ದಿನದ ಸುದ್ದಿ
ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ನಿಮ್ಮದೇ ಸ್ಥಳ, ನಿಮ್ಮದೇ ಸಮಯ : ಮೋದಿಗೆ ಸಿದ್ದು ಓಪನ್ ಚಾಲೆಂಜ್
ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮಾಡಿರುವ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ.
ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು.
ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಯ ಪ್ರಣಾಳಿಕೆಯನ್ನು ಸಂಕಲ್ಪಪತ್ರ ಎಂದು ಬಣ್ಣಿಸಿದ್ದಾರೆ.
2018ರ ತನ್ನ ಪ್ರಣಾಳಿಕೆಯ ಶೇಕಡಾ 90ರಷ್ಟು ಭರವಸೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯ 165 ಭರವಸೆಗಳಲ್ಲಿ 158 ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ನಿಮ್ಮ ಸಂಕಲ್ಪ ಪ್ರಾಮಾಣಿಕವಾದುದಾಗಿದ್ದರೆ 2013ರ ನಮ್ಮ ಪ್ರಣಾಳಿಕೆ ಮತ್ತು 2018ರ ನಿಮ್ಮ ಪ್ರಣಾಳಿಕೆಯನ್ನು ಮುಂದಿಟ್ಟು ಈಡೇರಿಸಿದ ಭರವಸೆಗಳ ಬಗ್ಗೆ ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ಸಿದ್ಧ ಇದ್ದೀರಾ? ನಿಮ್ಮದೇ ಸ್ಥಳ, ನಿಮ್ಮದೇ ಸಮಯ, ಉತ್ತರಕ್ಕಾಗಿ ಕಾಯುತ್ತಿರುವೆ.
ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಮೂರುವರೆ ವರ್ಷಗಳ ಅಧಿಕಾರವಧಿಯಲ್ಲಿ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸವುದರಲ್ಲಿಯೇ ಕಳೆದುಹೋಯಿತು ಎಂದು ನರೇಂದ್ರ ಮೋದಿಯವರು ನೊಂದುಕೊಂಡಿದ್ದಾರೆ.
ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು.
ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಟ್ರಿಪಲ್ ಎಂಜಿನ್ ಸರ್ಕಾರ. ಒಂದು ರಾಜ್ಯದಲ್ಲಿ, ಇನ್ನೊಂದು ದೆಹಲಿಯಲ್ಲಿ ಮತ್ತೊಂದು ನಾಗಪುರದಲ್ಲಿ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಮತ್ತು ಸಚಿವರ ವರೆಗೆ ಎಲ್ಲರೂ ನಾಗಪುರದ ಗೊಂಬೆಯಾಟದವರ ಕೈಯಲ್ಲಿರುವ ಗೊಂಬೆಗಳು ಅಷ್ಟೆ. ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರ್.ಎಸ್.ಎಸ್ ನದ್ದು.
ಡಬಲ್ ಎಂಜಿನ ಸರ್ಕಾರ ಇದ್ದರೂ
ಅರ್ಧ ಕರ್ನಾಟಕ ನೆರೆನೀರಿನಲ್ಲಿ ಮುಳುಗಿರುವಾಗ ನೆರವು ಹರಿದುಬರಲಿಲ್ಲ. ಕೇಂದ್ರಕ್ಕೆ ಕೊಟ್ಟ ಒಂದು ರೂಪಾಯಿಯಲ್ಲಿ ವಾಪಸ್ ರಾಜ್ಯಕ್ಕೆ ಬಂದದ್ದು ಕೇವಲ 16ಪೈಸೆ.
ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿಪ್ರದೇಶಕ್ಕೆ ಅತಿಕ್ರಮಣ ಮಾಡಿದರೂ ಮಧ್ಯೆ ಪ್ರವೇಶ ಮಾಡಲಿಲ್ಲ. ಇಂಥ ಡಬ್ಬಲ್ ಇಂಜಿನ್ ಸರ್ಕಾರ ಯಾಕೆ ಬೇಕಿದೆ?
ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದ ಕೆಲವು ಶಬ್ದಗಳನ್ನು ತಪ್ಪುತಪ್ಪಾಗಿಯಾದರೂ ಆಡುತ್ತಿರುವುದು ಸ್ವಾಗತಾರ್ಹ. ಆದರೆ ಈ ನಾಟಕದ ಮಾತುಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಮಾಡಿರುವ ಅನ್ಯಾಯವನ್ನು ಮುಚ್ಚಿಡಲಾಗದು. ನಿಜವಾದ ಕನ್ನಡಿಗನಾಗುವುದೆಂದರೆ ನಾಡಭಾಷೆ, ನಾಡಗೀತೆ ಮತ್ತು ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ ನೀವು ನಿಜವಾದ ಕನ್ನಡಿಗರಾಗುವಿರಾ ಮೋದಿಯವರೇ?
ಭಯೋತ್ಪಾದನೆ ತಡೆಯಲು ಕಾಂಗ್ರೆಸ್ ಸರ್ಕಾರ ಸೋತಿತ್ತು ಎಂದು ಹೇಳಿರುವ ಪ್ರಧಾನಿ ಮೋದಿಯವರೇ,
ಭಯೋತ್ಪಾದನೆಯನ್ನು ದಿಟ್ಟತನದಿಂದ ಎದುರಿಸಿ ಹುತಾತ್ಮರಾದ ಇಬ್ಬರು ಪ್ರಧಾನಿಗಳು ಯಾವ ಪಕ್ಷದವರು ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ ನೋಡಿ, ಉತ್ತರ ಸಿಗಬಹುದು.
ಕಳೆದ ಕೆಲವು ದಿನಗಳಿಂದ ಇಡೀ ಮಣಿಪುರ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಆರಾಮಾಗಿದ್ದಾರೆ, “ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದನಂತೆ”, ಹಾಗಾಯಿತು ನಿಮ್ಮ ಕತೆ. ಚೀನಾದ ಗಡಿ ಅತಿಕ್ರಮಣವನ್ನು ಹಿಮ್ಮೆಟ್ಟಿಸಲಾಗಲಿಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಲಾಗಲಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿದೆ ನರೇಂದ್ರ ಮೋದಿಯವರೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ.
ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು. 5 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ, 6ನೇ ಹಂತದ 58 ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡ 57.70 ರಷ್ಟು ಮತದಾನವಾಗಿದೆ.
ಬಿಹಾರದಲ್ಲಿ ಶೇಕಡ 52.24, ಜಾರ್ಖಂಡ್ನಲ್ಲಿ ಶೇಕಡ 61.41, ಹರ್ಯಾಣzಲ್ಲಿ ಶೇಕಡ 55.93, ಒಡಿಶಾದಲ್ಲಿ ಶೇಕಡ 59.60, ಉತ್ತರಪ್ರದೇಶದಲ್ಲಿ 52.02 ಮತ್ತು ಪಶ್ಚಿಮಬಂಗಾಳದಲ್ಲಿ 77.99, ದೆಹಲಿಯಲ್ಲಿ 53.73 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 51.35ರಷ್ಟು ಮತದಾನವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ
ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಆದಿಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ದೂರಿನ ಬೆನ್ನಲ್ಲೇ ಆದಿಲ್ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.
ಕರೆತಂದ ಕೆಲವೇ ನಿಮಿಷದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಆದಿಲ್ ಸಾವು ಬೆನ್ನಲ್ಲೇ ರೊಚ್ಚಿಗೆದ್ದ ಜನರು, ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
- ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
- ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
- ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್ಐಎ ತಿಳಿಸಿದೆ.
- ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್ನ ಬುಸಾನನ್ ಆಂಗ್ಬಾಮ್ರುಂಗ್ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
- ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ
-
ದಿನದ ಸುದ್ದಿ6 days ago
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
-
ದಿನದ ಸುದ್ದಿ7 days ago
ಕವಿತೆ | ಏಜಾಕ್ಸ್ ಸಿಂದೂ ನೆಲದಲಿ ಪ್ರವೇಶಿಸಿದ ಪ್ರೇತ..!
-
ಕ್ರೀಡೆ6 days ago
ಬೆಳಗಿನ ಸುದ್ದಿ ಮುಖ್ಯಾಂಶಗಳು
-
ದಿನದ ಸುದ್ದಿ7 days ago
ಐದನೇ ಹಂತದ ಲೋಕಸಭಾ ಚುನಾವಣೆ; ನಾಳೆ ಮತದಾನ
-
ದಿನದ ಸುದ್ದಿ7 days ago
ಲೋಕಸಭೆ ಚುನಾವಣೆ | ಆರನೇ ಹಂತ ; ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ಪರಿಶಿಷ್ಟ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಹೆಚ್ಚಳ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ