ಸಿನಿ ಸುದ್ದಿ
ತ್ರಿಮೂರ್ತಿ ಸಂಗಮದಿಂದ ಹೊರ ಬಂತು ಕೊರೊನಾ ಹಾಡು : ಈ ಸಮಯದ ಸ್ಪೂರ್ತಿ ಇದು ; ಮಿಸ್ ಮಾಡ್ದೆ ನೋಡಿ..!
ಸುದ್ದಿದಿನ ಡೆಸ್ಕ್ : ಕೆಲವು ದಿನಗಳ ಹಿಂದೆಯಷ್ಟೇ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ಸಾಹಿತಿ ಜಯಂತ್ ಕಾಯ್ಕಿಣಿ ಬರೆದಿದ್ದರು. ಆ ಹಾಡಿಗೆ ಸಂಗೀತ ಸಂಯೋಜಿಸಿ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಾಡಿದ್ದರು. ಜನರಿಂದ ಆ ಹಾಡಿಗೆ ಒಳ್ಳೆಯ ಪ್ರತಿಕ್ರಿಯೆಗಳು ಬಂದಿದ್ದವು.
ಇದರ ಬೆನ್ನಲ್ಲೇ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ ಪ್ರಕಾಶ್ ತ್ರಿಮೂರ್ತಿಗಳ ಸಂಗಮದಿಂದ ಮತ್ತೊಂದು ಕೊರೊನಾ ಜಾಗೃತಿ ಗೀತೆ ತಯಾರಾಗಿದೆ. ಶನಿವಾರ ಸಂಜೆ ಈ ಹಾಡು ಯ್ಯೂಟೂಬ್ ನಲ್ಲಿ ಬಿಡುಗಡೆಗೊಂಡಿದೆ. ಈ ಹಾಡನ್ನೊಮ್ಮೆ ನೀವೂ ಕೇಳಿ. ಕೊರೊನಾ ಭೀತಿಯಿಂದ ಹೊರ ಬನ್ನಿ.
ಹಾಡಿನ ವಿಡಿಯೋ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ ನೋಡಿ
ನಿರ್ದೇಶಕ ಯೋಗರಾಜ್ ಭಟ್ ಕೊರೊನಾ ಹಾಡಿನ ಬಗ್ಗೆ ಇಷ್ಟೆಲ್ಲಾ ಹೇಳಿದ್ದಾರೆ. ಒಮ್ಮೆ ಓದಿ.
“ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ ಹಾಗು ನಗರ ಪೋಲಿಸ್ ಆಯುಕ್ತರಾದ ಶ್ರೀ ಭಾಸ್ಕರ್ ರಾವ್ ಅವರು ತಮ್ಮ ಅಮೃತ ಹಸ್ತದಿಂದ ಹಾಡನ್ನು ಬಿಡುಗೊಳಿಸಿ ಮನಃಪೂರ್ವಕವಾಗಿ ಹಾಡನ್ನು ಮೆಚ್ಚಿ ತಂಡದ ಬೆನ್ನುತಟ್ಟಿದ್ದಕ್ಕಾಗಿ ಇಡೀ ತಂಡ ಅವರಿಗೆ ಆಭಾರಿಯಾಗಿದ್ದೇವೆ.
ಅದಾಗಲೇ ಹಾಡನ್ನು ಸಾವಿರಾರು ಮಂದಿ ಮೆಚ್ಚಿ ತಮ್ಮ ಪ್ರತಿಕ್ರಿಯೆಗಳನ್ನು ಕಳುಹಿತ್ತಿರುವುದಕ್ಕಾಗಿ ತಮಗೆಲ್ಲಾ ಅನಂತಾನಂತ ವಂದನೆಗಳು. ಈ ಕೆಟ್ಟ ಪರಿಸ್ಥಿತಿಯಲ್ಲಿ ನಿಮಗೆಲ್ಲಾ ಸ್ಫೂರ್ತಿ ತುಂಬುವ ಪ್ರಯತ್ನ ತಂಡವಾಗಿ ನಾವು ಮಾಡಿದ್ದೇವೆ. ಹಾಡನ್ನು ನಿಮ್ಮ ಪ್ರೀತಿ ಪಾತ್ರರಿಗೆ ತಲುಪಿಸುವ ಮೂಲಕ ನೀವೂ ಅವರಿಗೆ ಸ್ಫೂರ್ತಿ ತುಂಬಬೇಕೆನ್ನುವುದೇ ಈ ಹಾಡಿನ ಉದ್ದೇಶ ಹಾಗು ಇಡೀ ತಂಡದ ಆಶಯ.”
–ಯೋಗರಾಜ್ ಭಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಿಚ್ಚ ಸುದೀಪ್ ತಾಯಿ ನಿಧನ
ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಕೊನೆಯುಸಿರೆಳೆದರು.
ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್ಗೆ.. ಬೀಚ್ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ6 days ago
ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಚಿತ್ರದುರ್ಗ ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ ಮತಗಟ್ಟೆಗಳ ಹೆಸರು ಪರಿಷ್ಕರಣೆ
-
ದಿನದ ಸುದ್ದಿ5 days ago
ಮೈಸೂರಿನಲ್ಲಿ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
-
ದಿನದ ಸುದ್ದಿ5 days ago
ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ
-
ದಿನದ ಸುದ್ದಿ5 days ago
ಪೊಕ್ಸೋ ಕಾಯ್ದೆಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ
-
ದಿನದ ಸುದ್ದಿ5 days ago
ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!