ದಿನದ ಸುದ್ದಿ
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ
ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.
ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.
ಕೈಗಾರಿಕಾ ವಲಯಗಳ ವರ್ಗೀಕರಣ
ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.
ಬಂಡವಾಳ ಉತ್ತೇಜನಕ್ಕೆ ಸಹಾಯಧನ
ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ
ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.
ಭೂ ಪರಿವರ್ತನಾ ಶುಲ್ಕ ಮರುಪಾವತಿ
ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.
ಪ್ರವೇಶ ತೆರಿಗೆ ವಿನಾಯಿತಿ
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.
ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ
ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.
ಅರ್ಹ ಕೈಗಾರಿಕೆಗಳು
ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್ಎಸ್ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.
ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


