ದಿನದ ಸುದ್ದಿ
ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ನಿಮಗಿದೆಯೇ..? : ನಳಿನ್ ಕುಮಾರ್ ಕಟೀಲ್ ಭಾಷೆಯಲ್ಲೇ ತಿರುಗೇಟು ನೀಡಿದ ಸಿದ್ದರಾಮಯ್ಯ..?

ಸುದ್ದಿದಿನ ಡೆಸ್ಕ್ : ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ,
ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ @nsitharaman ಅವರ ಮನವೊಲಿಸಿ,
ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ @nalinkateel ಅವರೇ?
2/2— Siddaramaiah (@siddaramaiah) October 23, 2020
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ?
1/2— Siddaramaiah (@siddaramaiah) October 23, 2020
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ…
Posted by Siddaramaiah on Friday, October 23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು

ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ
ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೋಟರಿ ಆಶ್ರಯದಲ್ಲಿ ನೋಟು-ನಾಣ್ಯಗಳ “ಅಪೂರ್ವ ಸಂಗ್ರಹ” ಪ್ರದರ್ಶನ : ಭಾನುವಾರ ಕಡೆ ದಿನ

ಸುದ್ದಿದಿನ,ದಾವಣಗೆರೆ : ನೋಟುಗಳು – ನಾಣ್ಯಗಳು, ಇಂದಿನ ಕಾಲದ – ಹಿಂದಿನ ಕಾಲದ, ದೇಶದ – ವಿದೇಶದ ಅಪೂರ್ವ ಸಂಗ್ರಹವನ್ನು ನೋಡುವ ಅಪರೂಪದ ಅವಕಾಶ ನಗರದ ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಒದಗಲಿದೆ.
ದಾವಣಗೆರೆ ರೋಟರಿ ಸಂಸ್ಥೆ ಬರುವ ಶನಿವಾರ ಮಾರ್ಚ್ 6 ಮತ್ತು ಭಾನುವಾರ ಮಾ.7ರಂದು ಎಂ.ಸಿ.ಸಿ ಎ ಬ್ಲಾಕಿನಲ್ಲಿರುವ ದಾವಣಗೆರೆ ಹರಿಹರ-ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಲಿದೆ.
ಬೆಳಗಾವಿಯ ಈರಪ್ಪ ಗುರುಲಿಂಗ ಪರಮಶೆಟ್ಟಿ ಕಳೆದ ಐದು ದಶಕಗಳಿಂದ ಸಂಗ್ರಹಿಸಿರುವ ಅಪರೂಪದ ನೋಟುಗಳು-ನಾಣ್ಯಗಳು ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳನ್ನು ಕಂಡಿವೆ. ಬ್ರಿಟೀಷ್ ಆಡಳಿತದ, ಮರಾಠಾ, ಪೇಶ್ವೇ, ಮೊಘಲರು ನಿಜಾಮರ ಹಾಗೂ ಟಿಪ್ಪು ಆಡಳಿತದ ನಾಣ್ಯಗಳ ಪ್ರದರ್ಶನ ವಿಶೇಷವಾದದ್ದು.
ಒಂದರಿಂದ ಸಾವಿರ ರೂಗಳ ಹಳೆಯ ಬೆಳ್ಳಿಯ ನಾಣ್ಯಗಳು ಇಲ್ಲಿ ಕಾಣ ಸಿಗುತ್ತವೆ. ಒಂದೇ ಮೌಲ್ಯದ ನೂರ ಐವತ್ತಕ್ಕೂ ಹೆಚ್ಚು ವಿವಿಧ ನೋಟುಗಳ ನೋಟ ಅಪರೂಪದ ಆಕರ್ಷಣೆಯಾಗಲಿದೆ.ಇವರ ಸಂಗ್ರಹ “ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ 1997ರಿಂದ ಸತತವಾಗಿ ಮೂರು ವರ್ಷಗಳ ಕಾಲ ನಮೂದಿಸಲ್ಪಟ್ಟಿದೆ.
ಮಾರ್ಚ್ ಆರು ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ದಾವಣಗೆರೆಯ ಪ್ರಥಮ ಪೌರರಾದ ಎಸ್.ಟಿ. ವೀರೇಶ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಆರ್.ಟಿ. ಮೃತ್ಯುಂಜಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಡಿಡಿಪಿಐ ಪರಮೇಶ್ವರಪ್ಪ ತಹಶೀಲ್ದಾರ್ ಗಿರೀಶ್ ಮುಂತಾದವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಅಪರೂಪದ ನೋಟು-ನಾಣ್ಯಗಳ ಪ್ರದರ್ಶನ ಮಾರ್ಚ್ ಆರು ಮತ್ತು ಏಳರ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ನಿತ್ಯ ಭವಿಷ್ಯ5 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಬಹಿರಂಗ5 days ago
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
-
ದಿನದ ಸುದ್ದಿ3 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ನಿತ್ಯ ಭವಿಷ್ಯ4 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ದಿನದ ಸುದ್ದಿ4 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ