Connect with us

ದಿನದ ಸುದ್ದಿ

ಕೊರೋನಾ ಭಯಬಿಡಿ, ಶಿಕ್ಷಣದ ಕಡೆಗೆ ನಡಿ

Published

on

  • ಹೆಚ್.ಎಂ.ಸಂತೋಷ್,ಎಐವೈಎಫ್, ರಾಜ್ಯ ಕಾರ್ಯದರ್ಶಿ, ಹರಪನಹಳ್ಳಿ

ಕೊರೋನ ಸೋಂಕಿನ ಭಯದಿಂದಲೇ ಬದುಕುವ ಬದಲು, ಎಚ್ಚರಿಕೆ ಕ್ರಮಗಳನ್ನು ಅನುಸರಿಸಿ ಬದುಕಲು ಮುಂದಾಗಬೇಕೆಂಬ ಆಲೋಚನೆಗಳು ಈಗ ಸಮುದಾಯದಲ್ಲಿ ಮೂಡುತ್ತಿವೆ. ಸರಕಾರವೂ ಕೂಡ ಕರೋನದೊಂದಿಗೆ ಬದುಕುವುದನ್ನು ಕಲಿಯಬೇಕು ಎಂಬುದನ್ನು ಹೇಳುತ್ತಿದೆ.ಈ ಹಿನ್ನಲೆಯಲ್ಲಿ ದೇಶದ ಆರ್ಥಿಕ ಚಟುವಟಿಕೆ ಪುನ್ಸಶ್ಚೇನ ನೀಡುವ ಕಾರ್ಯವೂ ಆರಂಭವಾಗಿದೆ.

ಹಂತ, ಹಂತವಾಗಿ ಎಲ್ಲಾ ರಂಗಗಳಲ್ಲೂ ಸಡಿಲಿಕೆ ಕಂಡುಬರುತ್ತಿದೆ. ಇದೆ ಸಂದರ್ಭದಲ್ಲಿ ಶಿಕ್ಷಣ ಚಟುವಟಿಕೆ ನಡೆಸಬೇಕೆ?, ಬೇಡವೇ? ಎಂಬ ಪ್ರಶ್ನೆಗಳು ಸರಕಾರಕ್ಕೂ, ಪೋಷಕರಲ್ಲಿ ಮೂಡಿಬರುತ್ತಿದೆ.

ಕರೋನ ಸೋಂಕಿನ ಕಾರಣದಿಂದ ಈಗಾಲೇ ಪ್ರರೀಕ್ಷೆಗಳನ್ನು ಎದುರಿಸದೆ ಮಕ್ಕಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಶೈಕ್ಷಣಿಕ ಚಟುವಟಿಕೆಗಳ ಪುನರ್ ಆರಂಭವು ಉಳಿದ ಕ್ಷೇತ್ರದಂತೆ ಸರಳವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬುದೇನೋ ನಿಜ ಆದರೆ ಆರಂಭಿಸದಿರಲು ಆಗುವುದಿಲ್ಲ.

ಕೆಲವರು ಸಧ್ಯ ಶೈಕ್ಷಣಿಕ ಚಟುವಟಿಕೆ ಆರಂಭಿಸದಿರುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ ಪೋಷಕರು ಬಹಳ ಗೊಂದಲಕ್ಕೆ ಒಳಗಾಗಿದ್ದಾರೆ. ಶಾಲೆ-ಕಾಲೇಜುಗಳು ಪ್ರಾರಂಭವಾದರೆ ಎಲ್ಲಿ ಮಕ್ಕಳಿಗೆ ಸೋಂಕು ಹರಡಿಬಿಡುತ್ತೋ ಅನ್ನೋ ಭಯವಿದ್ದರು, ಆರಂಭವಾಗದಿದ್ದರೆ ಮಕ್ಕಳ ಭವಿಷ್ಯದ ಏನಾಗುತ್ತೋ ಅನ್ನೋ ಚಿಂತೆಯೂ ಅವರಲ್ಲಿ ಕಾಡುತ್ತಿದೆ.

ಇಂದು ಶಿಕ್ಷಣದ ವಿಚಾರಕ್ಕೆ ಹಲವಾರು ಅಭಿಪ್ರಾಯಗಳು ಬರತೊಡಗಿವೆ. ಅದರಲ್ಲಿ ಶೈಕ್ಷಣಿಕ ವರ್ಷದ ಕಡಿತಗೊಳಿಸುವೆ, ವಾರ್ಷಿಕ ಪಠ್ಯಗಳ ಕಡಿತಗೊಳಿಸುವಿಕೆ ಮಾಡಬೇಕು ಎಂಬುದು ಒಂದಾದರೆ, ಕೆಲವರು ಆನ್‍ಲೈನ್ ತರಗತಿಯ ಮೂಲಕ ತರಗತಿಗಳನ್ನು ಪ್ರಾರಂಭಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ.

ಇವುಗಳಲ್ಲಿ ಯಾವುದು ಮಕ್ಕಳ ಭವಿಷ್ಯವನ್ನು ರೂಪಿಸಲು ಉತ್ತಮ ಎಂಬುದರ ಕುರಿತುಯಾರಲ್ಲೂ ಸ್ಪಷ್ಟತೆ ಇಲ್ಲ. ಶೈಕ್ಷಣಿಕ ಅವಧಿಯ ಕಡಿತಗೊಳಿಸುವುದು ಮತ್ತು ಪಠ್ಯಕ್ರಮ ಕಡಿತಗೊಳಿಸುವುದು ಹೆಚ್ಚು ಸೂಕ್ತವಲ್ಲ, ಜೂನ್ ತಿಂಗಳ ಆರಂಭದಲ್ಲೆ ಶೈಕ್ಷಣಿಕ ಆರಂಭವಾಗಬೇಕಿತ್ತು ಆದರೆ ಇನ್ನೂ ಆರಂಭಿಸಿಲ್ಲ, ಆರಂಭಿಸುವ ಚರ್ಚೆಗಳು ಇನ್ನೂ ನಡೆಯುತ್ತಿವೆ.

ಶಾಲೆ- ಕಾಲೇಜು ಆರಂಭ ತಡವಾದಷ್ಟು ಮಕ್ಕಳ ಕಲಿಕೆಯ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಅನುಕೂಲಸ್ಥ ವಿದ್ಯಾವಂತ ಪೋಷಕರು ತಮ್ಮ ಮಕ್ಕಳ ಕಲಿಕೆಯನ್ನು ಸ್ವತಹ ತಾವೇ ಹೇಳಿಕೊಡುವ ಅಥವಾ ಇನ್ಯಾವುದೋ ಮಾರ್ಗದಲ್ಲಿ ಕಲಿಸುತ್ತಿರುತ್ತಾರೆ.

ಆದರೆ ದುಡಿಯುವ ವರ್ಗದವರ ಮಕ್ಕಳ ಸ್ಥಿತಿ ಹೀಗಿರಿರಲು ಸಾಧ್ಯವೇ ಇಲ್ಲ. ಈ ಮಕ್ಕಳು ಶಾಲೆಗಳ ಪ್ರಾರಂಭ ತಡವಾದಷ್ಟು ಕಲಿಕೆಯ ಮೇಲೆ ನಿರಾಸಕ್ತರಾಗುವುದೆ ಹೆಚ್ಚು. ಇನ್ನು ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಿಸಿದಾಗ ಶಿಕ್ಷಕರು ನೇರವಾಗಿ ಮಕ್ಕಳಿಗೆ ನೂತನ ತರಗತಿಯ ಪಠ್ಯ ಚಟುವಟಿಕೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ.

ಈಗಾಲೇ ಮಕ್ಕಳು ಬಹುದಿನಗಳಿಂದ ಕಲಿಕಾ ಚಟುವಟಿಕೆಗಳಿಂದ ದೂರ ಉಳಿದಿರುವುದರಿಂದ ಹಿಂದಿನ ತರಗತಿಯ ಕಲಿಕೆಯ ಫಲಗಳನ್ನು ಅರಿಯದೆ, ನೇರವಾಗಿ ಹೊಸ ವಿಷಯಗಳ ಕಲಿಕೆಗೆ ತೊಡಗಿಸುವುದು ಸೂಕ್ತವಲ್ಲ.

ಈ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಶೈಕ್ಷಣಿಕ ಚಟುವಟಿಕೆಗೆ ಪ್ರಾರಂಭದ ಕುರಿತು ಚರ್ಚಿಸುವು ಸೂಕ್ತವಾಗುತ್ತದೆ. ಆನ್‍ಲೈನ್ ತರಗತಿಗಳ ಬಗ್ಗೆ ದೊಡ್ಡ ಮಟ್ಟದ ಅಭಿಪ್ರಾಯ ಬರುತ್ತಿದೆ.

ಇಂದಿನ ಮಾಧ್ಯಮಗಳಲ್ಲಿ ಆನ್‍ಲೈನ್ ಕಲಿಕೆಯನ್ನು ಬಿಂಬಿಸುತ್ತಿರುವುದನ್ನು ನೋಡಿದರೆ, ಈ ಪರಿಸ್ಥಿತಿಯಲ್ಲಿ ಇದೆ ಪರ್ಯಾಯ ಎಂಬ ಅಭಿಪ್ರಾಯ ಮೂಡದಿರಲು ಸಾಧ್ಯವಿಲ್ಲ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ಬೋಧನೆ ಮತ್ತು ಕಲಿಕೆ ಎಂದರೆ ಯಾಂತ್ರಿಕ ಪ್ರಕ್ರಿಯೆ ಅಲ್ಲ. ಮಕ್ಕಳು ನೇರ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ಕಲಿಯೂವುದಕ್ಕೂ, ಶಿಕ್ಷಕರ ಮೇಲ್ವಿಚಾರಣೆ ಇಲ್ಲದೆ ಕಲಿಯುವುದಕ್ಕೂ ವ್ಯಾತ್ಯಾಸವಿದೆ.

ಈ ರೀತಿ ಕಲಿಕೆಗಳು ದೊಡ್ಡ ಹಂತದ ತರಗತಿಗಳಿಗೆ ಅಂದರೆ ಕಲಿಕೆಯಲ್ಲಿ ಸ್ವ ಆಸಕ್ತಿ ವಹಿಸುವ ಹಂತದವರಿಗೆ ಉತ್ತಮವೇ ಹೊರತು, ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ತರಗತಿಗಳಿಗೆ ಉತ್ತಮ ಕಲಿಕಾ ವಿಧಾನವಲ್ಲ. ಅಲ್ಲದೆ ತಂತ್ರಜ್ಞಾನವನ್ನು ಅನುಸರಿಸುವಷ್ಟು ಮಟ್ಟಿಗೆ ನಮ್ಮ ದೇಶದ ಸಮಾಜಿಕ ಮತ್ತು ಆರ್ಥಿಕ ಪರಿಸ್ಥಿಗಳು ಇವೆಯೇ? ಎಂಬುದನ್ನು ಗಮನಿಸಬೇಕು.

ಇಂದಿಗೂ ಶಾಲೆಗಳು ಉನ್ನತಿಕರಣ ಗೊಳ್ಳದಿರುವಾಗ, ಆನ್‍ಲೈನ್ ತರಗತಿ ಪ್ರಸ್ತಾಪ ಹಾಸ್ಯಾಸ್ಪದವಾಗುತ್ತದೆ.
ಇನ್ನೂ ಶಾಲೆಗಳು ಪ್ರಾರಂಭವಾದರೆ, ಮಕ್ಕಳು ಶಾಲೆಗಳಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವಷ್ಟು ಪರಿಸರ ಇದೆಯೇ? ವರ್ಗಕೋಣೆಗಳು ಅಂತರ ಕಾಯ್ದುಕೊಂಡು ಕಲಿಕೆಗೆ ಪ್ರೋತ್ಸಾಹ ನೀಡಬಲ್ಲವೇ? ಅಂತರ ಕಾಯ್ದುಕೊಳ್ಳುವಷ್ಟು ಮಕ್ಕಳ – ಶಿಕ್ಷಕರ ಅನುಪಾತ ನಿರ್ಮಿಸಲು ಸಾಧ್ಯವೇ? ಮಕ್ಕಳು ದೈಹಿಕ ಅಂತರ ಕಾಯ್ದುಕೊಳ್ಳುವಷ್ಟು ಜಾಗೃತರಾಗಿರುತ್ತಾರೆಯೇ?

ಊಟ, ಆಟ, ಪಾಠಗಳಲ್ಲಿ ಸದಾ ಅಂತರ ಕಾಯ್ದುಕೊಳ್ಳುವಂತೆ ಮಕ್ಕಳನ್ನು ಗಮನಿಸುತ್ತಿರಲು ಸಾಧ್ಯವೇ? ಶಾಲೆಯಅವಧಿ ಮುಗಿದ ಬಳಿಕ ಮಕ್ಕಳು ಮನೆಗೆ ತೆರಳುವಾಗಲೂ ಈ ಇದೆ ಕ್ರಮಗಳನ್ನು ಅನುಸರಿಸುತ್ತಾರೆಯೇ? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡರೆ ಶೈಕ್ಷಣಿಕ ಚಟುವಟಿಕೆ ಆರಂಭ ಮಾಡಲು ಸಾಧ್ಯವಿದೆ.
ಹಾಗಾದರೆ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಏನೂ ಮಾಡಬಹುದು.

ಮೊದಲು ಸರಕಾರ ಈ ಸಮಸ್ಯೆಯ ಪರಿಹಾರಕ್ಕೆ ಬಹುದೊಡ್ಡ ಮಾನವ ಶಕ್ತಿಯನ್ನು ನಿರ್ಮಾಣ ಮಾಡಿಕೊಳ್ಳಬೇಕು.ಈಗಿರುವ ಶಿಕ್ಷಕರು ಮತ್ತು ಶಾಲೆಗಳ ಸಂಖ್ಯೆಗಳಿಂದ ದೈಹಿಕ ಅಂತರ ಕಾಯ್ದುಕೊಳ್ಳುವಷ್ಟರ ಮಟ್ಟಿಗೆ ವಾತವಾರಣ ಇಲ್ಲ ಎಂಬುದಂತು ಸತ್ಯ. ಸರಕಾರವು ಪ್ರಾಥಮಿಕ ಹಂತದ ಮಕ್ಕಳಿಗೆ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ 15:1 ಮಾತ್ರ ಇರುವಂತೆ, ಮಾಧ್ಯಮಿಕ ಹಂತಗಳಲ್ಲಿ ಗರಿಷ್ಟ ವೆಂದರೂ 25:1 ಅನುಪಾತದಂತೆ ನೋಡಿಕೊಳ್ಳಬೇಕು.

ಇದರಲ್ಲಿ ಎರಡು ಸಮಸ್ಯೆಗಳು ಉದ್ಬವಿಸುತ್ತವೆ ಮೊದಲನೆಯದು ಶಿಕ್ಷಕರು, ಎರಡನೆಯದು ವರ್ಗಕೋಣೆಗಳು. ಇವುಗಳನ್ನು ಹೇಗೆ ಸೃಷ್ಟಿಸುಬೇಕು?, ಎಂಬುದು ಸರಕಾರಕ್ಕೆ ಸವಾಲು ಎದುರಾಗುತ್ತದೆ.
ಮೊದಲನೆಯದು ಶಿಕ್ಷಕರ ಸಮಸ್ಯೆಗೆ ಸಂಬಂಧಿಸಿದಂತೆ ಸರಕಾರವು ಈಗಾಗಲೇ ಶಿಕ್ಷಕ ತರಬೇತಿ ಪೂರ್ಣಗೊಳಿಸಿದ ಡಿ.ಇಡಿ ಮತ್ತು ಬಿ.ಇಡಿ ನಿರುದ್ಯೋಗಿ ಯುವಕರನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳವುದು ಉತ್ತಮ.

ಈಗಾಗಲೇ ಕೆಲವರು ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಹೊರಗಿದ್ದಾರೆ. ಸರಕಾರ ಇವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಜೀವನ ನಿರ್ವಹಣೆಗೆ ಸಹಾಯವಾಗುಂತಹ ಯೋಜನೆ ರೂಪಿಸಿದರೆ ಸಧ್ಯದ ಸಂದರ್ಭಕ್ಕೆ ಎದುರಾಗುವ ಮಾನವ ಸಂಪನೂಲ್ಮದ ಸಮಸ್ಯೆ ನಿವಾರಣೆಯಾಗುತ್ತದೆ.

ಎರಡನೇ ಸಮಸ್ಯೆ ಕಟ್ಟಡದ ಸಮಸ್ಯೆ, ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳು ಅಂದರೆ 1 ರಿಂದ 4ನೇ ತರಗತಿಯ ಮಕ್ಕಳಿಗೆ ಅವರ ಮನೆಯ ಸುತ್ತು ಮುತ್ತಲಿರುವ ನೆರಳಿರುವ ಪ್ರದೇಶದಲ್ಲಿ ಸ್ವಚ್ಚತೆಗೆ ಮಹತ್ವ ನೀಡಿರುವ ಸ್ಥಳದಲ್ಲಿ ಕಲಿಸುವ ಕಾರ್ಯ ಆರಂಭಿಸಬಹುದು. ಇದು ಸೂಕ್ತವಲ್ಲದಿದ್ದರು ಇಂದು ಶಾಲೆಗಳನ್ನು ಪ್ರಾರಂಭವೇ ಮಾಡದಿರವುದರ ಬದಲು ಶೈಕ್ಷಣಿಕ ಚಟುವಟಿಕೆಯ ಪ್ರಾರಂಭಕ್ಕೆ ಬದಾರಿಯಾಗುತ್ತದೆ.

ಇನ್ನೂ ಉನ್ನತ ಹಂತದ ಮಕ್ಕಳಿಗೆ ಖಾಲಿ ಉಳಿದ ತರಗತಿಗಳನ್ನು ಸೇರಿಸಿ ಮಕ್ಕಳ ಸಂಖ್ಯೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ತರಗತಿಗಳನ್ನು ಪ್ರಾರಂಭಿಸಬಹುದು. ಹೈಸ್ಕೂಲ್ ಮತ್ತು ಕಾಲೇಜ್ ಮಕ್ಕಳಲ್ಲಿ ಜಾಗೃತಿ ಇರುವುದರಿಂದ ಬೋಧಕರೆ ಎಚ್ಚರಿಸುತ್ತ ತರಗತಿಗಳನ್ನು ಆರಂಭಿಸಬಹುದು.

ಶಿಕ್ಷಣ ಕೇಂದ್ರಗಳು ಸ್ವಚ್ಚವಾಗಿರುವಂತೆ ಇತರೆ ಮುನ್ನಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು, ಜೊತೆಗೆ ಎಚ್ಚರ ತಪ್ಪಂದತೆ ಜಾಗೃತಿ ವಹಿಸಿದರೆ ಸಾಕಾಗುತ್ತದೆ. ಕರೋನದ ಭಯದಿಂದಲೇ ನಾವು ಮಕ್ಕಳ ಭವಿಷ್ಯವನ್ನು ಕುಟಿಂತಗೊಳಿಸುವ ಬದಲು ಪರ್ಯಾಯ ಮಾರ್ಗದೆಡೆಗೆ ಸಾಗುವುದು ಉತ್ತಮ. ಎಚ್ಚರಿಕೆಯ ಕ್ರಮಗಳಿಂದ ಮಕ್ಕಳ ಹಕ್ಕುಗಳನ್ನು ಒದಗಿಸಲು ಅವಕಾಶವಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending