Connect with us

ರಾಜಕೀಯ

ಪತ್ರಿಕೆ ಸಂಪಾದಕರೊಬ್ಬರ ಮುಖವಾಡ ಕಳಚಿದ ಕೋಬ್ರಾ ಪೋಸ್ಟ್ !

Published

on

ಸುದ್ದಿದಿನ ವಿಶೇಷ: ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಹಾಗೂ ಇತರೆ ವಿಷಯಗಳ ಮೂಲಕ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರುವ ಪತ್ರಿಕಾ ಸಂಪಾದಕರ ಮುಖವಾಡವನ್ನು ಕೋಬ್ರಾ ಪೋಸ್ಟ್ ಆನ್ಲೈನ್ ಪತ್ರಿಕೆ ತನ್ನ ಸ್ಟಿಂಗ್ ಆಪರೇಷನ್ ನಲ್ಲಿ ಬಯಲು ಮಾಡಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಅಜೆಂಡಾ, ಅಮಿತ್ ಷಾ ತಂತ್ರಗಾರಿಕೆ, ಬಿಜೆಪಿಯ ಬೆನ್ನಿಗೆ ನಿಂತು ಕೆಲಸ ಮಾಡಿರುವುದರ ಕುರಿತು ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಹಾಗೂ ಅವರ ಆಡಳಿತ ಮಂಡಳಿಯ ಇತರೆ ಸದಸ್ಯರು ಸ್ಟಿಂಗ್ ಅಪರೇಷನ್ ನಲ್ಲಿ ಬಾಯಿಬಿಟ್ಟಿದ್ದಾರೆ.

ಸ್ಟಿಂಗ್ ಅಪರೇಷನ್ ನಲ್ಲಿ ಕೋಬ್ರಾ ಪೋಸ್ಟ್ ವರದಿಗಾರ ‘ಹಿಂದುತ್ವ’ ಕುರಿತು ಪತ್ರಿಕೆ ಹೆಚ್ಚು ಪ್ರಚಾರ ಮಾಡಬೇಕೆಂದು ಕೇಳುತ್ತಾನೆ. ಇದಕ್ಕೆ ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಅವರು ನಾವು ಅದನ್ನೇ ತಾನೇ ಈಗಲೂ ಮಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅಮಿತ್ ಅವರ ಸಂದರ್ಶನ ಪ್ರಕಟಿಸಿದ್ದು ನಾವು ಎಂದು ಹೇಳುತ್ತಾರೆ. ಹೀಗೆ ಸಂಭಾಷಣೆ ಸಾಗುತ್ತದೆ. ರವಿ ಹೆಗಡೆ ಅವರು ಪತ್ರಿಕೆ ಮೂಲಕ ಬಿಜೆಪಿ ಪರ ಕೆಲಸ ಮಾಡುವ ಕುರಿತು ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ.

ಈ ಕುರಿತು ಸೋಷಿಯಲ್ ಮಿಡಿಯಾ ಗಳಲ್ಲಿ ಟೀಕೆ ವ್ಯಕ್ತವಾಗಿದೆ. ‘ಹಿಂದುತ್ವ ಎನ್ನುವುದು ಪತ್ರಿಕಾಧರ್ಮವಲ್ಲ ಅದೊಂದು ರಾಜಕಾರಣ. ಪತ್ರಿಕೆ, ಸುದ್ದಿ ಚಾನೆಲ್ ಗಳು ಹೀಗೆ ಒಂದು ಪಕ್ಷದ ಪರವಾಗಿ ಅಜೆಂಡಾಗಳನ್ನು ಪ್ರಚಾರ ಮಾಡಲು ನಿಂತಿವೆ ಅನ್ನುವುದು ಈಗ ಪುರಾವೆ ಸಮೇತ ಸಾಬೀತಾಯಿತು ಎಂದು ರಾಜೇಂದ್ರ ಪ್ರಸಾದ್ ಎಂಬುವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡದ ಬಹುತೇಕ ಮಾಧ್ಯಮಗಳು ಒಂದು ಪಕ್ಷದ ಜನಪ್ರತಿನಿಧಿಗಳ ಶೇರಿನಿಂದ ನಡೆಯುತ್ತಿದ್ದ, ಅವು ಆ ಪಕ್ಷದ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡವ ರೀತಿಯಲ್ಲಿ ಸುದ್ದಿ ಪ್ರಕಟಿಸುತ್ತಿವೆ. ಇದಕ್ಕೆ ಪೂರಕವಾಗಿದೆ ಹಿಂದುತ್ವದ ಅಜೆಂಡ ಮೂಲಕ ತಮ್ಮ ರಾಜಕೀಯದ ಕಾರ್ಯ ಸಾಧನೆ ಮಾಡುತ್ತಿವೆ. ಇವು ಪ್ರಜ್ಞಾವಂತ ನಾಗರಿಕರಿಗೆ ಗೋಚರಿಸುತ್ತಿವೆಯಾದರೂ ಸಾಮಾನ್ಯ ಜನರ ಅರಿವಿಗೆ ಬರುತ್ತಿಲ್ಲ. ಸದ್ಯ ಕೋಬ್ರಾ ಪೋಸ್ಟ್ ಕೆಲವು ಸಂಪಾದಕರ ಮುಖವಾಡ ಕಳಚುವ ಕಾರ್ಯ ಮಾಡಿದೆ.

ಏನಿದು ಕೋಬ್ರಾ ಪೋಸ್ಟ್‌

ಅನಿರುದ್ಧ ಬೆಹಲ್‌ ಎಂಬುವವರು ಆರಂಭಿಸಿದ ಆನ್ಲೈನ್ ಸುದ್ದಿ ಪತ್ರಿಕೆ ಈ ‘ಕೋಬ್ರಾ ಪೋಸ್ಟ್‌’. ಕಳೆದ ಹದಿನೈದು ವರ್ಷಗಳಲ್ಲಿ ಹಲವು ಪ್ರಮುಖ ಕುಟುಕು ಕಾರ್ಯಾಚರಣೆ ನಡೆಸಿದ್ದು, ಅನೇಕ ಸತ್ಯ ಸಂಗತಿಗಳನ್ನು ಹೊರಗೆಡವಿದೆ ಈಗ ಮತ್ತೊಂದು ಕಾರ್ಯಾಚರಣೆ ಮೂಲಕ ಮಾಧ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದೆ.

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ19 hours ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ4 weeks ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ4 weeks ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ1 month ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

Trending