ದಿನದ ಸುದ್ದಿ
ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತಂದೇ ತರುತ್ತೇವೆ : ಸಚಿವ ಸುಧಾಕರ್
ಸುದ್ದಿದಿನ,ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನುನನ್ನು ಜಾರಿಗೆ ತಂದೇ ತರುತ್ತೇವೆ. ಬಹುಶಃ ಮುಂದಿನ ಅಧಿವೇಶದನದಲ್ಲಿ ಜಾರಿಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಸುಧಾಕರ್ ಖಡಕ್ ಆಗಿ ಹೇಳಿದರು
ಶನಿವಾರ ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜು ಜಾಗದ ಸ್ಥಳ ವೀಕ್ಷಣೆ ನಡೆಸಿದ ನಂತರ ಮಾತನಾಡಿದ ಅವರು, ಈಗಾಗಲೇ ಮತಾಂತರ ನಿಷೇಧ ಕಾಯ್ದೆಯ ಕುರಿತಾಗಿ ಎಲ್ಲಾ ಹಂತಗಳಲ್ಲಿ ಚರ್ಚೆಯಾಗಿದ್ದು ಅಧಿವೇಶದನದಲ್ಲಿ ಜಾರಿಗೆ ತಂದೇ ತರುತ್ತೇವೆ ಎಂದರು.
ಮತಾಂತರ ನಿಷೇಧ ಕಾನೂನು ಜಾರಿಗೆ ತರುವ ವಿಷಯದಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಬಳಿ ಹೇಳಿಸಿಕೊಂಡು ಜಾರಿಗೆ ತರುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.
ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈದ್ಯಕೀಯ ಕಾಲೇಜಿನ ಕ್ಯಾಂಪಸ್ನ ವಿನ್ಯಾಸ ಹಾಗೂ ಇತರೆ ಅಂಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಯಿತು. ಬಳಿಕ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು. pic.twitter.com/ubo2yCNoWy
— Dr Sudhakar K (@mla_sudhakar) November 7, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243