Connect with us

ದಿನದ ಸುದ್ದಿ

ಐತಿಹಾಸಿಕ ಚರಿತ್ರೆಯುಳ್ಳ ನಲ್ಕುದುರೆ ಗ್ರಾಮದ ಸಮುದಾಯ ಭವನ ಮೇ 15 ರಂದು ಲೋಕಾರ್ಪಣೆ

Published

on

  • ಹಾಲೇಶ್ ಹೆಚ್. ಎಸ್. ಹಂಚಿನಮನೆ ನಲ್ಕುದುರೆ

ಮೇ 15 ರಂದು ನೆರವೇರಲಿರುವ ಚನ್ನಗಿರಿ ತಾಲ್ಲೂಕಿನ ನಲ್ಕುದುರೆ ಗ್ರಾಮದ ಶ್ರೀ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಲೇಖನ.


ಭದ್ರಾ ಅಚ್ಚುಕಟ್ಟು ಪ್ರದೇಶ, ಅರೆ ಮಲೆನಾಡಿನ ಬಯಲು ಸೀಮೆ, ಸಮಶೀತೋಷ್ಣ ವಲಯ, ಭತ್ತ ಗದ್ದೆಗಳ ಸಾಲು, ಕಂಗೊಳಿಸುವ ಆಡಿಕೆ – ತೆಂಗಿನ ಬೀಡು, ಭದ್ರಾ ನದಿಯ ಹುಸಿರಾದ ಐತಿಹಾಸಿಕ ಚರಿತ್ರೆಯುಳ್ಳ ಗ್ರಾಮ ಚನ್ನಗಿರಿ ತಾಲೂಕಿನ ನಲ್ಕುದುರೆ. ಅಗ್ರಹಾರ ಕೇಂದ್ರವಾಗಿದ್ದ ಇಲ್ಲಿನ ಪುರಾತನ ದೇವಾಲಯಗಳು, ಶಾಸನ, ವೀರಗಲ್ಲು, ಮಾಸ್ತಿಗಲ್ಲುಗಳು ಇಂದಿಗೂ ಸಂಶೊಧನೆಗೆ ಗ್ರಾಸವಾಗಿವೆ.

ಈ ಗ್ರಾಮದಲ್ಲಿ ಬಹುತೇಕ ಸೌಲಭ್ಯಗಳಿದ್ದು, ಮಾನವ ಕಲ್ಯಾಣಾರ್ಥ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನ ಇದೇ ಮೇ 15 ರಂದು ಲೋಕಾರ್ಪಣೆ ಯಾಗಲಿದೆ.

ನಲ್ಕುದುರೆ ಗ್ರಾಮ ಪಂಚಾಯತಿಗೆ ಗೋಮಾಳ, ನಲ್ಕುದುರೆ ಕ್ಯಾಂಪ್ ಕೂಡ ಸೇರಿದ್ದು, ಸುಮಾರು ಮೂರರಿಂದ ನಾಲ್ಕು ಸಾವಿರ ಸಂಖ್ಯೆಯ ಈ ಗ್ರಾಮದ ಜನತೆ ಪ್ರೀತಿ, ಶಾಂತಿ, ಸಹಕಾರ, ಅನ್ಯೋನ್ಯತೆಯ ಬದುಕಿಗೆ ಮಾದರಿಯಾಗಿದ್ದಾರೆ. ಕಾಯಕವೇ ಕೈಲಾಸವೆಂದು ಭಾವಿಸಿ ವೃತ್ತಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಹಿಂದೆ ಗ್ರಾಮದ ಜನತೆ ಮದುವೆ, ಸಭೆ – ಸಮಾರಂಭ ಆಯೋಜನೆಗಾಗಿ ಸುಮಾರು 25 ರಿಂದ 30 ಕಿಲೋಮೀಟರ್ ದೂರ ಹೋಗಬೇಕಿತ್ತು. ಅಲ್ಲದೆ ನಗರದ ಸಮುದಾಯದ ಭವನಗಳಿಗೆ ಅತಿ ಹಣ ಹೊಂದಿಸುವುದು ಬಡವರಿಗೆ, ಸಾಮಾನ್ಯ ವರ್ಗದವರಿಗೆ ಸಾಧ್ಯವಾಗದ ಮಾತಾಗಿತ್ತು.

ವಿವಿಧ ಬಗೆಯ ಕಾರ್ಮಿಕರ ಕೊರತೆಯಿಂದ ಹಳ್ಳಿಯಲ್ಲಿ ಸಮಾರಂಭ ಮಾಡುವುದು ಯುದ್ಧಕ್ಕೆ ಸಿದ್ಧತೆ ಮಾಡಿಕೊಂಡಂತಾಗುತಿತ್ತು. ಇದನ್ನರಿತ ಗ್ರಾಮದ ಜನತೆ ಸಾಂದರ್ಭಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತ ಕೊನೆಗೊಮ್ಮೆ ಅನೌಪಚಾರಿಕವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಭೆ ಕರೆದು ಸಮುದಾಯದ ಭವನ ನಿರ್ಮಾಣ ಮಾಡಲೇಬೇಕೆಂದು ತೀರ್ಮಾನಿಸಿ, ಕೈಲಾದ ಹಣ ಘೋಷಣೆ ಮಾಡಿದಲ್ಲದೆ ಅದಕ್ಕಾಗಿ ಸಮಿತಿ ರಚನೆ ಮಾಡಿದರು.

ಈ ಸಮಿತಿಯ ಕಾರ್ಯದರ್ಶಿಯಾಗಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಯುತ ಹೆಚ್. ವಿ. ಸಿದ್ದಪ್ಪ ಹಂಚಿನಮನಿ ಇವರನ್ನು ಆಯ್ಕೆ ಮಾಡಲಾಯಿತು. ಇವರ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಹಯೋಗದೊಂದಿಗೆ ದೇಣಿಗೆ ಸಂಗ್ರಹ ಮೂಲಕ ಸಂಪೂರ್ಣಗೊಂಡು ಸಮಾರಂಭಗಳ ಆಯೋಜನೆಗೆ ಇದೀಗ ಭವನ ಸಜ್ಜಾಗಿ ನಿಂತಿದೆ.

ಈ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಯುತರು ಹಾಕಿದ ನಿರಂತರ ಶ್ರಮ, ಪರಿಶ್ರಮ, ಸಹಕಾರ, ವಿಶ್ವಾಸ ಹಾಗೂ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಗ್ರಾಮಸ್ಥರು, ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತರು, ಮನೆ ದೇವರು ಎಂದು ಪೂಜಿಸುವ ಭಕ್ತಾದಿಗಳು, ಬೇರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮದ ನೌಕರರು, ಗ್ರಾಮ ಪಂಚಾಯಿತಿಯ ಸದಸ್ಯರು, ಅಧ್ಯಕ್ಷರು, ತಾಲೂಕು ಪಂಚಾಯತ್ ಸದಸ್ಯರು, ವಿಧಾನ ಪರಿಷತ್, ವಿಧಾನಸಭೆ , ಲೋಕ ಸಭೆಯ ಹಾಲಿ ಹಾಗೂ ಮಾಜಿ ಮಂತ್ರಿಗಳು, ಇತ್ಯಾದಿ ಎಲ್ಲರ ತನು ಮನ ಧನ ಸಹಕಾರದೊಂದಿಗೆ ನಿರ್ಮಾಣವಾದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ಲೋಕಾರ್ಪಣೆಯಾಗುತ್ತಿದೆ.

ಐತಿಹಾಸಿಕ ಹಿನ್ನೆಲೆಯ ಗ್ರಾಮ

ಈ ಗ್ರಾಮದಲ್ಲಿ ಸಾವಿರ ವರ್ಷಗಳ ಹಿಂದೆ ನಿರ್ಮಾಣವಾದ ರಾಷ್ಟ್ರಕೂಟ ಮತ್ತು ಚಾಲುಕ್ಯ ಶೈಲಿಯ ಪುರಾತನ ದೇವಾಲಯಗಳು, ವೀರಗಲ್ಲುಗಳು, ಮಾಸ್ತಿ ಕಲ್ಲುಗಳು, ಹೆಜ್ಜೆಗೊಂದು ದೇವಸ್ಥಾನ, ಅಗ್ರಹಾರ ಕೇಂದ್ರ ಹಾಗೂ 1802 ರಲ್ಲಿ ಲೂಯಿಸ್ ರೈಸ್ ಗುರುತು ಮಾಡಿರುವ ಬ್ರಹ್ಮಶ್ವರ್ ದೇವಾಲಯವಿದೆ. ಶಿವಲಿಂಗ, ನಂದಿ, ಭೈರವ, ಕೇಶವ, ನಾಗ ಮೂರ್ತಿಗಳು ಕಲೆಗೆ ಹೆಸರಾಗಿವೆ. ಅಲ್ಲದೆ ಈಶ್ವರ ದೇವಸ್ಥಾನದಲ್ಲಿ ಶಾಸನ ಹಳೆಗನ್ನಡದಲ್ಲಿದ್ದು ಇದರ ಮಾಹಿತಿ ಪರಿಪೂರ್ಣ ಪ್ರಕಟಿಸಬೇಕಾಗಿದೆ. ಸುಮಾರು 300 ವರ್ಷ ಇತಿಹಾಸ ಉಳ್ಳ ವೀರಭದ್ರಸ್ವಾಮಿಯ ದೇವಾಲಯ ಇತ್ತೀಚಿಗೆ ಜೀರ್ಣೋದ್ದಾರವಾಗಿದೆ. ವಿದ್ಯಾರಣ್ಯರು ತಾಮ್ರ ಪತ್ರ ನೀಡಿರುವ ಉಲ್ಲೇಖವಿದೆ.

ಶಿಥಿಲಾವಸ್ಥೆಯಲ್ಲಿರುವ ಇಲ್ಲಿನ ಕೆಲ ದೇವಸ್ಥಾನಗಳನ್ನು ಜೀರ್ಣೋದ್ದಾರ ಮಾಡಿ ಉಳಿಸುವ ಜೊತೆ ಮುಂದಿನ ಜನಾಂಗಕ್ಕೆ ಸ್ಥಳೀಯ ಇತಿಹಾಸದ ಅಂಶಗಳನ್ನು ತಿಳಿಸಬೇಕಾಗಿದೆ.

ನೀರಿನ ಹೊಂಡಗಳು

ಗ್ರಾಮದಲ್ಲಿ ಲಕ್ಕಣ್ಣನ ಕಟ್ಟೆ ಮತ್ತು ಕಲ್ಲೇಶ್ವರ ಹೊಂಡವಿದ್ದು, ಕೆರೆ ಮತ್ತು ಭದ್ರ ಕಾಲುವೆಗಳು ಕೃಷಿ, ವ್ಯವಸಾಯ ಮಾಡಲು ಅನುಕೂಲಕರ ವಾತಾವರಣವಿದೆ.

ರಾಜಕೀಯ ಛಾಪು

ರಾಜಕೀಯವಾಗಿ ತಮ್ಮದೇ ಆದ ವಿಶಿಷ್ಠ ಛಾಪು ಬಿಟ್ಟು ಹೋಗಿರುವ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ದಿವಂಗತ ಟಿ. ವಿ.ಚಂದ್ರಶೇಖರಪ್ಪನವರು ಹಾಗೂ ಪರಿಸರ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾಗಿದ್ದ ದಿವಂಗತ ಎನ್. ಜಿ ಹಾಲಪ್ಪನವರು ಇದೇ ಊರಿನವರು ಎಂಬುದು ಗ್ರಾಮದ ಹೆಗ್ಗಳಿಕೆ.

ಶಿವಮೊಗ್ಗದಿಂದ ಬೇರ್ಪಟ್ಟ ನಂತರ ನಲ್ಕುದುರೆ ಗ್ರಾಮ ಚನ್ನಗಿರಿ ತಾಲ್ಲೂಕಿನಲ್ಲಿ ಇದ್ದರೂ ಮಾಯಕೊಂಡ ಕ್ಷೇತ್ರಕ್ಕೆ ಸೇರಿದೆ. ಪ್ರಸ್ತುತ ಚನ್ನಗಿರಿ ತಾಲ್ಲೂಕಿಗೂ ಹಾಗೂ ಮಾಯಕೊಂಡಕ್ಕೂ ಕೊನೆಯ ಅಂಚಿನಲ್ಲಿ ಇರುವ ಕಾರಣ ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಗುರಿಯಾಗದೆ ಸರ್ವರಂಗದಲ್ಲೂ ಈ ಗ್ರಾಮ ಅಭಿವೃದ್ಧಿ ಸಾಧಿಸಲು ರಾಜಕೀಯ ಧುರೀಣರು ಹಾಗೂ ಅಧಿಕಾರಿಗಳ ಸಹಾಯ ಸಹಕಾರದ ಹಸ್ತ ತಮ್ಮ ಗ್ರಾಮದ ಜೊತೆ ಸದಾ ಇರಲಿ ಎಂಬುದು ಗ್ರಾಮಸ್ಥರ ಆಶಯ.

(- ಹಾಲೇಶ್ ಹೆಚ್. ಎಸ್. ಹಂಚಿನಮನೆ ನಲ್ಕುದುರೆ
M.NO – 8867702396)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending