ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲೆಯಲ್ಲಿ 390 ಜನರಿಗೆ ಕೋವಿಡ್ ಸೋಂಕು ದೃಢ: 80 ಮಂದಿ ಬಿಡುಗಡೆ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 390 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19,707 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 182, ಚಳ್ಳಕೆರೆ 57, ಹಿರಿಯೂರು 28, ಹೊಳಲ್ಕೆರೆ 30, ಹೊಸದುರ್ಗ 77, ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಪ್ರಕರಣ ಸೇರಿದಂತೆ ಒಟ್ಟು 390 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 80 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 2139 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 390 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 19,707 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ | ಲಾಕ್ ಡೌನ್ ನಡುವೆ ಸಪ್ತಪದಿ ತುಳಿದ ನಟ ಚಂದನ್-ಕವಿತ
ಕೋವಿಡ್ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 101 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 17,356 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,250 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,59,469 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,45,728 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,23,932 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1352 ಜನರ ವರದಿ ಬರುವುದು ಬಾಕಿ ಇದೆ. 737 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ