Connect with us

ದಿನದ ಸುದ್ದಿ

ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ನಿಮ್ಮದೇ ಸ್ಥಳ, ನಿಮ್ಮದೇ ಸಮಯ : ಮೋದಿಗೆ ಸಿದ್ದು ಓಪನ್ ಚಾಲೆಂಜ್

Published

on

ಸಾಂದರ್ಭಿಕ ಚಿತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮಾಡಿರುವ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಪ್ರತಿಕ್ರಿಯೆ

ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ.
ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು.

ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಯ ಪ್ರಣಾಳಿಕೆಯನ್ನು ಸಂಕಲ್ಪಪತ್ರ ಎಂದು ಬಣ್ಣಿಸಿದ್ದಾರೆ.
2018ರ ತನ್ನ ಪ್ರಣಾಳಿಕೆಯ ಶೇಕಡಾ 90ರಷ್ಟು ಭರವಸೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯ 165 ಭರವಸೆಗಳಲ್ಲಿ 158 ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ನಿಮ್ಮ ಸಂಕಲ್ಪ ಪ್ರಾಮಾಣಿಕವಾದುದಾಗಿದ್ದರೆ 2013ರ ನಮ್ಮ ಪ್ರಣಾಳಿಕೆ ಮತ್ತು 2018ರ ನಿಮ್ಮ ಪ್ರಣಾಳಿಕೆಯನ್ನು ಮುಂದಿಟ್ಟು ಈಡೇರಿಸಿದ ಭರವಸೆಗಳ ಬಗ್ಗೆ ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ಸಿದ್ಧ ಇದ್ದೀರಾ? ನಿಮ್ಮದೇ ಸ್ಥಳ, ನಿಮ್ಮದೇ ಸಮಯ, ಉತ್ತರಕ್ಕಾಗಿ ಕಾಯುತ್ತಿರುವೆ.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಮೂರುವರೆ ವರ್ಷಗಳ ಅಧಿಕಾರವಧಿಯಲ್ಲಿ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸವುದರಲ್ಲಿಯೇ ಕಳೆದುಹೋಯಿತು ಎಂದು ನರೇಂದ್ರ ಮೋದಿಯವರು ನೊಂದುಕೊಂಡಿದ್ದಾರೆ.
ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು.

ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಟ್ರಿಪಲ್ ಎಂಜಿನ್ ಸರ್ಕಾರ. ಒಂದು ರಾಜ್ಯದಲ್ಲಿ, ಇನ್ನೊಂದು ದೆಹಲಿಯಲ್ಲಿ ಮತ್ತೊಂದು ನಾಗಪುರದಲ್ಲಿ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಮತ್ತು ಸಚಿವರ ವರೆಗೆ ಎಲ್ಲರೂ ನಾಗಪುರದ ಗೊಂಬೆಯಾಟದವರ ಕೈಯಲ್ಲಿರುವ ಗೊಂಬೆಗಳು ಅಷ್ಟೆ. ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರ್.ಎಸ್.ಎಸ್ ನದ್ದು.

ಡಬಲ್ ಎಂಜಿನ ಸರ್ಕಾರ ಇದ್ದರೂ
ಅರ್ಧ ಕರ್ನಾಟಕ ನೆರೆನೀರಿನಲ್ಲಿ ಮುಳುಗಿರುವಾಗ ನೆರವು ಹರಿದುಬರಲಿಲ್ಲ. ಕೇಂದ್ರಕ್ಕೆ ಕೊಟ್ಟ ಒಂದು ರೂಪಾಯಿಯಲ್ಲಿ ವಾಪಸ್ ರಾಜ್ಯಕ್ಕೆ ಬಂದದ್ದು ಕೇವಲ 16ಪೈಸೆ.
ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿಪ್ರದೇಶಕ್ಕೆ ಅತಿಕ್ರಮಣ ಮಾಡಿದರೂ ಮಧ್ಯೆ ಪ್ರವೇಶ ಮಾಡಲಿಲ್ಲ. ಇಂಥ ಡಬ್ಬಲ್ ಇಂಜಿನ್ ಸರ್ಕಾರ ಯಾಕೆ ಬೇಕಿದೆ?

ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದ ಕೆಲವು ಶಬ್ದಗಳನ್ನು ತಪ್ಪುತಪ್ಪಾಗಿಯಾದರೂ ಆಡುತ್ತಿರುವುದು ಸ್ವಾಗತಾರ್ಹ. ಆದರೆ ಈ ನಾಟಕದ ಮಾತುಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಮಾಡಿರುವ ಅನ್ಯಾಯವನ್ನು ಮುಚ್ಚಿಡಲಾಗದು. ನಿಜವಾದ ಕನ್ನಡಿಗನಾಗುವುದೆಂದರೆ ನಾಡಭಾಷೆ, ನಾಡಗೀತೆ ಮತ್ತು ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ ನೀವು ನಿಜವಾದ ಕನ್ನಡಿಗರಾಗುವಿರಾ ಮೋದಿಯವರೇ?

ಭಯೋತ್ಪಾದನೆ ತಡೆಯಲು ಕಾಂಗ್ರೆಸ್ ಸರ್ಕಾರ ಸೋತಿತ್ತು ಎಂದು ಹೇಳಿರುವ ಪ್ರಧಾನಿ ಮೋದಿಯವರೇ,
ಭಯೋತ್ಪಾದನೆಯನ್ನು ದಿಟ್ಟತನದಿಂದ ಎದುರಿಸಿ ಹುತಾತ್ಮರಾದ ಇಬ್ಬರು ಪ್ರಧಾನಿಗಳು ಯಾವ ಪಕ್ಷದವರು ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ ನೋಡಿ, ಉತ್ತರ ಸಿಗಬಹುದು.

ಕಳೆದ ಕೆಲವು ದಿನಗಳಿಂದ ಇಡೀ ಮಣಿಪುರ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಆರಾಮಾಗಿದ್ದಾರೆ, “ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದನಂತೆ”, ಹಾಗಾಯಿತು ನಿಮ್ಮ ಕತೆ. ಚೀನಾದ ಗಡಿ ಅತಿಕ್ರಮಣವನ್ನು ಹಿಮ್ಮೆಟ್ಟಿಸಲಾಗಲಿಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಲಾಗಲಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿದೆ ನರೇಂದ್ರ ಮೋದಿಯವರೇ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending