Connect with us

ದಿನದ ಸುದ್ದಿ

ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ

Published

on

ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ ಎಂದು ಸಮಿತಿ ಸಂಚಾಲಕ ಚಳ್ಳಕೆರೆ ಬಸವರಾಜ್ ತಿಳಿಸಿದ್ದಾರೆ.

ಪತ್ರಿಕಾ ಭವನದದಲ್ಲಿ ಸೋಮವಾರ ಎಂ.ಜಯಣ್ಣ, ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತಸಂಘಟನೆ ಸೇರಿದಂತೆ ನೂರಾರು ಸಂಘಟನೆಗಳು ಸಮಿತಿ ಹೋರಾಟದಲ್ಲಿ ಪಾಲ್ಗೊಂಡಿವೆ. ಹಾಗೇಂದು ಸಮಿತಿ ಹೆಸರಲ್ಲಿ ಸಭೆ ಕರೆಯುವ, ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಸದಸ್ಯ ಸಂಘಟನೆಗಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವಾಸಿ ಮಂದಿರದಲ್ಲಿ ರೈತಸಂಘ ಆಯೋಜಿಸಿದ ಸಭೆಗೆ ಸಮಿತಿ ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾರ್ಶ ಆಗಮಿಸಿರಲಿಲ್ಲ. ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ ಟಿ.ಶಿವಪ್ರಕಾಶ್, ಕೆ.ಆರ್ ದಯಾನಂದ್, ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತ್ರ ಸಭೆಯಲ್ಲಿ ಭಾಗವಹಿಸಿದ್ದರು.

ಅಷ್ಟೇ ಅಲ್ಲದೆ ಇಡೀ ಸಮಿತಿ ಹಾದಿಯಲ್ಲಿ ಈವರೆಗೂ ಪದಗ್ರಹಣ ಎಂಬ ಪದ ಬಳಕೆಯಿಲ್ಲ. ಆದರೆ, ಭಾನುವಾರ ಚಿತ್ರದುರ್ಗದ ಎಪಿಎಂಸಿ ಆವರಣದ ರೈತ ಭವನದಲ್ಲಿ ನಡೆದ ಸಭೆಗೆ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್ ಸಹ ಆಗಮಿಸಿರಲಿಲ್ಲ. ಆದರೆ, ಮಾಧ್ಯಮಗಳಲ್ಲಿ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು ಎಂದು ಸುದ್ದಿಗಳು ಬಿತ್ತರವಾಗಿವೆ. ಈ ಎಲ್ಲ ನಡೆ ಬಗ್ಗೆ ಸಂಚಾಲಕ ಸಮಿತಿಗೆ ಅಸಮಾಧಾನವಿದೆ ಎಂದು ತಿಳಿಸಿದರು.

ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ, ನಾನು ಕೂಡ ಅಂದಿನ ಸಭೆಗೆ ಹೋಗಿದ್ದೇ, ಆದರೆ, ಈಗ ನನಗೆ ಮನವರಿಕೆ ಆಗಿದ್ದು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಯ್ಕೆ ಪ್ರಕ್ರಿಯೆ ಆಗಬೇಕು ಎಂಬುದು ಸ್ಪಷ್ಟಗೊಂಡಿದೆ. ಸಮಿತಿಯಲ್ಲಿ ಒಡಕು ಇಲ್ಲ, ಆದರೆ, ಕೆಲ ಸಣ್ಣಪುಟ್ಟ ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಂಡು ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಬಯಲುಸೀಮೆಯ ಕಟ್ಟ ಕಡೆಯ ಜನರಿಗೆ ನೀರು ತಲುಪುವಂತೆ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲಾಗುವುದು ಎಂದರು.

ಸಂಚಾಲಕ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದಿನಿಂದಲೂ ಸಮಿತಿ ಸಂಚಾಲಕರ ಸಭೆಯಲ್ಲಿ ಚರ್ಚೆ ಬಳಿಕ, ಜನರನ್ನಳಗೊಂಡ ಸಭೆ ಕರೆದು ಅನುಮತಿ ಪಡೆಯುವ ಪದ್ಧತಿ ಹೋರಾಟ ಸಮಿತಿಯಲ್ಲಿದೆ. ಅದೇ ರೀತಿ ಮುಂದೆಯೂ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಸಮಿತಿಯ ಯಾದವರೆಡ್ಡಿ, ಜಿ.ಎಸ್.ಉಜ್ಜಿನಪ್ಪ, ಚಳ್ಳಕೆರೆ ಬಸವರಾಜ್, ಈ.ಮಹೇಶ್‌ಬಾಬು, ಆರ್.ಶೇಷಣ್ಣಕುಮಾರ್, ಟಿ.ಷಫಿವುಲ್ಲಾ, ದಸಂಸ ರಾಜ್ಯ ಮುಖಂಡ ಡಿ.ದುರುಗೇಶ್ ಇತರರು ಸಹಿ ಮಾಡಿ ಬಿಡುಗಡೆ ಮಾಡಿದ ಪ್ರಕಟಣೆಯ ಯಥಾರೂಪ ಇಲ್ಲಿದೆ.

ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೋಂದಾಯಿತ ಸಂಘಟನೆಯಲ್ಲ. ಆದರೂ ಈ ಸಮಿತಿ ಕೆಲ ಪದ್ಧತಿಗಳನ್ನು ಚಾಚೂತಪ್ಪದೇ ಪಾಲಿಸಿಕೊಂಡು ಬರುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಾಧ್ಯವೇ ಇಲ್ಲ ಎಂಬ ಬಲವಾದ ನಂಬಿಕೆ ಜನರ ಮನದಲ್ಲಿ ಬೇರೂರಿದ್ದ ಸಂದರ್ಭ ಕವಿ ಬಂಜಿಗೆರೆ ಜಯಪ್ರಕಾಶ್ ನೇತೃತ್ವದಲ್ಲಿ ಜಿಲ್ಲೆಯ ಪತ್ರಕರ್ತರ ತಂಡ ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಅಧ್ಯಯನ ನಡೆಸಿ ಯೋಜನೆ ಸಾಧ್ಯವಿದೆ ಎಂದು ಮೊದಲು ಮನವರಿಕೆ ಮಾಡಿಕೊಳ್ಳಲಾಯಿತು.

ಬಳಿಕ ಮುಕ್ತ ವಿಚಾರ ವೇದಿಕೆ ನೇತೃತ್ವದಲ್ಲಿ ಹಲವು ಸಭೆ, ಚಿಂತನೆಗಳ ಬಳಿಕ ಬಹಿರಂಗವಾಗಿ ಗುರುಭವನದಲ್ಲಿ ಸಾರ್ವನಿಕರು, ಸಂಘ-ಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆಯಲಾಯಿತು. ಅಲ್ಲಿ ಹೋರಾಟ ಸಮಿತಿ ರೂಪ ಪಡೆಯಿತು ಸಭೆಯಲ್ಲಿ ರಾಜ್ಯಸಭಾ ಹಿರಿಯ ಸದಸ್ಯ ಹೆಚ್.ಹನುಮಂತಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಈ ವೇಳೆ ವಿವಿಧ ಆತಿಯು ಸಮಿತಿ ರಚಿಸಲಾಯಿತು.

ಮುಖ್ಯವಾಗಿ ಸಂಚಾಲಕರ ಸಮಿತಿಯೇ ಎಲ್ಲ ರೀತಿಯ ಚರ್ಚೆ ನಡೆಸಿ, ಆ ವಿಚಾರವನ್ನು ಜನರ ಮುಂದಿಟ್ಟು ಅನುಮತಿ ಅಥವಾ ಜನರು ತಿರಸ್ಕರಿಸಿದರೆ ಆ ವಿಷಯವನ್ನು ಕೈಬಿಡುವ ಪದ್ಧತಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬಂದಿದೆ. ಹೆಚ್.ಹನುಮಂತಪ್ಪ ಅವರ ಬಳಿಕ ಪಿ.ಕೋದಂಡರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಬಸವ ಮಂಟಪದಲ್ಲಿ ಜರುಗಿದ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜನರ ಸಭೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಯಿತು.

ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ, ಬೃಹತ್ ಹೋರಾಟಗಳು, ರಸ್ತೆ ತಡೆ, ಸಮಾವೇಶ ಜರುಗಿದ. ಹೋರಾಟದ ಫಲ ಸರ್ಕಾರ ಯೋಜನೆ ಜಾರಿಗೆ ಅನುಮತಿ ನೀಡಿತು. ಬಳಿಕ ಎಲ್ಲ ಸರ್ಕಾರಗಳು ಒಂದಲ್ಲ ಒಂದು ರೀತಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರಿವೆ. ಆದರೆ, ನಿಧಾನಗತಿಯಲ್ಲಿ ಆಗುತ್ತಿದೆ ಎಂಬ ಅಸಮಾಧಾನ ಹೋರಾಟ ಸಮಿತಿ ಮತ್ತು ಜಿಲ್ಲೆಯ ಜನರ ಮನದಲ್ಲಿದೆ.

ಜಿಲ್ಲೆಯ ಕೆರೆಗಳ ಹೂಳೂ ತೆಗೆಸುವ, ಅಚ್ಚುಕಟ್ಟು ಮಾಡುವ ಹಾಗೂ ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಒತ್ತಡ, ಪರಿಸರ ಇಲಾಖೆ ಅನುಮತಿ ಸೇರಿ ವಿವಿಧ ವಿಷಯಗಳ ಕುರಿತು ಸಮಿತಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ತೀವ್ರ ಚರ್ಚೆ ನಡೆಸಿ, ಹೋರಾಟ ರೂಪಿಸುವ ಹಾದಿಯಲ್ಲಿದ್ದರು. ಆದರೆ, ದುರಾದುಷ್ಟವಾಶತ್ ನಮ್ಮ ಸಮಿತಿ ಅಧ್ಯಕ್ಷರಾದ ಎಂ.ಜಯಣ್ಣ, ಕಾರ್ಯಾಧ್ಯಕ್ಷರಾದ ಮುರುಘ ರಾಜೇಂದ್ರ ಒಡೆಯರ್ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಮ್ಮನ್ನು ಅಗಲಿದ್ದು ಹೋರಾಟಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪರೇಷೆ ಸಿದ್ಧಪಡಿಸುವ ಚರ್ಚೆ ನನೆಗುದಿಗೆ ಬಿದ್ದಿತು.

ಈಗ ಚಾಲನೆ ನೀಡುವ ಸಂಬಂಧ ಚರ್ಚೆ ನಡೆಯುತ್ತಿರುವಾಗಲೇ ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳು ನಾವು ಎಂದು ಹೇಳಿಕೊಂಡು ಕೆಲವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಮಾಧ್ಯಮಗಳ ಮುಂದೆ ಬರಬೇಕಾಗಿದೆ. ನೀರಾವರಿ ಹೋರಾಟ ಸಮಿತಿ ಯಾವುದೇ ತೀರ್ಮಾನಗಳನ್ನು ಏಕಾಏಕಿ ತೆಗೆದುಕೊಳ್ಳುವುದಿಲ್ಲ. ಮೊದಲಿಗೆ ಸಂಚಾಲಕರ ಸಮಿತಿ ಸಭೆಯಲ್ಲಿ ಈ ಕುರಿತು ವಿಷಯದ ಗಂಭೀರತೆ ಆಧರಿಸಿ ಸಭೆಗಳನ್ನು ನಡೆಸಲಾಗುತ್ತದೆ.

ಅಲ್ಲಿ ಅಂತಿಮ ತೀರ್ಮಾನಕ್ಕೆ ಬಂದ ಬಳಿಕ ಪತ್ರಿಕೆಗಳ ಮೂಲಕ ಜಿಲ್ಲೆಯ ಜನರನ್ನೊಳಗೊಂಡ ಸಭೆ ಕರೆಯಲಾಗುತ್ತದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗುತ್ತದೆ. ಸಭೆಯಲ್ಲಿ ಪಾಲ್ಗೊಂಡ ಜನರ ಅಭಿಪ್ರಾಯದಂತೆ ಪದಾಧಿಕಾರಿಗಳ ಆಯ್ಕೆ, ಹೋರಾಟದ ರೂಪುರೇಷೆ ಸಿದ್ಧಗೊಂಡು, ಅದನ್ನು ಅನುಷ್ಟಾನಕ್ಕೆ ತರಲಾಗುತ್ತದೆ.

ಆದರೆ, ರೈತಸಂಘದ ಒಂದು ಬಣ ಸೇರಿದಂತೆ ಯಾವುದೇ ಸಂಘಟನೆಗಳಿಗೆ ನೀರಾವರಿ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಹಾಗೂ ಸಭೆ ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ಹೊಂದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇವೆ.

ದಲಿತ ನಾಯಕ, ಸಮಿತಿ ಅಧ್ಯಕ್ಷ ಎಂ.ಜಯಣ್ಣ, ಅಹಿಂದ-ನಾಯಕ, ಸಮಿತಿ ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯ. ಅವರಿಗೆ ಸಮಿತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜಿಸಿ ಗೌರವ ಸೂಚಿಸಿಲ್ಲ. ಈಗಲೇ ಕೆಲವರು ನೀರಾವರಿ ಹೋರಾಟ ಸಮಿತಿಯ ಸದಸ್ಯ ಸಂಘಟನೆಗಳ ಹೆಸರಲ್ಲಿ ಸಭೆ ಕರೆದು ಆಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೊಂದಲ ಹುಟ್ಟುಹಾಕಲಾಗುತ್ತಿದೆ.

ಇದು ಅವರಿಗೆ ಸರಿಯಾದ ಮಾಹಿತಿ ಕೊರತೆ ಇಲ್ಲದ ಕಾರಣಕ್ಕೆ ಮಾಡಿದ್ದಾರೆ ಎಂದು ಭಾವಿಸಿದ್ದೇವೆ. ಅದನ್ನು ನಾವುಗಳು ಗಂಭೀರವಾಗಿ ಪರಿಗಣಿಸದೇ ಕ್ಷಮಾಗುಣದಿಂದ ಅವರ ಸಮಂಜಸವಲ್ಲದ ಕಾರ್ಯವನ್ನು ಖಂಡಿಸುತ್ತೇವೆ.

ಸಮಿತಿ ಕಾರ್ಯಚಟುವಟಿಕೆ, ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಈ ಮೊದಲಿನಂತೆಯೇ ಸಂಚಾಲಕರ ಸಮಿತಿ ಸಭೆಯಲ್ಲಿ ಚರ್ಚೆ ಬಳಿಕ, ಪತ್ರಿಕಾ ಹೇಳಿಕೆ ನೀಡಿ ಜಿಲ್ಲೆಯ ಮಠಾಧೀಶರು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರೈತ, ಕಾರ್ಮಿಕ ಸೇರಿದಂತೆ ಎಲ್ಲ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಆಸಕ್ತ ಎಲ್ಲರನ್ನೊಳಗೊಂಡು ಸಭೆ ಕರೆಯಲಾಗುತ್ತದೆ.

ಆ ಸಭೆಯಲ್ಲಿ ಜನರು ಅಭಿಪ್ರಾಯವೇ ಅಂತಿಮವಾಗಿರುತ್ತದೆ. ಇಲ್ಲಿ ಸಂಚಾಲಕರ ಸಮಿತಿ ಎಂಬುದು ಸಭೆ ಆಯೋಜಿಸುವುದು, ಹೋರಾಟಕ್ಕೆ ಒಂದು ರೂಪ ಕೊಡುವ ಕೆಲಸವನ್ನೇ ಮಾಡುತ್ತದೆ.

ನೀರಾವರಿ ಹೋರಾಟಕ್ಕೆ ಶ್ರೀ ಶಿವಮೂರ್ತಿ ಮುರುಘಾ ಸ್ವಾಮೀಜಿ, ಸಾಣೇಹಳ್ಳಿ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಭೋವಿ ಮಠದ ಗುರುಗಳು, ಛಲವಾದಿ ಮಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಹೀಗೆ ಬಹಳಷ್ಟು ಮಠಾಧೀಶರು ಬೆಂಬಲವಾಗಿ ನಿಂತಿದ್ದಾರೆ.

ಸಮಿತಿ ಆಯೋಜಿಸುವ ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. ಜೋಳಿಗೆ ಹಿಡಿದು ವಿಧಾನಸೌಧಕ್ಕೆ ನೀರಿನ ಭೀಕ್ಷೆ ಬೇಡಲು ಸಮಿತಿ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆರ್ಥಿಕ ಸಹಾಯ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರು, ಸಂಸದರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಕನ್ನಡ, ಕಾರ್ಮಿಕ, ದಲಿತ, ರೈತ, ವಿದ್ಯಾರ್ಥಿ ಸೇರಿದಂತೆ ನೂರಾರು ಸಂಘಟನೆಗಳು, ಎಲ್ಲ ಸಮುದಾಯದ ಸಮಿತಿ ಜನ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹಣದ ಸಹಕಾರ ನೀಡಿದ್ದಾರೆ. ಅವರನ್ನೊಳಗೊಂಡ ಸಭೆಯಲ್ಲಿ ನೂತನ ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ಈ ಸಂಬಂಧ ಶೀಘ್ರದಲ್ಲಿಯೇ ಸಂಚಾಲಕರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಹಿರಂಗ ಸಭೆ ಕರೆಯಲಾಗುವುದು, ಅದೆಲ್ಲದಕ್ಕಿಂತಲೂ ಮುಖ್ಯವಾಗಿ ಜಯಣ್ಣ, ಮುರುಘರಾಜೇಂದ್ರ ಒಡೆಯರ್ ಅವರ ಹೋರಾಟದ ಹಾದಿ ಸ್ಮರಿಸಲು ಶ್ರದ್ಧಾಂಜಲಿ ಸಭೆ ಆಯೋಜಿಸುವುದು ತುರ್ತು ಕಾರ್ಯವಾಗಿದೆ. ಈ ಸಂಬಂಧ ಸಮಿತಿ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಿದೆ.

ಸಮಿತಿಯ ಸದಸ್ಯ ಸಂಘಟನೆಗಳು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕರೆಯುವ ಜಿಲ್ಲೆಯ ಜನರನ್ನೊಳಗೊಂಡ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸುವ ಅಧಿಕಾರ, ಹಕ್ಕು ಹೊಂದಿರುತ್ತವೆ. ಆದರೆ, ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ, ಸಮಿತಿ ಹೆಸರಲ್ಲಿ ಸಭೆ ಕರೆಯುವ ಅಧಿಕಾರ ನೀರಾವರಿ ಹೋರಾಟ ಸಮಿತಿಗೆ ಮಾತ್ರ ಇರುತ್ತದೆ. ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ.

ಆದ್ದರಿಂದ ಜಿಲ್ಲೆಯ ಜನರಲ್ಲಿ ಗೊಂದಲ ಹುಟ್ಟುಹಾಕುವ ಕಾರ್ಯ ಜವಾಬ್ದಾರಿಯುತ ಸಂಘಟನೆಗಳು ಮಾಡಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ. ನೀರಾವರಿ ಹೋರಾಟ ಸಮಿತಿ ಆಯೋಜಿಸುವ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅಧಿಕಾರಸ್ಥರು ಸದಸ್ಯ ಸಂಘಟನೆ ಮುಖಂಡರು, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇರುತ್ತದೆ ಎಂಬುದನ್ನು ಈ ಮೂಲಕ ಹೇಳುತ್ತೇವೆ.

ಸುದ್ದಿಗೋಷ್ಟಿಯಲ್ಲಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ದಿವಂಗತ ಎಂ.ಜಯಣ್ಣ, ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಸಮಿತಿ ಸಂಚಾಲಕರು ಪುಷ್ಪನಮನ ಸಲ್ಲಿಸಿದರು. ಜಿ.ಎಸ್.ಉಜ್ಜಿನಪ್ಪ, ಜೆ.ಯಾದವರೆಡ್ಡಿ, ಆರ್.ಶೇಷಣ್ಣಕುಮಾರ್, ಎಂ.ಜೆ.ಪ್ರಸನ್ನ, ಪಾರ್ಥ ರಾಜೇಂದ್ರ ಒಡೆಯರ್, ಚಳ್ಳಕೆರೆ ಬಸವರಾಜ್, ಟಿ.ಷಫೀವುಲ್ಲಾ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

ದಿನದ ಸುದ್ದಿ18 hours ago

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ...

ದಿನದ ಸುದ್ದಿ18 hours ago

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ...

ದಿನದ ಸುದ್ದಿ2 days ago

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು...

ದಿನದ ಸುದ್ದಿ2 days ago

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ...

ದಿನದ ಸುದ್ದಿ3 days ago

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ...

ದಿನದ ಸುದ್ದಿ3 days ago

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ...

ದಿನದ ಸುದ್ದಿ4 days ago

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ...

ಅಂಕಣ4 days ago

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ...

ದಿನದ ಸುದ್ದಿ5 days ago

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ...

Trending