ಸಿನಿ ಸುದ್ದಿ
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ದೂರು ದಾಖಲು
ಸುದ್ದಿದಿನ ಡೆಸ್ಕ್ : ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ವೆಂಕಟರಾಜು ಅವರಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಹಿರಿಯ ಪತ್ರಕರ್ತ ಬಿ.ಜಿ.ವೈಕುಂಠರಾಜು ರವರನ್ನ ವೈಯುಕ್ತಿಕವಾಗಿ ತೇಜೋವಧೆ ಮಾಡಿದ ನಿಟ್ಟಿನಲ್ಲಿ ಖಾಸಗಿ ದೂರು ದಾಖಲಾಗಿದ್ದು, 1 ಕೋಟಿಗೆ ಮಾನನಷ್ಟ ಪರಿಹಾರವಾಗಿ 8ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ವೆಂಕಟರಾಜು.
ಬಿ.ಜಿ.ವೈಕುಂಠರಾಜುರವರು ಕರ್ನಾಟಕ ನಾಟಕ ಹಾಗೂ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿದ್ದವರು, ನಾಗತಿಹಳ್ಳಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಪರಮೇಶ್ವರ್ ನಿರ್ದೇಶಿಸಿದ್ದ ಬಿ ಎಲ್ ವೇಣು ರವರ ಸಾಕ್ಷ್ಯಚಿತ್ರ ದಲ್ಲಿ ವೈಯಕ್ತಿಕ ತೇಜೋವಧೆ ಮಾಡಿರೋ ಆರೋಪ ಹಿನ್ನೆಲೆ ದೂರು ದಾಖಲಾಗಿದೆ.
ಸರ್ಕಾರದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರ ಪ್ರಕಟಗೊಂಡಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವೆಂಕಟರಾಜು ಅವರಿಂದ ಖಾಸಗಿ ದೂರು ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401