Connect with us

ಸಿನಿ ಸುದ್ದಿ

ತ್ರಿಮೂರ್ತಿ ಸಂಗಮದಿಂದ ಹೊರ ಬಂತು ಕೊರೊನಾ ಹಾಡು : ಈ‌ ಸಮಯದ ಸ್ಪೂರ್ತಿ ಇದು ; ಮಿಸ್ ಮಾಡ್ದೆ ನೋಡಿ..!

Published

on

ಸುದ್ದಿದಿನ ಡೆಸ್ಕ್ : ಕೆಲವು‌ ದಿನಗಳ‌ ಹಿಂದೆಯಷ್ಟೇ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ಸಾಹಿತಿ‌ ಜಯಂತ್ ಕಾಯ್ಕಿಣಿ ಬರೆದಿದ್ದರು. ಆ ಹಾಡಿಗೆ ಸಂಗೀತ ಸಂಯೋಜಿಸಿ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು‌ ಹಾಡಿದ್ದರು. ಜನರಿಂದ ಆ ಹಾಡಿಗೆ ಒಳ್ಳೆಯ ಪ್ರತಿಕ್ರಿಯೆಗಳು ಬಂದಿದ್ದವು.

ಇದರ ಬೆನ್ನಲ್ಲೇ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ ಪ್ರಕಾಶ್ ತ್ರಿಮೂರ್ತಿಗಳ ಸಂಗಮದಿಂದ ಮತ್ತೊಂದು ಕೊರೊನಾ ಜಾಗೃತಿ ಗೀತೆ ತಯಾರಾಗಿದೆ. ಶನಿವಾರ ಸಂಜೆ ಈ ಹಾಡು ಯ್ಯೂಟೂಬ್ ನಲ್ಲಿ‌ ಬಿಡುಗಡೆಗೊಂಡಿದೆ. ಈ ಹಾಡನ್ನೊಮ್ಮೆ ನೀವೂ ಕೇಳಿ. ಕೊರೊನಾ ಭೀತಿಯಿಂದ ಹೊರ ಬನ್ನಿ.

ಹಾಡಿನ ವಿಡಿಯೋ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ ನೋಡಿ

ನಿರ್ದೇಶಕ ಯೋಗರಾಜ್ ಭಟ್ ಕೊರೊನಾ ಹಾಡಿನ ಬಗ್ಗೆ ಇಷ್ಟೆಲ್ಲಾ ಹೇಳಿದ್ದಾರೆ. ಒಮ್ಮೆ ಓದಿ.

“ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ ಹಾಗು ನಗರ ಪೋಲಿಸ್ ಆಯುಕ್ತರಾದ ಶ್ರೀ ಭಾಸ್ಕರ್ ರಾವ್ ಅವರು ತಮ್ಮ ಅಮೃತ ಹಸ್ತದಿಂದ ಹಾಡನ್ನು ಬಿಡುಗೊಳಿಸಿ ಮನಃಪೂರ್ವಕವಾಗಿ ಹಾಡನ್ನು ಮೆಚ್ಚಿ ತಂಡದ ಬೆನ್ನುತಟ್ಟಿದ್ದಕ್ಕಾಗಿ ಇಡೀ ತಂಡ ಅವರಿಗೆ ಆಭಾರಿಯಾಗಿದ್ದೇವೆ.

ಅದಾಗಲೇ ಹಾಡನ್ನು ಸಾವಿರಾರು ಮಂದಿ ಮೆಚ್ಚಿ ತಮ್ಮ ಪ್ರತಿಕ್ರಿಯೆಗಳನ್ನು ಕಳುಹಿತ್ತಿರುವುದಕ್ಕಾಗಿ ತಮಗೆಲ್ಲಾ ಅನಂತಾನಂತ ವಂದನೆಗಳು. ಈ ಕೆಟ್ಟ ಪರಿಸ್ಥಿತಿಯಲ್ಲಿ ನಿಮಗೆಲ್ಲಾ ಸ್ಫೂರ್ತಿ ತುಂಬುವ ಪ್ರಯತ್ನ ತಂಡವಾಗಿ ನಾವು ಮಾಡಿದ್ದೇವೆ. ಹಾಡನ್ನು ನಿಮ್ಮ ಪ್ರೀತಿ ಪಾತ್ರರಿಗೆ ತಲುಪಿಸುವ ಮೂಲಕ ನೀವೂ ಅವರಿಗೆ ಸ್ಫೂರ್ತಿ ತುಂಬಬೇಕೆನ್ನುವುದೇ ಈ ಹಾಡಿನ ಉದ್ದೇಶ ಹಾಗು ಇಡೀ ತಂಡದ ಆಶಯ.”

      –ಯೋಗರಾಜ್ ಭಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಸಂದೇಶ್‍ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್‍.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending