ದಿನದ ಸುದ್ದಿ
ಏಪ್ರಿಲ್ ಕೊನೆಯ ವಾರ ಜಗಳೂರಿಗೆ ಸಿಎಂ ಭೇಟಿ : ಪೂರ್ವಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಸುದ್ದಿದಿನ,ದಾವಣಗೆರೆ : ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳ ಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಚರ್ಚಿಸಲು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳು ತಮ್ಮ ಇಲಾಖೆ ವತಿಯಿಂದ ನೀಡಲಾಗುವ ಯೋಜನೆ, ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಸ್ಟಾಲ್ ಗಳನ್ನು ಕಾರ್ಯಕ್ರಮ ಜರುಗುವ ಆವರಣದಲ್ಲಿ ಹಾಕಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕಾರ್ಯಕ್ರಮ ಬಹಳ ಅಚ್ಚುಕಟ್ಟಿನಿಂದ ಕೂಡಿರಬೇಕು ಅಂದು ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ, ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಗಳೂರು ತಾಲ್ಲೂಕಿನ 57 ಕೆರೆಗಳನ್ನು ತುಂಬಿಸುವ 1255 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಹಾಗೂ 26 ಕೋಟಿ ರೂ. ವೆಚ್ಚದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ನಿವೇಶನಗಳ ಅಭಿವೃದ್ದಿಗೆ ಶಂಕುಸ್ಥಾಪನೆ, 3 ಕೋಟಿ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡದ ಲೋಕಾರ್ಪಣೆ, ಕೃಷಿ ಇಲಾಖೆಯ 5,340 ಹೆಕ್ಟೇರ್ ಭೂಮಿಗೆ ನೀರೊದಗಿಸುವ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ದಿ ಕಾಮಗಾರಿ ಲೋಕಾರ್ಪಣೆ, 2 ಕೋಟಿ ರೂ. ವೆಚ್ಚದ ವಿ.ಐ.ಪಿ ಗೆಸ್ಟ್ಹೌಸ್ ಲೋಕಾರ್ಪಣೆ, ಜಂಗಮ ತುಂಬಿಗೆರೆಯ 1.5 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಸೇರಿದಂತೆ ಹಲವಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳಿಗೆ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 14 ಹಕ್ಕುಪತ್ರ, ರೇಷ್ಮೆ ಇಲಾಖೆಯಿಂದ 3 ರೈತರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಮೀನುಗಾರಿಕೆ ಇಲಾಖೆಯಿಂದ 7 ಜನರಿಗೆ ಸಹಾಯಧನ ಸೌಲಭ್ಯ, ಕೋವಿಡ್ ಪರಿಹಾರ ಆದೇಶ ಪತ್ರ, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಫಲಾನುಭವಿಗಳಿಗೆ ನೇರಸಾಲ ಸೌಲಭ್ಯ ಒದಗಿಸುವ ಆದೇಶ ಪತ್ರಗಳನ್ನು ವಿತರಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ತಮ್ಮ ತಮ್ಮ ಇಲಾಖೆಗಳ ಶಿಲಾನ್ಯಾಸ ಫಲಕಗಳನ್ನು ಶಿಷ್ಟಾಚಾರದಂತೆ ತಯಾರಿಸಿಕೊಂಡು, ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಜೋಡಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಉದ್ಘಾಟನೆ ಶಂಕುಸ್ಥಾಪನೆಗೆ ಸಿದ್ಧವಿರುವ ಮತ್ತು ಆಯಾ ಇಲಾಖೆಯಿಂದ ನೀಡುವ ಪರಿಹಾರ ಹಾಗೂ ಸಹಾಯಧನಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ, ಹೊನ್ನಾಳಿ ವಿಭಾಗದ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಜಗಳೂರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ