ಕ್ರೀಡೆ
ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ
ಸುದ್ದಿದಿನ ಡೆಸ್ಕ್ : ಭಾರತದ ವೇಟ್ ಲಿಫ್ಟರ್ ಅಚಿಂತಾ ಶೆಯಿಲಿ ( Achinta Sheuli – Indian weightlifter) ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದ (Birmingham 2022 Commonwealth Games) ಪುರುಷರ 73 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ (Gold Medal) ಗೆದ್ದಿದ್ದಾರೆ.
20 ವರ್ಷದ ಅಚಿಂತಾ ಸ್ನ್ಯಾಚ್ ವಿಭಾಗದಲ್ಲಿ143 ಕೆ.ಜಿ. ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ170 ಕೆ.ಜಿ ಸೇರಿದಂತೆ ಒಟ್ಟಾರೆ 313 ಕೆ.ಜಿ ಭಾರ ಎತ್ತುವ ಮೂಲಕ ಸ್ವರ್ಣ ಪದಕ ಜಯಿಸಿದ್ದಾರೆ. ಭಾರತಕ್ಕೆ ಲಭಿಸಿರುವ ಆರು ಪದಕಗಳು ವೇಟ್ ಲಿಫ್ಟಿಂಗ್ನಿಂದಲೇ ಬಂದಿರುವುದು ವಿಶೇಷವಾಗಿದೆ.
ಇದನ್ನೂ ಓದಿ | ಹರಿಯಾಣದ ಚಾಂಡಿಮಂದಿರದಲ್ಲಿ ಇಂದಿನಿಂದ ಇದೇ 20ರವರೆಗೆ ಭಾರತ – ವಿಯೆಟ್ನಾಂ ಸೇನಾ ಸಮರಾಭ್ಯಾಸ
ಮೀರಾಬಾಯಿ ಚಾನು ಮತ್ತು ಜೆರೆಮಿ ಲಾಲ್ರಿನ್ನುಂಗಾ ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದರೆ, ಬಿಂದ್ಯಾರಾಣಿ ಮತ್ತು ಸಂಕೇತ್ ಸರ್ಗರ್ ಬೆಳ್ಳಿ ಪದಕ ಹಾಗೂ ಗುರುರಾಜ ಪೂಜಾರಿ ಕಂಚಿನ ಪದಕ ಜಯಿಸಿದ್ದಾರೆ. ಶೆಯಿಲಿ ಚಿನ್ನ ಗೆಲ್ಲುವುದರೊಂದಿಗೆ ಭಾರತ ಇದುವೆರೆಗೆ 3 ಚಿನ್ನ, 2ಬೆಳ್ಳಿ ಮತ್ತು 1 ಕಂಚು ಸೇರಿ ಆರು ಪದಕ ಗೆದ್ದಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಬ್ಯಾಡ್ಮಿಂಟನ್ ತಂಡವು ಮಿಶ್ರ ತಂಡ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
Delighted that the talented Achinta Sheuli has won a Gold Medal at the Commonwealth Games. He is known for his calm nature and tenacity. He has worked very hard for this special achievement. My best wishes to him for his future endeavours. pic.twitter.com/cIWATg18Ce
— Narendra Modi (@narendramodi) August 1, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


