ದಿನದ ಸುದ್ದಿ
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ
ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.
ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.
ಕೈಗಾರಿಕಾ ವಲಯಗಳ ವರ್ಗೀಕರಣ
ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.
ಬಂಡವಾಳ ಉತ್ತೇಜನಕ್ಕೆ ಸಹಾಯಧನ
ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ
ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.
ಭೂ ಪರಿವರ್ತನಾ ಶುಲ್ಕ ಮರುಪಾವತಿ
ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.
ಪ್ರವೇಶ ತೆರಿಗೆ ವಿನಾಯಿತಿ
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.
ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ
ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.
ಅರ್ಹ ಕೈಗಾರಿಕೆಗಳು
ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್ಎಸ್ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.
ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು.
ಜಿಎಂ ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲೂ ಇರುವ ರಂಗಾಸಕ್ತ,ಅಭಿನಯ ಪ್ರಿಯ ವಿದ್ಯಾರ್ಥಿಗಳ ಅಭಿನಯ ಕಲೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶ ರಂಗೋತ್ಸವದಾಗಿದ್ದು, ಮೂರು ಹಂತಗಳಲ್ಲಿ ಈ ಸ್ಪರ್ಧೆಯನ್ನು ನಡೆಸಲಾಯಿತು.
ಪ್ರಥಮ ಹಂತ ಆಡಿಷನ್ (ಆಯ್ಕೆ) ಗುಂಪುಗಳ ರಚನೆ ,ಎರಡನೇ ಹಂತ ಪೌರಾಣಿಕ ಸುತ್ತು ಈ ಹಂತದಲ್ಲಿ ಎಲಿಮಿನೇಷನ್ ಪ್ರಕ್ರಿಯೆ ಇದ್ದು ಕಡಿಮೆ ಅಂಕಗಳಿಸಿದವರನ್ನು ಗುಂಪಿನಿಂದ ಹೊರಗುಳಿಸಲಾಯಿತು. ಮೂರನೇ ಹಂತ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆ ಆಗಿದ್ದು ಈ ಸುತ್ತಿಗೆ ಬಂದ ನಾಲ್ಕು ತಂಡಗಳಿಗೆ ‘ಸಾಮಾಜಿಕ ಜಾಗೃತಿ ‘ಎಂಬ ವಿಷಯ ನೀಡಲಾಗಿದ್ದು, ಲೈಂಗಿಕ ದೌರ್ಜನ್ಯ ರೈತರ ಬವಣೆ, ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಡ್ರಗ್ಸ್ ಹಾವಳಿ ಈ ವಿಷಯಗಳನ್ನು ಕೇಂದ್ರೀಕರಿಸಿ ನಾಲ್ಕು ತಂಡಗಳು ಮನೋಜ್ಞವಾಗಿ ಅಭಿನಯಿಸಿದವು.
ತೀರ್ಪುಗಾರರಾಗಿ ಪ್ರೊ. ಗಣೇಶ್ ಜಿ ತಿಲ್ವೆ, ಪ್ರೊ. ದೀಪಿಕಾ ವಿ.ಬಿ, ಪ್ರೊ. ರಾಜೇಶ್ವರಿ ವೈ.ಎಂ ಮೂರು ಹಂತಗಳಲ್ಲೂ ತೀರ್ಪನ್ನು ನೀಡಿದರು. ಶೇಕಡ 70 ತೀರ್ಪುಗಾರರ ತೀರ್ಪು, ಶೇಕಡ 30 ಪ್ರೇಕ್ಷಕರ ಆನ್ಲೈನ್ ವೋಟಿಂಗ್ ಮೂಲಕ ಅಂತಿಮ ತೀರ್ಪನ್ನು ಪ್ರಕಟಿಸಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಸುನಿಲ್ ಕುಮಾರ್ ಬಿ.ಎಸ್, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪನಿರ್ದೇಶಕರಾದ ಡಾ. ಸಂತೋಷ್ ಕುಮಾರ್ ಎಂ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಾ ಬಿ.ಎಸ್ ಉಪಸ್ಥಿತರಿದ್ದು, ರಂಗೋತ್ಸವ-2025ರ ವಿನ್ನರ್ಸ್ ಟ್ರೋಫಿಯನ್ನು ಹಾಗೂ 10000 ನಗದು ಬಹುಮಾನವನ್ನು ಲಿಖಿತ ಮತ್ತು ತಂಡದವರಿಗೆ ಹಾಗೂ ಗೌತಮ್ ಮತ್ತು ತಂಡದವರಿಗೆ ರನ್ನರ್ಸ್ ಟ್ರೋಫಿ ಮತ್ತು 7500 ನಗದು ಬಹುಮಾನವನ್ನು ನೀಡಿದರು.
ಸಾಹಿತ್ಯ, ನಿರ್ದೇಶನ, ರಂಗಸಜ್ಜಿಕೆ ಎಲ್ಲವನ್ನು ಆಯಾ ತಂಡದ ವಿದ್ಯಾರ್ಥಿಗಳೇ ನಿರ್ವಹಿಸಿಕೊಂಡದ್ದು ವಿಶೇಷವಾಗಿತ್ತು. ಪ್ರಸ್ತುತ ಧಾವಂತದ ದಿನಮಾನಗಳಲ್ಲೂ ವಿದ್ಯಾರ್ಥಿಗಳಲ್ಲಿ ಹುದುಗಿರುವ ಈ ರಂಗ ಪ್ರೇಮ, ನಟನಾ ಚತುರತೆ ಪ್ರೇಕ್ಷಕರನ್ನು ಬೆರಗುಗೊಳಿಸಿತು.
ಕಾರ್ಯಕ್ರಮದ ಮೂರು ಹಂತಗಳಲ್ಲೂ ನಿಶಾ ನಿತ್ಯಾ ಕೆ, ಸಾಕಿದ್ ಬಿ.ಆರ್ ರವರು ಮನೋಜ್ಞವಾಗಿ ನಿರೂಪಿಸಿದರು ಹಾಗೂ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವಿದ್ಯಾರ್ಥಿ ಕಾರ್ಯದರ್ಶಿಯಾದ ಸಚಿನ್ ರವರು ಹಾಗೂ ಎಲ್ಲಾ ವಿಭಾಗಗಳ ಸಾಂಸ್ಕೃತಿಕ ವಿದ್ಯಾರ್ಥಿ ಪ್ರತಿನಿಧಿಗಳು ಕಾರ್ಯಕ್ರಮದ ಎಲ್ಲಾ ಹಂತಗಳು ಸುಸೂತ್ರವಾಗಿ ನೆರವೇರಲು ಸಹಕರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ2 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ2 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ8 hours agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

