ದಿನದ ಸುದ್ದಿ
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ

ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.
ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.
ಕೈಗಾರಿಕಾ ವಲಯಗಳ ವರ್ಗೀಕರಣ
ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.
ಬಂಡವಾಳ ಉತ್ತೇಜನಕ್ಕೆ ಸಹಾಯಧನ
ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ
ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.
ಭೂ ಪರಿವರ್ತನಾ ಶುಲ್ಕ ಮರುಪಾವತಿ
ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.
ಪ್ರವೇಶ ತೆರಿಗೆ ವಿನಾಯಿತಿ
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.
ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ
ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.
ಅರ್ಹ ಕೈಗಾರಿಕೆಗಳು
ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್ಎಸ್ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.
ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ19 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ