Connect with us

ದಿನದ ಸುದ್ದಿ

ಚಿತ್ರದುರ್ಗ | ‘ಸೌಹಾರ್ದ ನಡಿಗೆ ಶರಣ ಸಂಸ್ಕೃತಿ ಕಡೆಗೆ’ ಕಾರ್ಯಕ್ರಮ

Published

on

ಸುದ್ದಿದಿನ, ಚಿತ್ರದುರ್ಗ : ಶ್ರೀ ಮುರುಘಾಮಠದಲ್ಲಿರುವ ನಡೆಯುತ್ತಿರುವ ಶರಣ ಸಂಸ್ಕøತಿಯ ಉತ್ಸವ 2018ರ ಪ್ರಯುಕ್ತ “ಸೌಹಾರ್ದ ನಡಿಗೆ ಶರಣ ಸಂಸ್ಕøತಿ ಕಡೆಗೆ” ಕಾರ್ಯಕ್ರಮದೊಂದಿಗೆ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಆರಂಭವಾಯಿತು.

ಈ ಜಾಥಾವು ನಗರದ ಕನಕ ವೃತ್ರದಿಂದ, ಕೋಟೆಯ ಮುಂಬಾಗ, ಜೋಗಿಮಟ್ಟಿ ರಸ್ತೆ, ಪಟ್ಟದ ಪರಮೇಶ್ವರಿ ಶಾಲೆ, ಚಳ್ಳಕೆರೆ ಗೇಟ್, ಆರ್.ಟಿ.ಒ ಕಚೇರಿ ಹತ್ತಿರ, ರಾಷ್ಟ್ರೀಯ ಹೆದ್ದಾರಿ 13ರ ಗ್ರಾಮಾಂತರ ಪೋಲಿಸ್‍ಠಾಣೆ, ರೈಲ್ವೆಸ್ಟೇಷನ್, ಎಸ್.ಜೆ.ಎಮ್.ವಿದ್ಯಾರ್ಥಿ ನಿಲಯದ ಬಳಿ ಸಾಗಿತು. ನಗರದ ಪ್ರಮುಖರು, ರಾಜಕೀಯ ದುರೀಣರು, ಎಸ್.ಜೆ.ಎಮ್.ವಿದ್ಯಾಪೀಠದ ಶಾಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು, ನಾಗರೀಕರು ತಂಡೋಪತಂಡವಾಗಿ ವಿವಿಧೆಡೆಯಿಂದ ಆಗಮಿಸಿ ಚಿತ್ರದುರ್ಗದ ಗಾಂಧೀ ವೃತ್ತದಲ್ಲಿ ಸಮಾವೇಶಗೊಂಡು ಶ್ರೀ ಮಠದ ಅನುಭವ ಮಂಟಪಕ್ಕೆ ಬಂದು ಸಂಪನ್ನವಾಯಿತು.

ಪರಿವರ್ತನೆ ಜಗದ ನಿಯಮ, ಪರಿವರ್ತನೆಯಾಗದಿದ್ದಲ್ಲಿ ಕಾಲವೇ ಪರಿವರ್ತಿಸುತ್ತದೆ. ಮರುಕವಿಲ್ಲದ ಮಾನವನನಿಗಿಂತ ಮರದ ನೆರಳೆ ವಾಸಿ. ಸ್ವಪ್ರಯತ್ನದಿಂದ ಸಾಮಾನ್ಯನೂ ಸಮರ್ಥನಾಗಬಲ್ಲ. ಆಸಕ್ತಿಯಿಂದ ಜೀವನ ಅನಾವರಣ ನಿರಾಸಕ್ತಿಯಿಂದ ಜೀವನ್ಮರಣ. ಅಂತರಂಗದ ಶುದ್ದತೆ ಬಹಿರಂಗದಲ್ಲಿ ಸಾತ್ವಿಕತೆ ಸಾಧಿಸುವುದೇ ಬದುಕಿನ ಬದ್ದತೆ ಎನ್ನುವಂತಹ ಘೋಷವಾಕ್ಯಗಳನ್ನು ಕೂಗುತ್ತ ಜಾತವು ಸಾಗಿತು.

ನಂತರ ಅನುಭವಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾನಿದ್ಯ ವಹಿಸಿ ಮಾತನಾಡಿದಡಾ.ಶಿವಮೂರ್ತಿಮುರುಘಾಶರಣರು, ಸರ್ವಜನಾಂಗದ ಶಾಂತಿಯ ತೋಟ ಎಂಬುವ ರೀತಿಯಲ್ಲಿ ಶ್ರೀಮಠವು ನಡೆಯುತ್ತ ಸಾಗಿದೆ. ಇಂದು ಚಿತ್ರರಂಗದ ಕಲಾವಿದರು ಆಗಮಿಸಿ ನಮ್ಮ ಸೌಹಾರ್ಧ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಶರಣ ಸಂಸ್ಕøತಿ ಉತ್ಸವಕ್ಕೆ ಮೆರಗು ತಂದಿದೆ ಎಂದು ನುಡಿದರು.

ಚಿತ್ರನಟ ಹಾಗು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮಾತನಾಡಿ ಇಂತಹ ಒಂದು ಅನುಭವ ವಿಶೇಷವಾದದ್ದು . ದಸರ ಉತ್ಸವವನ್ನು ಇಡೀ ನಾಡೆನೆಲ್ಲೆಡೆ ಆಚರಿಸುತ್ತಾರೆ. ಚಿತ್ರರಂಗದವರಿಗೆ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡಲು ಅವಕಾಶ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು.. ಜಾತಿ ಮತ ಯಾವುದನ್ನು ನೋಡದೆ ನಾವೆಲ್ಲರು ಒಂದೇ ಎಂದು ಸಾರುವ ಮಠ ಶ್ರೀಮಠವು ಆಗಿದೆ. ಚಿತ್ರರಂಗದಲ್ಲಿ ನಾವೆಲ್ಲರೂ ಒಂದೊಂದು ಪಾತ್ರ ಮಾಡುತ್ತ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಪ್ರಯತ್ನ ಮಾಡುತ್ತೇವೆ. ಹಲವು ವಿಧವಾದ ಅನುಭವಗಳಾಗಿವೆ. ಇಂದು ಮುರುಘಾಶರಣರ ಪಾದದಲ್ಲಿರುವುದು ನನ್ನ ಅದೃಷ್ಟವಾಗಿದೆ. ಈ ಸಂಧರ್ಭವನ್ನು ನನ್ನ ಜೀವನದಲ್ಲಿ ಎಂದು ಮರೆಯುವುದಿಲ್ಲ ಎಂದು ತಿಳಿಸಿದರು.

ಹಿರಿಯ ಚಿತ್ರನಟ ದೊಡ್ಡಣ್ಣ ಮಾತನಾಡಿ, ಜನಿಸಿದ ಸಕಲ ಜೀವರಾಶಿಗಳಿಗೆ ಆಹಾರವೇ ಮುಖ್ಯ, ಜಗತ್ತಿನಲ್ಲಿ ಅನ್ನ ದೊಡ್ಡದು. ಜಗತ್ತಿನಲ್ಲಿ ತಾಯಿ ಸತ್ತರೆ ಬದುಕುವರು, ಆದರ ಅನ್ನವಿಲ್ಲದೇ ಯಾವ ಜೀವರಾಶಿಯು ಬದುಕುವುದಿಲ್ಲ. ಶರಣರು ಅನ್ನದಾಸೋಹವನ್ನು ಶ್ರೀಮಠದಲ್ಲಿ ಉಚಿತವಾಗಿ ನೀಡುವಂತಹ ಕಾರ್ಯವನ್ನು ಮಾಡುತ್ತಿರುತ್ತಾರೆ, ಅದು ನಮ್ಮೆಲ್ಲರ ಪುಣ್ಯ ಹಾಗು ಭಾಗ್ಯವೆನ್ನಬೇಕು ಎಂದು ನುಡಿದರು.

ಸಾಹಿತಿ ಬಿ.ಎಲ್.ವೇಣು ಮಾತನಾಡಿ, ನಾನು ನಿಮ್ಮೂರಿನ ಮಗ, ನನ್ನ ಬೆಳವಣ ಗೆಯಲ್ಲಿ ಈ ಮಠದ ಪಾತ್ರ ಮಹತ್ವದ್ದಾಗಿದೆ. ಆದಿಕವಿ ಪಂಪ ಹೇಳಿರುವಂತೆ ಮಾನವ ಜಾತಿ ತಾನೊಂದೆ ವಲಂ ಎನ್ನುವಂತೆ ಶರಣರು ಸಹ ಇದನ್ನೆ ಹೇಳುತ್ತ ಪಾಲಿಸುತ್ತಿದ್ದಾರೆ. ಅವರ ಆಶೀರ್ವಾದವು ಸದಾ ನಮ್ಮಗಳ ಮೇಲಿರಲೆಂದು ನುಡಿದರು.

ಕಾರ್ಯಕ್ರಮದಲ್ಲಿ ಶರಣ ಸಂಸ್ಕøತಿ ಉತ್ಸವ 2018ರ ಗೌರಾಧ್ಯಕ್ಷರಾದ ಮಧುರೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಜ.ಶ್ರೀ.ಪುರುಷೋತ್ತಮನಂದಪುರಿ ಮಹಾಸ್ವಾಮಿಗಳು, ಕಾರ್ಯಧ್ಯಕ್ಷರಾದ ಪಟೇಲ್ ಶಿವಕುಮಾರ್, ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್, ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟ ಶ್ರೀನಿವಾಸ್ ಮೂರ್ತಿ, ಎಸ್.ಜೆ.ಎಮ್.ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಾಹಕ ನಿರ್ದೇಶಕರುಗಳಾದಡಾ.ಈ.ಚಿತ್ರಶೇಖರ್,ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಾಹಣಾಧಿಕಾರಿ ದೊರೆಸ್ವಾಮಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಮುರಾ ಕಲಾವಿದರು ವಚನಗೀತೆ ಪ್ರಾರ್ಥಿಸಿ,ಪ್ರದೀಪ್‍ಕುಮಾರ್.ಜಿ.ಟಿ. ಸ್ವಾಗತಿಸಿ, ಪ್ರೊ.ಸಾಲಿಮಠ್ ನಿರೂಪಿಸಿ ವಂದಿಸಿದರು.

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ2 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ2 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ3 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ2 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending