ದಿನದ ಸುದ್ದಿ
ಆನ್ಲೈನ್ ವ್ಯವಹಾರ ಮಾಡೋರಿಗೆ ಎಚ್ಚರಿಕೆಯ ಸುದ್ದಿ
ಶೇ. 25 ಭಾರತೀಯ ಗ್ರಾಹಕರು ಆನ್ಲೈನ್ ವ್ಯವಹಾರ ನಡೆಸುವಾಗ ಸೆಕ್ಯುರಿಟಿ ರಿಜನ್ ಗಳಿಗಾಗಿ ಮೋಸಕ್ಕೆ ಒಳಗಾಗಿದ್ದಾರೆ
* ಸ್ವಲ್ಪ ಯಾಮಾರಿದ್ರೆ ಕ್ಷಣಾರ್ಧದಲ್ಲಿ ಮಂಗಮಾಯ ನಿಮ್ಮ ದುಡ್ಡು
ಸುದ್ದಿದಿನ ಡೆಸ್ಕ್: ಆನ್ಲೈನ್ ವ್ಯವಹಾರ ನಡೆಸುವಾಗ ಗ್ರಾಹಕರು ಬಹು ಎಚ್ಚರಿಕೆಯಿಂದ ಇರಬೇಕಾದ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಶೇ. 25 ಭಾರತೀಯ ಗ್ರಾಹಕರು ಆನ್ಲೈನ್ ವ್ಯವಹಾರ ನಡೆಸುವಾಗ ಸೆಕ್ಯುರಿಟಿ ರಿಜನ್ ಗಳಿಗಾಗಿ ಮೋಸಕ್ಕೆ ಒಳಗಾಗಿದ್ದಾರೆ ಎಂಬ ಆತಂಕ ವಿಷಯವನ್ನು ಗ್ಲೋಬಲ್ ಇನ್ಫಾರ್ಮೇಶನ್ ಸರ್ವೀಸ್ ಕಂಪನಿ ಎಕ್ಸಪೀರಿಯನ್ ವರದಿ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಬಹುತೇಕ ಗ್ರಾಹಕರು ಮೊಬೈಲ್ ನಲ್ಲಿ ವ್ಯವಹಾರ ಮಾಡುವುದನ್ನು ರೂಢಿಮಾಡಿಕೊಂಡಿದ್ದಾರೆ. ಮೊಬೈಲ್ ನಲ್ಲಿ ವಸ್ತುಗಳ ಖರೀದಿ, ಮಾರಾಟ ಮಾಡುವುದು ಇಂದು ಖುದ್ದಾಗಿ ಮಾರುಕಟ್ಟೆಯಲ್ಲಿ ಖರೀದಿಸಿದಣ್ಟೇ ಸರಳ, ಸಹಜವಾಗಿದೆ. ಆನ್ಲೈನ್ ವ್ಯವಹಾರ ವಂಚನೆ ಮಾಡುವ ಕೃತ್ಯಗಳಿಗೆ ಪ್ರೋತ್ಸಾಹ ನೀಡಲು ಸುಲಭವಾಗಿದೆ ಎಂದು ಸಂಸ್ಥೆ ನೀಡಿದ “ಡಿಜಿಟಲ್ ಕಂಜುಮರ್ ಇನ್ಸೈಟ್ಸ್-2018” ಹೆಸರಿನ ವರದಿ ತಿಳಿಸಿದೆ.
ಎಪ್ಯಾಕ್ (ಏಷ್ಯಾ- ಪೆಸಿಫಿಕ್) ದೇಶಗಳ ಪೈಕಿ ಭಾರತದ ಗ್ರಾಹಕರಲ್ಲಿ ಆನ್ಲೈನ್ ನಲ್ಲಿ ನಡೆಯುತ್ತಿರುವ ವಂಚನೆ, ಮೋಸ ಪ್ರಕರಣಗಳ ಬಗ್ಗೆ ಸೂಕ್ತ ಮಾಹಿತಿ, ಅರಿವು, ಜಾಗೃತಿ ಕೊರತೆ ಇದೆ ಎಂಬ ಅಂಶಗಳು ವರದಿಯಿಂದ ತಿಳಿದು ಬಂದಿದೆ ಎಂದು ಸಂಸ್ಥೆಯ ಭಾರತದ ಮುಖ್ಯಸ್ಥ ವೈಶಾಲಿ ಕಸ್ತೂರ್ ಹೇಳಿಕೆ ನೀಡಿದ್ದಾರೆ.
ಮೋಸ ಹೋದ ಗ್ರಾಹಕರಿಗೆ ಹಣವನ್ನು ವಾಪಸ್ ನೀಡುವುದರಿಂದ ಆನ್ಲೈನ್ ವಂಚನೆ, ಮೋಸ ಕಡಿವಾಣ ಹಾಕಲು ಸಾಧ್ಯವಾಗುವುದಿಲ್ಲ. ಆನ್ಲೈನ್ ವಂಚನೆ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಲು ಹೆಚ್ಚು ಜಾಗೃತಿ ಹಾಗೂ ಸಾಮೂಹಿಕ ಹೋರಾಟದ ಅನಿವಾರ್ಯತೆ ಇದೆ.
ಎಪೆಕ್.ನ ೧೦ ದೇಶಗಳಾದ ಆಸ್ಟ್ರೇಲಿಯಾ, ಚೀನಾ, ಹಾಂಗ್ ಕಾಂಗ್, ಭಾರತ, ಇಂಡೋನೇಷ್ಯಾ, ಜಪಾನ್, ನ್ಯೂಜಿಲೆಂಡ್, ಸಿಂಗಪುರ್, ಥೈಲ್ಯಾಂಡ್, ವಿಯೆಟ್ನಾಂ ದೇಶಗಳ 3,200 ಗ್ರಾಹಕರನ್ನು ಸಮೀಕ್ಷೆ ನಡೆಸಲಾಗಿದೆ. ಮಾರ್ಕೆಟ್ ರಿಸರ್ಚ್ ಸಂಸ್ಥೆಯಾದ ಐಡಿಸಿ ಸಹಯೋಗದಲ್ಲಿ ಸಮೀಕ್ಷೆ ಕೈಗೊಂಡಿತ್ತು.
ಗ್ರಾಹಕರು ಆನ್ಲೈನ್ ವಂಚನೆ ಬಗ್ಗೆ ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ಏಕೆಂದರೆ, ಡಿಜಿಟಲಿಕರಣದ ಹೆಚ್ಚಿನ ಅನುಕೂಲತೆಗಳು ದೊಡ್ಡ ಪ್ರಮಾಣದ ವಂಚನೆ ಪ್ರಕರಣಗಳಿಗೆ ಅವಕಾಶ ಮಾಡಿಕೊಡುತ್ತವೆ. ಆದ್ದರಿಂದ ಗ್ರಾಹಕರು, ಬಯೋಮೆಟ್ರಿಕ್, ಫೇಸಿಯಲ್, ದ್ವನಿ ಮೂಲಕ ಖಾತ್ರಿ ಪಡಿಸುವ ಸೌಲಭ್ಯ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.
ಶೇ. 53 ಭಾರತೀಯರು ದಾಖಲೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದರಿಂದ ವಂಚನೆ ಮಾಡಲು ಅವಕಾಶ ಮಾಡಿಕೊಡುತ್ತದೆ. ಗ್ರಾಹಕರು ಅಸಂಬದ್ದವಾಗಿ ಮಾಹಿತಿ ಹಂಚಿಕೊಳ್ಳುವ ಮೂಲಕ ವ್ಯಯಕ್ತಿಕ ದಾಖಲೆಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!