Connect with us

ದಿನದ ಸುದ್ದಿ

ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ

Published

on

ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.

ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.

ಕೈಗಾರಿಕಾ ವಲಯಗಳ ವರ್ಗೀಕರಣ

ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.

ಬಂಡವಾಳ ಉತ್ತೇಜನಕ್ಕೆ ಸಹಾಯಧನ

ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.

ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ

ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.

ಭೂ ಪರಿವರ್ತನಾ ಶುಲ್ಕ ಮರುಪಾವತಿ

ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.

ಪ್ರವೇಶ ತೆರಿಗೆ ವಿನಾಯಿತಿ

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.

ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ

ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್‍ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.

ಅರ್ಹ ಕೈಗಾರಿಕೆಗಳು

ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್‍ಎಸ್‍ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್‍ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.

ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್‍ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್...

ದಿನದ ಸುದ್ದಿ1 day ago

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು...

ದಿನದ ಸುದ್ದಿ2 days ago

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ...

ದಿನದ ಸುದ್ದಿ5 days ago

ಕವಿತೆ | ನೆನಪು

ರುದ್ರಪ್ಪ ಹನಗವಾಡಿ ಅಪ್ಪನನ್ನು ಒಪ್ಪ ಮಾಡಿ ವರ್ಷಗಳೇ ಕಳೆದವು ಮುವ್ವತ್ತೇಳು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ಅರಸರ ಮೀಸಲಾತಿ ಬಸವಲಿಂಗಪ್ಪನವರ ಬೂಸಾ ಖ್ಯಾತಿ ಮಲ ಹೊತ್ತು ಮಲಗಿದ್ದ ಕಾಲಕ್ಕೆ...

ದಿನದ ಸುದ್ದಿ5 days ago

ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?

ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ...

ದಿನದ ಸುದ್ದಿ5 days ago

ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ

ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ದಿನದ ಸುದ್ದಿ5 days ago

ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ, ಪ್ರಸ್ತುತ...

ದಿನದ ಸುದ್ದಿ5 days ago

ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ

ರಾಜ್ಯದ 28ಲೋಕಸಭಾ ಮತಕ್ಷೇತ್ರಗಳನ್ನು ಒಳಗೊಂಡ ಜಿಲ್ಲೆಗಳಲ್ಲಿ ನಡೆದಿರುವ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ಸುದ್ದಿದಿನ ಡೆಸ್ಕ್ : ದಾವಣಗೆರೆಯಲ್ಲಿ ಚುನಾವಣಾ ಕಾರ್ಯಗಳ ವೀಕ್ಷಣೆ ಮತ್ತು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ...

ದಿನದ ಸುದ್ದಿ6 days ago

ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ

ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 26 ರಂದು ಜರುಗಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ...

mallikarjun kharge_suddidina mallikarjun kharge_suddidina
ದಿನದ ಸುದ್ದಿ7 days ago

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ

ಸುದ್ದಿದಿನ, ದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಚುನಾವಣಾ ಖರ್ಚುವೆಚ್ಚ ನಿರ್ವಹಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಆಡಳಿತ ಪಕ್ಷ ಬಿಜೆಪಿಗೆ ಅನುಕೂಲವಾಗುವಂತೆ...

Trending