Connect with us

ದಿನದ ಸುದ್ದಿ

ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ

Published

on

ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.

ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.

ಕೈಗಾರಿಕಾ ವಲಯಗಳ ವರ್ಗೀಕರಣ

ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.

ಬಂಡವಾಳ ಉತ್ತೇಜನಕ್ಕೆ ಸಹಾಯಧನ

ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ

ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.

ಭೂ ಪರಿವರ್ತನಾ ಶುಲ್ಕ ಮರುಪಾವತಿ

ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.

ಪ್ರವೇಶ ತೆರಿಗೆ ವಿನಾಯಿತಿ

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.

ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ

ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್‍ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.

ಅರ್ಹ ಕೈಗಾರಿಕೆಗಳು

ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್‍ಎಸ್‍ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್‍ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.

ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್‍ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ2 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ3 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ4 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ4 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ2 weeks ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ2 weeks ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

Trending