ದಿನದ ಸುದ್ದಿ
ರಾಜ್ಯ ಸರಕಾರಿ ನೌಕರರಿಗೆ 2022 ಕ್ಕೆ ಪರಿಷ್ಕೃತ ವೇತನ ಕೊಡಿಸಲು ಹಾಗೂ ಎಪಿಎಸ್ ರದ್ದುಗೊಳಿಸಲು ಬದ್ಧ; ಅಗತ್ಯಬಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ: ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ
ಸುದ್ದಿದಿನ,ಧಾರವಾಡ : ಕರ್ನಾಟಕ ರಾಜ್ಯ ಸರಕಾರದಿಂದ 2022 ರ ಆರಂಭದಲ್ಲಿ ವೇತನ ಆಯೋಗದ ಶಿಫಾರಸ್ಸು ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಲು ಮತ್ತು ನೂತನ ಪಿಂಚಣಿ (ಎನ್.ಪಿ.ಎಸ್) ಯೋಜನೆ ರದ್ದುಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಿ ಕ್ರಮಜರುಗಿಸಲು ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಅವರು ಇಂದು ಮಧ್ಯಾಹ್ನ ರಾಜ್ಯ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದಿರುವ ಜಿಲ್ಲೆಯ ಸರಕಾರಿ ನೌಕರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ 2020-21 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ, ಮಾತನಾಡಿದರು.
ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ ಹೊಗಲಾಡಿಸಲು ವೇತನ ಆಯೋಗ ಪರಿಷ್ಕೃತ ವೇತನ ನೀಡಲು ಶಿಪಾರಸ್ಸು ಮಾಡಿದೆ. ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರು ಪಡೆಯುತ್ತಿರುವ ವೇತನಕ್ಕಿಂತ ನಮ್ಮ ರಾಜ್ಯ ಸರಕಾರಿ ನೌಕರರಿಗೆ ಕಡಿಮೆ ವೇತನವಿದೆ.
ಪರಿಷ್ಕೃತ ವೇತನ ಜಾರಿಗೊಳಿಸಲು ಸರಕಾರಕ್ಕೆ ಸಂಘದಿಂದ ಹಲವು ಬಾರಿ ಮನವಿ ಸಲ್ಲಿಸಿ, ಒತ್ತಾಯಿಸಲಾಗಿದೆ. ಸರಕಾರ ಪರೀಶಿಲಿಸಿ, ಜಾರಿಗೊಳಿಸುವ ಭರವಸೆ ನೀಡುತ್ತಾ ಬರುತ್ತಿದೆ. ಆದ್ದರಿಂದ ಸಂಘವು ವೇತನ ಆಯೋಗದ ಶಿಫಾರಸುಗಳನ್ನು ಮತ್ತು ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರ ವೇತನ ಕುರಿತು ಅಧ್ಯಯನ ಮಾಡಿ ವರದಿಸಲ್ಲಿಸಲು ತಜ್ಞರ ಸಮಿತಿ ರಚಿಸಿದ್ದು, ಸದ್ಯದಲ್ಲೆ ಆ ಸಮಿತಿ ವರದಿ ನೀಡಲಿದೆ.
ರಾಜ್ಯ ಸರಕಾರ ಬರುವ 2022 ರ ಆರಂಭದಲ್ಲಿ ಪರಿಷ್ಕೃತ ವೇತನ ನೀಡದಿದ್ದಲ್ಲಿ ರಾಜ್ಯದಾದ್ಯಂತ ಸಂಘವು ಉಗ್ರ ಹೋರಾಟ ಮಾಡಲು ನಿರ್ಧರಿಸಿದೆ. ಈ ಕುರಿತು ಬರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ, ಹೋರಾಟದ ರೂಪುರೇμÉಗಳನ್ನು ನಿರ್ಧರಿಸಲಾಗುತ್ತಿದೆ ಎಂದು ಅವರು ಹೇಳಿದರು.
ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯ ನೌಕರರ ಸಂಘವು ಸಲ್ಲಿಸಿದ್ದ ಬಹುತೇಕ ಬೇಡಿಕೆಗಳನ್ನು ಯಾವುದೇ ಹೊರಾಟಗಳಿಗೆ ಆಸ್ಪದವಿಲ್ಲದಂತೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಈಡೆರಿಸಿದೆ.ಕೋವಿಡ್ದಂತ ವಿಷಮ ಪರಿಸ್ಥಿತಿಯಲ್ಲಿಯೂ ಯಾವುದೇ ರೀತಿಯಲ್ಲಿ ವೇತನ ಕಡಿತಗೊಳಿಸದೆ ನೌಕರರ ವಿಶ್ವಾಸ ಗಳಿಸಿದೆ. ಆರೋಗ್ಯ ಯೋಜನೆ, ಹೆಣ್ಣುಮಕ್ಕಳಿಗೆ 6 ತಿಂಗಳ ವೇತನ ಸಹಿತ ರಜೆ, ಬಾಕಿ ಉಳಿದಿದ್ದ ಅರಿಯರ್ಸ್ ಹಣ ಬಿಡುಗಡೆ, ಗಳಿಕೆ ರಜೆ ನಗದೀಕರಣಕ್ಕೆ ಅವಕಾಶ, ಕೋವಿಡ್ ನಿಂದ ಉಂಟಾದ ನೌಕರನ ಸಾವಿಗೆ ಪರಿಹಾರಧನ ಹೀಗೆ ಹತ್ತು ಹಲವು ಯೋಜನೆಗಳನ್ನು ರಾಜ್ಯ ಸರಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರದಿಂದ ಸಂಘವು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯು ತಾರತಮ್ಯದಿಂದ ಕೂಡಿದ್ದು, ಇದರಿಂದಾಗಿ 2006 ರಿಂದ ನೇಮಕವಾದ ಎಲ್ಲ ನೌಕರಿಗೆ ಅನ್ಯಾಯವಾಗುತ್ತದೆ. ಎನ್.ಪಿ.ಎಸ್. ರದ್ದುಗೊಳಿಸುವುದು ನಮ್ಮ ನೌಕರರ ಬಹುದಿನಗಳ ಬೇಡಿಕೆಯಾಗಿದ್ದು, ಸಂಘವು ಈ ಕುರಿತು ಉಗ್ರ ಹೋರಾಟ ಮಾಡಲು ಸಿದ್ದತೆ ನಡೆಸಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.
ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಕಾರ್ಯದಲ್ಲಿ ತೊಡಗಿದ್ದ ನಮ್ಮ ಅನೇಕ ಸರಕಾರಿ ನೌಕರರರು ತಮ್ಮ ಪ್ರಾಣ ಕಳೆದುಕೊಂಡುದ್ದಾರೆ. ಅನೇಕ ಅಧಿಕಾರಿ, ಸಿಬ್ಬಂದಿಗಳು ರಾತ್ರಿ,ಹಗಲು ಎನ್ನದೆ ಕೋವಿಡ್ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸಿದ್ದರಿಂದ ಅದು ನಿಯಂತ್ರಣವಾಗಿದೆ. ಸರಕಾರದ ಆದೇಶ, ಯೋಜನೆಗಳನ್ಬು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಭಾವನೆ, ಗೌರವ ಮೂಡಿಸುತ್ತಾರೆ. ಆದ್ದರಿಂದ ಸರಕಾರಗಳು ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮುಖ್ಯ ಅತಿಥಿಗಳಾಗಿದ್ದ ಶಾಸಕ ಅಮೃತ ದೇಸಾಯಿ ಅವರು ಮಾತನಾಡಿ, ಕಾರ್ಯಾಂಗ ಮತ್ತು ಶಾಸಕಾಂಗ ಎರಡು ಎತ್ತುಗಳಿದ್ದಂತೆ. ಅವುಗಳು ಜೊತೆಯಾಗಿ, ಹಿತವಾಗಿ ಕೂಡಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ತಮ್ಮ ಶಾಸಕತ್ವ ಅವಧಿಯಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸಿ, ಸರಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಅವರ ಕಾರ್ಯದಿಂದ ಸರಕಾರ ಮತ್ತು ತಮ್ಮ ಬಗ್ಗೆ ಜನರಲ್ಲಿ ವಿಶ್ವಾಸ, ಗೌರವ ಇನ್ನಷ್ಟು ಹೆಚ್ಚಿದೆ. ನಾನು ಜನತೆಯ ಪರವಾಗಿ ಎಲ್ಲ ಸರಕಾರಿ ನೌಕರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಪ್ರೇರಣಾ ನುಡಿಗಳನ್ನಾಡಿದ ಉಪವಿಭಾಗಾಧಿಕಾರಿ ಡಾ.ಗೋಪಶಲ ಕೃಷ್ಣ ಬಿ., ಸಾಧನೆಗೆ ಛಲ ಬೇಕು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ, ಓದಿನ ಬಗ್ಗೆ ಆಸಕ್ತಿ, ವಿಷಯಗಳನ್ನು ತಿಳಿಯುವ ಕುತೂಹಲ ಮತ್ತು ಆಳವಾದ ಅಧ್ಯಯನ ಅಳವಡಿಸಿಕೊಳ್ಳಬೇಕು. ಆಶಾಭಾವನೆಯಿಂದ ಕಷ್ಟಪಟ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಎಲ್ಲವೂ ಸಾಧ್ಯ. ಪ್ರಾಮಾಣಿಕವಾಗಿ ಓದಿ ಪ್ರಯತ್ನ ಪಡುವವರಿಗೆ ಐಎಎಸ್, ಐಪಿಎಸ್, ಕೆಎಎಸ್ ಯಾವುದು ಕಷ್ಟವಲ್ಲ. ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂದು ಅವರು ಹೇಳಿದರು.
ಎಐಪಿಟಿಎಪ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಅವರು ಮಾತನಾಡಿ, ಸಂಘದ ಬೆಳವಣಿಗೆ, ಕಾರ್ಯಚಟುವಟಿಕೆ ಮತ್ತು ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಘಟಕದ ಖಜಾಂಚಿ ಶ್ರೀನಿವಾಸ ಆರ್, ರುದ್ರಪ್ಪ, ಮತ್ತು ಜಿಲ್ಲಾ ಖಜಾಂಚಿ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ವಿವಿಧ ತಾಲೂಕಾ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ, ವಿ.ಎಪ್.ಚುಳಕಿ, ಎ.ಬಿ.ಕೊಪ್ಪದ, ಎಸ್.ಎನ್.ಅರಳಿಕಟ್ಟಿ, ಆರ್.ಎಮ್.ಹೊಲ್ತಿಕೋಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.
ಸಂಘದ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ಅವರು ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಸಂಘದ ಉಪಾಧ್ಯಕ್ಷ ಎಪ್.ವಿ.ಮಂಜಣ್ಣವರ ಅವರು ಪಿಯುಸಿ ಪರೀಕೆಯ ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಅವರ ಸಾಧನೆಯನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು.
ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ ಸ್ವಾಗತಿಸಿದರು. ಗೌರವಉಪಾಧ್ಯಕ್ಷ ಆರ್.ಬಿ.ಲಿಂಗದಾಳ ಹಾಗೂ ಶಾಂತಾ ಶೀಲವಂತರ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ ವಂದಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ,ಜಿಲ್ಲಾ ಮತ್ಯು ತಾಲೂಕಾ ಘಟಕಗಳ ಪದಾಧಿಕಾರಿಗಳು, ಸರಕಾರಿ ನೌಕರರು, ಸಾಧಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


