ರಾಜಕೀಯ
ನಾಡಿನ ಜನತೆಗೆ ಸಿಎಂ ಕುಮಾರಸ್ವಾಮಿ ಶುಭಾಶಯ
ಸುದ್ದಿದಿನ ಡೆಸ್ಕ್: ದೇಶಾದ್ಯಂತ ಇಂದು 72ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಷಯ ಕೋರಿದ ಸಿಎಂ ಅಹಿಂಸಾ ಹೋರಾಟದಿಂದ ಸ್ವಾತಂತ್ರ್ಯವನ್ನು ಪಡೆದಿದ್ದೇವೆ ಎಂದರು.
ವಿವಿಧತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದು, ರಾಜ್ಯಾದ್ಯಂತ ಸಾವಿರ ರಂಗ ಪ್ರದರ್ಶನ ಮಾಡಲಾಗುವುದು ಎಂದು ಹೇಳಿದರು.
ಮಾಣಿಕ್ ಷಾ ಪರೇಡ್ ಮೈದಾನ ಮದುವನ ಗಿತ್ತಿಯಂತೆ ಸಿಂಗಾರಗೊಂಡಿದೆ. ಸೇನಾ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಧ್ವಜಾರೋಹಣ ವೇಳೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಲಾಯಿತು. ಧ್ವಜಾರೋಹಣ ಬಳಿಕ ಗೌರವ ವಂದನೆಯನ್ನು ಮುಖ್ಯಮಂತ್ರಿ ಸ್ವೀಕರಿಸಿದ್ದಾರೆ.