ದಿನದ ಸುದ್ದಿ

ಅಪರಾಧ ಕೃತ್ಯ ತಡೆಯಲು ಎಲ್ಲ ರಾಜ್ಯಗಳ ಪೊಲೀಸರ ನಡುವೆ ಪರಸ್ಪರ ಸಹಕಾರ ಅತ್ಯಗತ್ಯ : ಅಮಿತ್ ಷಾ

Published

on

ಸುದ್ದಿದಿನ ಡೆಸ್ಕ್ : ಸ್ಮಾರ್ಟ್ ಪೊಲೀಸಿಂಗ್ ವ್ಯವಸ್ಥೆಗೆ ಎಲ್ಲ ರಾಜ್ಯಗಳ ಪೊಲೀಸ್ ವ್ಯವಸ್ಥೆ ನಡುವೆ ಪರಸ್ಪರ ಸಹಕಾರ ಮತ್ತು ಸಂಯೋಜನೆ ಅತ್ಯಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ನ ಕೇಂದ್ರೀಯ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇಂದು ಏರ್ಪಡಿಸಿದ್ದ 48ನೇ ಅಖಿಲ ಭಾರತ ಪೊಲೀಸ್ ಸೈನ್ಸ್ ಕಾಂಗ್ರೆಸ್ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಜ್ಞಾನಾಧಾರಿತ, ಸಾಕ್ಷ್ಯಾಧಾರಿತ ಹಾಗೂ ಕ್ಷಿಪ್ರ ಪೊಲೀಸ್ ವ್ಯವಸ್ಥೆಯ ಅಗತ್ಯವಿದೆ. ಹೀಗಾದಾಗ ಮಾತ್ರ ನವಯುಗದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ ಎಂದು ಅಮಿತ್ ಷಾ ಹೇಳಿದರು.

ವಿಶ್ವದ ಅಪರಾಧ ಕೃತ್ಯಗಳಿಗೆ ಇದೀಗ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳಂತಹ ಅಪರಾಧಗಳು ಸೇರ್ಪಡೆಗೊಂಡಿವೆ. ಇವುಗಳನ್ನು ನಿಯಂತ್ರಿಸುವುದು ಆಯಾ ರಾಜ್ಯ ಸರ್ಕಾರಗಳ ಜವಾಬ್ದಾರಿಯಾದರೂ ಎಲ್ಲ ರಾಜ್ಯಗಳ ಪೊಲೀಸ್ ಸಿಬ್ಬಂದಿ ನಡುವೆ ಪರಸ್ಪರ ಸಹಕಾರ ಮತ್ತು ಏಕರೂಪತೆ ಅತ್ಯವಶ್ಯ ಎಂದು ತಿಳಿಸಿದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version