ರಾಜಕೀಯ
ಸಮುದಾಯ ಮರೆತ ಆಂಜನೇಯ ವಿರುದ್ಧ ಮಾದಿಗರ ಆಕ್ರೋಶ
ಸುದ್ದಿದಿನ, ಚಿತ್ರದುರ್ಗ (ಅ. 08) : ಲೋಕಸಭಾ ಚುನಾವಣೆ ಆರಂಭದಲ್ಲೇ ಮಾಜಿ ಸಚಿವ ಎಚ್.ಆಂಜನೇಯ ಅವರ ವಿರುದ್ಧ ಮಾದಿಗ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ.
ಮಾಜಿ ಸಚಿವ ಎಚ್. ಆಂಜನೇಯ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡದೆ ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ, ಇದೇ ರೀತಿ ಮುಂದುವರೆದರೆ ಅವರ ವಿರುದ್ದ ಹೋರಾಟವನ್ನು ಮಾಡುವುದ್ದಲ್ಲದೆ ತಕ್ಕ ಪಾಠವನ್ನು ಕಲಿಸುವುದಾಗಿ ರಾಜ್ಯ ಮಾದಿಗ ಮಹಾ ಸಭಾ ಎಚ್ಚರಿಸಿದೆ.
ಚಿತ್ರದುರ್ಗ ನಗರದಲ್ಲಿ ಸೋಮವಾರ ಸಭೆಯನ್ನು ನಡೆಸಿದ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಭಾದ ರಾಜ್ಯಾಧ್ಯಕ್ಷ ಹನುಮಂತಪ್ಪ ದರ್ಗಾ ಅಂಜನೇಯ ಸಮಾಜದ ಹೆಸರನ್ನು ಹೇಳಿಕೊಂಡು ರಾಜಕೀಯ ಮಾಡಿ ಅಧಿಕಾರವನ್ನು ಪಡೆದು ಅದನ್ನು ಅನುಭವಿಸಿದರು ಆದರೆ ಸಮಾಜಕ್ಕೆ ಯಾವುದೇ ರೀತಿಯ ಉಪಯುಕ್ತವಾದ ಕಾರ್ಯಕ್ರಮಗಳಾಗಲಿ, ಯೋಜನೆಗಳಾಗಲಿ ಹಾಕಿಕೊಳ್ಳಲಿಲ್ಲ, ಇದರ ಬದಲಾಗಿ ಸಮಾಜದ ಆಸ್ತಿಗಳನ್ನು ಪಡೆಯುವ ಸಲುವಾಗಿ ಟ್ರಸ್ಟ್ರ್ಗಳನ್ನು ರಚನೆ ಮಾಡುವುದರ ಮೂಲಕ ಅದರಲ್ಲಿ ತಮಗೆ ಬೇಕಾದವರನ್ನು ಹಾಕಿಕೊಂಡು ಸರ್ಕಾರದಿಂದ ಅನುದಾನವನ್ನು ಪಡೆದು ಸ್ವಂತವಾಗಿ ಅಸ್ತಿಯನ್ನು ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಸಮಾಜದ ಆಸ್ತಿ ಬೇರೆಯರ ಕೈಯಲ್ಲಿದೆ ಆದನ್ನು ಬಿಡಿಸಲಾಗಿದೆ ಹಾಗೇಯೇ ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಮಾದಿಗರಿಗೆ ಅನುಕೂಲವಾಗುವ ಸದಾಶಿವ ಆಯೋಗದ ವರದಿ ಜಾರಿಗಾಗಿ ಹಲವಾರು ಹೋರಾಟಗಳು, ಪ್ರತಿಭಟನೆಗಳು, ಧರಣ ಗಳು ನಡೆದಿದ್ದರು ಸಹಾ ಇದರ ಬಗ್ಗೆ ಅಧಿಕಾರದಲ್ಲಿದ್ಧಾಗ ಮಾತನಾಡದೇ ಜನಾಂಗದವರಿಗೆ ಮೋಸವನ್ನು ಮಾಡುತ್ತಾ ಇದ್ದ ಅಂಜನೇಯ ಈಗ ಮಾತ್ರ ಸದಾಶಿವ ಆಯೋಗದ ವರದಿ ಜಾರಿಯಾಗಬೇಕೆಂದು ಹೋರಾಟವನ್ನು ಮಾಡುತ್ತಿದ್ದಾರೆ ಇದೇ ಹೋರಾಟವನ್ನು ಅಂದು ಅಧಿಕಾರ ಇದ್ದಾಗ ಮಾಡಿದ್ದರೆ ಬೆಲೆ ಸಿಗುತ್ತಿತ್ತು ಈಗ ಸೋತಿದ್ದೇನೆ ಏನು ಕೆಲಸ ಇಲ್ಲ ಎಂದು ಸದಾಶಿವ ಆಯೋಗದ ವರದಿ ಅನುಷ್ಠಾನದ ಬಗ್ಗೆ ಮಾತನಾಡುತ್ತಿದ್ಧಾರೆ ಮಾಡುವ ಇಚ್ಚಾ ಶಕ್ತಿ ಇದ್ದರೆ ಅಧಿಕಾರದಲ್ಲಿದ್ದಾಗಲೆ ಮಾಡಬೇಕಿತ್ತು ಎಂದು ಹನುಮಂತಪ್ಪ ಟೀಕಿಸಿದ್ದಾರೆ.
ಈಗಾಗಲೇ ಜನಾಂಗದ ಮಠ ಇದ್ದರೂ ಸಹಾ ಬೇರೆಯವರ ಜೊತೆಗೂಡಿ ಮತ್ತೊಂದು ಮಠವನ್ನು ಮಾಡುವುದರೊಂದಿಗೆ ಜನಾಂಗದವರಲ್ಲಿ ಗೊಂದಲವನ್ನು ಮೂಡಿಸುವಂತೆ ಮಾಡಿದ್ದಾರೆ, ತಮ್ಮ ಅನುಕೂಲಕ್ಕೆ ತಕ್ಕಂತೆ ಜನಾಂಗ, ಸಮಾಜ ಮತ್ತು ಮಠಗಳನ್ನು ಅಂಜನೇಯ ಬಳಸಿಕೊಳ್ಳುತ್ತಿದ್ದಾರೆ, ಇದರ ಬಗ್ಗೆ ಸಮುದಾಯವರು ಎಚ್ಚರದಿಂದ ಇರುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿ, ಸರ್ಕಾರದ ಅನುದಾನವನ್ನು ಸಮಾಜದ ಅಭೀವೃದ್ದಿಗೆ ಬಳಕೆ ಮಾಡದೇ ಸ್ವಂತಕ್ಕೆ ಯಾವುದೇ ಹೆಸರಿಲ್ಲದ ಟ್ರಸ್ಟ್ಗೆ ಹಾಕುವುದರ ಮೂಲಕ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.
ಸಭಾದ ರಾಜ್ಯ ಸಂಚಾಲಕರಾದ ಪಾಂಡುರಂಗಪ್ಪ ಮಾತನಾಡಿ ಅಂಜನೇಯ ತಾವೊಬ್ಬರೆ ಹೋದರೆ ಜನಾಂಗದವರು ಮಾತು ಕೇಳುವುದಿಲ್ಲ ಎಂದು ಮನಗಂಡು ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಮತ್ತು ತಿಮ್ಮಾಪುರರವರನ್ನು ಮುಂದಿಟ್ಟುಕೊಂಡು ಸಭೆಯನ್ನು ಮಾಡುವುದರ ಮೂಲಕ ಜನಾಂಗವನ್ನು ಗೊಂದಲಕ್ಕೆ ಈಡು ಮಾಡುತ್ತಿದ್ದಾರೆ ಎಂದರು.
ಸರ್ಕಾರ ಮಾದಿಗ ಅಭೀವೃದ್ದಿಗಾಗಿ ನಿಗಮವನ್ನು ಸ್ಥಾಪನೆ ಮಾಡಲು ಮುಂದಾಗಿತ್ತು ಅದರ ಹೆಸರನ್ನು ಆದಿಜಾಂಬವ ಅಭೀವೃದ್ದಿ ನಿಗಮ ಎಂದು ನಾಮಕರಣಕ್ಕೆ ಮುಂದಾಗಿದೆ ಆದರೆ ಮಹಾಸಭಾ ಇದನ್ನು ವಿರೋಧಿಸುತ್ತದೆ ಈ ರೀತಿಯ ಹೆಸರಿನಿಂದ ನಿಗಮವನ್ನು ಸ್ಥಾಪನೆ ಮಾಡುವುದು ಬೇಡ ಇದರ ಬದಲಾಗಿ ಮಾದಿಗ ನಿಗಮ ಎಂದು ಸ್ಥಾಪನೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಗೋಷ್ಟಿಯಲ್ಲಿ ಮಾದಿನ ಜನಾಂಗದ ಶಿವಮೂರ್ತಿ, ರಾಜಪ್ಪ, ಗಂಗಾಧರಪ್ಪ, ವಾಗೀಶ್ ಕುಮಾರ್ ರುದ್ರಮುನಿ, ಬಸವರಾಜಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ16 hours ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ3 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ