ದಿನದ ಸುದ್ದಿ
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ

ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.
ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.
ಕೈಗಾರಿಕಾ ವಲಯಗಳ ವರ್ಗೀಕರಣ
ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.
ಬಂಡವಾಳ ಉತ್ತೇಜನಕ್ಕೆ ಸಹಾಯಧನ
ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ
ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.
ಭೂ ಪರಿವರ್ತನಾ ಶುಲ್ಕ ಮರುಪಾವತಿ
ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.
ಪ್ರವೇಶ ತೆರಿಗೆ ವಿನಾಯಿತಿ
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.
ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ
ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.
ಅರ್ಹ ಕೈಗಾರಿಕೆಗಳು
ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್ಎಸ್ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.
ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ
ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

-
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ
ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ
ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.
ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.
ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.
ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.
ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.
2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾಕ್ ಮಾರ್ಕೇಟ್ 17.75 ಲಕ್ಷ ವಂಚನೆ, ಒಬ್ಬನ ಬಂಧನ ; 5 ಲಕ್ಷ ಜಪ್ತಿ !

- ಗಿರೀಶ್ ಕುಮಾರ್,ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.
ಕು. ಲಕ್ಷ್ಮೀ ವಿ.ಎಸ್ ತಂದೆ ವಿ. ಟಿ ಸತ್ಯನಾರಾಯಣ ವಾಸ: ಬಳ್ಳಾರಿ ರವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಸಿಯಾದ ರಂಜಿತ ಎಂಬುವವರು ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ಹೇಳಿ ನಂಬಿಸಿ ಪಿರ್ಯಾದಿದಾರರಿಂದ ಹಣ ರೂ. 17,75,865 ಆನ್ಲೈನ್ ಮೂಲಕ ಹಾಕಿಸಿಕೊಂಡು ಮೋಸ ಮಾಡಿರುತ್ತಾನೆ. ಆದರೆ 5 ಲಕ್ಷ ಮಾತ್ರ ರಿಕವರಿ, ಉಳಿದ ಹಣ ಎಲ್ಲಿಗೆ ಹೋಗಿದೆ.
ಪೊಲೀಸ್ ಅಧೀಕ್ಷಕಿ ಡಾ: ಶೋಭಾರಾಣಿ ವಿ.ಜೆ ಅವರ ಬಳ್ಳಾರಿ ಮಾರ್ಗದರ್ಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ನೇತೃತ್ವದಲ್ಲಿ, ಬಳ್ಳಾರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್ಪಿ ಡಾ: ಸಂತೋಷ ಚೌವ್ಹಾಣ್ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಣೆ ಮಾಡಿಸಿ ತನಿಖೆ ಕೈಗೊಂಡು, ಪೊಲೀಸ್ ಸಬ್-ಇನ್ಸ್ಪೆಕ್ಟರ್ ವಲಿಬಾಷ ಮತ್ತು ಸಿಬ್ಬಂದಿಯ ತಿಪ್ಪೇರುದ್ರ ಎಎಸ್ಐ, ಸುರೇಶ, ಉಮಾಮಹೇಶ್ವರ, ಕೆ. ಯಲ್ಲೇಶ್, ಎನ್ ಚಂದ್ರಶೇಖರ ಅವರೊಂದಿಗೆ ಸೇರಿ ಆರೋಪಿ ರಂಜಿತ್ ಹೊಸಪೇಟೆ, ವಿಜಯನಗರ ಜಿಲ್ಲೆ ಪತ್ತೆಮಾಡಿ ಈತನನ್ನು ವಿಚಾರಣೆಗೊಳಪಡಿಸಿ ಆರೋಪಿತ ಪಡೆದಿದ್ದ ನಗದು ಹಣ ರೂಪಾಯಿ 5 ಲಕ್ಷ ಜಪ್ತು ಮಾಡಿದ್ದಾರೆ.
ಪೊಲೀಸ್ ಅಧೀಕ್ಷಕರು ಬಳ್ಳಾರಿ, ಈ ಕಾರ್ಯಚರಣೆ ಮಾಡಿದ ಬಳ್ಳಾರಿ ಸಿ.ಇ.ಎನ್. ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಶ್ಲಾಘಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ www.schooleducation.karnataka.gov.in
ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ
ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು, ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ) ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಅವಹೇಳನಕಾರಿ ಹೇಳಿಕೆ ; ಲೋಕಿಕೆರೆ ನಾಗರಾಜ್ ಕೂಡಲೇ ಕ್ಷಮೆ ಕೇಳಬೇಕು : ಸವಿತಾ ಹುಲ್ಲುಮನೆ ಗಣೇಶ್ ಆಗ್ರಹ
-
ದಿನದ ಸುದ್ದಿ3 days ago
ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ
-
ದಿನದ ಸುದ್ದಿ5 days ago
ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ನೂರು ಉಗ್ರಗಾಮಿಗಳು ಹತ : ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್
-
ದಿನದ ಸುದ್ದಿ4 days ago
ದಾವಣಗೆರೆ | ಮುಂಗಾರು ವಿಪತ್ತು ನಿರ್ವಹಣೆಗೆ ಸಿದ್ದತೆ, ಸಿಡಿಲಬ್ಬರ ಮುನ್ನೆಚ್ಚರಿಕೆಗೆ ಆಪ್ ಅಳವಡಿಸಿಕೊಳ್ಳಲು ಸಲಹೆ
-
ದಿನದ ಸುದ್ದಿ3 days ago
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ4 days ago
ದಾವಣಗೆರೆ | ಡಿ.ಇ.ಎಲ್.ಇಡಿ. ದಾಖಲಾತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಚನ್ನಗಿರಿ | ಇದೇ 15 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ3 days ago
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ