Connect with us

ರಾಜಕೀಯ

ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಗೈರು; ಅನಾರೋಗ್ಯ ಕಾರಣ ಮುಂದಿಟ್ಟ ಸಿಎಂಒ

Published

on

ಸುದ್ದಿದಿನ ಬೆಂಗಳೂರು: ವಿವಾದಾತ್ಮಕ ಟಿಪ್ಪು ಜಯಂತಿ ಸಂಭ್ರಮದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿದ್ದು, ವಿಧಾನಸೌಧದಲ್ಲಿ ಆಚರಿಸುತ್ತಿರುವ ಸರ್ಕಾರದ ಅಧಿಕೃತ ಟಿಪ್ಪು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಭಾಗವಹಿಸಿಲ್ಲ.

ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಮೂರು ದಿನಗಳವರೆಗೆ ಸರ್ಕಾರದ ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಉದ್ಘಾಟಿಸಲಿರುವ ಟಿಪ್ಪು ಜಯಂತ್ಯುತ್ಸವದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಅವರ ಹೆಸರನ್ನೇ ಸೇರಿಸಲಾಗಿಲ್ಲ. ಅನಾರೋಗ್ಯ ಕಾರಣವಿಟ್ಟು ಜಯಂತ್ಯುತ್ಸವದಿಂದ ದೂರವುಳಿದಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಇದರಿಂದ ಪಕ್ಷ ಮುಜುಗರ ಪಟ್ಟುಕೊಳ್ಳುವಂತಾಗಿದೆ ಎಂದು ಕಾಂಗ್ರೆಸ್ ಕೆಲವರು ಹೇಳಿಕೊಂಡಿದ್ದಾರೆ.

ಜಯಂತ್ಯುತ್ಸವದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿಯವರ ಹೆಸರು ಪ್ರಕಟಿಸದಿರುವುದು ಹಿಂದಿನ ಉದ್ದೇಶ ಸ್ಪಷ್ಟವಾಗಿ ತಿಳಿಯುತ್ತದೆ. ಹೀಗಾಗಿ, ಕಳೆದ ಚುನಾವಣೆಯಲ್ಲಿ ಮೈಸೂರಿನ ಜನರು ಸಿದ್ದರಾಮಯ್ಯನವರನ್ನು ಸೋಲಿಸಿದ್ದಾರೆ. ಈಗ ಮತ್ತೊಮ್ಮೆ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ ಎಂದು ಬಿಜೆಪಿ ವಕ್ತಾರೆ ಮಾಲವಿಕಾ ಅವಿನಾಶ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಚಿವ ಜಮೀರ್ ಅಹ್ಮದ್ ಸೇರಿ ಕಾಂಗ್ರೆಸ್ ಕೆಲವು ಮುಖಂಡರು ಮುಖಮಂತ್ರಿಗಳ ಅನಾರೋಗ್ಯ ಕಾರಣವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ಜಯಂತ್ಯುತ್ಸವ ಆಚರಣೆಯ ಸ್ಥಳದ ಬಗ್ಗೆ ಭಿನ್ನಮತಗಳಿದ್ದು, ಕೆಲವರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಬೇಕೆಂದಿದ್ದರು. ಮತ್ತೆ ಕೆಲವರು ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆಬೇಕಿತ್ತು ಎಂದು ಬಯಸಿದ್ದರು.

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

Published

on

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್‌ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

Published

on

ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.

ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending