ರಾಜಕೀಯ
ಪತ್ರಿಕೆ ಸಂಪಾದಕರೊಬ್ಬರ ಮುಖವಾಡ ಕಳಚಿದ ಕೋಬ್ರಾ ಪೋಸ್ಟ್ !
ಸುದ್ದಿದಿನ ವಿಶೇಷ: ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಹಾಗೂ ಇತರೆ ವಿಷಯಗಳ ಮೂಲಕ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರುವ ಪತ್ರಿಕಾ ಸಂಪಾದಕರ ಮುಖವಾಡವನ್ನು ಕೋಬ್ರಾ ಪೋಸ್ಟ್ ಆನ್ಲೈನ್ ಪತ್ರಿಕೆ ತನ್ನ ಸ್ಟಿಂಗ್ ಆಪರೇಷನ್ ನಲ್ಲಿ ಬಯಲು ಮಾಡಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಅಜೆಂಡಾ, ಅಮಿತ್ ಷಾ ತಂತ್ರಗಾರಿಕೆ, ಬಿಜೆಪಿಯ ಬೆನ್ನಿಗೆ ನಿಂತು ಕೆಲಸ ಮಾಡಿರುವುದರ ಕುರಿತು ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಹಾಗೂ ಅವರ ಆಡಳಿತ ಮಂಡಳಿಯ ಇತರೆ ಸದಸ್ಯರು ಸ್ಟಿಂಗ್ ಅಪರೇಷನ್ ನಲ್ಲಿ ಬಾಯಿಬಿಟ್ಟಿದ್ದಾರೆ.
ಸ್ಟಿಂಗ್ ಅಪರೇಷನ್ ನಲ್ಲಿ ಕೋಬ್ರಾ ಪೋಸ್ಟ್ ವರದಿಗಾರ ‘ಹಿಂದುತ್ವ’ ಕುರಿತು ಪತ್ರಿಕೆ ಹೆಚ್ಚು ಪ್ರಚಾರ ಮಾಡಬೇಕೆಂದು ಕೇಳುತ್ತಾನೆ. ಇದಕ್ಕೆ ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಅವರು ನಾವು ಅದನ್ನೇ ತಾನೇ ಈಗಲೂ ಮಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅಮಿತ್ ಅವರ ಸಂದರ್ಶನ ಪ್ರಕಟಿಸಿದ್ದು ನಾವು ಎಂದು ಹೇಳುತ್ತಾರೆ. ಹೀಗೆ ಸಂಭಾಷಣೆ ಸಾಗುತ್ತದೆ. ರವಿ ಹೆಗಡೆ ಅವರು ಪತ್ರಿಕೆ ಮೂಲಕ ಬಿಜೆಪಿ ಪರ ಕೆಲಸ ಮಾಡುವ ಕುರಿತು ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ.
ಈ ಕುರಿತು ಸೋಷಿಯಲ್ ಮಿಡಿಯಾ ಗಳಲ್ಲಿ ಟೀಕೆ ವ್ಯಕ್ತವಾಗಿದೆ. ‘ಹಿಂದುತ್ವ ಎನ್ನುವುದು ಪತ್ರಿಕಾಧರ್ಮವಲ್ಲ ಅದೊಂದು ರಾಜಕಾರಣ. ಪತ್ರಿಕೆ, ಸುದ್ದಿ ಚಾನೆಲ್ ಗಳು ಹೀಗೆ ಒಂದು ಪಕ್ಷದ ಪರವಾಗಿ ಅಜೆಂಡಾಗಳನ್ನು ಪ್ರಚಾರ ಮಾಡಲು ನಿಂತಿವೆ ಅನ್ನುವುದು ಈಗ ಪುರಾವೆ ಸಮೇತ ಸಾಬೀತಾಯಿತು ಎಂದು ರಾಜೇಂದ್ರ ಪ್ರಸಾದ್ ಎಂಬುವರು ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡದ ಬಹುತೇಕ ಮಾಧ್ಯಮಗಳು ಒಂದು ಪಕ್ಷದ ಜನಪ್ರತಿನಿಧಿಗಳ ಶೇರಿನಿಂದ ನಡೆಯುತ್ತಿದ್ದ, ಅವು ಆ ಪಕ್ಷದ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡವ ರೀತಿಯಲ್ಲಿ ಸುದ್ದಿ ಪ್ರಕಟಿಸುತ್ತಿವೆ. ಇದಕ್ಕೆ ಪೂರಕವಾಗಿದೆ ಹಿಂದುತ್ವದ ಅಜೆಂಡ ಮೂಲಕ ತಮ್ಮ ರಾಜಕೀಯದ ಕಾರ್ಯ ಸಾಧನೆ ಮಾಡುತ್ತಿವೆ. ಇವು ಪ್ರಜ್ಞಾವಂತ ನಾಗರಿಕರಿಗೆ ಗೋಚರಿಸುತ್ತಿವೆಯಾದರೂ ಸಾಮಾನ್ಯ ಜನರ ಅರಿವಿಗೆ ಬರುತ್ತಿಲ್ಲ. ಸದ್ಯ ಕೋಬ್ರಾ ಪೋಸ್ಟ್ ಕೆಲವು ಸಂಪಾದಕರ ಮುಖವಾಡ ಕಳಚುವ ಕಾರ್ಯ ಮಾಡಿದೆ.
ಏನಿದು ಕೋಬ್ರಾ ಪೋಸ್ಟ್
ಅನಿರುದ್ಧ ಬೆಹಲ್ ಎಂಬುವವರು ಆರಂಭಿಸಿದ ಆನ್ಲೈನ್ ಸುದ್ದಿ ಪತ್ರಿಕೆ ಈ ‘ಕೋಬ್ರಾ ಪೋಸ್ಟ್’. ಕಳೆದ ಹದಿನೈದು ವರ್ಷಗಳಲ್ಲಿ ಹಲವು ಪ್ರಮುಖ ಕುಟುಕು ಕಾರ್ಯಾಚರಣೆ ನಡೆಸಿದ್ದು, ಅನೇಕ ಸತ್ಯ ಸಂಗತಿಗಳನ್ನು ಹೊರಗೆಡವಿದೆ ಈಗ ಮತ್ತೊಂದು ಕಾರ್ಯಾಚರಣೆ ಮೂಲಕ ಮಾಧ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದೆ.
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು