ದಿನದ ಸುದ್ದಿ
ಕೊರೋನಾ ತಂದಿದೆ ಆಪತ್ತು; ತಲ್ಲಣಗೊಂಡಿದೆ ಮಕ್ಕಳ ಜಗತ್ತು..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/covid19_Suddidina_india_economy.jpg&description=ಕೊರೋನಾ ತಂದಿದೆ ಆಪತ್ತು; ತಲ್ಲಣಗೊಂಡಿದೆ ಮಕ್ಕಳ ಜಗತ್ತು..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/covid19_Suddidina_india_economy.jpg&description=ಕೊರೋನಾ ತಂದಿದೆ ಆಪತ್ತು; ತಲ್ಲಣಗೊಂಡಿದೆ ಮಕ್ಕಳ ಜಗತ್ತು..!', 'pinterestShare', 'width=750,height=350'); return false;" title="Pin This Post">
ಹೋಯ್ತಾ ಕೊರೋನಾ..? ಶಾಲೆಗೆ ಹೊರಡೋಣ..?
- ವಿ.ಕೆ.ಕುಮಾರಸ್ವಾಮಿ, ಶಿಕ್ಷಕರು, ರಾಮನಗರ
ಅಮ್ಮಾ ನನ್ ಲಂಚ್ ಬಾಕ್ಸ್ ಎಲ್ಲಿ? ನನ್ ಡ್ರಾಯಿಂಗ್ ಬುಕ್ ಎಲ್ಲೋಯ್ತು? ಅಯ್ಯೋ ಲೇಟ್ ಆಯ್ತು, ವ್ಯಾನ್ ಬಂದೇಬಿಡ್ತು ಅಮ್ಮಾ, ಲೇ ಪುಟ್ಟಾ ನೆನ್ನೆ ಮಿಸ್ಸು ಕನ್ನಡ ಹೋಮ್ವರ್ಕ್ ಕೊಟ್ಟಿದ್ರಲ್ಲಾ ಅದನ್ನ ಕಂಪ್ಲೀಟ್ ಮಾಡಿದ್ಯೇನೋ? ಲೋ ಸಾಗರ್ ಬಿಡೋ ಇವತ್ತು ಫಸ್ಟ್ ಪೀರಿಯಡ್ ಪಿ.ಟಿ ಇದೆ, ಚೆನ್ನಾಗಿ ಆಟ ಆಡೋಣ ಆಮೇಲೆ ಮಿಕ್ಕಿದ್ದು ನೋಡ್ಕಳಣ! ಅಬ್ಬಾ! ಮಕ್ಕಳ ಲೋಕ ಅದೆಷ್ಟು ಚೆಂದ ಅಲ್ವಾ. ಹೀಗಿದ್ದ ಮಕ್ಕಳ ಆಟ ಪಾಠಗಳ ತುಂಟಾಟಕ್ಕೆ ಇಂದು ಕೊರೋನಾ ಹೆಮ್ಮಾರಿ ಬ್ರೇಕ್ ಹಾಕಿರುವುದು ವಿಷಾದನೀಯ.
ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಮಕ್ಕಳ ಮನದ ತುಂಬಾ ಮೋಡ ಕವಿದ ವಾತಾವರಣ ಆವರಿಸಿದ್ದು ಖಿನ್ನತೆ, ಮಾನಸಿಕ ಅಸಮತೋಲನ, ವರ್ತನೆಯಲ್ಲಿ ಬದಲಾವಣೆ, ಮೊಬೈಲ್ ಗೀಳು ಹೆಚ್ಚಾಗಿ ಅವರ ಬದುಕು ಬಿರುಗಾಳಿಗೆ ಸಿಕ್ಕ ನಾವೆಯಂತೆ ಉಯಿಲಾಡುತ್ತಿದೆ. ಈ ಬಗ್ಗೆ ಇಲ್ಲೊಂದು ಅವಲೋಕನ..
ಹಿರಿದಾಗುತ್ತಿದೆ ಶೈಕ್ಷಣಿಕ ಅಂತರ
ಪ್ರಸ್ತುತ ಸಂದರ್ಭದಲ್ಲಿ ಇಡೀ ಶೈಕ್ಷಣಿಕ ಚಟುವಟಿಕೆಗಳು ನಿಂತುಹೋಗಿದ್ದು, ಕಳೆದ ಮೂರು ತಿಂಗಳಿಂದ ಮಕ್ಕಳ ಕಲಿಕೆಯ ಅಂತರ ಹಿರಿದಾಗುತ್ತಿದೆ. ಈಗಾಗಲೇ ಕೊರೋನಾ ಎಂಬ ವಿಷ ಕ್ರಿಮಿ ತನ್ನ ಬಾಹುಗಳನ್ನು ವಿಸ್ತಾರವಾಗಿ ಚಾಚುತ್ತಿರುವುದರಿಂದ, ಮಕ್ಕಳ ಸುರಕ್ಷತೆಯೊಂದಿಗೆ ಶಾಲೆಗಳ ಆರಂಭ ಅಷ್ಟು ಸುಲಭದ ಮಾತಲ್ಲ. ಈ ಸಂಬಂಧ ಸರ್ಕಾರ ಅಥವಾ ಪೋಷಕರು ಮಕ್ಕಳ ಶ್ರೇಯೋಭಿವೃದ್ಧಿಗೆ ವಿವಿಧ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಅದು ಮಕ್ಕಳ ಮೇಲೆ ನೇರ ಶಿಕ್ಷಣ ಪದ್ಧತಿಯಷ್ಟು ತೀವ್ರ ಪರಿಣಾಮ ಬೀರದಿರುವುದು ಆತಂಕದ ಸಂಗತಿಯಾಗಿದೆ.
ಬಹುತೇಕ ಇಂದಿನ ಮಕ್ಕಳಲ್ಲಿ ಕಾಡುತ್ತಿರುವ ತಾತ್ಕಾಲಿಕ ನೆನಪಿನ ಶಕ್ತಿಯ ಪರಿಣಾಮವಾಗಿ, ಮಕ್ಕಳನ್ನು ಈ ಮೊದಲಿನ ಸಹಜ ಸ್ಥಿತಿಗೆ ತರುವುದು ತೀರಾ ಪ್ರಾಯಾಸದ ಕೆಲಸವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್ಲೈನ್ ಶಿಕ್ಷಣ ದುಸ್ತರವಾಗುತ್ತಿದ್ದು, ಇದು ಶೈಕ್ಷಣಿಕ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಕೊರೋನಾ ಹೋಯ್ತಾ? ಶಾಲೆಗೆ ಆರಂಭವಾಯ್ತಾ? ಎಂಬುದು ಇಂದು ಏನೂ ಅರಿಯದ ಮುಗ್ಧ ಮಕ್ಕಳನ್ನು ಕಾಡುತ್ತಿರುವ ಬಹುದೊಡ್ಡ ಪ್ರಶ್ನೆಯಾಗಿದೆ. ಹೀಗೆ ಕೊರೋನಾ ಮಧ್ಯದಲ್ಲಿ ಅಡಕತ್ತರಿಗೆ ಸಿಕ್ಕಂತಾಗಿರುವ ಮಕ್ಕಳ ಬದುಕು ನಿಜಕ್ಕೂ ತಲ್ಲಣಗೊಂಡಿದೆ.
ಸಾಮಾಜೀಕರಣಕ್ಕೆ ಬ್ರೇಕ್
ಮಕ್ಕಳನ್ನು ಸಾಮಾಜೀಕರಣಗೊಳಿಸುವ ಪ್ರಕ್ರಿಯೆಯಲ್ಲಿ ಕುಟುಂಬದಷ್ಟೇ, ಶಾಲೆ, ನೆರೆಹೊರೆ ಹಾಗೂ ಸಮಕಾಲೀನ ವಯೋಮಾನದವರ ಪಾತ್ರವೂ ಸಹ ಹಿರಿದಾಗಿದೆ. ಆದರೆ ಕೊರೋನಾ ವಿಷ ಪೀಡೆ ಮಕ್ಕಳನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿರುವುದರಿಂದ, ಅವರು ಮನೆಯಿಂದ ಹೊರಗೆ ಬಾರದಂತಾಗಿ ಖಿನ್ನತೆ ಹೆಚ್ಚಾಗುತ್ತಿದೆ.
ಇದರಿಂದ ಅವರಲ್ಲಿ ವಯೋ ಸಹಜ ಮಾನಸಿಕ ಬೆಳವಣಿಗೆ ಕ್ಷೀಣಿಸುತ್ತಿದ್ದು, ವರ್ತನೆಯಲ್ಲಿ ವಿಭಿನ್ನ ಬದಲಾವಣೆಗಳು ಕಂಡು ಬರುತ್ತಿದೆ. ನಿತ್ಯವೂ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಮಕ್ಕಳ ಲೋಕ ಇಂದು ಮಂಕಾಗುತ್ತಿದೆ. ಹೀಗಾಗಿ ಸಾಮಾಜೀಕರಣ ಪ್ರಕ್ರಿಯೆ ತಡವಾಗುವುದರ ಜೊತೆಗೆ, ಅವರ ಭವಿಷ್ಯವೂ ಸಹ ಡೋಲಾಯಮಾನವಾಗುತ್ತಿದೆ.
ಮೊಬೈಲ್ ಬಳಕೆಯಿಂದ ಆಪತ್ತು
ಮನೆಯಲ್ಲೇ ಉಳಿದುಕೊಂಡಿರುವ ಕೋಟ್ಯಂತರ ಮಕ್ಕಳು ಇಂದು ಕಾಲ ಕಳೆಯಲೆಂದೋ ಅಥವಾ ಆನ್ಲೈನ್ ತರಗತಿಗಳಿಗೆಂದೋ ಮೊಬೈಲ್ ಮೊರೆ ಹೋಗಿದ್ದಾರೆ. ಆದರೆ ಭಾರತದಲ್ಲಿನ ಬಹುಪಾಲು ಪೋಷಕರ ಅನಕ್ಷರತೆ ಸಮಸ್ಯೆಯಿಂದಾಗಿ ತಮ್ಮ ಮಕ್ಕಳು ಮೊಬೈಲ್ನ್ನು ಸರಿಯಾದ ಉದ್ದೇಶಕ್ಕೆ ಬಳಸುತ್ತಿದ್ದಾರೆಯೇ ಎಂಬುದನ್ನು ತಿಳಿಯುವುದರಲ್ಲಿ ವಿಫಲತೆ ಎದುರಾಗಿದೆ.
ಇದರಿಂದ ಮಕ್ಕಳ ಮೇಲಿನ ಹಿಡಿತ ತಪ್ಪಿ, ಅವರ ಮನಸ್ಸು ವ್ಯಗ್ರವಾಗಿ ವಿವಿಧ ಸೈಬರ್ ಕ್ರೈಮ್ಗಳತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಪ್ರತಿದಿನ ಗೇಮ್ ಆಡಲು, ಚಾಟ್ ಮಾಡಲು ಇನ್ನಿತರ ಉದ್ದೇಶಗಳಿಗಾಗಿ ದೀರ್ಘಾವಧಿಯವರೆಗೆ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಇದು ತೊಡಕಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ ಮಕ್ಕಳ ಮೇಲೆ ಆಘಾತಕಾರಿ ಪರಿಣಾಮಗಳು ಸೃಷ್ಟಿಯಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ.
ಮೌಲ್ಯಗಳ ಕುಸಿತ
ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಬಹುತೇಕ ಇಂದಿನ ಡಿಜಿಟಲ್ ಯುಗದ ಮಕ್ಕಳು ಪೋಷಕರ ಮಾತಿಗೆ ಮನ್ನಣೆ ನೀಡುವುದು ಕಡಿಮೆಯೇ. ಮನೆಯಲ್ಲೇ ಉಳಿದ ಮಕ್ಕಳ ಮನಸ್ಸು ದಿಕ್ಕು ತಪ್ಪಿದಂತಾಗಿ, ಅವರಲ್ಲಿ ತೀವ್ರತರ ಮಾನಸಿಕ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಪೋಷಕರು ಮಕ್ಕಳಿಗೆ ಏನು ಹೇಳಿದರೂ ಅದು ತಪ್ಪೇ ಎಂಬಂತಾಗುತ್ತಿದೆ.
ಸುಮಾರು ಮಕ್ಕಳು ತಮ್ಮ ಪೋಷಕರ ವಿರುದ್ಧ ವಾಗ್ವಾದಕ್ಕೆ ಇಳಿಯುತ್ತಿರುವುದು, ಆತ್ಮಹತ್ಯೆ ಬೆದರಿಕೆಗಳನ್ನು ಒಡ್ಡುತ್ತಿರುವುದು, ತಮ್ಮ ವಯೋಮನಕ್ಕೆ ಮೀರಿದ ಭಾಷೆಯ ಬಳಕೆ, ಮಾನಸಿಕ ಸಂಘರ್ಷಗಳು, ಮಾನಸಿಕ ಕ್ಷೋಭೆ, ಇವುಗಳಿಂದಾಗಿ ಮಕ್ಕಳಲ್ಲಿರಬೇಕಾದ ನಿರೀಕ್ಷಿತ ಮೌಲ್ಯಗಳು ಕ್ಷೀಣಿಸುತ್ತಿವೆ. ಅತಿಯಾದ ಟಿ.ವಿ ಹಾಗೂ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದು ಅತ್ಯಂತ ಕ್ಷಿಷ್ಟಕರವಾಗುತ್ತಿದೆ. ಇವಿಷ್ಟೇ ಅಲ್ಲದೆ ಪೌಷ್ಟಿಕಾಂಶಗಳ ಕೊರತೆ, ಕೌಟುಂಬಿಕ ದೌರ್ಜನ್ಯಗಳು, ಬಲವಂತದ ದುಡಿಮೆ, ಮುಂತಾದ ಸಮಸ್ಯೆಗಳು ಮಕ್ಕಳಲ್ಲಿ ತಲೆದೋರುತ್ತಿದೆ.
-ವಿ.ಕೆ.ಕುಮಾರಸ್ವಾಮಿ,
ಬರಹಗಾರ, ಶಿಕ್ಷಕರು,
ವಿರುಪಾಪುರ, ಸುಗ್ಗನಹಳ್ಳಿ ಅಂಚೆ,
ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲ್ಲೂಕು,
ರಾಮನಗರ ಜಿಲ್ಲೆ – 561101
ಮೊ: 9113906120, 9740840678 (ವಾಟ್ಸಪ್)
ಇ ಮೇಲ್ : kumarvirupapura@gmail.com
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

