ರಾಜಕೀಯ
ಪ್ರಧಾನಿ ಮೋದಿಗೆ ಕನ್ನಡ ಕಲಿಸಿದ ಸಿದ್ದು ಮೇಷ್ಟ್ರು !

ಸುದ್ದಿದಿನ ವಿಶೇಷ: ರಾಜ್ಯ ಚುನಾವಣೆ ರಣಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಮೊದಲು ‘ನನ್ ಪ್ರೀತಿಯ ಕನ್ನಡಗರಿಗೆ ಪ್ರಣಾಮ್ ಗಳು’ ಎನ್ನುತ್ತಿದ್ದ ಮೋದಿ ಈಗ ಕನ್ನಡ ನಾಡಿನ ಹಲವು ಮಹನೀಯರ ಹೆಸರುಗಳ ಸಹಿತ ಒಂದು ಪ್ಯಾರದ ವರೆಗೆ ಕನ್ನಡದಲ್ಲೇ ಭಾಷಣ ಮಾಡುತ್ತಾರೆ. ದೇಶದ ಪ್ರಧಾನಿಗೆ ಕನ್ನಡ ಕಲಿಸುವಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೇಷ್ಟ್ರು ಯಶಸ್ವಿಯಾಗಿದ್ದಾರೆ !!
ಹೌದು, ಪ್ರಪಂಚದ ಯಾವುದೇ ದೇಶಕ್ಕೆ ಹೋದರೂ ಹಿಂದಿಯಲ್ಲೇ ಮಾತನಾಡಿ ದಕ್ಕಿಸಿಕೊಂಡು ಬರುತ್ತಿದ್ದ ಪ್ರಧಾನಿ ಮೋದಿ ಅವರಿಗೆ ಕನ್ನಡ ಮಾತನಾಡುವ ಅನಿವಾರ್ಯತೆ ತಂದಿಟ್ಟಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ವಿಧಾನಸಭೆ ಚುನಾವಣೆ.
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ನ್ನು ಮಣಿಸಿ ಬಹುತೇಕ ದೇಶದಲ್ಲಿ ಪಾರುಪತ್ಯ ಸ್ಥಾಪಿಸುವ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಆರಂಭವಾದ ನಂತರ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ ಚುನಾವಣೆ ಪ್ರಚಾರ ನಡೆಸಿದ್ದಾರೆ. ಕನ್ನಡಿಗರ ಮನ ಗೆಲ್ಲಬೇಕಾದರೆ ಕನ್ನಡದಲ್ಲೇ ಮಾತನಾಡವುದು ಅನಿವಾರ್ಯ ಎಂದು ಅರಿತಿರುವ ಬಿಜೆಪಿ ನಾಯಕರು ಪ್ರಧಾನಿ ಅವರಿಂದ ಶತಾಯಗತಾಯ ಒಂದು ಪ್ಯಾರವನ್ನಾದರೂ ಕನ್ನಡದಲ್ಲೇ ಭಾಷಣ ಓದಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಪ್ರಧಾನಿ ಮೋದಿಗೆ ಕನ್ನಡ ಕಲಿಸಿದ ಸಿದ್ದು ಮೇಷ್ಟ್ರು !
ರಾಜ್ಯ ಚುನಾವಣೆ ಆರಂಭಕ್ಕೂ ಮೊನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದರು. ಆಗ ಮೋದಿ ನಾನು ಕೂಡ ಕನ್ನಡಿಗ ಎಂದು ಹೇಳಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಟಾಂಗ್ ನೀಡಿದ್ದ ಸಿಎಂ ಸಿದ್ದರಾಮಯ್ಯ ” ನಂ. 1 ರಾಜ್ಯ ಕರ್ನಾಟಕಕ್ಕೆ ಸ್ವಾಗತ’ ಎಂದು ಹೇಳಿ ‘ಕನ್ನಡಿಗನಾಗುವುದೆಂದರೆ..ಹೇಳಿ ಪಂಚ ಪ್ರಶ್ನೆ ಕೇಳಿದ್ದರು. ಕನ್ನಡದ ನೆಲ, ಜಲ, ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳಬೇಕಾದ ರೀತಿ ಕುರಿತು ಟಾಂಗ್ ನೀಡಿದ್ದರು. ಬಹುತೇಕ ಅಲ್ಲಿಂದ ಶುರುವಾಯಿತು ಪ್ರಧಾನಿ ಹಾಗೂ ಸಿದ್ದು ನಡುವಿನ ಕನ್ನಡ ಅಸ್ಮಿತೆಯ ಪ್ರಶ್ನೆ. ಪ್ರತಿ ಬಾರಿ ಪ್ರಧಾನಿಗೆ ಉತ್ತರಿಸುವವಾಗ ಕನ್ನಡನಾಡು, ನುಡಿಯ ಮನ್ನಣೆ ಅರಿತು ಮಾತನಾಡುತ್ತಿದ್ದರು. ಇದು ಪ್ರಧಾನಿ ಮೋದಿ ಕನ್ನಡದಲ್ಲಿ ಭಾಷಣ ಮಾಡುವಂತೆ ಪ್ರೇರೇಪಿಸಿತು ಎಂದರ ತಪ್ಪಿಲ್ಲ.
ಇದನ್ನು ಓದಿ: ‘ನಾನೂ ಕನ್ನಡಿಗ’ ಎಂದ ಪ್ರಧಾನಿಗೆ ಸಿಎಂ ಸಿದ್ಧರಾಮಯ್ಯ ಟ್ವಿಟರ್ ನಲ್ಲಿ ಟಾಂಗ್
ಕನ್ನಡದ ಅಸ್ಮಿತೆ ದೊಡ್ಡದು
ಕನ್ನಡ ನಾಡಿನಲ್ಲಿ ಜಾತಿ, ಧರ್ಮದ ವಿಚಾರದಂತೆ ಕನ್ನಡ ಭಾಷೆ ಕೂಡ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮುನ್ನೆಲೆಗೆ ಬರುತ್ತದೆ. ಇದು ಕನ್ನಡಿಗರು ಭಾಷೆ ಮೇಲೆಯಿಟ್ಟರುವ ಅಭಿಮಾನಕ್ಕೆ ಪ್ರತೀಕ. ಚುನಾವಣೆ ಸಂದರ್ಭದಲ್ಲಿ ಜಾತಿ ಸಮೀಕರಣ ಎಷ್ಟು ಕೆಲಸ ಮಾಡುತ್ತದೆಯೋ ಅಷ್ಟೆ ಕನ್ನಡ ಭಾಷೆ ಕೂಡ ಕೆಲಸ ಮಾಡುತ್ತದೆ. ಸಿಎಂ ಸಿದ್ದರಾಮಯ್ಯ ಕೂಡ ಭಾಷೆ, ನಾಡಿನ ವಿಚಾರವಾಗಿ ಪ್ರಶ್ನೆಗಳು ಬಂದಾಗ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಹಿಂದಿ ಹೇರಿಕೆ ವಿಚಾರ ಬಂದಾಗ ‘ನಾನು ಈ ಮಣ್ಣಿನ ಮಗ’ ಎಂದು ಎಚ್ಚರಿಸಿದ್ದಾರೆ. ಸದ್ಯ ಈ ಎಲ್ಲಾ ಕಾರಣಗಳು ಪ್ರಧಾನಿ ಮೋದಿ ಅವರು ಪ್ರತಿ ಚುನಾವಣೆ ಪ್ರಚಾರದಲ್ಲಿ ಕನ್ನಡ ಮಾತನಾಡುವಂತೆ ಮಾಡಿವೆ.
ಇದನ್ನು ಓದಿ: ಕೃಷ್ಣ ಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ : ಪೇಜಾವರ ಶ್ರೀಗಳ ಸ್ಪಷ್ಟನೆ

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.
ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.
ಸಾರಜನಕ, ರಂಜಕ ಮತ್ತು ಪೊಟ್ಯಾಷ್ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ— Siddaramaiah (@siddaramaiah) April 9, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್
ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ7 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ7 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್4 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021