ರಾಜಕೀಯ
ಸಿದ್ದು ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳಿದ್ದಕ್ಕೆ ಎಚ್ಡಿಕೆ ಏನು ಹೇಳಿದ್ರು ಗೊತ್ತಾ ?
ಸುದ್ದಿದಿನ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದು, ಇದಕ್ಕೆ ಹಾಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಮತ್ತೆ ಸಿಎಂ ಆಗುತ್ತೇನೆ ಎಂದುಕೊಂಡಿದ್ದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ‘ಆಗಲಿ ಸಂತೋಷ’ ಎಂದು ಮುಖ ತಿರುಗಿಸಿ ಹೊರಟು ಹೋಗಿದ್ದಾರೆ.
ಇದೇ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಗಾಳಿ ಸುದ್ದಿಗೆ ಪ್ರತಿಕ್ರಿಯೆ ನೀಡಲು ಆಗಲ್ಲ ಎಂದಿದ್ದಾರೆ.