Connect with us

ರಾಜಕೀಯ

ಪ್ರಧಾನಿ ಮೋದಿಗೆ ಕನ್ನಡ ಕಲಿಸಿದ ಸಿದ್ದು ಮೇಷ್ಟ್ರು !

Published

on

ಸುದ್ದಿದಿನ ವಿಶೇಷ: ರಾಜ್ಯ ಚುನಾವಣೆ ರಣಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಮೊದಲು ‘ನನ್ ಪ್ರೀತಿಯ ಕನ್ನಡಗರಿಗೆ ಪ್ರಣಾಮ್ ಗಳು’ ಎನ್ನುತ್ತಿದ್ದ ಮೋದಿ ಈಗ ಕನ್ನಡ ನಾಡಿನ ಹಲವು ಮಹನೀಯರ ಹೆಸರುಗಳ ಸಹಿತ ಒಂದು ಪ್ಯಾರದ ವರೆಗೆ ಕನ್ನಡದಲ್ಲೇ ಭಾಷಣ ಮಾಡುತ್ತಾರೆ. ದೇಶದ ಪ್ರಧಾನಿಗೆ ಕನ್ನಡ ಕಲಿಸುವಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೇಷ್ಟ್ರು ಯಶಸ್ವಿಯಾಗಿದ್ದಾರೆ !!

ಹೌದು, ಪ್ರಪಂಚದ ಯಾವುದೇ ದೇಶಕ್ಕೆ ಹೋದರೂ ಹಿಂದಿಯಲ್ಲೇ ಮಾತನಾಡಿ ದಕ್ಕಿಸಿಕೊಂಡು ಬರುತ್ತಿದ್ದ ಪ್ರಧಾನಿ ಮೋದಿ ಅವರಿಗೆ ಕನ್ನಡ ಮಾತನಾಡುವ ಅನಿವಾರ್ಯತೆ ತಂದಿಟ್ಟಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ವಿಧಾನಸಭೆ ಚುನಾವಣೆ.
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ನ್ನು ಮಣಿಸಿ ಬಹುತೇಕ ದೇಶದಲ್ಲಿ ಪಾರುಪತ್ಯ ಸ್ಥಾಪಿಸುವ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಆರಂಭವಾದ ನಂತರ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ ಚುನಾವಣೆ ಪ್ರಚಾರ ನಡೆಸಿದ್ದಾರೆ. ಕನ್ನಡಿಗರ ಮನ ಗೆಲ್ಲಬೇಕಾದರೆ ಕನ್ನಡದಲ್ಲೇ ಮಾತನಾಡವುದು ಅನಿವಾರ್ಯ ಎಂದು ಅರಿತಿರುವ ಬಿಜೆಪಿ ನಾಯಕರು ಪ್ರಧಾನಿ ಅವರಿಂದ ಶತಾಯಗತಾಯ ಒಂದು ಪ್ಯಾರವನ್ನಾದರೂ ಕನ್ನಡದಲ್ಲೇ ಭಾಷಣ ಓದಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಧಾನಿ ಮೋದಿಗೆ ಕನ್ನಡ ಕಲಿಸಿದ ಸಿದ್ದು ಮೇಷ್ಟ್ರು !

ರಾಜ್ಯ ಚುನಾವಣೆ ಆರಂಭಕ್ಕೂ ಮೊನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದರು. ಆಗ ಮೋದಿ ನಾನು ಕೂಡ ಕನ್ನಡಿಗ ಎಂದು ಹೇಳಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಟಾಂಗ್ ನೀಡಿದ್ದ ಸಿಎಂ ಸಿದ್ದರಾಮಯ್ಯ ” ನಂ. 1 ರಾಜ್ಯ ಕರ್ನಾಟಕಕ್ಕೆ ಸ್ವಾಗತ’ ಎಂದು ಹೇಳಿ ‘ಕನ್ನಡಿಗನಾಗುವುದೆಂದರೆ..ಹೇಳಿ ಪಂಚ ಪ್ರಶ್ನೆ ಕೇಳಿದ್ದರು. ಕನ್ನಡದ ನೆಲ, ಜಲ, ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳಬೇಕಾದ ರೀತಿ ಕುರಿತು ಟಾಂಗ್ ನೀಡಿದ್ದರು. ಬಹುತೇಕ ಅಲ್ಲಿಂದ ಶುರುವಾಯಿತು ಪ್ರಧಾನಿ ಹಾಗೂ ಸಿದ್ದು ನಡುವಿನ ಕನ್ನಡ ಅಸ್ಮಿತೆಯ ಪ್ರಶ್ನೆ. ಪ್ರತಿ ಬಾರಿ ಪ್ರಧಾನಿಗೆ ಉತ್ತರಿಸುವವಾಗ ಕನ್ನಡನಾಡು, ನುಡಿಯ ಮನ್ನಣೆ ಅರಿತು ಮಾತನಾಡುತ್ತಿದ್ದರು. ಇದು ಪ್ರಧಾನಿ ಮೋದಿ ಕನ್ನಡದಲ್ಲಿ ಭಾಷಣ ಮಾಡುವಂತೆ ಪ್ರೇರೇಪಿಸಿತು ಎಂದರ ತಪ್ಪಿಲ್ಲ.

ಇದನ್ನು ಓದಿ: ‘ನಾನೂ ಕನ್ನಡಿಗ’ ಎಂದ ಪ್ರಧಾನಿಗೆ ಸಿಎಂ ಸಿದ್ಧರಾಮಯ್ಯ ಟ್ವಿಟರ್ ನಲ್ಲಿ ಟಾಂಗ್

ಕನ್ನಡದ ಅಸ್ಮಿತೆ ದೊಡ್ಡದು

ಕನ್ನಡ ನಾಡಿನಲ್ಲಿ ಜಾತಿ, ಧರ್ಮದ ವಿಚಾರದಂತೆ ಕನ್ನಡ ಭಾಷೆ ಕೂಡ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮುನ್ನೆಲೆಗೆ ಬರುತ್ತದೆ. ಇದು ಕನ್ನಡಿಗರು ಭಾಷೆ ಮೇಲೆಯಿಟ್ಟರುವ ಅಭಿಮಾನಕ್ಕೆ ಪ್ರತೀಕ. ಚುನಾವಣೆ ಸಂದರ್ಭದಲ್ಲಿ ಜಾತಿ ಸಮೀಕರಣ ಎಷ್ಟು ಕೆಲಸ ಮಾಡುತ್ತದೆಯೋ ಅಷ್ಟೆ ಕನ್ನಡ ಭಾಷೆ ಕೂಡ ಕೆಲಸ ಮಾಡುತ್ತದೆ. ಸಿಎಂ ಸಿದ್ದರಾಮಯ್ಯ ಕೂಡ ಭಾಷೆ, ನಾಡಿನ ವಿಚಾರವಾಗಿ ಪ್ರಶ್ನೆಗಳು ಬಂದಾಗ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಹಿಂದಿ ಹೇರಿಕೆ ವಿಚಾರ ಬಂದಾಗ ‘ನಾನು ಈ ಮಣ್ಣಿನ ಮಗ’ ಎಂದು ಎಚ್ಚರಿಸಿದ್ದಾರೆ. ಸದ್ಯ ಈ ಎಲ್ಲಾ ಕಾರಣಗಳು ಪ್ರಧಾನಿ ಮೋದಿ ಅವರು ಪ್ರತಿ ಚುನಾವಣೆ ಪ್ರಚಾರದಲ್ಲಿ ಕನ್ನಡ ಮಾತನಾಡುವಂತೆ ಮಾಡಿವೆ.

ಇದನ್ನು ಓದಿ: ಕೃಷ್ಣ ಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ : ಪೇಜಾವರ ಶ್ರೀಗಳ ಸ್ಪಷ್ಟನೆ

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending