ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243