Connect with us

ದಿನದ ಸುದ್ದಿ

ಕೊರೋನಾ – ಕೈಚೆಲ್ಲಿ ಕೂರುವುದು ಹೊಣೆಗೇಡಿತನವಾದೀತು

Published

on

  • ನಾ ದಿವಾಕರ

ರ್ನಾಟಕದಲ್ಲಿ ಮತ್ತು ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಮೇ 1 ರಂದು ಎರಡನೆ ಹಂತದ ಲಾಕ್ ಡೌನ್ ಅಂತ್ಯವಾದಾಗ ವಿಶ್ವದಲ್ಲಿ ಎರಡನೆ ಸ್ಥಾನದಲ್ಲಿದ್ದ ಭಾರತ ಈಗ ಅಮೆರಿಕ ನಂತರ ಎರಡನೆ ಸ್ಥಾನದಲ್ಲಿದೆ. ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಅಂಕಿಅಂಶಗಳನ್ನು ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಏನೇ ಕಸರತ್ತು ಮಾಡಿದರೂ ರಾಜ್ಯದಲ್ಲಿ ಕೊರೋನಾ ವ್ಯಾಪಿಸುತ್ತಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ, ಸಾವಿನ ಪ್ರಮಾಣ ಶೇಕಡಾವಾರು ಕಡಿಮೆ ಇದೆ ಎಂದ ಮಾತ್ರಕ್ಕೆ ಹೆಚ್ಚುತ್ತಿರುವ ಸೋಂಕು ನಗಣ್ಯ ಎಂದು ಭಾವಿಸಲಾಗುವುದಿಲ್ಲ. ಸೋಂಕನ್ನು ತಡೆಗಟ್ಟುವುದು ಹೇಗೆ ಎಂದು ಯೋಚಿಸುವುದಲ್ಲದೆ, ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಪರಿಸ್ಥಿತಿ ಹೇಗಿದೆ ಎಂದು ಅವಲೋಕನ ಮಾಡುವುದು ಇಂದಿನ ತುರ್ತು.

ಕೇಂದ್ರ ನೀತಿ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯೊಂದರಲ್ಲಿ ಇದೇ ಎಚ್ಚರಿಕೆಯನ್ನು ನೀಡಿದೆ. ಕೊರೋನಾ ವೈರಾಣು ದೊಡ್ಡ ನಗರಗಳಿಗಿಂತಲೂ ಸಣ್ಣ ಪುಟ್ಟ ನಗರಗಳು, ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶೀಘ್ರವಾಗಿ ಹರಡುತ್ತಿದೆ, ದೇಶದ ಹೆಚ್ಚಿನ ಭಾಗ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗ ಅಧಿಕಾರಿ ವಿ ಕೆ ಪಾಲ್ ಎಚ್ಚರಿಸಿದ್ದಾರೆ. ಕೊರೋನಾ ಸೋಂಕಿನ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು ಎಂದು ನೀತಿ ಆಯೋಗವೂ ಸಲಹೆ ನೀಡಿದೆ.

ಶೇಕಡಾವಾರು ಸಾವಿನ ಪ್ರಮಾಣ ಕಡಿಮೆ ಇದೆ ಎಂದ ಮಾತ್ರಕ್ಕೆ ಸಾವಿನ ಸಂಖ್ಯೆಯನ್ನು ಕಡೆಗಣಿಸಲಾಗುವುದಿಲ್ಲ. ವೆಂಟಿಲೇಟರ್ ಇಲ್ಲದೆ, ಆಸ್ಪತ್ರೆಯಲ್ಲಿ ಸ್ಥಳಾವಕಾಶವಿಲ್ಲದೆ, ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸೋಂಕಿತರು ಮೃತಪಟ್ಟರೆ ಅದು ಪ್ರಭುತ್ವ ಮಾಡುವ ಕೊಲೆ ಎಂದೇ ಭಾವಿಸಬೇಕಾಗುತ್ತದೆ. ಏಕೆಂದರೆ ಪ್ರತಿಯೊಂದು ಜೀವವೂ ಅಮೂಲ್ಯ. ಮತ್ತೊಂದೆಡೆ ದಾಖಲೆಗಳ ಸಂಗ್ರಹದಲ್ಲಿರುವ ವ್ಯತ್ಯಯಗಳ ಪರಿಣಾಮ ಈ ಅಂಕಿ ಅಂಶಗಳೂ ಸಹ ಪರಿಪೂರ್ಣವಲ್ಲ ಎನ್ನುವುದು ಸಾರ್ವತ್ರಿಕ ಸತ್ಯ.

ಈ ಸಂದರ್ಭದಲ್ಲೇ ಕರ್ನಾಟಕದಲ್ಲಿ ಕೋವಿದ್ 19 ನಿಂದ ಸತ್ತವರ ಸಂಖ್ಯೆ 6937. ಒಟ್ಟು ಸೋಂಕಿತರ ಸಂಖ್ಯೆ 4.30 ಲಕ್ಷ. ಸೆಪ್ಟಂಬರ್ ತಿಂಗಳ 10 ದಿನಗಳಲ್ಲಿ 1235 ಮಂದಿ ಮೃತಪಟ್ಟಿದ್ದಾರೆ ಅಂದರೆ ಪ್ರತಿದಿನ ಕನಿಷ್ಟ ಸರಾಸರಿ 123 ಹೆಚ್ಚು ಮಂದಿ ಸಾಯುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಕೋವಿದ್ ಪರೀಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲಾಗಿದ್ದು ಸೋಂಕಿತರ ಸಂಖ್ಯೆಯೂ ಕಡಿಮೆ ಎನಿಸುತ್ತಿದೆ. ಆರು ತಿಂಗಳ ಅವಧಿಯಲ್ಲಿ ಕರ್ನಾಟಕದಲ್ಲಿ 34.61 ಲಕ್ಷ ಜನರು ಪರೀಕ್ಷೆಗೊಳಪಟ್ಟಿದ್ದಾರೆ.

ರಾಜ್ಯದ ಜನಸಂಖ್ಯೆಗೆ ಹೋಲಿಸಿದರೆ ಇದು ನಗಣ್ಯ ಎನ್ನಬಹುದು. 3.22 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದರೆ ಕೊರೋನಾ ನಿಯಂತ್ರಣದಲ್ಲಿದೆ ಎಂದರ್ಥವಲ್ಲ. ಸೋಂಕಿತರ ಪ್ರಮಾಣ ಏರುತ್ತಿರುವುದು ಸರ್ಕಾರವನ್ನು ಎಚ್ಚರಿಸಬೇಕಿದೆ. ಈ ಮುನ್ನ ಸೋಂಕಿತ ವ್ಯಕ್ತಿಗಳ ಮನೆಗಳನ್ನು, ಅಥವಾ ಮನೆ ಇರುವ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿತ್ತು. ಇದರ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಲಾಗುತ್ತಿತ್ತು.

ಈಗ ಸೋಂಕಿತ ವ್ಯಕ್ತಿಯ ಮನೆಗಳನ್ನು ಮಾತ್ರವೇ ಸೀಲ್ ಡೌನ್ ಮಾಡಲಾಗುತ್ತಿದೆ. ಒಂದು ಊರಿನ ಯಾವ ರಸ್ತೆ ಅಥವಾ ಯಾವ ಬಡಾವಣೆಯಲ್ಲಿ ಸೋಂಕಿತರಿದ್ದಾರೆ ಎನ್ನುವ ಮಾಹಿತಿಯನ್ನು ಎಲ್ಲಿಯೂ ನೀಡಲಾಗುತ್ತಿಲ್ಲ. ಹಾಗಾಗಿ ಸೋಂಕಿತರು ಇರುವ ರಸ್ತೆಗಳಲ್ಲಿ, ಸೋಂಕಿನ ಅರಿವು ಇಲ್ಲದೆ ಓಡಾಡುವವರೂ ಸಹ ಯಾವುದೋ ಒಂದು ರೀತಿಯಲ್ಲಿ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿರುತ್ತವೆ ಅಲ್ಲವೇ ? ಈಗ ಸರ್ಕಾರದ ಗಮನ ಮಾರುಕಟ್ಟೆ ಮತ್ತು ಆರ್ಥಿಕತೆಯತ್ತ ಹೊರಳಿದೆ. ಚಿತ್ರಮಂದಿರಗಳು ಮತ್ತು ಶಾಲೆಗಳನ್ನು ತೆರೆದುಬಿಟ್ಟರೆ ಸಂಪೂರ್ಣ ಸಹಜ ಸ್ಥಿತಿಗೆ ಬಂದಂತಾಗುತ್ತದೆ. ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರತೆಯ ದೃಷ್ಟಿಯಿಂದ ಇದು ಅನಿವಾರ್ಯ ಇರಬಹುದು. ಆದರೆ ಇದರೊಟ್ಟಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದೂ ಮುಖ್ಯ ಅಲ್ಲವೇ ?

ಕೊರೋನಾ ಸದ್ದೇ ಮಾಡದಿದ್ದ ಸಂದರ್ಭದಲ್ಲಿ ಸೂರ ಕುಸಿಯುವಂತೆ ಅರಚಾಡುತ್ತಿದ್ದ ಸುದ್ದಿಮನೆಯ ಕೂಗುಮಾರಿಗಳಿಗೆ ಈಗ, ಕೊರೋನಾ ಮನೆಮನೆಗೂ ಹಬ್ಬುತ್ತಿರುವಾಗ ಕಂಗನಾ, ರಿಯಾ, ಕವಿತಾ, ಸಂಜನಾ, ಸುಶಾಂತ್ ಟಿ ಆರ್ ಪಿ ಸಾಧನಗಳಾಗಿಬಿಟ್ಟಿದ್ದಾರೆ. ಸುದ್ದಿಮನೆಗಳು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗಿ ಹಾಳಾಗಿ ಹೋಗಿವೆ. ಸುದ್ದಿಮನೆಯ ಕೂಗುಮಾರಿಗಳಿಗೆ ತಬ್ಲೀಗಿಗಳು ಒಂದು ಘಟ್ಟದಲ್ಲಿ ಲಾಭದಾಯಕವಾಗಿ ಕಾಣುತ್ತಿದ್ದರು.

ಕೊರೋನಾ ರಣಕೇಕೆ ಹಾಕುತ್ತಾ ಹಣ ತರುತ್ತಿತ್ತು. ಈಗ ಡ್ರಗ್ಗಿಣಿ, ಢಾಕಿಣಿ ಬಲೆಗೆ ಸಿಲುಕಿದ್ದಾರೆ. ಅಂದೂ ಸುದ್ದಿ ನೀಡಿರಲಿಲ್ಲ ಇಂದೂ ನೀಡುತ್ತಿಲ್ಲ. ಈಗ ಡ್ರಗ್ ಪೀಡಿತರಾಗಿರುವುದರಿಂದ ಹೆಚ್ಚಿನದೇನೂ ನಿರೀಕ್ಷಿಸಲೂ ಆಗುವುದಿಲ್ಲ. ಮುದ್ರಣ ಮಾಧ್ಯಮಗಳಲ್ಲಿ ಕೊರೋನಾ ಈಗ ಚಿನ್ನ-ಬೆಳ್ಳಿ, ಈರುಳ್ಳಿ-ಬೆಳ್ಳುಳ್ಳಿ, ಮಾಂಸ-ಮೊಟ್ಟೆಯ ಹಾಗೆ ಪೇಟೆ ಧಾರಣೆಯ ಅಂಕಿಅಂಶಗಳಾಗಿ ಕಾಣುತ್ತಿದ್ದು ಎಲ್ಲೋ ಮೂಲೆಯಲ್ಲಿ ಜಾಗ ಪಡೆಯುತ್ತಿವೆ.

ಕೊರೋನಾದೊಂದಿಗೆ ಬದುಕುವುದನ್ನು ಜನರು ಕಲಿತಿದ್ದಾರೆ. ಸತ್ತವರಿಗೆ ಏನು ಹೇಳುವುದು ? ಆರ್ಥಿಕವಾಗಿ ಜರ್ಝರಿತವಾಗಿರುವ ಅನೇಕ ಕುಟುಂಬಗಳು ತಮ್ಮ ಆಧಾರ ಕಳೆದುಕೊಳ್ಳುತ್ತಿವೆ. ಒಂದು ಲಕ್ಷಕ್ಕೂ ಹೆಚ್ಚು ಅಂಗಡಿ ಮುಗ್ಗಟ್ಟುಗಳು ಮುಚ್ಚಲ್ಪಟ್ಟಿವೆ. ಹಲವಾರು ಸ್ಟೇಷನರಿ ಅಂಗಡಿಗಳು ಮುಚ್ಚಲ್ಪಟ್ಟಿವೆ, ದಿನಸಿ ಅಂಗಡಿಗಳು ಮುಚ್ಚಲ್ಪಟ್ಟಿವೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡು ನಾಳಿನ ಚಿಂತೆಯಲ್ಲಿದ್ದಾರೆ.

ಈ ನಡುವೆಯೇ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳನ್ನೂ ಅನ್ ಲಾಕ್ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಿದೆ. ಸೆಪ್ಟಂಬರ್ 21 ರಿಂದ ಸಭೆ ಸಮಾರಂಭಗಳಲ್ಲಿ 100 ಜನರಿಗೆ ಅವಕಾಶ ನೀಡಲಾಗುತ್ತಿದೆ. 9 ರಿಂದ 12ನೆಯ ತರಗತಿಯವರೆಗೆ ಶಾಲೆಗಳನ್ನು ತೆರೆಯಲಾಗುತ್ತಿದೆ. ಬಾರ್ ರೆಸ್ಟೋರೆಂಟ್ ಪಬ್ ಈಗಾಗಲೇ ತೆರೆದಿವೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳನ್ನೂ ತೆರೆಯಲಾಗುತ್ತದೆ. ಇದು ಅನಿವಾರ್ಯ ಎಂದಾದರೆ ಇರಲಿ, ಕೊರೋನಾ ಸೋಂಕಿತರ ಸೌಖ್ಯವೂ ಅನಿವಾರ್ಯವೇ ಅಲ್ಲವೇ ?

ನೀತಿ ಆಯೋಗದ ಒಂದು ಎಚ್ಚರಿಕೆಯ ಮಾತನ್ನು ಜನರೂ ಅರ್ಥಮಾಡಿಕೊಳ್ಳಬೇಕು, ಸರ್ಕಾರವೂ ಯೋಚಿಸಬೇಕು. ಜನರ ನಿರ್ಲಕ್ಷ್ಯವೇ ಸೋಂಕು ಹೆಚ್ಚುವುದಕ್ಕೆ ಕಾರಣ ಎಂದು ನೀತಿ ಆಯೋಗ ಹೇಳಿರುವುದು ವಾಸ್ತವ ಸಂಗತಿ. ಯಾವುದೇ ಸಭೆ ಸಮಾರಂಭಗಳಲ್ಲೂ ಸರ್ಕಾರ ರೂಪಿಸಿರುವ ನಿರ್ದಿಷ್ಟ ಮಾನದಂಡಗಳನ್ನು ಪಾಲಿಸಲಾಗುತ್ತಿಲ್ಲ.

ಸಚಿವರು, ಸರ್ಕಾರಿ ಅಧಿಕಾರಿಗಳೇ ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಬಿಟ್ಟರೆ ಮತ್ತಾವ ನಿಯಮಗಳೂ ಪಾಲನೆಯಾಗುತ್ತಿಲ್ಲ. ಆರು ಅಡಿ ದೈಹಿಕ ಅಂತರ ಕಾಪಾಡಿಕೊಳ್ಳುವ ನಿಯಮ ಶತಮಾನದ ಜೋಕ್ ಆಗಿ ಕಾಣುತ್ತಿದೆ. ಜನಸಾಮಾನ್ಯರ ನಿತ್ಯ ಜೀವನದಲ್ಲಿ, ಜನನಿಬಿಡ ಮಾರುಕಟ್ಟೆಗಳಲ್ಲಿ ಇದನ್ನು ಅನುಸರಿಸುವುದೂ ಕಷ್ಟ ಎನ್ನುವುದು ವಾಸ್ತವ.

ಆದರೆ ಸರ್ಕಾರದ ವತಿಯಿಂದ ಯಾವ ರೀತಿಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ ? ಎಷ್ಟು ಸಭೆ ಸಮಾರಂಭಗಳಲ್ಲಿ, ಮದುವೆ ಮುಂತಾದ ಸಮಾರಂಭಗಳಲ್ಲಿ ನಿಯಮ ಪಾಲನೆಯ ಬಗ್ಗೆ ಪರಿವೀಕ್ಷಣೆ ಮಾಡಲಾಗುತ್ತಿದೆ ? ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದೂ ಸಹ ವಿರಳ ಎನಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಹೇಗಿದೆ, ಆರೋಗ್ಯ ಸೌಲಭ್ಯಗಳು ಹೇಗಿವೆ, ಶುಚಿತ್ವ ಕಾಪಾಡಲಾಗಿದೆಯೇ, ಆಸ್ಪತ್ರೆಗಳಲ್ಲಿ ಎಲ್ಲವೂ ಸುಸೂತ್ರವಾಗಿ ಇದೆಯೇ ಇವೇ ಮುಂತಾದ ವಿಚಾರಗಳ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಇಂತಹ ವಿಷಮ ಸನ್ನಿವೇಶದಲ್ಲಿ ಸೂಕ್ಷ್ಮ ಸಂವೇದನೆ ಇರುವವರು ಆರೋಗ್ಯ ಇಲಾಖೆಯ ಉಸ್ತುವಾರಿ ವಹಿಸಿದ್ದರೆ ಬಹುಶಃ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎನಿಸುತ್ತದೆ.

ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಅಕ್ಷರಶಃ ಹರಾಜು ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ. ವಿಮಾನದಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಎಲ್ಲವನ್ನೂ ಹರಾಜು ಮಾಡಲು ಮಾರುಕಟ್ಟೆ ಕೂಗುಮಾರಿಗಳು ಸಜ್ಜಾಗುತ್ತಿದ್ದಾರೆ. ಇವರನ್ನು ನಾವೇ ಆಯ್ಕೆ ಮಾಡಿರುವುದು ನಮ್ಮ ದುರದೃಷ್ಟ. ಕೊರೋನಾ ಇರಲಿ ಇಲ್ಲದಿರಲಿ ಜನಸಾಮಾನ್ಯರು ಹೇಗೋ ಒಂದು ಬದುಕುತ್ತಾರೆ ಆದರೆ ತಮಗೆ ಅರಿವಿಲ್ಲದೆಯೇ ಸಾಯುವುದೂ ಸತ್ಯ.

ಬದುಕು ಮತ್ತು ಸಾವು ಜನರ ಕೈಯ್ಯಲ್ಲೇ ಇದೆ ಆದರೆ ಬದುಕುವ ಪರಿಸರ ನಿರ್ಮಿಸಿ ಸಾಯುವುದನ್ನು ತಡೆಗಟ್ಟುವ ಹೊಣೆ ಚುನಾಯಿತ ಸರ್ಕಾರದ ಮೇಲಿರುತ್ತದೆ ಅಲ್ಲವೇ ? ಕೊರೋನಾ ಈ ಪರಿಸರವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ. ವೈರಾಣು ನಿಯಂತ್ರಣಕ್ಕೆ ಬರುವುದಿಲ್ಲ, ಲಾಕ್ ಡೌನ್ ಉಪಯುಕ್ತವಲ್ಲ, ಗಂಟೆ, ಜಾಗಟೆ, ಶಂಖನಾದ, ಚಪ್ಪಾಳೆ, ಗೋ ಕೊರೋನಾ ಇವೆಲ್ಲವೂ ತಮಾಷೆಯ ಸರಕುಗಳಾಗಿವೆ.

ಹಾಗಾದರೆ ಏನು ಮಾಡಬೇಕು ? ಆರೋಗ್ಯ ಸೇವೆಯನ್ನು ವಿಸ್ತರಿಸಬೇಕು, ಎಲ್ಲರಿಗೂ ಸಮನಾಗಿ ದೊರೆಯುವಂತೆ ಮಾಡಬೇಕು, ಚಿಕಿತ್ಸೆ ಗಗನಕುಸುಮವಾದರೆ ಸೋಂಕಿತರು ಸಾಯುವ ಸಿದ್ಧತೆಯೊಂದಿಗೇ ಆಸ್ಪತ್ರೆಗೆ ಬರಬೇಕಾಗುತ್ತದೆ. ಎಷ್ಟು ಕುಟುಂಬಗಳು ಈ ಸಂದರ್ಭದಲ್ಲಿ ಅನಾಥವಾಗಿವೆ ಎಂದು ಸರ್ಕಾರ ಯೋಚಿಸಬೇಕು. ವೈದ್ಯರ ಕೊರತೆ ಇದೆ ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಖಾಸಗಿ ವೈದ್ಯರನ್ನು, ಆಸ್ಪತ್ರೆಗಳನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಪುನಃ ಮಾರುಕಟ್ಟೆ ಲೆಕ್ಕಾಚಾರ ಅಡ್ಡಿಯಾಗುತ್ತದೆ. ಸುದ್ದಿಮನೆಯ ಕೂಗುಮಾರಿ ನಿರೂಪಕರಿಗೆ ಟಿ ಆರ್ ಪಿ ಚಿಂತೆಯಾದರೆ, ಚುನಾಯಿತ ಮಾರುಕಟ್ಟೆ ಕೂಗುಮಾರಿಗಳಿಗೆ ಮುಂದಿನ ಚುನಾವಣೆ ಮತ್ತು ನಿಧಿಯ ಚಿಂತೆ. ಇಷ್ಟರ ನಡುವೆ ಬಡಪಾಯಿ ಪ್ರಜೆ ಬದುಕಲು ಕಲಿಯುತ್ತಿದ್ದಾನೆ, ಸಾಯುತ್ತಿರುವವರನ್ನು ನೋಡುತ್ತಲೇ ತನ್ನ ಚಿತೆಯ ಚಿಂತೆಯಲ್ಲೇ ಕಾಲ ಕಳೆಯುತ್ತಿರುತ್ತಾನೆ. ಇಷ್ಟನ್ನು ಅರ್ಥಮಾಡಿಕೊಳ್ಳುವ ಸಂವೇದನೆ, ಪರಿಜ್ಞಾನ ಸರ್ಕಾರಕ್ಕೆ ಇರಬೇಕು. “ಹಣೆಬರಹವಿದ್ದಂತೆ ಆಗುತ್ತದೆ ” ಎನ್ನುವ ಪ್ರಾಚೀನ ಬೌದ್ಧಿಕ ದಾರಿದ್ರ್ಯವನ್ನೇ ಪ್ರದರ್ಶಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳುವುದು ಹೊಣೆಗೇಡಿತನವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending