ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version