ದಿನದ ಸುದ್ದಿ
ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ
ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ
ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ ಎಂದು ಸಮಿತಿ ಸಂಚಾಲಕ ಚಳ್ಳಕೆರೆ ಬಸವರಾಜ್ ತಿಳಿಸಿದ್ದಾರೆ.
ಪತ್ರಿಕಾ ಭವನದದಲ್ಲಿ ಸೋಮವಾರ ಎಂ.ಜಯಣ್ಣ, ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತಸಂಘಟನೆ ಸೇರಿದಂತೆ ನೂರಾರು ಸಂಘಟನೆಗಳು ಸಮಿತಿ ಹೋರಾಟದಲ್ಲಿ ಪಾಲ್ಗೊಂಡಿವೆ. ಹಾಗೇಂದು ಸಮಿತಿ ಹೆಸರಲ್ಲಿ ಸಭೆ ಕರೆಯುವ, ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಸದಸ್ಯ ಸಂಘಟನೆಗಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರವಾಸಿ ಮಂದಿರದಲ್ಲಿ ರೈತಸಂಘ ಆಯೋಜಿಸಿದ ಸಭೆಗೆ ಸಮಿತಿ ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾರ್ಶ ಆಗಮಿಸಿರಲಿಲ್ಲ. ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ ಟಿ.ಶಿವಪ್ರಕಾಶ್, ಕೆ.ಆರ್ ದಯಾನಂದ್, ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತ್ರ ಸಭೆಯಲ್ಲಿ ಭಾಗವಹಿಸಿದ್ದರು.
ಅಷ್ಟೇ ಅಲ್ಲದೆ ಇಡೀ ಸಮಿತಿ ಹಾದಿಯಲ್ಲಿ ಈವರೆಗೂ ಪದಗ್ರಹಣ ಎಂಬ ಪದ ಬಳಕೆಯಿಲ್ಲ. ಆದರೆ, ಭಾನುವಾರ ಚಿತ್ರದುರ್ಗದ ಎಪಿಎಂಸಿ ಆವರಣದ ರೈತ ಭವನದಲ್ಲಿ ನಡೆದ ಸಭೆಗೆ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್ ಸಹ ಆಗಮಿಸಿರಲಿಲ್ಲ. ಆದರೆ, ಮಾಧ್ಯಮಗಳಲ್ಲಿ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು ಎಂದು ಸುದ್ದಿಗಳು ಬಿತ್ತರವಾಗಿವೆ. ಈ ಎಲ್ಲ ನಡೆ ಬಗ್ಗೆ ಸಂಚಾಲಕ ಸಮಿತಿಗೆ ಅಸಮಾಧಾನವಿದೆ ಎಂದು ತಿಳಿಸಿದರು.
ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ, ನಾನು ಕೂಡ ಅಂದಿನ ಸಭೆಗೆ ಹೋಗಿದ್ದೇ, ಆದರೆ, ಈಗ ನನಗೆ ಮನವರಿಕೆ ಆಗಿದ್ದು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಯ್ಕೆ ಪ್ರಕ್ರಿಯೆ ಆಗಬೇಕು ಎಂಬುದು ಸ್ಪಷ್ಟಗೊಂಡಿದೆ. ಸಮಿತಿಯಲ್ಲಿ ಒಡಕು ಇಲ್ಲ, ಆದರೆ, ಕೆಲ ಸಣ್ಣಪುಟ್ಟ ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಂಡು ಹೋರಾಟ ರೂಪಿಸುವ ಅಗತ್ಯವಿದೆ ಎಂದರು.
ಬಯಲುಸೀಮೆಯ ಕಟ್ಟ ಕಡೆಯ ಜನರಿಗೆ ನೀರು ತಲುಪುವಂತೆ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲಾಗುವುದು ಎಂದರು.
ಸಂಚಾಲಕ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದಿನಿಂದಲೂ ಸಮಿತಿ ಸಂಚಾಲಕರ ಸಭೆಯಲ್ಲಿ ಚರ್ಚೆ ಬಳಿಕ, ಜನರನ್ನಳಗೊಂಡ ಸಭೆ ಕರೆದು ಅನುಮತಿ ಪಡೆಯುವ ಪದ್ಧತಿ ಹೋರಾಟ ಸಮಿತಿಯಲ್ಲಿದೆ. ಅದೇ ರೀತಿ ಮುಂದೆಯೂ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಸಮಿತಿಯ ಯಾದವರೆಡ್ಡಿ, ಜಿ.ಎಸ್.ಉಜ್ಜಿನಪ್ಪ, ಚಳ್ಳಕೆರೆ ಬಸವರಾಜ್, ಈ.ಮಹೇಶ್ಬಾಬು, ಆರ್.ಶೇಷಣ್ಣಕುಮಾರ್, ಟಿ.ಷಫಿವುಲ್ಲಾ, ದಸಂಸ ರಾಜ್ಯ ಮುಖಂಡ ಡಿ.ದುರುಗೇಶ್ ಇತರರು ಸಹಿ ಮಾಡಿ ಬಿಡುಗಡೆ ಮಾಡಿದ ಪ್ರಕಟಣೆಯ ಯಥಾರೂಪ ಇಲ್ಲಿದೆ.
ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೋಂದಾಯಿತ ಸಂಘಟನೆಯಲ್ಲ. ಆದರೂ ಈ ಸಮಿತಿ ಕೆಲ ಪದ್ಧತಿಗಳನ್ನು ಚಾಚೂತಪ್ಪದೇ ಪಾಲಿಸಿಕೊಂಡು ಬರುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಾಧ್ಯವೇ ಇಲ್ಲ ಎಂಬ ಬಲವಾದ ನಂಬಿಕೆ ಜನರ ಮನದಲ್ಲಿ ಬೇರೂರಿದ್ದ ಸಂದರ್ಭ ಕವಿ ಬಂಜಿಗೆರೆ ಜಯಪ್ರಕಾಶ್ ನೇತೃತ್ವದಲ್ಲಿ ಜಿಲ್ಲೆಯ ಪತ್ರಕರ್ತರ ತಂಡ ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಅಧ್ಯಯನ ನಡೆಸಿ ಯೋಜನೆ ಸಾಧ್ಯವಿದೆ ಎಂದು ಮೊದಲು ಮನವರಿಕೆ ಮಾಡಿಕೊಳ್ಳಲಾಯಿತು.
ಬಳಿಕ ಮುಕ್ತ ವಿಚಾರ ವೇದಿಕೆ ನೇತೃತ್ವದಲ್ಲಿ ಹಲವು ಸಭೆ, ಚಿಂತನೆಗಳ ಬಳಿಕ ಬಹಿರಂಗವಾಗಿ ಗುರುಭವನದಲ್ಲಿ ಸಾರ್ವನಿಕರು, ಸಂಘ-ಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆಯಲಾಯಿತು. ಅಲ್ಲಿ ಹೋರಾಟ ಸಮಿತಿ ರೂಪ ಪಡೆಯಿತು ಸಭೆಯಲ್ಲಿ ರಾಜ್ಯಸಭಾ ಹಿರಿಯ ಸದಸ್ಯ ಹೆಚ್.ಹನುಮಂತಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಈ ವೇಳೆ ವಿವಿಧ ಆತಿಯು ಸಮಿತಿ ರಚಿಸಲಾಯಿತು.
ಮುಖ್ಯವಾಗಿ ಸಂಚಾಲಕರ ಸಮಿತಿಯೇ ಎಲ್ಲ ರೀತಿಯ ಚರ್ಚೆ ನಡೆಸಿ, ಆ ವಿಚಾರವನ್ನು ಜನರ ಮುಂದಿಟ್ಟು ಅನುಮತಿ ಅಥವಾ ಜನರು ತಿರಸ್ಕರಿಸಿದರೆ ಆ ವಿಷಯವನ್ನು ಕೈಬಿಡುವ ಪದ್ಧತಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬಂದಿದೆ. ಹೆಚ್.ಹನುಮಂತಪ್ಪ ಅವರ ಬಳಿಕ ಪಿ.ಕೋದಂಡರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಬಸವ ಮಂಟಪದಲ್ಲಿ ಜರುಗಿದ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜನರ ಸಭೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಯಿತು.
ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ, ಬೃಹತ್ ಹೋರಾಟಗಳು, ರಸ್ತೆ ತಡೆ, ಸಮಾವೇಶ ಜರುಗಿದ. ಹೋರಾಟದ ಫಲ ಸರ್ಕಾರ ಯೋಜನೆ ಜಾರಿಗೆ ಅನುಮತಿ ನೀಡಿತು. ಬಳಿಕ ಎಲ್ಲ ಸರ್ಕಾರಗಳು ಒಂದಲ್ಲ ಒಂದು ರೀತಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರಿವೆ. ಆದರೆ, ನಿಧಾನಗತಿಯಲ್ಲಿ ಆಗುತ್ತಿದೆ ಎಂಬ ಅಸಮಾಧಾನ ಹೋರಾಟ ಸಮಿತಿ ಮತ್ತು ಜಿಲ್ಲೆಯ ಜನರ ಮನದಲ್ಲಿದೆ.
ಜಿಲ್ಲೆಯ ಕೆರೆಗಳ ಹೂಳೂ ತೆಗೆಸುವ, ಅಚ್ಚುಕಟ್ಟು ಮಾಡುವ ಹಾಗೂ ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಒತ್ತಡ, ಪರಿಸರ ಇಲಾಖೆ ಅನುಮತಿ ಸೇರಿ ವಿವಿಧ ವಿಷಯಗಳ ಕುರಿತು ಸಮಿತಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ತೀವ್ರ ಚರ್ಚೆ ನಡೆಸಿ, ಹೋರಾಟ ರೂಪಿಸುವ ಹಾದಿಯಲ್ಲಿದ್ದರು. ಆದರೆ, ದುರಾದುಷ್ಟವಾಶತ್ ನಮ್ಮ ಸಮಿತಿ ಅಧ್ಯಕ್ಷರಾದ ಎಂ.ಜಯಣ್ಣ, ಕಾರ್ಯಾಧ್ಯಕ್ಷರಾದ ಮುರುಘ ರಾಜೇಂದ್ರ ಒಡೆಯರ್ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಮ್ಮನ್ನು ಅಗಲಿದ್ದು ಹೋರಾಟಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪರೇಷೆ ಸಿದ್ಧಪಡಿಸುವ ಚರ್ಚೆ ನನೆಗುದಿಗೆ ಬಿದ್ದಿತು.
ಈಗ ಚಾಲನೆ ನೀಡುವ ಸಂಬಂಧ ಚರ್ಚೆ ನಡೆಯುತ್ತಿರುವಾಗಲೇ ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳು ನಾವು ಎಂದು ಹೇಳಿಕೊಂಡು ಕೆಲವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಮಾಧ್ಯಮಗಳ ಮುಂದೆ ಬರಬೇಕಾಗಿದೆ. ನೀರಾವರಿ ಹೋರಾಟ ಸಮಿತಿ ಯಾವುದೇ ತೀರ್ಮಾನಗಳನ್ನು ಏಕಾಏಕಿ ತೆಗೆದುಕೊಳ್ಳುವುದಿಲ್ಲ. ಮೊದಲಿಗೆ ಸಂಚಾಲಕರ ಸಮಿತಿ ಸಭೆಯಲ್ಲಿ ಈ ಕುರಿತು ವಿಷಯದ ಗಂಭೀರತೆ ಆಧರಿಸಿ ಸಭೆಗಳನ್ನು ನಡೆಸಲಾಗುತ್ತದೆ.
ಅಲ್ಲಿ ಅಂತಿಮ ತೀರ್ಮಾನಕ್ಕೆ ಬಂದ ಬಳಿಕ ಪತ್ರಿಕೆಗಳ ಮೂಲಕ ಜಿಲ್ಲೆಯ ಜನರನ್ನೊಳಗೊಂಡ ಸಭೆ ಕರೆಯಲಾಗುತ್ತದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗುತ್ತದೆ. ಸಭೆಯಲ್ಲಿ ಪಾಲ್ಗೊಂಡ ಜನರ ಅಭಿಪ್ರಾಯದಂತೆ ಪದಾಧಿಕಾರಿಗಳ ಆಯ್ಕೆ, ಹೋರಾಟದ ರೂಪುರೇಷೆ ಸಿದ್ಧಗೊಂಡು, ಅದನ್ನು ಅನುಷ್ಟಾನಕ್ಕೆ ತರಲಾಗುತ್ತದೆ.
ಆದರೆ, ರೈತಸಂಘದ ಒಂದು ಬಣ ಸೇರಿದಂತೆ ಯಾವುದೇ ಸಂಘಟನೆಗಳಿಗೆ ನೀರಾವರಿ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಹಾಗೂ ಸಭೆ ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ಹೊಂದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇವೆ.
ದಲಿತ ನಾಯಕ, ಸಮಿತಿ ಅಧ್ಯಕ್ಷ ಎಂ.ಜಯಣ್ಣ, ಅಹಿಂದ-ನಾಯಕ, ಸಮಿತಿ ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯ. ಅವರಿಗೆ ಸಮಿತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜಿಸಿ ಗೌರವ ಸೂಚಿಸಿಲ್ಲ. ಈಗಲೇ ಕೆಲವರು ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳ ಹೆಸರಲ್ಲಿ ಸಭೆ ಕರೆದು ಆಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೊಂದಲ ಹುಟ್ಟುಹಾಕಲಾಗುತ್ತಿದೆ.
ಇದು ಅವರಿಗೆ ಸರಿಯಾದ ಮಾಹಿತಿ ಕೊರತೆ ಇಲ್ಲದ ಕಾರಣಕ್ಕೆ ಮಾಡಿದ್ದಾರೆ ಎಂದು ಭಾವಿಸಿದ್ದೇವೆ. ಅದನ್ನು ನಾವುಗಳು ಗಂಭೀರವಾಗಿ ಪರಿಗಣಿಸದೇ ಕ್ಷಮಾಗುಣದಿಂದ ಅವರ ಸಮಂಜಸವಲ್ಲದ ಕಾರ್ಯವನ್ನು ಖಂಡಿಸುತ್ತೇವೆ.
ಸಮಿತಿ ಕಾರ್ಯಚಟುವಟಿಕೆ, ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಈ ಮೊದಲಿನಂತೆಯೇ ಸಂಚಾಲಕರ ಸಮಿತಿ ಸಭೆಯಲ್ಲಿ ಚರ್ಚೆ ಬಳಿಕ, ಪತ್ರಿಕಾ ಹೇಳಿಕೆ ನೀಡಿ ಜಿಲ್ಲೆಯ ಮಠಾಧೀಶರು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರೈತ, ಕಾರ್ಮಿಕ ಸೇರಿದಂತೆ ಎಲ್ಲ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಆಸಕ್ತ ಎಲ್ಲರನ್ನೊಳಗೊಂಡು ಸಭೆ ಕರೆಯಲಾಗುತ್ತದೆ.
ಆ ಸಭೆಯಲ್ಲಿ ಜನರು ಅಭಿಪ್ರಾಯವೇ ಅಂತಿಮವಾಗಿರುತ್ತದೆ. ಇಲ್ಲಿ ಸಂಚಾಲಕರ ಸಮಿತಿ ಎಂಬುದು ಸಭೆ ಆಯೋಜಿಸುವುದು, ಹೋರಾಟಕ್ಕೆ ಒಂದು ರೂಪ ಕೊಡುವ ಕೆಲಸವನ್ನೇ ಮಾಡುತ್ತದೆ.
ನೀರಾವರಿ ಹೋರಾಟಕ್ಕೆ ಶ್ರೀ ಶಿವಮೂರ್ತಿ ಮುರುಘಾ ಸ್ವಾಮೀಜಿ, ಸಾಣೇಹಳ್ಳಿ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಭೋವಿ ಮಠದ ಗುರುಗಳು, ಛಲವಾದಿ ಮಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಹೀಗೆ ಬಹಳಷ್ಟು ಮಠಾಧೀಶರು ಬೆಂಬಲವಾಗಿ ನಿಂತಿದ್ದಾರೆ.
ಸಮಿತಿ ಆಯೋಜಿಸುವ ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. ಜೋಳಿಗೆ ಹಿಡಿದು ವಿಧಾನಸೌಧಕ್ಕೆ ನೀರಿನ ಭೀಕ್ಷೆ ಬೇಡಲು ಸಮಿತಿ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆರ್ಥಿಕ ಸಹಾಯ ಮಾಡಿದ್ದಾರೆ.
ಹಾಲಿ, ಮಾಜಿ ಶಾಸಕರು, ಸಂಸದರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಕನ್ನಡ, ಕಾರ್ಮಿಕ, ದಲಿತ, ರೈತ, ವಿದ್ಯಾರ್ಥಿ ಸೇರಿದಂತೆ ನೂರಾರು ಸಂಘಟನೆಗಳು, ಎಲ್ಲ ಸಮುದಾಯದ ಸಮಿತಿ ಜನ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹಣದ ಸಹಕಾರ ನೀಡಿದ್ದಾರೆ. ಅವರನ್ನೊಳಗೊಂಡ ಸಭೆಯಲ್ಲಿ ನೂತನ ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.
ಈ ಸಂಬಂಧ ಶೀಘ್ರದಲ್ಲಿಯೇ ಸಂಚಾಲಕರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಹಿರಂಗ ಸಭೆ ಕರೆಯಲಾಗುವುದು, ಅದೆಲ್ಲದಕ್ಕಿಂತಲೂ ಮುಖ್ಯವಾಗಿ ಜಯಣ್ಣ, ಮುರುಘರಾಜೇಂದ್ರ ಒಡೆಯರ್ ಅವರ ಹೋರಾಟದ ಹಾದಿ ಸ್ಮರಿಸಲು ಶ್ರದ್ಧಾಂಜಲಿ ಸಭೆ ಆಯೋಜಿಸುವುದು ತುರ್ತು ಕಾರ್ಯವಾಗಿದೆ. ಈ ಸಂಬಂಧ ಸಮಿತಿ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಿದೆ.
ಸಮಿತಿಯ ಸದಸ್ಯ ಸಂಘಟನೆಗಳು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕರೆಯುವ ಜಿಲ್ಲೆಯ ಜನರನ್ನೊಳಗೊಂಡ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸುವ ಅಧಿಕಾರ, ಹಕ್ಕು ಹೊಂದಿರುತ್ತವೆ. ಆದರೆ, ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ, ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ನೀರಾವರಿ ಹೋರಾಟ ಸಮಿತಿಗೆ ಮಾತ್ರ ಇರುತ್ತದೆ. ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ.
ಆದ್ದರಿಂದ ಜಿಲ್ಲೆಯ ಜನರಲ್ಲಿ ಗೊಂದಲ ಹುಟ್ಟುಹಾಕುವ ಕಾರ್ಯ ಜವಾಬ್ದಾರಿಯುತ ಸಂಘಟನೆಗಳು ಮಾಡಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ. ನೀರಾವರಿ ಹೋರಾಟ ಸಮಿತಿ ಆಯೋಜಿಸುವ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅಧಿಕಾರಸ್ಥರು ಸದಸ್ಯ ಸಂಘಟನೆ ಮುಖಂಡರು, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇರುತ್ತದೆ ಎಂಬುದನ್ನು ಈ ಮೂಲಕ ಹೇಳುತ್ತೇವೆ.
ಸುದ್ದಿಗೋಷ್ಟಿಯಲ್ಲಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ದಿವಂಗತ ಎಂ.ಜಯಣ್ಣ, ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಸಮಿತಿ ಸಂಚಾಲಕರು ಪುಷ್ಪನಮನ ಸಲ್ಲಿಸಿದರು. ಜಿ.ಎಸ್.ಉಜ್ಜಿನಪ್ಪ, ಜೆ.ಯಾದವರೆಡ್ಡಿ, ಆರ್.ಶೇಷಣ್ಣಕುಮಾರ್, ಎಂ.ಜೆ.ಪ್ರಸನ್ನ, ಪಾರ್ಥ ರಾಜೇಂದ್ರ ಒಡೆಯರ್, ಚಳ್ಳಕೆರೆ ಬಸವರಾಜ್, ಟಿ.ಷಫೀವುಲ್ಲಾ ಇತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ23 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

