Connect with us

ರಾಜಕೀಯ

ಸಂವಿಧಾನ ಮತ್ತು ಧರ್ಮ : ಸದ್ಯದ ಅಪವ್ಯಾಖ್ಯಾನ

Published

on

ಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ ಕಷ್ಟಸಾಧ್ಯ ಎಂಬ ಭಾವವನ್ನು ಸಾರ್ವತ್ರಿಕಗೊಳಿಸುವಷ್ಟರ ಮಟ್ಟಿಗೆ ಆ ಸಂಕಟಗಳು ತೀವ್ರವಾಗಿ ಬಾಧಿಸುತ್ತವೆ. ಹೀಗೆ ಸಂಕಟಗೊಳಪಟ್ಟ ವ್ಯಕ್ತಿಗತ ಸಂಕೀರ್ಣತೆ ಸಾಮೂಹಿಕ ಸ್ವರೂಪ ಆವಾಹಿಸಿಕೊಂಡು ಜನಸಮುದಾಯಗಳನ್ನು ದಿಗ್ಮೂಢರನ್ನಾಗಿಸುತ್ತದೆ. ಆಂತರ್ಯದೊಳಗೆ ಮೂಡುವ ಅಸಮಾಧಾನ ಸಹನೆಯನ್ನು ಕಳೆದಿಡುತ್ತದೆ. ಆ ಸಂದರ್ಭದ ಅಸಹನೆಯು ಹಿಂಸೆಯೊಂದಿಗಿನ ದೃಷ್ಟಿಕೋನಗಳನ್ನು ಚಿಗುರಿಸಿಕೊಳ್ಳಲು ನೆರವಾಗುತ್ತದೆ. ಈ ಹಂತದಲ್ಲಿಯೇ ದ್ವಂದ್ವ, ಅಸ್ಪಷ್ಟತೆ, ಅವಿವೇಕತನ, ಅಸಂಬದ್ಧತೆ ಮತ್ತು ಕ್ರೌರ್ಯದ ನಡವಳಿಕೆಗಳು ದೇಶದ ಸಾಮಾಜಿಕ ಅಸ್ಮಿತೆಯನ್ನೇ ಧ್ವಂಸಗೊಳಿಸುತ್ತವೆ. ಭಾರತ ಅಂಥದ್ದೊಂದು ಅಪಾಯಕಾರಿ ಪ್ರವೃತ್ತಿಯ ಮಿತಿಯೊಂದಿಗೆ ಹೆಜ್ಜೆಯಿರಿಸುತ್ತಿದೆ. ಇದನ್ನು ತಿಳಿದುಕೊಂಡು ಸರಿಹಾದಿ ತೋರುವ ದಾರ್ಶನಿಕತೆಯನ್ನು ನಿರೂಪಿಸಬೇಕಾದ ನಾಯಕರಲ್ಲದ ನಾಯಕರೆನ್ನಿಸಿಕೊಂಡವರು ಸಮಸ್ಯಾತ್ಮಕತೆಯನ್ನು ಸ್ಥಾಯಿಯಾಗಿಸಿ ತಮ್ಮ ಅಸ್ತಿತ್ವವನ್ನು ಶಾಶ್ವತಗೊಳಿಸಿಕೊಳ್ಳುವ ಹಂಬಲಗೊಳೊಂದಿಗೇ ಗುರುತಿಸಿಕೊಂಡಿದ್ದಾರೆ.

ಈ ದೇಶವನ್ನು ಕಾಡುತ್ತಿರುವ ಸಮಸ್ಯೆಗಳು ಯಾವುವು ಎಂಬುದು ಅವುಗಳ ವ್ಯತಿರಿಕ್ತ ಪರಿಣಾಮಗಳಿಗೆ ಈಡಾದವರೂ ಸೇರಿದಂತೆ ಹಲವರಿಗೆ ಗೊತ್ತಿದೆ. ಈ ಸಮಸ್ಯೆಗಳ ಮೂಲ ಎಲ್ಲಿಯದು ಎಂಬುದರ ಅರಿವೂ ಇದೆ. ಇಡೀ ದೇಶದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂಥ ಪರಮೋಚ್ಛ ಭ್ರಮೆಯ ವರ್ತುಲಕ್ಕೆ ಸಿಲುಕೊಳ್ಳಬಾರದು ಎಂಬ ಪ್ರಜ್ಞೆಯನ್ನು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಒದಗಿಸಿಕೊಡುವ ನಕಾರಾತ್ಮಕತೆಯ ಅನುಭವವು ಪ್ರತಿಯೊಬ್ಬರಿಗೂ ಆಗುತ್ತಲೇ ಇರುತ್ತದೆ. ಆದರೆ, ಅದನ್ನು ಹಲವರು ಅಭಿವ್ಯಕ್ತಿಸುವುದಿಲ್ಲ. ಬದಲಾವಣೆ ಬಯಸುವ ಚಿಂತಕರು ಮತ್ತು ಜನಸಾಮಾನ್ಯ ವಲಯ ಆ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆ ಅವರು ಮುಕ್ತ ಆಲೋಚನೆಯನ್ನು ಹರಿಬಿಟ್ಟಾಗ ಅದು ಅಪಾಯಕಾರಿ ಎಂದು ತಪ್ಪಾಗಿ ಅರ್ಥೈಸುವ ಜಾಯಮಾನದ ನಡೆಯನ್ನು ರಾಜಕೀಯ ವಲಯ ಈಗೀಗ ನೆಚ್ಚಿಕೊಳ್ಳುತ್ತಿದೆ. ಇಂಥ ನಡೆಯ ಕಾರಣಕ್ಕಾಗಿಯೇ ಸಂವಿಧಾನ ಮತ್ತು ಧರ್ಮ ಪರಸ್ಪರ ಸಂಘರ್ಷಿಸುವ ನೆಲೆಗಳಾಗಿ ಚರ್ಚಿಸಲ್ಪಡುತ್ತಿವೆ. ಇವೆರಡರ ಉದಾತ್ತ ಅರ್ಥವನ್ನು ಒಡೆದು ಸಂಕುಚಿತಗೊಳಿಸಿದ ಅಪವ್ಯಾಖ್ಯಾನವನ್ನೇ ಜನಸಮುದಾಯ ನೆಚ್ಚಿಕೊಳ್ಳುವಂತೆ ಒತ್ತಡ ಹಾಕುತ್ತಿವೆ. ಇದೇ ಬಗೆಯ ಅನುಕೂಲಕರ ಸಮಯಾವಕಾಶವನ್ನು ಕಾಯ್ದುಕುಳಿತಂತೆ ರಾಜಕೀಯ ವಲಯ ತನ್ನ ದಾಳಗಳನ್ನು ಪ್ರಯೋಗಿಸುತ್ತಿದೆ.

ಸದ್ಯದ ವ್ಯತಿರಿಕ್ತ ಸ್ಥಿತಿಗತಿಗಳು ಅತ್ಯಂತ ನಿಖರವಾಗಿ ಬಿಟ್ಟುಕೊಡುತ್ತಿರುವ ಸುಳಿವುಗಳು ಹಲವಿವೆ. ಅವುಗಳಲ್ಲಿ ಧರ್ಮ ಮತ್ತು ದೇವರಿಗೆ ಸಂಬಂಧಿಸಿದಂತೆ ಇರುವ ವ್ಯಕ್ತಿಗತ ಸಂಕುಚಿತತೆಯನ್ನು ಸಾಂಸ್ಥಿಕಗೊಳಿಸಿ ಪ್ರಭಾವವನ್ನು ವ್ಯಾಪಕಗೊಳಿಸುವ ಪ್ರಯತ್ನವೂ ಒಂದು. ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವುದು, ಆಯಾ ಧರ್ಮಗಳವರ ನಂಬಿಕೆಯ ಆವರಣದಲ್ಲಿ ಆದ್ಯತೆ ಪಡೆದಿರುವ ದೇವರುಗಳ ಆರಾಧನೆಯ ಅವಕಾಶಗಳನ್ನು ಸ್ವಾರ್ಥಕ್ಕೆ ತಿರುಗಿಸಿಕೊಳ್ಳುವುದು ಈಗೀಗ ಸಾರ್ವತ್ರಿಕವಾಗಿದೆ. ಸಮಸ್ಯೆಯೊಂದು ವ್ಯಕ್ತಿಯನ್ನು ಭಾಧಿಸುತ್ತಿರುತ್ತದೆ. ವ್ಯಕ್ತಿಗತ, ಕೌಟುಂಬಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯಾತ್ಮಕ ಸಂಕೀರ್ಣತೆಗಳೊಂದಿಗಿನ ವಾಸ್ತವಿಕತೆಯೇ ಆ ಸಮಸ್ಯೆಗೆ ಕಾರಣವಾಗಿರುತ್ತದೆ. ಆದರೆ, ಧರ್ಮ ಮತ್ತು ದೇವರನ್ನು ಅಪವ್ಯಾಖ್ಯಾನಕ್ಕೊಳಪಡಿಸಿ ಆ ಬಗ್ಗೆ ಸಂಕುಚಿತವಾಗಿ ಅರ್ಥೈಸಿ ಭಯಹುಟ್ಟಿಸಲಾಗುತ್ತದೆ. ಹೀಗೆ ಭಯವನ್ನು ಹುಟ್ಟಿಸಿ ಸ್ವಾರ್ಥ ಸಾಧಿಸಿಕೊಳ್ಳುವ ಹಿತಾಸಕ್ತಿಗಳ ಅಸ್ತಿತ್ವದಲ್ಲಿಯೇ ಮಹತ್ವದ ಸುಳಿವನ್ನು ಗೊತ್ತುಮಾಡಿಕೊಳ್ಳಬಹುದು. ಈ ಹಿತಾಸಕ್ತಿಗಳು ಸಮಸ್ಯೆಗಳನ್ನು ಉದ್ದೇಶಪೂರ್ವಕವಾಗಿ ಸ್ಥಾಯಿಯಾಗಿಸಿ ಜನರೊಳಗಿನ ಆಲೋಚಿಸುವ ಶಕ್ತಿಯನ್ನೇ ತಡೆದು ನಿಲ್ಲಿಸುತ್ತವೆ. ಆವರ ಆಲೋಚನೆಯ ಸಾಧ್ಯತೆಗಳನ್ನು ಮೊಟಕುಗೊಳಿಸಿ ಧರ್ಮವಲ್ಲದ ಸಂಗತಿಗಳ ಕಡೆಗೆ ತಿರುಗಿಸುತ್ತವೆ. ಅವರ ಮನಸ್ಸಿನಲ್ಲಿ ದೇವರುಗಳ ಬಗ್ಗೆ ಭಯದ ಭಾವ ಮೂಡಿಸುತ್ತವೆ. ಆರಾಧಿಸದಿದ್ದರೆ ಶಿಕ್ಷೆ ಗ್ಯಾರಂಟಿ, ದೇವರೇ ಮುನಿಸಿಕೊಂಡರೆ ಮುಂದಿದೆ ವ್ಯತಿರಿಕ್ತ ಪರಿಣಾಮ ಎಂಬ ಅತಾರ್ಕಿಕತೆಯನ್ನೇ ಮಂಡಿಸಿ ದಾರಿ ತಪ್ಪಿಸುತ್ತವೆ.

ಮೊದಲೇ ಸಮಸ್ಯೆಗಳ ಮಧ್ಯೆ ನರಳುತ್ತಿರುವವರ ಮುಂದೆ ಧರ್ಮದಲ್ಲಿಲ್ಲದ ಸಂಗತಿಗಳನ್ನು ವೈಭವೀಕರಿಸಿ ಹೇಳಿದರೆ ಸ್ವಾರ್ಥದ ಉದ್ದೇಶಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕಾರ್ಯಸೂಚಿ ಅತ್ಯಂತ ಎಚ್ಚರದಲ್ಲಿ ಯಶಸ್ವಿಯಾಗಿ ನಿರ್ವಹಿಸಲ್ಪಡುತ್ತದೆ. ಹೀಗಾದರೆ ಹೀಗಾಗುತ್ತದೆ ಎಂದು ತಾರ್ಕಿಕವಾಗಿ ಮಾತನಾಡುವವರಂತೆ ನಟಿಸುವವರೇ ರಂಜನಾಮಾಧ್ಯಮೋದ್ಯಮದ ಮೂಲಗಳಾಗುತ್ತಾರೆ. ಸಮಾಜದ ವಿವಿಧ ಜನವರ್ಗಗಳು ಇಂಥವರನ್ನು ಆರಾಧಿಸಿಕೊಂಡೇ ಇದ್ದರೆ ತಮ್ಮ ಬೇಳೆ ಬೇಯಿಸಿಕೊಳ್ಳಬಹುದು ಎಂಬ ರಾಜಕೀಯ ವಲಯದ ನಿರೀಕ್ಷೆಗಳು ಈ ಹಂತದಲ್ಲಿಯೇ ಈಡೇರಿಬಿಡುತ್ತವೆ. ಸಮಸ್ಯೆಯನ್ನು ಶಾಶ್ವತವಾಗಿ ಉಳಿಯುವಂತೆ ನೋಡಿಕೊಂಡು ಅದು ಬಿಕಟ್ಟಿನ ಸ್ವರೂಪ ಪಡೆದುಕೊಂಡಾಗಲೂ ಪರಿಹಾರದ ನಾಟಕವಾಡಿ ಧರ್ಮ, ದೇವರ ಕುರಿತಾಗಿ ಭಯಭೀತಿ ಸೃಷ್ಟಿಸಿ ಸಾಮಾಜಿಕ ಚಲನೆಯನ್ನು ನಿಲ್ಲಿಸಿಬಿಡುವ ರಾಜಕೀಯ ಉದ್ದೇಶಗಳು ಯಶಸ್ಸು ಪಡೆದುಬಿಡುತ್ತವೆ. ಇದೇ ರಾಜಕೀಯ ಪ್ರವೃತ್ತಿ ಇಂದು ಸಂವಿಧಾನಕ್ಕೆ ಸವಾಲೆಸೆಯುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಇದು ಎಲ್ಲ ಕಾಲದ ಸಮಸ್ಯೆಯೂ ಹೌದು. ಬಹುಷಃ ಈ ಕಾರಣಕ್ಕಾಗಿಯೇ ಇರಬಹುದು; ಈಗಾಗಲೇ ಆಗಿಹೋದ ದಾರ್ಶನಿಕರು ದೇವರು ಮತ್ತು ಧರ್ಮದ ಕುರಿತ ನಂಬಿಕೆಯ ಜಗತ್ತನ್ನು ಆಧರಿಸಿಯೇ ತಾತ್ವಿಕತೆಯನ್ನು ಪ್ರತಿಪಾದಿಸಿದರು. ಭೌತಿಕ ಜಗತ್ತಿನ ಒಳಗೇ ಮನುಷ್ಯಸಹಜ ದೌರ್ಬಲ್ಯಗಳೊಂದಿಗಿನ ಊನಗಳನ್ನು ತಮ್ಮೊಳಗಿನ ದಾರ್ಶನಿಕತೆಯೊಂದಿಗೆ ಎದುರುಗೊಂಡರು. ನಿಜವಾದ ಧರ್ಮ ಏನು ಎಂಬುದನ್ನು ಅರ್ಥೈಸಿದರು. ದೇವರ ಅಸ್ತಿತ್ವವು ಒಳಿತಿನೊಂದಿಗೇ ಇದೆ ಎಂಬ ವಿವೇಕವನ್ನು ಕಟ್ಟಿಕೊಡಲು ಪ್ರಯತ್ನಿಸಿದರು. ನಿಸರ್ಗದ ಅನೇಕ ಕೌತುಕಮಯ ಸಂಗತಿಗಳನ್ನು ಕಾಡಿಸಿಕೊಂಡು ಅವುಗಳನ್ನು ಜೀವಪರ ಅಂತಃಕರಣದೊಂದಿಗೆ ಮನುಷ್ಯ ಬದುಕಿನ ಉದ್ಧಾರಕ್ಕೆ ಬಳಸಿಕೊಳ್ಳಬಹುದಾದ ಒಳನೋಟಗಳ ಮೇಲೆ ಬೆಳಕು ಚೆಲ್ಲಿದರು. ಧರ್ಮ-ದೇವರ ಬಗೆಗಿನ ನಂಬಿಕೆಯ ಜಗತ್ತನ್ನು ಅಲುಗಾಡಿಸದೇ ಅಂತಸ್ಥಗೊಂಡಿರುವ ಮೂಢನಂಬಿಕೆಯ ಬೇರುಗಳನ್ನು ಕಿತ್ತೆಸೆಯಲು ತಾತ್ವಿಕ ಮಾರ್ಗವನ್ನು ಕಂಡುಕೊಂಡರು. ಆ ಮೂಲಕ ಧರ್ಮ ಮತ್ತು ದೇವರನ್ನು ಉದಾತ್ತತೆಯೊಂದಿಗೆ ತಾದಾತ್ಮ್ಯಗೊಳಿಸುವ ಚಲನಾತ್ಮಕ ಆಕೃತಿಗಳನ್ನು ಕೊಡುಗೆಗಳನ್ನಾಗಿ ನೀಡಿದರು. ಈಗ ಈ ಸಾಧ್ಯತೆಯ ತದ್ವಿರುದ್ಧದ ದಿಕ್ಕುಗಳೇ ಪರಮಮಾರ್ಗಗಳಾಗಿ ಪರಿಗಣಿತವಾಗುತ್ತಿವೆ. ಅವೇ ಪರಮೋಚ್ಛ ಎಂಬ ಬಿಂಬಗಳನ್ನು ಅತ್ಯಂತ ಚಾಣಾಕ್ಷಯುತವಾಗಿ ಕಟ್ಟಿಕೊಡಲಾಗುತ್ತಿದೆ. ಅಂಥ ಎಲ್ಲ ಸಂಕುಚಿತತೆಯನ್ನು ರಾಜಕೀಯ ಪೋಷಿಸುತ್ತಿದೆ. ಧರ್ಮ-ದೇವರನ್ನು ನೆಚ್ಚಿಕೊಂಡ ಜನರ ನಂಬಿಕೆಯ ಜಗತ್ತನ್ನು ಮೌಢ್ಯಕ್ಕೆ ತಿರುಗಿಸಿ ಅಪನಂಬಿಕೆಗಳನ್ನು ಮುನ್ನೆಲೆಗೆ ತಂದು ತನ್ನನ್ನು ವಿಜೃಂಭಿಸಿಕೊಳ್ಳುತ್ತಿದೆ.

ಧರ್ಮ ಮತ್ತು ದೇವರು – ಇವೆರಡೂ ಭಾವನಾತ್ಮಕ ಸಾಂಸ್ಥಿಕತೆಯನ್ನು ಅಳವಡಿಸಿಕೊಂಡು ನಿರಂತರವಾಗಿ ಜನರನ್ನು ಶೋಷಿಸಲು ಬಳಕೆಯಾದ ಇತಿಹಾಸವಿದೆ. ಅದನ್ನು ಮರೆಗೆ ಸರಿಸಿ ಅಧಿಕಾರ, ಹಣ ಮತ್ತು ಪ್ರತಿಷ್ಠೆಗಳನ್ನು ಸ್ಥಾಯಿಯಾಗಿಸಿಕೊಳ್ಳಲು ರಾಜಕೀಯ ಕೇಂದ್ರಗಳು ಪ್ರಯತ್ನಿಸಿ ಯಶಸ್ವಿಯಾಗುತ್ತಲೇ ಇವೆ. ಅವುಗಳಿಗೆ ಅನುಗುಣವಾಗಿಯೇ ತಮ್ಮನ್ನು ಪ್ರತಿಷ್ಠಾಪಿಸಿಕೊಂಡ ವಿವಿಧ ಜಾತಿಗಳ ಜನಸಮೂಹ ಅವು ನಿರೀಕ್ಷಿಸುವ ಸಂಕುಚಿತತೆಯ ಮನೋಧರ್ಮಕ್ಕೆ ಪಕ್ಕಾಗುತ್ತಲೇ ಇದೆ. ಬದಲಾವಣೆಯ ಪ್ರಬಲ ಅಸ್ತ್ರ ಎಂದು ಪರಿಗಣಿಸಲ್ಪಟ್ಟ ಶಿಕ್ಷಣ ಮತ್ತು ಅದರ ಮೂಲಕ ವ್ಯಾಪಕಗೊಳ್ಳುತ್ತದೆ ಎಂದುಕೊಂಡಿದ್ದ ಮೌಲ್ಯಾತ್ಮಕ ಪ್ರಭೆಯನ್ನು ಮತ್ತೆ ಮತ್ತೆ ಸೋಲಿಸುತ್ತಿರುವುದು ಇದೇ ಸಂಕುಚಿತತೆಯೇ. ಇದನ್ನೇ ಅಧಿಕಾರ ಕೇಂದ್ರಗಳ ಕಡೆಗೆ ನೋಟ ನೆಟ್ಟ ರಾಜಕೀಯ ವಲಯದ ಪ್ರತಿನಿಧಿಗಳು ತಮ್ಮ ಬಂಡವಾಳವಾಗಿಸಿಕೊಳ್ಳುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಧರ್ಮದಲ್ಲಿ ಇಲ್ಲದೇ ಇರುವ ಜೀವವಿರೋಧಿ ಅಮಾನವೀಯ ಸಾಂಪ್ರದಾಯಿಕತೆಯನ್ನು ಸಂವಿಧಾನಕ್ಕಿಂತಲೂ ಮಿಗಿಲು ಎಂದು ಪ್ರತಿಪಾದಿಸುತ್ತಿದ್ದಾರೆ. ಆ ಪ್ರತಿಪಾದನೆಯನ್ನು ಸಮಾಜದ ವಿವಿಧ ಜನವರ್ಗಗಳು ಒಪ್ಪಿಕೊಳ್ಳಲೇಬೇಕು ಎಂಬ ವಿತಂಡವಾದವನ್ನು ಮುಂದಿಡುತ್ತಿದ್ದಾರೆ.
ಈ ನಕಾರಾತ್ಮಕ ಹೆಜ್ಜೆಗಳಿಗೆ ಪರ್ಯಾಯವಾಗಿ ವಿಶ್ವಾಸಾರ್ಹವಾದ ಸಂವಿಧಾನಬದ್ಧ ರಾಜಕೀಯ ಸಂಸ್ಕøತಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಧರ್ಮವಲ್ಲದ ಸಂಗತಿಗಳನ್ನು ವೈಭವೀಕರಿಸಿ ಮುನ್ನೆಲೆಗೆ ತಂದ ವಲಯದವರೂ ತಾವು ಬದಲಾಗಬೇಕಾದ ಆಲೋಚನೆಗಳನ್ನು ಹರಿಬಿಡುತ್ತಿದ್ದಾರೆ ಎಂಬುದೇನೋ ಸಮಾಧಾನ ತರುವ ಸಂಗತಿ. ಈ ದೇಶದ ಸಾಂಸ್ಕøತಿಕ ವೈವಿಧ್ಯತೆಯ ಮಹತ್ವವನ್ನು ತಡವಾಗಿಯಾದರೂ ಹೇಳುತ್ತಿದ್ದಾರೆ ಎಂದುಕೊಳ್ಳಬಹುದು. ಎಲ್ಲ ಧರ್ಮಗಳವರನ್ನು ಗೌರವಿಸಬೇಕು ಎನ್ನುವ ಭಾವವನ್ನು ಸಂವಹಿಸುತ್ತಿದ್ದಾರೆ ಎಂದು ಖುಷಿಪಡಬಹುದು. ಅಂಥ ಆಶಾದಾಯಕ ನುಡಿಗಳು ನಡೆಯಲ್ಲೂ ಮೇಳೈಸಿಕೊಳ್ಳಬೇಕು.
ಹಾಗಾಗುವುದಕ್ಕೆ ಭಾರತದ ರಾಜಕಾರಣ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಇಲ್ಲಿಯ ರಾಜಕಾರಣಕ್ಕೆ ಬದಲಾವಣೆಗಿಂತ ಸ್ಥಗಿತತೆಯೇ ಹೆಚ್ಚು ಅಚ್ಚುಮೆಚ್ಚು. ಧರ್ಮ-ದೇವರು ಕೇಂದ್ರಿತ ಸಾಂಪ್ರದಾಯಿಕತೆಯೊಂದಿಗೆ ತಳುಕು ಹಾಕಿಕೊಂಡಿರುವ ಸಮಸ್ಯೆಗಳು ಜಟಿಲವಾದಷ್ಟೂ ಅದಕ್ಕೆ ಎಲ್ಲಿಲ್ಲದ ಖುಷಿ. ಜನರು ಈ ಸಾಂಪ್ರದಾಯಿಕತೆಯ ತೊಳಲಾಟಗಳಲ್ಲೇ ಕಾಲ ಕಳೆದರೆ ನಿಜವಾದ ಬೆಳವಣಿಗೆಗೆ ಸಂಬಂಧಿಸಿದ ಚಿಂತನೆಯೇ ಹುಟ್ಟುವುದಿಲ್ಲ. ಆಗ ಜನರು ಎಚ್ಚೆತ್ತುಕೊಳ್ಳುವ ಪ್ರಮೇಯವೇ ಎದುರಾಗುವುದಿಲ್ಲ. ಇದು ದೇವರು-ಧರ್ಮಗಳ ರಕ್ಷಾಕವಚಗಳನ್ನು ಹಾಕಿಕೊಂಡು ಜನರ ಭಯವಿಹ್ವಲತೆಯನ್ನು ಬೇರೂರಿಸಿ ಮತ್ತಷ್ಟು ಗಟ್ಟಿಯಾಗಿಸಿ ಉಸಿರುಗಟ್ಟಿಸುವ ಆಟ. ತಮ್ಮನ್ನು ಸೋಲಿಸುವ ವೈಚಾರಿಕತೆ ಸನಿಹದಲ್ಲಿಯೇ ಇದೆ ಎನ್ನುವ ಸುಳಿವು ಸಿಕ್ಕ ತಕ್ಷಣವೇ ಧರ್ಮರಕ್ಷಣೆ ಮತ್ತು ದೇವರನ್ನು ಕೃತಾರ್ಥರನ್ನಾಗಿಸುವ ಕೈಂಕರ್ಯಗಳ ನೆಪದಲ್ಲಿ ಭಯವನ್ನು ಸೃಷ್ಟಿಸಿ ವಂಚಿಸುವ ಆಟ. ಇಂಥ ಆಟವನ್ನು ನಿಲ್ಲಿಸಬೇಕಾದರೆ ಪ್ರತಿಕಾಲಘಟ್ಟದಲ್ಲೂ ಸೋಲುತ್ತಲೇ ಇರುವ ಬಹುಸಂಖ್ಯಾತ ಶೋಷಿತ ಸಮುದಾಯದ ಜನರು ಸಂವಿಧಾನದ ಆವರಣಕ್ಕೆ ಮರಳಬೇಕು. ತಮ್ಮ ಸಮಸ್ಯೆಗಳಿಗೆ ಪರಿಹಾರ ತೋರುವ ಪರಿವರ್ತನಾಶೀಲ ಚಿಂತನಶೀಲ ಸದಾಶಯಗಳೊಂದಿಗೆ ಮುಖಾಮುಖಿಯಾಗಬೇಕು. ಧ್ಯಾನಸ್ಥ ಸ್ಥಿತಿಯಲ್ಲಿ ಸಂವಿಧಾನವನ್ನು ಅಂತರ್ಗತಗೊಳಿಸಿಕೊಳ್ಳಬೇಕು.
ಪರ್ಯಾಯ ರಾಜಕಾರಣದ ಸಾಧ್ಯತೆಗಳನ್ನು ಇಷ್ಟೊತ್ತಿಗಾಗಲೇ ಅತ್ಯಂತ ಚಾಣಾಕ್ಷಯುತವಾಗಿ ಪರೀಕ್ಷೆಗೊಡ್ಡಿ ತನ್ನ ಸಂವಿಧಾನಬದ್ಧ ಶಕ್ತಿಯನ್ನು ವಿಸ್ತರಿಸಿಕೊಳ್ಳಬಹುದಾಗಿದ್ದ ರಾಜಕೀಯ ಪಕ್ಷಗಳು ಮತ್ತೆ ಅಧಾರ್ಮಿಕ ಸಂಕುಚಿತತೆಯೊಂದಿಗಿನ ಶ್ರೇಷ್ಠತೆಯ ವ್ಯಸನದಿಂದ ಬಳಲುತ್ತಿರುವ ಸಾಂಪ್ರದಾಯಿಕ ಶಕ್ತಿಗಳ ಜೊತೆಗೇ ಕೈಜೋಡಿಸಿ ತಮ್ಮ ಅಧಿಕಾರ ಪಡೆಯುವ ಹಂಬಲಗಳನ್ನು ಜೀವಂತಗೊಳಿಸಿಕೊಳ್ಳುತ್ತಿವೆ. ಮತ್ತವೇ ಜಾತಿ ವೈರುಧ್ಯಗಳು. ಮತ್ತದೇ ಅಧಾರ್ಮಿಕ ಸಂಘರ್ಷ. ಮೇಲು-ಕೀಳುಗಳ ಅಂತರ್ಯುದ್ಧದ ಕಪಟಕಿರುಕುಳ ಯಾನ. ಸಂವಿಧಾನವನ್ನು ಗೆಲ್ಲಿಸುವ ಇಚ್ಛಾಶಕ್ತಿಯ ಕೊರತೆ. ಅಲ್ಲಲ್ಲಿ ಕಂಡುಬರುವ ಮಾನವೀಯತೆಯ ಒರತೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವಾಗಿಸಿಬಿಡುವ ಹುನ್ನಾರಗಳ ತಕಧಿಮಿಗುಟ್ಟುವ ಕ್ರೂರನರ್ತನ. ಉದಾತ್ತ ತಾತ್ವಿಕತೆಯ ಪರಿಭಾಷೆಗಳನ್ನು ಅಪವ್ಯಾಖ್ಯಾನಗೊಳಿಸುವ ಸಾಂಪ್ರದಾಯಿಕತೆ ಅಸ್ತಿತ್ವ ಇನ್ನೆಷ್ಟು ದಿನ? ಕಾಲವೇ ಉತ್ತರಿಸಬೇಕು ಎಂದು ಸುಮ್ಮನೆ ಕುಳಿತುಕೊಳ್ಳಬೇಕೇ? ಯೋಚಿಸಲಾರಂಭಿಸಬೇಕೇ……?

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ,ಇ-ಮೇಲ್ ವಿಳಾಸ: nkpadmanabh@gmail.com
ಮೊಬೈಲ್: 9972998300)

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ5 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ5 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ5 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ3 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending