಕೆ ಕವಿಗೋಷ್ಠಿ. ಚಂದ್ರಶೇಖರ್ ತಾಳ್ಯ ಆಶಯ ನುಡಿಗಳನ್ನಾಡುವರು. ಬಿ.ಟಿ.ಲಲಿತಾ ನಾಯಕ್ ಅಧ್ಯಕ್ಷತೆ ವಹಿಸುವರು. ಡಾ.ಲೋಕೇಶ್ ಅಗಸನಕಟ್ಟೆ ಉಪಸ್ಥಿತರಿರುವರು. ನಾಡಿನ ವಿವಿಧ ಕವಿಗಳು ಭಾಗವಹಿಸುವರು.
ಸಂಜೆ 6.30ಕ್ಕೆ ಸಮಾರೋಫ ಸಮಾರಂಭ. ಎಲ್.ಹನುಮಂತಯ್ಯ ಸಮಾರೋಪ ಭಾಷಣ ಮಾಡುವರು. ಚಂದ್ರಶೇಖರ ಪಾಟೀಲ ಅಧ್ಯಕ್ಷತೆ ವಹಿಸುವರು. ಕಾಳೇಗೌಡ ನಾಗವಾರ, ಡಾ.ಬಿ.ಎಲ್.ವೇಣು ಆರ್.ಮಲ್ಲಿಕಾರ್ಜುನಯ್ಯ, ದಾವಣಗೆರೆ ಗಂಗಾಧರ ಉಪಸ್ಥಿತರಿರುವರು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಾ.ಜೆ.ಕರಿಯಪ್ಪ ಮಾಳಿಗೆ, ಕೆ.ಎಂ.ವೀರೇಶ್, ಶಿವಲಿಂಗಪ್ಪ, ಮಲ್ಲಿಕಾರ್ಜುನ ಕಡಕೋಳ್, ರಾಮಚಂದ್ರಪ್ಪ, ಗೋಪಾಲಸ್ವಾಮಿ ನಾಯಕ ಉಪಸ್ಥಿತರಿದ್ದರು.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!