Connect with us

ರಾಜಕೀಯ

ಸಂವಿಧಾನ ಮತ್ತು ಧರ್ಮ : ಸದ್ಯದ ಅಪವ್ಯಾಖ್ಯಾನ

Published

on

ಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ ಕಷ್ಟಸಾಧ್ಯ ಎಂಬ ಭಾವವನ್ನು ಸಾರ್ವತ್ರಿಕಗೊಳಿಸುವಷ್ಟರ ಮಟ್ಟಿಗೆ ಆ ಸಂಕಟಗಳು ತೀವ್ರವಾಗಿ ಬಾಧಿಸುತ್ತವೆ. ಹೀಗೆ ಸಂಕಟಗೊಳಪಟ್ಟ ವ್ಯಕ್ತಿಗತ ಸಂಕೀರ್ಣತೆ ಸಾಮೂಹಿಕ ಸ್ವರೂಪ ಆವಾಹಿಸಿಕೊಂಡು ಜನಸಮುದಾಯಗಳನ್ನು ದಿಗ್ಮೂಢರನ್ನಾಗಿಸುತ್ತದೆ. ಆಂತರ್ಯದೊಳಗೆ ಮೂಡುವ ಅಸಮಾಧಾನ ಸಹನೆಯನ್ನು ಕಳೆದಿಡುತ್ತದೆ. ಆ ಸಂದರ್ಭದ ಅಸಹನೆಯು ಹಿಂಸೆಯೊಂದಿಗಿನ ದೃಷ್ಟಿಕೋನಗಳನ್ನು ಚಿಗುರಿಸಿಕೊಳ್ಳಲು ನೆರವಾಗುತ್ತದೆ. ಈ ಹಂತದಲ್ಲಿಯೇ ದ್ವಂದ್ವ, ಅಸ್ಪಷ್ಟತೆ, ಅವಿವೇಕತನ, ಅಸಂಬದ್ಧತೆ ಮತ್ತು ಕ್ರೌರ್ಯದ ನಡವಳಿಕೆಗಳು ದೇಶದ ಸಾಮಾಜಿಕ ಅಸ್ಮಿತೆಯನ್ನೇ ಧ್ವಂಸಗೊಳಿಸುತ್ತವೆ. ಭಾರತ ಅಂಥದ್ದೊಂದು ಅಪಾಯಕಾರಿ ಪ್ರವೃತ್ತಿಯ ಮಿತಿಯೊಂದಿಗೆ ಹೆಜ್ಜೆಯಿರಿಸುತ್ತಿದೆ. ಇದನ್ನು ತಿಳಿದುಕೊಂಡು ಸರಿಹಾದಿ ತೋರುವ ದಾರ್ಶನಿಕತೆಯನ್ನು ನಿರೂಪಿಸಬೇಕಾದ ನಾಯಕರಲ್ಲದ ನಾಯಕರೆನ್ನಿಸಿಕೊಂಡವರು ಸಮಸ್ಯಾತ್ಮಕತೆಯನ್ನು ಸ್ಥಾಯಿಯಾಗಿಸಿ ತಮ್ಮ ಅಸ್ತಿತ್ವವನ್ನು ಶಾಶ್ವತಗೊಳಿಸಿಕೊಳ್ಳುವ ಹಂಬಲಗೊಳೊಂದಿಗೇ ಗುರುತಿಸಿಕೊಂಡಿದ್ದಾರೆ.

ಈ ದೇಶವನ್ನು ಕಾಡುತ್ತಿರುವ ಸಮಸ್ಯೆಗಳು ಯಾವುವು ಎಂಬುದು ಅವುಗಳ ವ್ಯತಿರಿಕ್ತ ಪರಿಣಾಮಗಳಿಗೆ ಈಡಾದವರೂ ಸೇರಿದಂತೆ ಹಲವರಿಗೆ ಗೊತ್ತಿದೆ. ಈ ಸಮಸ್ಯೆಗಳ ಮೂಲ ಎಲ್ಲಿಯದು ಎಂಬುದರ ಅರಿವೂ ಇದೆ. ಇಡೀ ದೇಶದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂಥ ಪರಮೋಚ್ಛ ಭ್ರಮೆಯ ವರ್ತುಲಕ್ಕೆ ಸಿಲುಕೊಳ್ಳಬಾರದು ಎಂಬ ಪ್ರಜ್ಞೆಯನ್ನು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಒದಗಿಸಿಕೊಡುವ ನಕಾರಾತ್ಮಕತೆಯ ಅನುಭವವು ಪ್ರತಿಯೊಬ್ಬರಿಗೂ ಆಗುತ್ತಲೇ ಇರುತ್ತದೆ. ಆದರೆ, ಅದನ್ನು ಹಲವರು ಅಭಿವ್ಯಕ್ತಿಸುವುದಿಲ್ಲ. ಬದಲಾವಣೆ ಬಯಸುವ ಚಿಂತಕರು ಮತ್ತು ಜನಸಾಮಾನ್ಯ ವಲಯ ಆ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆ ಅವರು ಮುಕ್ತ ಆಲೋಚನೆಯನ್ನು ಹರಿಬಿಟ್ಟಾಗ ಅದು ಅಪಾಯಕಾರಿ ಎಂದು ತಪ್ಪಾಗಿ ಅರ್ಥೈಸುವ ಜಾಯಮಾನದ ನಡೆಯನ್ನು ರಾಜಕೀಯ ವಲಯ ಈಗೀಗ ನೆಚ್ಚಿಕೊಳ್ಳುತ್ತಿದೆ. ಇಂಥ ನಡೆಯ ಕಾರಣಕ್ಕಾಗಿಯೇ ಸಂವಿಧಾನ ಮತ್ತು ಧರ್ಮ ಪರಸ್ಪರ ಸಂಘರ್ಷಿಸುವ ನೆಲೆಗಳಾಗಿ ಚರ್ಚಿಸಲ್ಪಡುತ್ತಿವೆ. ಇವೆರಡರ ಉದಾತ್ತ ಅರ್ಥವನ್ನು ಒಡೆದು ಸಂಕುಚಿತಗೊಳಿಸಿದ ಅಪವ್ಯಾಖ್ಯಾನವನ್ನೇ ಜನಸಮುದಾಯ ನೆಚ್ಚಿಕೊಳ್ಳುವಂತೆ ಒತ್ತಡ ಹಾಕುತ್ತಿವೆ. ಇದೇ ಬಗೆಯ ಅನುಕೂಲಕರ ಸಮಯಾವಕಾಶವನ್ನು ಕಾಯ್ದುಕುಳಿತಂತೆ ರಾಜಕೀಯ ವಲಯ ತನ್ನ ದಾಳಗಳನ್ನು ಪ್ರಯೋಗಿಸುತ್ತಿದೆ.

ಸದ್ಯದ ವ್ಯತಿರಿಕ್ತ ಸ್ಥಿತಿಗತಿಗಳು ಅತ್ಯಂತ ನಿಖರವಾಗಿ ಬಿಟ್ಟುಕೊಡುತ್ತಿರುವ ಸುಳಿವುಗಳು ಹಲವಿವೆ. ಅವುಗಳಲ್ಲಿ ಧರ್ಮ ಮತ್ತು ದೇವರಿಗೆ ಸಂಬಂಧಿಸಿದಂತೆ ಇರುವ ವ್ಯಕ್ತಿಗತ ಸಂಕುಚಿತತೆಯನ್ನು ಸಾಂಸ್ಥಿಕಗೊಳಿಸಿ ಪ್ರಭಾವವನ್ನು ವ್ಯಾಪಕಗೊಳಿಸುವ ಪ್ರಯತ್ನವೂ ಒಂದು. ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವುದು, ಆಯಾ ಧರ್ಮಗಳವರ ನಂಬಿಕೆಯ ಆವರಣದಲ್ಲಿ ಆದ್ಯತೆ ಪಡೆದಿರುವ ದೇವರುಗಳ ಆರಾಧನೆಯ ಅವಕಾಶಗಳನ್ನು ಸ್ವಾರ್ಥಕ್ಕೆ ತಿರುಗಿಸಿಕೊಳ್ಳುವುದು ಈಗೀಗ ಸಾರ್ವತ್ರಿಕವಾಗಿದೆ. ಸಮಸ್ಯೆಯೊಂದು ವ್ಯಕ್ತಿಯನ್ನು ಭಾಧಿಸುತ್ತಿರುತ್ತದೆ. ವ್ಯಕ್ತಿಗತ, ಕೌಟುಂಬಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯಾತ್ಮಕ ಸಂಕೀರ್ಣತೆಗಳೊಂದಿಗಿನ ವಾಸ್ತವಿಕತೆಯೇ ಆ ಸಮಸ್ಯೆಗೆ ಕಾರಣವಾಗಿರುತ್ತದೆ. ಆದರೆ, ಧರ್ಮ ಮತ್ತು ದೇವರನ್ನು ಅಪವ್ಯಾಖ್ಯಾನಕ್ಕೊಳಪಡಿಸಿ ಆ ಬಗ್ಗೆ ಸಂಕುಚಿತವಾಗಿ ಅರ್ಥೈಸಿ ಭಯಹುಟ್ಟಿಸಲಾಗುತ್ತದೆ. ಹೀಗೆ ಭಯವನ್ನು ಹುಟ್ಟಿಸಿ ಸ್ವಾರ್ಥ ಸಾಧಿಸಿಕೊಳ್ಳುವ ಹಿತಾಸಕ್ತಿಗಳ ಅಸ್ತಿತ್ವದಲ್ಲಿಯೇ ಮಹತ್ವದ ಸುಳಿವನ್ನು ಗೊತ್ತುಮಾಡಿಕೊಳ್ಳಬಹುದು. ಈ ಹಿತಾಸಕ್ತಿಗಳು ಸಮಸ್ಯೆಗಳನ್ನು ಉದ್ದೇಶಪೂರ್ವಕವಾಗಿ ಸ್ಥಾಯಿಯಾಗಿಸಿ ಜನರೊಳಗಿನ ಆಲೋಚಿಸುವ ಶಕ್ತಿಯನ್ನೇ ತಡೆದು ನಿಲ್ಲಿಸುತ್ತವೆ. ಆವರ ಆಲೋಚನೆಯ ಸಾಧ್ಯತೆಗಳನ್ನು ಮೊಟಕುಗೊಳಿಸಿ ಧರ್ಮವಲ್ಲದ ಸಂಗತಿಗಳ ಕಡೆಗೆ ತಿರುಗಿಸುತ್ತವೆ. ಅವರ ಮನಸ್ಸಿನಲ್ಲಿ ದೇವರುಗಳ ಬಗ್ಗೆ ಭಯದ ಭಾವ ಮೂಡಿಸುತ್ತವೆ. ಆರಾಧಿಸದಿದ್ದರೆ ಶಿಕ್ಷೆ ಗ್ಯಾರಂಟಿ, ದೇವರೇ ಮುನಿಸಿಕೊಂಡರೆ ಮುಂದಿದೆ ವ್ಯತಿರಿಕ್ತ ಪರಿಣಾಮ ಎಂಬ ಅತಾರ್ಕಿಕತೆಯನ್ನೇ ಮಂಡಿಸಿ ದಾರಿ ತಪ್ಪಿಸುತ್ತವೆ.

ಮೊದಲೇ ಸಮಸ್ಯೆಗಳ ಮಧ್ಯೆ ನರಳುತ್ತಿರುವವರ ಮುಂದೆ ಧರ್ಮದಲ್ಲಿಲ್ಲದ ಸಂಗತಿಗಳನ್ನು ವೈಭವೀಕರಿಸಿ ಹೇಳಿದರೆ ಸ್ವಾರ್ಥದ ಉದ್ದೇಶಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕಾರ್ಯಸೂಚಿ ಅತ್ಯಂತ ಎಚ್ಚರದಲ್ಲಿ ಯಶಸ್ವಿಯಾಗಿ ನಿರ್ವಹಿಸಲ್ಪಡುತ್ತದೆ. ಹೀಗಾದರೆ ಹೀಗಾಗುತ್ತದೆ ಎಂದು ತಾರ್ಕಿಕವಾಗಿ ಮಾತನಾಡುವವರಂತೆ ನಟಿಸುವವರೇ ರಂಜನಾಮಾಧ್ಯಮೋದ್ಯಮದ ಮೂಲಗಳಾಗುತ್ತಾರೆ. ಸಮಾಜದ ವಿವಿಧ ಜನವರ್ಗಗಳು ಇಂಥವರನ್ನು ಆರಾಧಿಸಿಕೊಂಡೇ ಇದ್ದರೆ ತಮ್ಮ ಬೇಳೆ ಬೇಯಿಸಿಕೊಳ್ಳಬಹುದು ಎಂಬ ರಾಜಕೀಯ ವಲಯದ ನಿರೀಕ್ಷೆಗಳು ಈ ಹಂತದಲ್ಲಿಯೇ ಈಡೇರಿಬಿಡುತ್ತವೆ. ಸಮಸ್ಯೆಯನ್ನು ಶಾಶ್ವತವಾಗಿ ಉಳಿಯುವಂತೆ ನೋಡಿಕೊಂಡು ಅದು ಬಿಕಟ್ಟಿನ ಸ್ವರೂಪ ಪಡೆದುಕೊಂಡಾಗಲೂ ಪರಿಹಾರದ ನಾಟಕವಾಡಿ ಧರ್ಮ, ದೇವರ ಕುರಿತಾಗಿ ಭಯಭೀತಿ ಸೃಷ್ಟಿಸಿ ಸಾಮಾಜಿಕ ಚಲನೆಯನ್ನು ನಿಲ್ಲಿಸಿಬಿಡುವ ರಾಜಕೀಯ ಉದ್ದೇಶಗಳು ಯಶಸ್ಸು ಪಡೆದುಬಿಡುತ್ತವೆ. ಇದೇ ರಾಜಕೀಯ ಪ್ರವೃತ್ತಿ ಇಂದು ಸಂವಿಧಾನಕ್ಕೆ ಸವಾಲೆಸೆಯುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಇದು ಎಲ್ಲ ಕಾಲದ ಸಮಸ್ಯೆಯೂ ಹೌದು. ಬಹುಷಃ ಈ ಕಾರಣಕ್ಕಾಗಿಯೇ ಇರಬಹುದು; ಈಗಾಗಲೇ ಆಗಿಹೋದ ದಾರ್ಶನಿಕರು ದೇವರು ಮತ್ತು ಧರ್ಮದ ಕುರಿತ ನಂಬಿಕೆಯ ಜಗತ್ತನ್ನು ಆಧರಿಸಿಯೇ ತಾತ್ವಿಕತೆಯನ್ನು ಪ್ರತಿಪಾದಿಸಿದರು. ಭೌತಿಕ ಜಗತ್ತಿನ ಒಳಗೇ ಮನುಷ್ಯಸಹಜ ದೌರ್ಬಲ್ಯಗಳೊಂದಿಗಿನ ಊನಗಳನ್ನು ತಮ್ಮೊಳಗಿನ ದಾರ್ಶನಿಕತೆಯೊಂದಿಗೆ ಎದುರುಗೊಂಡರು. ನಿಜವಾದ ಧರ್ಮ ಏನು ಎಂಬುದನ್ನು ಅರ್ಥೈಸಿದರು. ದೇವರ ಅಸ್ತಿತ್ವವು ಒಳಿತಿನೊಂದಿಗೇ ಇದೆ ಎಂಬ ವಿವೇಕವನ್ನು ಕಟ್ಟಿಕೊಡಲು ಪ್ರಯತ್ನಿಸಿದರು. ನಿಸರ್ಗದ ಅನೇಕ ಕೌತುಕಮಯ ಸಂಗತಿಗಳನ್ನು ಕಾಡಿಸಿಕೊಂಡು ಅವುಗಳನ್ನು ಜೀವಪರ ಅಂತಃಕರಣದೊಂದಿಗೆ ಮನುಷ್ಯ ಬದುಕಿನ ಉದ್ಧಾರಕ್ಕೆ ಬಳಸಿಕೊಳ್ಳಬಹುದಾದ ಒಳನೋಟಗಳ ಮೇಲೆ ಬೆಳಕು ಚೆಲ್ಲಿದರು. ಧರ್ಮ-ದೇವರ ಬಗೆಗಿನ ನಂಬಿಕೆಯ ಜಗತ್ತನ್ನು ಅಲುಗಾಡಿಸದೇ ಅಂತಸ್ಥಗೊಂಡಿರುವ ಮೂಢನಂಬಿಕೆಯ ಬೇರುಗಳನ್ನು ಕಿತ್ತೆಸೆಯಲು ತಾತ್ವಿಕ ಮಾರ್ಗವನ್ನು ಕಂಡುಕೊಂಡರು. ಆ ಮೂಲಕ ಧರ್ಮ ಮತ್ತು ದೇವರನ್ನು ಉದಾತ್ತತೆಯೊಂದಿಗೆ ತಾದಾತ್ಮ್ಯಗೊಳಿಸುವ ಚಲನಾತ್ಮಕ ಆಕೃತಿಗಳನ್ನು ಕೊಡುಗೆಗಳನ್ನಾಗಿ ನೀಡಿದರು. ಈಗ ಈ ಸಾಧ್ಯತೆಯ ತದ್ವಿರುದ್ಧದ ದಿಕ್ಕುಗಳೇ ಪರಮಮಾರ್ಗಗಳಾಗಿ ಪರಿಗಣಿತವಾಗುತ್ತಿವೆ. ಅವೇ ಪರಮೋಚ್ಛ ಎಂಬ ಬಿಂಬಗಳನ್ನು ಅತ್ಯಂತ ಚಾಣಾಕ್ಷಯುತವಾಗಿ ಕಟ್ಟಿಕೊಡಲಾಗುತ್ತಿದೆ. ಅಂಥ ಎಲ್ಲ ಸಂಕುಚಿತತೆಯನ್ನು ರಾಜಕೀಯ ಪೋಷಿಸುತ್ತಿದೆ. ಧರ್ಮ-ದೇವರನ್ನು ನೆಚ್ಚಿಕೊಂಡ ಜನರ ನಂಬಿಕೆಯ ಜಗತ್ತನ್ನು ಮೌಢ್ಯಕ್ಕೆ ತಿರುಗಿಸಿ ಅಪನಂಬಿಕೆಗಳನ್ನು ಮುನ್ನೆಲೆಗೆ ತಂದು ತನ್ನನ್ನು ವಿಜೃಂಭಿಸಿಕೊಳ್ಳುತ್ತಿದೆ.

ಧರ್ಮ ಮತ್ತು ದೇವರು – ಇವೆರಡೂ ಭಾವನಾತ್ಮಕ ಸಾಂಸ್ಥಿಕತೆಯನ್ನು ಅಳವಡಿಸಿಕೊಂಡು ನಿರಂತರವಾಗಿ ಜನರನ್ನು ಶೋಷಿಸಲು ಬಳಕೆಯಾದ ಇತಿಹಾಸವಿದೆ. ಅದನ್ನು ಮರೆಗೆ ಸರಿಸಿ ಅಧಿಕಾರ, ಹಣ ಮತ್ತು ಪ್ರತಿಷ್ಠೆಗಳನ್ನು ಸ್ಥಾಯಿಯಾಗಿಸಿಕೊಳ್ಳಲು ರಾಜಕೀಯ ಕೇಂದ್ರಗಳು ಪ್ರಯತ್ನಿಸಿ ಯಶಸ್ವಿಯಾಗುತ್ತಲೇ ಇವೆ. ಅವುಗಳಿಗೆ ಅನುಗುಣವಾಗಿಯೇ ತಮ್ಮನ್ನು ಪ್ರತಿಷ್ಠಾಪಿಸಿಕೊಂಡ ವಿವಿಧ ಜಾತಿಗಳ ಜನಸಮೂಹ ಅವು ನಿರೀಕ್ಷಿಸುವ ಸಂಕುಚಿತತೆಯ ಮನೋಧರ್ಮಕ್ಕೆ ಪಕ್ಕಾಗುತ್ತಲೇ ಇದೆ. ಬದಲಾವಣೆಯ ಪ್ರಬಲ ಅಸ್ತ್ರ ಎಂದು ಪರಿಗಣಿಸಲ್ಪಟ್ಟ ಶಿಕ್ಷಣ ಮತ್ತು ಅದರ ಮೂಲಕ ವ್ಯಾಪಕಗೊಳ್ಳುತ್ತದೆ ಎಂದುಕೊಂಡಿದ್ದ ಮೌಲ್ಯಾತ್ಮಕ ಪ್ರಭೆಯನ್ನು ಮತ್ತೆ ಮತ್ತೆ ಸೋಲಿಸುತ್ತಿರುವುದು ಇದೇ ಸಂಕುಚಿತತೆಯೇ. ಇದನ್ನೇ ಅಧಿಕಾರ ಕೇಂದ್ರಗಳ ಕಡೆಗೆ ನೋಟ ನೆಟ್ಟ ರಾಜಕೀಯ ವಲಯದ ಪ್ರತಿನಿಧಿಗಳು ತಮ್ಮ ಬಂಡವಾಳವಾಗಿಸಿಕೊಳ್ಳುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಧರ್ಮದಲ್ಲಿ ಇಲ್ಲದೇ ಇರುವ ಜೀವವಿರೋಧಿ ಅಮಾನವೀಯ ಸಾಂಪ್ರದಾಯಿಕತೆಯನ್ನು ಸಂವಿಧಾನಕ್ಕಿಂತಲೂ ಮಿಗಿಲು ಎಂದು ಪ್ರತಿಪಾದಿಸುತ್ತಿದ್ದಾರೆ. ಆ ಪ್ರತಿಪಾದನೆಯನ್ನು ಸಮಾಜದ ವಿವಿಧ ಜನವರ್ಗಗಳು ಒಪ್ಪಿಕೊಳ್ಳಲೇಬೇಕು ಎಂಬ ವಿತಂಡವಾದವನ್ನು ಮುಂದಿಡುತ್ತಿದ್ದಾರೆ.
ಈ ನಕಾರಾತ್ಮಕ ಹೆಜ್ಜೆಗಳಿಗೆ ಪರ್ಯಾಯವಾಗಿ ವಿಶ್ವಾಸಾರ್ಹವಾದ ಸಂವಿಧಾನಬದ್ಧ ರಾಜಕೀಯ ಸಂಸ್ಕøತಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಧರ್ಮವಲ್ಲದ ಸಂಗತಿಗಳನ್ನು ವೈಭವೀಕರಿಸಿ ಮುನ್ನೆಲೆಗೆ ತಂದ ವಲಯದವರೂ ತಾವು ಬದಲಾಗಬೇಕಾದ ಆಲೋಚನೆಗಳನ್ನು ಹರಿಬಿಡುತ್ತಿದ್ದಾರೆ ಎಂಬುದೇನೋ ಸಮಾಧಾನ ತರುವ ಸಂಗತಿ. ಈ ದೇಶದ ಸಾಂಸ್ಕøತಿಕ ವೈವಿಧ್ಯತೆಯ ಮಹತ್ವವನ್ನು ತಡವಾಗಿಯಾದರೂ ಹೇಳುತ್ತಿದ್ದಾರೆ ಎಂದುಕೊಳ್ಳಬಹುದು. ಎಲ್ಲ ಧರ್ಮಗಳವರನ್ನು ಗೌರವಿಸಬೇಕು ಎನ್ನುವ ಭಾವವನ್ನು ಸಂವಹಿಸುತ್ತಿದ್ದಾರೆ ಎಂದು ಖುಷಿಪಡಬಹುದು. ಅಂಥ ಆಶಾದಾಯಕ ನುಡಿಗಳು ನಡೆಯಲ್ಲೂ ಮೇಳೈಸಿಕೊಳ್ಳಬೇಕು.
ಹಾಗಾಗುವುದಕ್ಕೆ ಭಾರತದ ರಾಜಕಾರಣ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಇಲ್ಲಿಯ ರಾಜಕಾರಣಕ್ಕೆ ಬದಲಾವಣೆಗಿಂತ ಸ್ಥಗಿತತೆಯೇ ಹೆಚ್ಚು ಅಚ್ಚುಮೆಚ್ಚು. ಧರ್ಮ-ದೇವರು ಕೇಂದ್ರಿತ ಸಾಂಪ್ರದಾಯಿಕತೆಯೊಂದಿಗೆ ತಳುಕು ಹಾಕಿಕೊಂಡಿರುವ ಸಮಸ್ಯೆಗಳು ಜಟಿಲವಾದಷ್ಟೂ ಅದಕ್ಕೆ ಎಲ್ಲಿಲ್ಲದ ಖುಷಿ. ಜನರು ಈ ಸಾಂಪ್ರದಾಯಿಕತೆಯ ತೊಳಲಾಟಗಳಲ್ಲೇ ಕಾಲ ಕಳೆದರೆ ನಿಜವಾದ ಬೆಳವಣಿಗೆಗೆ ಸಂಬಂಧಿಸಿದ ಚಿಂತನೆಯೇ ಹುಟ್ಟುವುದಿಲ್ಲ. ಆಗ ಜನರು ಎಚ್ಚೆತ್ತುಕೊಳ್ಳುವ ಪ್ರಮೇಯವೇ ಎದುರಾಗುವುದಿಲ್ಲ. ಇದು ದೇವರು-ಧರ್ಮಗಳ ರಕ್ಷಾಕವಚಗಳನ್ನು ಹಾಕಿಕೊಂಡು ಜನರ ಭಯವಿಹ್ವಲತೆಯನ್ನು ಬೇರೂರಿಸಿ ಮತ್ತಷ್ಟು ಗಟ್ಟಿಯಾಗಿಸಿ ಉಸಿರುಗಟ್ಟಿಸುವ ಆಟ. ತಮ್ಮನ್ನು ಸೋಲಿಸುವ ವೈಚಾರಿಕತೆ ಸನಿಹದಲ್ಲಿಯೇ ಇದೆ ಎನ್ನುವ ಸುಳಿವು ಸಿಕ್ಕ ತಕ್ಷಣವೇ ಧರ್ಮರಕ್ಷಣೆ ಮತ್ತು ದೇವರನ್ನು ಕೃತಾರ್ಥರನ್ನಾಗಿಸುವ ಕೈಂಕರ್ಯಗಳ ನೆಪದಲ್ಲಿ ಭಯವನ್ನು ಸೃಷ್ಟಿಸಿ ವಂಚಿಸುವ ಆಟ. ಇಂಥ ಆಟವನ್ನು ನಿಲ್ಲಿಸಬೇಕಾದರೆ ಪ್ರತಿಕಾಲಘಟ್ಟದಲ್ಲೂ ಸೋಲುತ್ತಲೇ ಇರುವ ಬಹುಸಂಖ್ಯಾತ ಶೋಷಿತ ಸಮುದಾಯದ ಜನರು ಸಂವಿಧಾನದ ಆವರಣಕ್ಕೆ ಮರಳಬೇಕು. ತಮ್ಮ ಸಮಸ್ಯೆಗಳಿಗೆ ಪರಿಹಾರ ತೋರುವ ಪರಿವರ್ತನಾಶೀಲ ಚಿಂತನಶೀಲ ಸದಾಶಯಗಳೊಂದಿಗೆ ಮುಖಾಮುಖಿಯಾಗಬೇಕು. ಧ್ಯಾನಸ್ಥ ಸ್ಥಿತಿಯಲ್ಲಿ ಸಂವಿಧಾನವನ್ನು ಅಂತರ್ಗತಗೊಳಿಸಿಕೊಳ್ಳಬೇಕು.
ಪರ್ಯಾಯ ರಾಜಕಾರಣದ ಸಾಧ್ಯತೆಗಳನ್ನು ಇಷ್ಟೊತ್ತಿಗಾಗಲೇ ಅತ್ಯಂತ ಚಾಣಾಕ್ಷಯುತವಾಗಿ ಪರೀಕ್ಷೆಗೊಡ್ಡಿ ತನ್ನ ಸಂವಿಧಾನಬದ್ಧ ಶಕ್ತಿಯನ್ನು ವಿಸ್ತರಿಸಿಕೊಳ್ಳಬಹುದಾಗಿದ್ದ ರಾಜಕೀಯ ಪಕ್ಷಗಳು ಮತ್ತೆ ಅಧಾರ್ಮಿಕ ಸಂಕುಚಿತತೆಯೊಂದಿಗಿನ ಶ್ರೇಷ್ಠತೆಯ ವ್ಯಸನದಿಂದ ಬಳಲುತ್ತಿರುವ ಸಾಂಪ್ರದಾಯಿಕ ಶಕ್ತಿಗಳ ಜೊತೆಗೇ ಕೈಜೋಡಿಸಿ ತಮ್ಮ ಅಧಿಕಾರ ಪಡೆಯುವ ಹಂಬಲಗಳನ್ನು ಜೀವಂತಗೊಳಿಸಿಕೊಳ್ಳುತ್ತಿವೆ. ಮತ್ತವೇ ಜಾತಿ ವೈರುಧ್ಯಗಳು. ಮತ್ತದೇ ಅಧಾರ್ಮಿಕ ಸಂಘರ್ಷ. ಮೇಲು-ಕೀಳುಗಳ ಅಂತರ್ಯುದ್ಧದ ಕಪಟಕಿರುಕುಳ ಯಾನ. ಸಂವಿಧಾನವನ್ನು ಗೆಲ್ಲಿಸುವ ಇಚ್ಛಾಶಕ್ತಿಯ ಕೊರತೆ. ಅಲ್ಲಲ್ಲಿ ಕಂಡುಬರುವ ಮಾನವೀಯತೆಯ ಒರತೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವಾಗಿಸಿಬಿಡುವ ಹುನ್ನಾರಗಳ ತಕಧಿಮಿಗುಟ್ಟುವ ಕ್ರೂರನರ್ತನ. ಉದಾತ್ತ ತಾತ್ವಿಕತೆಯ ಪರಿಭಾಷೆಗಳನ್ನು ಅಪವ್ಯಾಖ್ಯಾನಗೊಳಿಸುವ ಸಾಂಪ್ರದಾಯಿಕತೆ ಅಸ್ತಿತ್ವ ಇನ್ನೆಷ್ಟು ದಿನ? ಕಾಲವೇ ಉತ್ತರಿಸಬೇಕು ಎಂದು ಸುಮ್ಮನೆ ಕುಳಿತುಕೊಳ್ಳಬೇಕೇ? ಯೋಚಿಸಲಾರಂಭಿಸಬೇಕೇ……?

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ,ಇ-ಮೇಲ್ ವಿಳಾಸ: nkpadmanabh@gmail.com
ಮೊಬೈಲ್: 9972998300)

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ3 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ3 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ3 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ4 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ4 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ4 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending