Connect with us

ದಿನದ ಸುದ್ದಿ

ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ

Published

on

ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ ಎಂದು ಸಮಿತಿ ಸಂಚಾಲಕ ಚಳ್ಳಕೆರೆ ಬಸವರಾಜ್ ತಿಳಿಸಿದ್ದಾರೆ.

ಪತ್ರಿಕಾ ಭವನದದಲ್ಲಿ ಸೋಮವಾರ ಎಂ.ಜಯಣ್ಣ, ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತಸಂಘಟನೆ ಸೇರಿದಂತೆ ನೂರಾರು ಸಂಘಟನೆಗಳು ಸಮಿತಿ ಹೋರಾಟದಲ್ಲಿ ಪಾಲ್ಗೊಂಡಿವೆ. ಹಾಗೇಂದು ಸಮಿತಿ ಹೆಸರಲ್ಲಿ ಸಭೆ ಕರೆಯುವ, ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಸದಸ್ಯ ಸಂಘಟನೆಗಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವಾಸಿ ಮಂದಿರದಲ್ಲಿ ರೈತಸಂಘ ಆಯೋಜಿಸಿದ ಸಭೆಗೆ ಸಮಿತಿ ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾರ್ಶ ಆಗಮಿಸಿರಲಿಲ್ಲ. ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ ಟಿ.ಶಿವಪ್ರಕಾಶ್, ಕೆ.ಆರ್ ದಯಾನಂದ್, ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತ್ರ ಸಭೆಯಲ್ಲಿ ಭಾಗವಹಿಸಿದ್ದರು.

ಅಷ್ಟೇ ಅಲ್ಲದೆ ಇಡೀ ಸಮಿತಿ ಹಾದಿಯಲ್ಲಿ ಈವರೆಗೂ ಪದಗ್ರಹಣ ಎಂಬ ಪದ ಬಳಕೆಯಿಲ್ಲ. ಆದರೆ, ಭಾನುವಾರ ಚಿತ್ರದುರ್ಗದ ಎಪಿಎಂಸಿ ಆವರಣದ ರೈತ ಭವನದಲ್ಲಿ ನಡೆದ ಸಭೆಗೆ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್ ಸಹ ಆಗಮಿಸಿರಲಿಲ್ಲ. ಆದರೆ, ಮಾಧ್ಯಮಗಳಲ್ಲಿ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು ಎಂದು ಸುದ್ದಿಗಳು ಬಿತ್ತರವಾಗಿವೆ. ಈ ಎಲ್ಲ ನಡೆ ಬಗ್ಗೆ ಸಂಚಾಲಕ ಸಮಿತಿಗೆ ಅಸಮಾಧಾನವಿದೆ ಎಂದು ತಿಳಿಸಿದರು.

ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ, ನಾನು ಕೂಡ ಅಂದಿನ ಸಭೆಗೆ ಹೋಗಿದ್ದೇ, ಆದರೆ, ಈಗ ನನಗೆ ಮನವರಿಕೆ ಆಗಿದ್ದು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಯ್ಕೆ ಪ್ರಕ್ರಿಯೆ ಆಗಬೇಕು ಎಂಬುದು ಸ್ಪಷ್ಟಗೊಂಡಿದೆ. ಸಮಿತಿಯಲ್ಲಿ ಒಡಕು ಇಲ್ಲ, ಆದರೆ, ಕೆಲ ಸಣ್ಣಪುಟ್ಟ ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಂಡು ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಬಯಲುಸೀಮೆಯ ಕಟ್ಟ ಕಡೆಯ ಜನರಿಗೆ ನೀರು ತಲುಪುವಂತೆ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲಾಗುವುದು ಎಂದರು.

ಸಂಚಾಲಕ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದಿನಿಂದಲೂ ಸಮಿತಿ ಸಂಚಾಲಕರ ಸಭೆಯಲ್ಲಿ ಚರ್ಚೆ ಬಳಿಕ, ಜನರನ್ನಳಗೊಂಡ ಸಭೆ ಕರೆದು ಅನುಮತಿ ಪಡೆಯುವ ಪದ್ಧತಿ ಹೋರಾಟ ಸಮಿತಿಯಲ್ಲಿದೆ. ಅದೇ ರೀತಿ ಮುಂದೆಯೂ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಸಮಿತಿಯ ಯಾದವರೆಡ್ಡಿ, ಜಿ.ಎಸ್.ಉಜ್ಜಿನಪ್ಪ, ಚಳ್ಳಕೆರೆ ಬಸವರಾಜ್, ಈ.ಮಹೇಶ್‌ಬಾಬು, ಆರ್.ಶೇಷಣ್ಣಕುಮಾರ್, ಟಿ.ಷಫಿವುಲ್ಲಾ, ದಸಂಸ ರಾಜ್ಯ ಮುಖಂಡ ಡಿ.ದುರುಗೇಶ್ ಇತರರು ಸಹಿ ಮಾಡಿ ಬಿಡುಗಡೆ ಮಾಡಿದ ಪ್ರಕಟಣೆಯ ಯಥಾರೂಪ ಇಲ್ಲಿದೆ.

ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೋಂದಾಯಿತ ಸಂಘಟನೆಯಲ್ಲ. ಆದರೂ ಈ ಸಮಿತಿ ಕೆಲ ಪದ್ಧತಿಗಳನ್ನು ಚಾಚೂತಪ್ಪದೇ ಪಾಲಿಸಿಕೊಂಡು ಬರುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಾಧ್ಯವೇ ಇಲ್ಲ ಎಂಬ ಬಲವಾದ ನಂಬಿಕೆ ಜನರ ಮನದಲ್ಲಿ ಬೇರೂರಿದ್ದ ಸಂದರ್ಭ ಕವಿ ಬಂಜಿಗೆರೆ ಜಯಪ್ರಕಾಶ್ ನೇತೃತ್ವದಲ್ಲಿ ಜಿಲ್ಲೆಯ ಪತ್ರಕರ್ತರ ತಂಡ ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಅಧ್ಯಯನ ನಡೆಸಿ ಯೋಜನೆ ಸಾಧ್ಯವಿದೆ ಎಂದು ಮೊದಲು ಮನವರಿಕೆ ಮಾಡಿಕೊಳ್ಳಲಾಯಿತು.

ಬಳಿಕ ಮುಕ್ತ ವಿಚಾರ ವೇದಿಕೆ ನೇತೃತ್ವದಲ್ಲಿ ಹಲವು ಸಭೆ, ಚಿಂತನೆಗಳ ಬಳಿಕ ಬಹಿರಂಗವಾಗಿ ಗುರುಭವನದಲ್ಲಿ ಸಾರ್ವನಿಕರು, ಸಂಘ-ಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆಯಲಾಯಿತು. ಅಲ್ಲಿ ಹೋರಾಟ ಸಮಿತಿ ರೂಪ ಪಡೆಯಿತು ಸಭೆಯಲ್ಲಿ ರಾಜ್ಯಸಭಾ ಹಿರಿಯ ಸದಸ್ಯ ಹೆಚ್.ಹನುಮಂತಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಈ ವೇಳೆ ವಿವಿಧ ಆತಿಯು ಸಮಿತಿ ರಚಿಸಲಾಯಿತು.

ಮುಖ್ಯವಾಗಿ ಸಂಚಾಲಕರ ಸಮಿತಿಯೇ ಎಲ್ಲ ರೀತಿಯ ಚರ್ಚೆ ನಡೆಸಿ, ಆ ವಿಚಾರವನ್ನು ಜನರ ಮುಂದಿಟ್ಟು ಅನುಮತಿ ಅಥವಾ ಜನರು ತಿರಸ್ಕರಿಸಿದರೆ ಆ ವಿಷಯವನ್ನು ಕೈಬಿಡುವ ಪದ್ಧತಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬಂದಿದೆ. ಹೆಚ್.ಹನುಮಂತಪ್ಪ ಅವರ ಬಳಿಕ ಪಿ.ಕೋದಂಡರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಬಸವ ಮಂಟಪದಲ್ಲಿ ಜರುಗಿದ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜನರ ಸಭೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಯಿತು.

ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ, ಬೃಹತ್ ಹೋರಾಟಗಳು, ರಸ್ತೆ ತಡೆ, ಸಮಾವೇಶ ಜರುಗಿದ. ಹೋರಾಟದ ಫಲ ಸರ್ಕಾರ ಯೋಜನೆ ಜಾರಿಗೆ ಅನುಮತಿ ನೀಡಿತು. ಬಳಿಕ ಎಲ್ಲ ಸರ್ಕಾರಗಳು ಒಂದಲ್ಲ ಒಂದು ರೀತಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರಿವೆ. ಆದರೆ, ನಿಧಾನಗತಿಯಲ್ಲಿ ಆಗುತ್ತಿದೆ ಎಂಬ ಅಸಮಾಧಾನ ಹೋರಾಟ ಸಮಿತಿ ಮತ್ತು ಜಿಲ್ಲೆಯ ಜನರ ಮನದಲ್ಲಿದೆ.

ಜಿಲ್ಲೆಯ ಕೆರೆಗಳ ಹೂಳೂ ತೆಗೆಸುವ, ಅಚ್ಚುಕಟ್ಟು ಮಾಡುವ ಹಾಗೂ ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಒತ್ತಡ, ಪರಿಸರ ಇಲಾಖೆ ಅನುಮತಿ ಸೇರಿ ವಿವಿಧ ವಿಷಯಗಳ ಕುರಿತು ಸಮಿತಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ತೀವ್ರ ಚರ್ಚೆ ನಡೆಸಿ, ಹೋರಾಟ ರೂಪಿಸುವ ಹಾದಿಯಲ್ಲಿದ್ದರು. ಆದರೆ, ದುರಾದುಷ್ಟವಾಶತ್ ನಮ್ಮ ಸಮಿತಿ ಅಧ್ಯಕ್ಷರಾದ ಎಂ.ಜಯಣ್ಣ, ಕಾರ್ಯಾಧ್ಯಕ್ಷರಾದ ಮುರುಘ ರಾಜೇಂದ್ರ ಒಡೆಯರ್ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಮ್ಮನ್ನು ಅಗಲಿದ್ದು ಹೋರಾಟಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪರೇಷೆ ಸಿದ್ಧಪಡಿಸುವ ಚರ್ಚೆ ನನೆಗುದಿಗೆ ಬಿದ್ದಿತು.

ಈಗ ಚಾಲನೆ ನೀಡುವ ಸಂಬಂಧ ಚರ್ಚೆ ನಡೆಯುತ್ತಿರುವಾಗಲೇ ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳು ನಾವು ಎಂದು ಹೇಳಿಕೊಂಡು ಕೆಲವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಮಾಧ್ಯಮಗಳ ಮುಂದೆ ಬರಬೇಕಾಗಿದೆ. ನೀರಾವರಿ ಹೋರಾಟ ಸಮಿತಿ ಯಾವುದೇ ತೀರ್ಮಾನಗಳನ್ನು ಏಕಾಏಕಿ ತೆಗೆದುಕೊಳ್ಳುವುದಿಲ್ಲ. ಮೊದಲಿಗೆ ಸಂಚಾಲಕರ ಸಮಿತಿ ಸಭೆಯಲ್ಲಿ ಈ ಕುರಿತು ವಿಷಯದ ಗಂಭೀರತೆ ಆಧರಿಸಿ ಸಭೆಗಳನ್ನು ನಡೆಸಲಾಗುತ್ತದೆ.

ಅಲ್ಲಿ ಅಂತಿಮ ತೀರ್ಮಾನಕ್ಕೆ ಬಂದ ಬಳಿಕ ಪತ್ರಿಕೆಗಳ ಮೂಲಕ ಜಿಲ್ಲೆಯ ಜನರನ್ನೊಳಗೊಂಡ ಸಭೆ ಕರೆಯಲಾಗುತ್ತದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗುತ್ತದೆ. ಸಭೆಯಲ್ಲಿ ಪಾಲ್ಗೊಂಡ ಜನರ ಅಭಿಪ್ರಾಯದಂತೆ ಪದಾಧಿಕಾರಿಗಳ ಆಯ್ಕೆ, ಹೋರಾಟದ ರೂಪುರೇಷೆ ಸಿದ್ಧಗೊಂಡು, ಅದನ್ನು ಅನುಷ್ಟಾನಕ್ಕೆ ತರಲಾಗುತ್ತದೆ.

ಆದರೆ, ರೈತಸಂಘದ ಒಂದು ಬಣ ಸೇರಿದಂತೆ ಯಾವುದೇ ಸಂಘಟನೆಗಳಿಗೆ ನೀರಾವರಿ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಹಾಗೂ ಸಭೆ ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ಹೊಂದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇವೆ.

ದಲಿತ ನಾಯಕ, ಸಮಿತಿ ಅಧ್ಯಕ್ಷ ಎಂ.ಜಯಣ್ಣ, ಅಹಿಂದ-ನಾಯಕ, ಸಮಿತಿ ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯ. ಅವರಿಗೆ ಸಮಿತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜಿಸಿ ಗೌರವ ಸೂಚಿಸಿಲ್ಲ. ಈಗಲೇ ಕೆಲವರು ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳ ಹೆಸರಲ್ಲಿ ಸಭೆ ಕರೆದು ಆಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೊಂದಲ ಹುಟ್ಟುಹಾಕಲಾಗುತ್ತಿದೆ.

ಇದು ಅವರಿಗೆ ಸರಿಯಾದ ಮಾಹಿತಿ ಕೊರತೆ ಇಲ್ಲದ ಕಾರಣಕ್ಕೆ ಮಾಡಿದ್ದಾರೆ ಎಂದು ಭಾವಿಸಿದ್ದೇವೆ. ಅದನ್ನು ನಾವುಗಳು ಗಂಭೀರವಾಗಿ ಪರಿಗಣಿಸದೇ ಕ್ಷಮಾಗುಣದಿಂದ ಅವರ ಸಮಂಜಸವಲ್ಲದ ಕಾರ್ಯವನ್ನು ಖಂಡಿಸುತ್ತೇವೆ.

ಸಮಿತಿ ಕಾರ್ಯಚಟುವಟಿಕೆ, ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಈ ಮೊದಲಿನಂತೆಯೇ ಸಂಚಾಲಕರ ಸಮಿತಿ ಸಭೆಯಲ್ಲಿ ಚರ್ಚೆ ಬಳಿಕ, ಪತ್ರಿಕಾ ಹೇಳಿಕೆ ನೀಡಿ ಜಿಲ್ಲೆಯ ಮಠಾಧೀಶರು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರೈತ, ಕಾರ್ಮಿಕ ಸೇರಿದಂತೆ ಎಲ್ಲ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಆಸಕ್ತ ಎಲ್ಲರನ್ನೊಳಗೊಂಡು ಸಭೆ ಕರೆಯಲಾಗುತ್ತದೆ.

ಆ ಸಭೆಯಲ್ಲಿ ಜನರು ಅಭಿಪ್ರಾಯವೇ ಅಂತಿಮವಾಗಿರುತ್ತದೆ. ಇಲ್ಲಿ ಸಂಚಾಲಕರ ಸಮಿತಿ ಎಂಬುದು ಸಭೆ ಆಯೋಜಿಸುವುದು, ಹೋರಾಟಕ್ಕೆ ಒಂದು ರೂಪ ಕೊಡುವ ಕೆಲಸವನ್ನೇ ಮಾಡುತ್ತದೆ.

ನೀರಾವರಿ ಹೋರಾಟಕ್ಕೆ ಶ್ರೀ ಶಿವಮೂರ್ತಿ ಮುರುಘಾ ಸ್ವಾಮೀಜಿ, ಸಾಣೇಹಳ್ಳಿ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಭೋವಿ ಮಠದ ಗುರುಗಳು, ಛಲವಾದಿ ಮಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಹೀಗೆ ಬಹಳಷ್ಟು ಮಠಾಧೀಶರು ಬೆಂಬಲವಾಗಿ ನಿಂತಿದ್ದಾರೆ.

ಸಮಿತಿ ಆಯೋಜಿಸುವ ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. ಜೋಳಿಗೆ ಹಿಡಿದು ವಿಧಾನಸೌಧಕ್ಕೆ ನೀರಿನ ಭೀಕ್ಷೆ ಬೇಡಲು ಸಮಿತಿ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆರ್ಥಿಕ ಸಹಾಯ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರು, ಸಂಸದರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಕನ್ನಡ, ಕಾರ್ಮಿಕ, ದಲಿತ, ರೈತ, ವಿದ್ಯಾರ್ಥಿ ಸೇರಿದಂತೆ ನೂರಾರು ಸಂಘಟನೆಗಳು, ಎಲ್ಲ ಸಮುದಾಯದ ಸಮಿತಿ ಜನ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹಣದ ಸಹಕಾರ ನೀಡಿದ್ದಾರೆ. ಅವರನ್ನೊಳಗೊಂಡ ಸಭೆಯಲ್ಲಿ ನೂತನ ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ಈ ಸಂಬಂಧ ಶೀಘ್ರದಲ್ಲಿಯೇ ಸಂಚಾಲಕರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಹಿರಂಗ ಸಭೆ ಕರೆಯಲಾಗುವುದು, ಅದೆಲ್ಲದಕ್ಕಿಂತಲೂ ಮುಖ್ಯವಾಗಿ ಜಯಣ್ಣ, ಮುರುಘರಾಜೇಂದ್ರ ಒಡೆಯರ್ ಅವರ ಹೋರಾಟದ ಹಾದಿ ಸ್ಮರಿಸಲು ಶ್ರದ್ಧಾಂಜಲಿ ಸಭೆ ಆಯೋಜಿಸುವುದು ತುರ್ತು ಕಾರ್ಯವಾಗಿದೆ. ಈ ಸಂಬಂಧ ಸಮಿತಿ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಿದೆ.

ಸಮಿತಿಯ ಸದಸ್ಯ ಸಂಘಟನೆಗಳು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕರೆಯುವ ಜಿಲ್ಲೆಯ ಜನರನ್ನೊಳಗೊಂಡ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸುವ ಅಧಿಕಾರ, ಹಕ್ಕು ಹೊಂದಿರುತ್ತವೆ. ಆದರೆ, ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ, ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ನೀರಾವರಿ ಹೋರಾಟ ಸಮಿತಿಗೆ ಮಾತ್ರ ಇರುತ್ತದೆ. ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ.

ಆದ್ದರಿಂದ ಜಿಲ್ಲೆಯ ಜನರಲ್ಲಿ ಗೊಂದಲ ಹುಟ್ಟುಹಾಕುವ ಕಾರ್ಯ ಜವಾಬ್ದಾರಿಯುತ ಸಂಘಟನೆಗಳು ಮಾಡಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ. ನೀರಾವರಿ ಹೋರಾಟ ಸಮಿತಿ ಆಯೋಜಿಸುವ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅಧಿಕಾರಸ್ಥರು ಸದಸ್ಯ ಸಂಘಟನೆ ಮುಖಂಡರು, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇರುತ್ತದೆ ಎಂಬುದನ್ನು ಈ ಮೂಲಕ ಹೇಳುತ್ತೇವೆ.

ಸುದ್ದಿಗೋಷ್ಟಿಯಲ್ಲಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ದಿವಂಗತ ಎಂ.ಜಯಣ್ಣ, ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಸಮಿತಿ ಸಂಚಾಲಕರು ಪುಷ್ಪನಮನ ಸಲ್ಲಿಸಿದರು. ಜಿ.ಎಸ್.ಉಜ್ಜಿನಪ್ಪ, ಜೆ.ಯಾದವರೆಡ್ಡಿ, ಆರ್.ಶೇಷಣ್ಣಕುಮಾರ್, ಎಂ.ಜೆ.ಪ್ರಸನ್ನ, ಪಾರ್ಥ ರಾಜೇಂದ್ರ ಒಡೆಯರ್, ಚಳ್ಳಕೆರೆ ಬಸವರಾಜ್, ಟಿ.ಷಫೀವುಲ್ಲಾ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ16 hours ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ17 hours ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ7 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

Trending