Connect with us

ದಿನದ ಸುದ್ದಿ

ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ

Published

on

ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ ಎಂದು ಸಮಿತಿ ಸಂಚಾಲಕ ಚಳ್ಳಕೆರೆ ಬಸವರಾಜ್ ತಿಳಿಸಿದ್ದಾರೆ.

ಪತ್ರಿಕಾ ಭವನದದಲ್ಲಿ ಸೋಮವಾರ ಎಂ.ಜಯಣ್ಣ, ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತಸಂಘಟನೆ ಸೇರಿದಂತೆ ನೂರಾರು ಸಂಘಟನೆಗಳು ಸಮಿತಿ ಹೋರಾಟದಲ್ಲಿ ಪಾಲ್ಗೊಂಡಿವೆ. ಹಾಗೇಂದು ಸಮಿತಿ ಹೆಸರಲ್ಲಿ ಸಭೆ ಕರೆಯುವ, ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಸದಸ್ಯ ಸಂಘಟನೆಗಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವಾಸಿ ಮಂದಿರದಲ್ಲಿ ರೈತಸಂಘ ಆಯೋಜಿಸಿದ ಸಭೆಗೆ ಸಮಿತಿ ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾರ್ಶ ಆಗಮಿಸಿರಲಿಲ್ಲ. ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ ಟಿ.ಶಿವಪ್ರಕಾಶ್, ಕೆ.ಆರ್ ದಯಾನಂದ್, ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತ್ರ ಸಭೆಯಲ್ಲಿ ಭಾಗವಹಿಸಿದ್ದರು.

ಅಷ್ಟೇ ಅಲ್ಲದೆ ಇಡೀ ಸಮಿತಿ ಹಾದಿಯಲ್ಲಿ ಈವರೆಗೂ ಪದಗ್ರಹಣ ಎಂಬ ಪದ ಬಳಕೆಯಿಲ್ಲ. ಆದರೆ, ಭಾನುವಾರ ಚಿತ್ರದುರ್ಗದ ಎಪಿಎಂಸಿ ಆವರಣದ ರೈತ ಭವನದಲ್ಲಿ ನಡೆದ ಸಭೆಗೆ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್ ಸಹ ಆಗಮಿಸಿರಲಿಲ್ಲ. ಆದರೆ, ಮಾಧ್ಯಮಗಳಲ್ಲಿ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು ಎಂದು ಸುದ್ದಿಗಳು ಬಿತ್ತರವಾಗಿವೆ. ಈ ಎಲ್ಲ ನಡೆ ಬಗ್ಗೆ ಸಂಚಾಲಕ ಸಮಿತಿಗೆ ಅಸಮಾಧಾನವಿದೆ ಎಂದು ತಿಳಿಸಿದರು.

ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ, ನಾನು ಕೂಡ ಅಂದಿನ ಸಭೆಗೆ ಹೋಗಿದ್ದೇ, ಆದರೆ, ಈಗ ನನಗೆ ಮನವರಿಕೆ ಆಗಿದ್ದು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಯ್ಕೆ ಪ್ರಕ್ರಿಯೆ ಆಗಬೇಕು ಎಂಬುದು ಸ್ಪಷ್ಟಗೊಂಡಿದೆ. ಸಮಿತಿಯಲ್ಲಿ ಒಡಕು ಇಲ್ಲ, ಆದರೆ, ಕೆಲ ಸಣ್ಣಪುಟ್ಟ ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಂಡು ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಬಯಲುಸೀಮೆಯ ಕಟ್ಟ ಕಡೆಯ ಜನರಿಗೆ ನೀರು ತಲುಪುವಂತೆ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲಾಗುವುದು ಎಂದರು.

ಸಂಚಾಲಕ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದಿನಿಂದಲೂ ಸಮಿತಿ ಸಂಚಾಲಕರ ಸಭೆಯಲ್ಲಿ ಚರ್ಚೆ ಬಳಿಕ, ಜನರನ್ನಳಗೊಂಡ ಸಭೆ ಕರೆದು ಅನುಮತಿ ಪಡೆಯುವ ಪದ್ಧತಿ ಹೋರಾಟ ಸಮಿತಿಯಲ್ಲಿದೆ. ಅದೇ ರೀತಿ ಮುಂದೆಯೂ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಸಮಿತಿಯ ಯಾದವರೆಡ್ಡಿ, ಜಿ.ಎಸ್.ಉಜ್ಜಿನಪ್ಪ, ಚಳ್ಳಕೆರೆ ಬಸವರಾಜ್, ಈ.ಮಹೇಶ್‌ಬಾಬು, ಆರ್.ಶೇಷಣ್ಣಕುಮಾರ್, ಟಿ.ಷಫಿವುಲ್ಲಾ, ದಸಂಸ ರಾಜ್ಯ ಮುಖಂಡ ಡಿ.ದುರುಗೇಶ್ ಇತರರು ಸಹಿ ಮಾಡಿ ಬಿಡುಗಡೆ ಮಾಡಿದ ಪ್ರಕಟಣೆಯ ಯಥಾರೂಪ ಇಲ್ಲಿದೆ.

ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೋಂದಾಯಿತ ಸಂಘಟನೆಯಲ್ಲ. ಆದರೂ ಈ ಸಮಿತಿ ಕೆಲ ಪದ್ಧತಿಗಳನ್ನು ಚಾಚೂತಪ್ಪದೇ ಪಾಲಿಸಿಕೊಂಡು ಬರುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಾಧ್ಯವೇ ಇಲ್ಲ ಎಂಬ ಬಲವಾದ ನಂಬಿಕೆ ಜನರ ಮನದಲ್ಲಿ ಬೇರೂರಿದ್ದ ಸಂದರ್ಭ ಕವಿ ಬಂಜಿಗೆರೆ ಜಯಪ್ರಕಾಶ್ ನೇತೃತ್ವದಲ್ಲಿ ಜಿಲ್ಲೆಯ ಪತ್ರಕರ್ತರ ತಂಡ ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಅಧ್ಯಯನ ನಡೆಸಿ ಯೋಜನೆ ಸಾಧ್ಯವಿದೆ ಎಂದು ಮೊದಲು ಮನವರಿಕೆ ಮಾಡಿಕೊಳ್ಳಲಾಯಿತು.

ಬಳಿಕ ಮುಕ್ತ ವಿಚಾರ ವೇದಿಕೆ ನೇತೃತ್ವದಲ್ಲಿ ಹಲವು ಸಭೆ, ಚಿಂತನೆಗಳ ಬಳಿಕ ಬಹಿರಂಗವಾಗಿ ಗುರುಭವನದಲ್ಲಿ ಸಾರ್ವನಿಕರು, ಸಂಘ-ಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆಯಲಾಯಿತು. ಅಲ್ಲಿ ಹೋರಾಟ ಸಮಿತಿ ರೂಪ ಪಡೆಯಿತು ಸಭೆಯಲ್ಲಿ ರಾಜ್ಯಸಭಾ ಹಿರಿಯ ಸದಸ್ಯ ಹೆಚ್.ಹನುಮಂತಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಈ ವೇಳೆ ವಿವಿಧ ಆತಿಯು ಸಮಿತಿ ರಚಿಸಲಾಯಿತು.

ಮುಖ್ಯವಾಗಿ ಸಂಚಾಲಕರ ಸಮಿತಿಯೇ ಎಲ್ಲ ರೀತಿಯ ಚರ್ಚೆ ನಡೆಸಿ, ಆ ವಿಚಾರವನ್ನು ಜನರ ಮುಂದಿಟ್ಟು ಅನುಮತಿ ಅಥವಾ ಜನರು ತಿರಸ್ಕರಿಸಿದರೆ ಆ ವಿಷಯವನ್ನು ಕೈಬಿಡುವ ಪದ್ಧತಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬಂದಿದೆ. ಹೆಚ್.ಹನುಮಂತಪ್ಪ ಅವರ ಬಳಿಕ ಪಿ.ಕೋದಂಡರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಬಸವ ಮಂಟಪದಲ್ಲಿ ಜರುಗಿದ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜನರ ಸಭೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಯಿತು.

ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ, ಬೃಹತ್ ಹೋರಾಟಗಳು, ರಸ್ತೆ ತಡೆ, ಸಮಾವೇಶ ಜರುಗಿದ. ಹೋರಾಟದ ಫಲ ಸರ್ಕಾರ ಯೋಜನೆ ಜಾರಿಗೆ ಅನುಮತಿ ನೀಡಿತು. ಬಳಿಕ ಎಲ್ಲ ಸರ್ಕಾರಗಳು ಒಂದಲ್ಲ ಒಂದು ರೀತಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರಿವೆ. ಆದರೆ, ನಿಧಾನಗತಿಯಲ್ಲಿ ಆಗುತ್ತಿದೆ ಎಂಬ ಅಸಮಾಧಾನ ಹೋರಾಟ ಸಮಿತಿ ಮತ್ತು ಜಿಲ್ಲೆಯ ಜನರ ಮನದಲ್ಲಿದೆ.

ಜಿಲ್ಲೆಯ ಕೆರೆಗಳ ಹೂಳೂ ತೆಗೆಸುವ, ಅಚ್ಚುಕಟ್ಟು ಮಾಡುವ ಹಾಗೂ ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಒತ್ತಡ, ಪರಿಸರ ಇಲಾಖೆ ಅನುಮತಿ ಸೇರಿ ವಿವಿಧ ವಿಷಯಗಳ ಕುರಿತು ಸಮಿತಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ತೀವ್ರ ಚರ್ಚೆ ನಡೆಸಿ, ಹೋರಾಟ ರೂಪಿಸುವ ಹಾದಿಯಲ್ಲಿದ್ದರು. ಆದರೆ, ದುರಾದುಷ್ಟವಾಶತ್ ನಮ್ಮ ಸಮಿತಿ ಅಧ್ಯಕ್ಷರಾದ ಎಂ.ಜಯಣ್ಣ, ಕಾರ್ಯಾಧ್ಯಕ್ಷರಾದ ಮುರುಘ ರಾಜೇಂದ್ರ ಒಡೆಯರ್ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಮ್ಮನ್ನು ಅಗಲಿದ್ದು ಹೋರಾಟಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪರೇಷೆ ಸಿದ್ಧಪಡಿಸುವ ಚರ್ಚೆ ನನೆಗುದಿಗೆ ಬಿದ್ದಿತು.

ಈಗ ಚಾಲನೆ ನೀಡುವ ಸಂಬಂಧ ಚರ್ಚೆ ನಡೆಯುತ್ತಿರುವಾಗಲೇ ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳು ನಾವು ಎಂದು ಹೇಳಿಕೊಂಡು ಕೆಲವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಮಾಧ್ಯಮಗಳ ಮುಂದೆ ಬರಬೇಕಾಗಿದೆ. ನೀರಾವರಿ ಹೋರಾಟ ಸಮಿತಿ ಯಾವುದೇ ತೀರ್ಮಾನಗಳನ್ನು ಏಕಾಏಕಿ ತೆಗೆದುಕೊಳ್ಳುವುದಿಲ್ಲ. ಮೊದಲಿಗೆ ಸಂಚಾಲಕರ ಸಮಿತಿ ಸಭೆಯಲ್ಲಿ ಈ ಕುರಿತು ವಿಷಯದ ಗಂಭೀರತೆ ಆಧರಿಸಿ ಸಭೆಗಳನ್ನು ನಡೆಸಲಾಗುತ್ತದೆ.

ಅಲ್ಲಿ ಅಂತಿಮ ತೀರ್ಮಾನಕ್ಕೆ ಬಂದ ಬಳಿಕ ಪತ್ರಿಕೆಗಳ ಮೂಲಕ ಜಿಲ್ಲೆಯ ಜನರನ್ನೊಳಗೊಂಡ ಸಭೆ ಕರೆಯಲಾಗುತ್ತದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗುತ್ತದೆ. ಸಭೆಯಲ್ಲಿ ಪಾಲ್ಗೊಂಡ ಜನರ ಅಭಿಪ್ರಾಯದಂತೆ ಪದಾಧಿಕಾರಿಗಳ ಆಯ್ಕೆ, ಹೋರಾಟದ ರೂಪುರೇಷೆ ಸಿದ್ಧಗೊಂಡು, ಅದನ್ನು ಅನುಷ್ಟಾನಕ್ಕೆ ತರಲಾಗುತ್ತದೆ.

ಆದರೆ, ರೈತಸಂಘದ ಒಂದು ಬಣ ಸೇರಿದಂತೆ ಯಾವುದೇ ಸಂಘಟನೆಗಳಿಗೆ ನೀರಾವರಿ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಹಾಗೂ ಸಭೆ ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ಹೊಂದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇವೆ.

ದಲಿತ ನಾಯಕ, ಸಮಿತಿ ಅಧ್ಯಕ್ಷ ಎಂ.ಜಯಣ್ಣ, ಅಹಿಂದ-ನಾಯಕ, ಸಮಿತಿ ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯ. ಅವರಿಗೆ ಸಮಿತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜಿಸಿ ಗೌರವ ಸೂಚಿಸಿಲ್ಲ. ಈಗಲೇ ಕೆಲವರು ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳ ಹೆಸರಲ್ಲಿ ಸಭೆ ಕರೆದು ಆಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೊಂದಲ ಹುಟ್ಟುಹಾಕಲಾಗುತ್ತಿದೆ.

ಇದು ಅವರಿಗೆ ಸರಿಯಾದ ಮಾಹಿತಿ ಕೊರತೆ ಇಲ್ಲದ ಕಾರಣಕ್ಕೆ ಮಾಡಿದ್ದಾರೆ ಎಂದು ಭಾವಿಸಿದ್ದೇವೆ. ಅದನ್ನು ನಾವುಗಳು ಗಂಭೀರವಾಗಿ ಪರಿಗಣಿಸದೇ ಕ್ಷಮಾಗುಣದಿಂದ ಅವರ ಸಮಂಜಸವಲ್ಲದ ಕಾರ್ಯವನ್ನು ಖಂಡಿಸುತ್ತೇವೆ.

ಸಮಿತಿ ಕಾರ್ಯಚಟುವಟಿಕೆ, ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಈ ಮೊದಲಿನಂತೆಯೇ ಸಂಚಾಲಕರ ಸಮಿತಿ ಸಭೆಯಲ್ಲಿ ಚರ್ಚೆ ಬಳಿಕ, ಪತ್ರಿಕಾ ಹೇಳಿಕೆ ನೀಡಿ ಜಿಲ್ಲೆಯ ಮಠಾಧೀಶರು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರೈತ, ಕಾರ್ಮಿಕ ಸೇರಿದಂತೆ ಎಲ್ಲ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಆಸಕ್ತ ಎಲ್ಲರನ್ನೊಳಗೊಂಡು ಸಭೆ ಕರೆಯಲಾಗುತ್ತದೆ.

ಆ ಸಭೆಯಲ್ಲಿ ಜನರು ಅಭಿಪ್ರಾಯವೇ ಅಂತಿಮವಾಗಿರುತ್ತದೆ. ಇಲ್ಲಿ ಸಂಚಾಲಕರ ಸಮಿತಿ ಎಂಬುದು ಸಭೆ ಆಯೋಜಿಸುವುದು, ಹೋರಾಟಕ್ಕೆ ಒಂದು ರೂಪ ಕೊಡುವ ಕೆಲಸವನ್ನೇ ಮಾಡುತ್ತದೆ.

ನೀರಾವರಿ ಹೋರಾಟಕ್ಕೆ ಶ್ರೀ ಶಿವಮೂರ್ತಿ ಮುರುಘಾ ಸ್ವಾಮೀಜಿ, ಸಾಣೇಹಳ್ಳಿ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಭೋವಿ ಮಠದ ಗುರುಗಳು, ಛಲವಾದಿ ಮಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಹೀಗೆ ಬಹಳಷ್ಟು ಮಠಾಧೀಶರು ಬೆಂಬಲವಾಗಿ ನಿಂತಿದ್ದಾರೆ.

ಸಮಿತಿ ಆಯೋಜಿಸುವ ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. ಜೋಳಿಗೆ ಹಿಡಿದು ವಿಧಾನಸೌಧಕ್ಕೆ ನೀರಿನ ಭೀಕ್ಷೆ ಬೇಡಲು ಸಮಿತಿ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆರ್ಥಿಕ ಸಹಾಯ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರು, ಸಂಸದರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಕನ್ನಡ, ಕಾರ್ಮಿಕ, ದಲಿತ, ರೈತ, ವಿದ್ಯಾರ್ಥಿ ಸೇರಿದಂತೆ ನೂರಾರು ಸಂಘಟನೆಗಳು, ಎಲ್ಲ ಸಮುದಾಯದ ಸಮಿತಿ ಜನ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹಣದ ಸಹಕಾರ ನೀಡಿದ್ದಾರೆ. ಅವರನ್ನೊಳಗೊಂಡ ಸಭೆಯಲ್ಲಿ ನೂತನ ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ಈ ಸಂಬಂಧ ಶೀಘ್ರದಲ್ಲಿಯೇ ಸಂಚಾಲಕರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಹಿರಂಗ ಸಭೆ ಕರೆಯಲಾಗುವುದು, ಅದೆಲ್ಲದಕ್ಕಿಂತಲೂ ಮುಖ್ಯವಾಗಿ ಜಯಣ್ಣ, ಮುರುಘರಾಜೇಂದ್ರ ಒಡೆಯರ್ ಅವರ ಹೋರಾಟದ ಹಾದಿ ಸ್ಮರಿಸಲು ಶ್ರದ್ಧಾಂಜಲಿ ಸಭೆ ಆಯೋಜಿಸುವುದು ತುರ್ತು ಕಾರ್ಯವಾಗಿದೆ. ಈ ಸಂಬಂಧ ಸಮಿತಿ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಿದೆ.

ಸಮಿತಿಯ ಸದಸ್ಯ ಸಂಘಟನೆಗಳು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕರೆಯುವ ಜಿಲ್ಲೆಯ ಜನರನ್ನೊಳಗೊಂಡ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸುವ ಅಧಿಕಾರ, ಹಕ್ಕು ಹೊಂದಿರುತ್ತವೆ. ಆದರೆ, ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ, ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ನೀರಾವರಿ ಹೋರಾಟ ಸಮಿತಿಗೆ ಮಾತ್ರ ಇರುತ್ತದೆ. ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ.

ಆದ್ದರಿಂದ ಜಿಲ್ಲೆಯ ಜನರಲ್ಲಿ ಗೊಂದಲ ಹುಟ್ಟುಹಾಕುವ ಕಾರ್ಯ ಜವಾಬ್ದಾರಿಯುತ ಸಂಘಟನೆಗಳು ಮಾಡಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ. ನೀರಾವರಿ ಹೋರಾಟ ಸಮಿತಿ ಆಯೋಜಿಸುವ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅಧಿಕಾರಸ್ಥರು ಸದಸ್ಯ ಸಂಘಟನೆ ಮುಖಂಡರು, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇರುತ್ತದೆ ಎಂಬುದನ್ನು ಈ ಮೂಲಕ ಹೇಳುತ್ತೇವೆ.

ಸುದ್ದಿಗೋಷ್ಟಿಯಲ್ಲಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ದಿವಂಗತ ಎಂ.ಜಯಣ್ಣ, ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಸಮಿತಿ ಸಂಚಾಲಕರು ಪುಷ್ಪನಮನ ಸಲ್ಲಿಸಿದರು. ಜಿ.ಎಸ್.ಉಜ್ಜಿನಪ್ಪ, ಜೆ.ಯಾದವರೆಡ್ಡಿ, ಆರ್.ಶೇಷಣ್ಣಕುಮಾರ್, ಎಂ.ಜೆ.ಪ್ರಸನ್ನ, ಪಾರ್ಥ ರಾಜೇಂದ್ರ ಒಡೆಯರ್, ಚಳ್ಳಕೆರೆ ಬಸವರಾಜ್, ಟಿ.ಷಫೀವುಲ್ಲಾ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ6 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ6 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ6 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ6 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ2 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending