Connect with us

ದಿನದ ಸುದ್ದಿ

ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ: ಪಕ್ಕದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತೀ ಹೆಚ್ಚು ಕೊರೊನ ಪ್ರಕರಣಗಳು ದಾಖಲಾಗುತ್ತಿದ್ದು, ಈ ರಾಜ್ಯಗಳೊಂದಿಗೆ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವುದರಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಇದು ಮೂರನೇ ಅಲೆಯ ಮುನ್ಸೂಚನೆಯಾಗಿದ್ದು ಎಚ್ಚರದಿಂದಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಕೋವಿಡ್-19 ಎರಡನೇ ಅಲೆಯ ಸಂಪೂರ್ಣ ನಿಯಂತ್ರಣ ಹಾಗೂ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗೆಗೆ ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಈಗಾಗಲೇ ಹೋಮ್ ಐಸೋಲೆಷನ್ ಸಂಪೂರ್ಣವಾಗಿ ನಿಲ್ಲಿಸಿದ್ದು ವರದಿಯಾಗುವ ಪ್ರಕರಣಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ವಿರೋಧ ವ್ಯಕ್ತಪಡಿಸುತ್ತಾರೆ. ಹಾಗಾಗಿ ಜಿಲ್ಲಾ ಮಟ್ಟದಲ್ಲಿ ಒಂದು ಕೋವಿಡ್ ಕೇರ್ ಸೆಂಟರ್ ತೆಗೆದು ಅವರುಗಳನ್ನು ಈ ಸೆಂಟರ್‍ಗಳಲ್ಲಿ ಉಪಚರಿಸಲಾಗುವುದು ಎಂದರು.

ಕೋವಿಡ್-19 ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲಿ ಅದನ್ನು ತಡೆಗಟ್ಟಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೋವಿಡ್ ಕರ್ತವ್ಯದ ವೈದ್ಯರು ಸಿಬ್ಬಂದಿಗೆ ತರಬೇತಿ ನೀಡಿ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿಸಬೇಕು. ಜಿಲ್ಲಾಡಳಿತ, ಇಲಾಖೆಗಳ ಸಮನ್ವಯತೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮಕ್ಕಳಿಗೆ ಬರಬಹುದಾದ ಸೋಂಕನ್ನು ತಡೆಗಟ್ಟಲು ಸಜ್ಜಾಗಬೇಕು ಹಾಗೂ ಬೇಕಾದ ಎಲ್ಲಾ ವೈದ್ಯಕೀಯ ಸಲಕರಣೆಗಳನ್ನು ಮುಂಜಾಗ್ರತವಾಗಿ ಸಿದ್ಧಮಾಡಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ | ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಸಾಹೀರಾಬಾನು ಫಾರೂಕಿ

ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಬರದಂತೆ ತಡೆಗಟ್ಟಬೇಕಾದ ಜವಾಬ್ದಾರಿ ಆಯಾ ಸ್ಥಳೀಯ ಮಟ್ಟದ ಅಧಿಕಾರಿಗಳದ್ದಾಗಿದ್ದು, ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ದಂಡ ವಿಧಿಸದಿರುವ ಕಾರಣ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು, ಧಾರ್ಮಿಕ ಸ್ಥಳಗಳಲ್ಲಿ ದರ್ಶನದ ಜೊತೆಗೆ ಸೇವೆ ಸಲ್ಲಿಸುವುದು ಹೀಗೆ ಬೇಜವ್ದಾರಿಯಿಂದ ನಿಯಮ ಉಲ್ಲಂಘಿಸಿ ನಡೆಯುತ್ತಿರುವುದರಿಂದ 3ನೇ ಅಲೆಯ ಅಪಾಯವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ದಂಡ ವಿಧಿಸಬೇಕು ಎಂದು ತಿಳಿಸಿದರು.

ಮೊದಲನೇ ಅಲೆಯಲ್ಲಿ 1800 ಮಕ್ಕಳ ಪ್ರಕರಣಗಳು, 2ನೇ ಹಂತದಲ್ಲಿ 2,600 ಪ್ರಕರಣಗಳು ವರದಿಯಾಗಿದ್ದು, 3ನೇ ಅಲೆಯಲ್ಲಿ 4 ಸಾವಿರ ಮಕ್ಕಳ ಕೋವಿಡ್ ಪ್ರಕರಣಗಳು ವರದಿಯಾಗಬಹುದು ಎಂದು ಅಂದಾಜಿಸಿದ್ದು, ಈ ಪೈಕಿ 200 ಮಕ್ಕಳು ಆಸ್ಪತ್ರೆಗೆ ದಾಖಲಾಗಬಹುದು ಹಾಗೂ 40 ಮಕ್ಕಳು ಐಸಿಯುನಲ್ಲಿ ದಾಖಲಾಗಬಹುದು ಎಂದು ಅಂದಾಜಿಸಲಾಗಿದೆ. ಐಸಿಯುನಲ್ಲಿ ದಾಖಲಾಗುವ ಮಕ್ಕಳಿಗೆ ಬೇಕಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಜಿಲ್ಲಾಸ್ಪತ್ರೆಯಲ್ಲಿ 30 ಕ್ಕಿಂತ ಹೆಚ್ಚು ಬೆಡ್‍ಗಳು, 36 ಐಸಿಯು ಪೆಡಿಯಾಟ್ರಿಕ್ ಬೆಡ್‍ಗಳಿವೆ. ಅಗತ್ಯವಿರುವ ವೆಂಟಿಲೇಟರ್ಸ್, ಐಸಿಯು ಬೆಡ್ಸ್, ಮಲ್ಟಿಪ್ಯಾರಾ ಮಾನಿಟರ್ ಮತ್ತು ಇನ್ನುಳಿದವುಗಳನ್ನು ತರಿಸಲು ಈಗಾಗಲೇ ಏಜೆನ್ಸಿ ಗುರುತಿಸಿದ್ದು 10 ದಿನದೊಳಗಾಗಿ ತರಿಸಲಾಗುವುದು ಎಂದರು.

ನಗರ ಪ್ರದೇಶದಲ್ಲಿ ನಡೆಯುವ ಸಂತೆ ಜಾತ್ರೆಗಳಲ್ಲಿ ಬಿಗಿ ಕ್ರಮ ಅನುಸರಿಸಿ ಕೋವಿಡ್ ನಿಯಮಾ ಪಾಲಿಸಲು ತಿಳಿಸಬೇಕು. ಒಂದು ವೇಳೆ ವಿರೋಧಿಸಿದರೆ ಪೊಲೀಸರ ಸಹಾಯದಿಂದ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು. ನಿನ್ನೆ ಜಿಲ್ಲೆಯಲ್ಲಿ ಕೇವಲ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದರಿಂದ ಕೋವಿಡ್ ಇಲ್ಲವೆಂದು ಮೈಮರೆಯುವುದು ಬೇಡ. ಒಮ್ಮೆಲೆ ಹೆಚ್ಚು ಪ್ರಕರಣಗಳು ಬಂದಿರುವ ಉದಾಹರಣೆಗಳು ನಮ್ಮ ಮುಂದಿದೆ ಎಂದರು.

ದುರ್ಬಲ ವರ್ಗದ 17 ಸಾವಿರ ಅಪೌಷ್ಠಿಕ ಮಕ್ಕಳಪಟ್ಟಿ ನಮ್ಮಲ್ಲಿದ್ದು ಇವರಲ್ಲಿ 10 ಸಾವಿರ ಮಕ್ಕಳ ಪೋಷಕರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಉಳಿದ 7 ಸಾವಿರ ಮಕ್ಕಳ ಪೋಷಕರಿಗೂ 15 ದಿನದೊಳಗಾಗಿ ಆದ್ಯತೆಯ ಮೇಲೆ ಲಸಿಕೆ ನೀಡಲು ಕ್ರಮ ವಹಿಸಲು ಸೂಚಿಸಿದರು. ಕೈಗಾರಿಕ ವಲಯಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಹಾಗೂ ಅಂತರಾಜ್ಯದಿಂದ ಬರುವ ಲಾರಿ ಚಾಲಕ ಹಾಗೂ ನಿರ್ವಾಹಕರಿಗೆ ಅಗತ್ಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ರಾಜ್ಯದಲ್ಲಿ 3ನೇ ಅಲೆಯ ಮುನ್ಸೂಚನೆ ಕಂಡು ಬಂದಿದ್ದು ಮಕ್ಕಳ ಮೇಲೆ ತೀವ್ರವಾಗಿ ಪರಿಣಾಮ ಬೀರಲಿದೆ. ಇದಕ್ಕಾಗಿ ಪೋಷಕರು ಮಕ್ಕಳನ್ನು ಬಹಳ ಸುರಕ್ಷತೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಆದ್ದರಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಕ್ಕಳ ಪೋಷಕರಿಗೆ ಸೋಂಕು ಹಾಗೂ ಲಸಿಕೆಯ ಬಗ್ಗೆ ಜಾಗೃತಿ ನೀಡಿ ಲಸಿಕೆ ಪಡೆಯಲು ಮನವೊಲಿಸಬೇಕು ಎಂದರು.

ಪ್ರತಿಯೊಂದು ತಾಲ್ಲೂಕು, ಗ್ರಾಮದ ವ್ಯಾಪ್ತಿಯ ಅಂಗನವಾಡಿಗೆ ಬರುವ ಪ್ರತಿಯೊಂದು ಮಗುವಿಗೂ ಹಾಗೂ ಮಕ್ಕಳ ಪೋಷಕರಿಗೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ತಿಳಿಸಬೇಕು. ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯವನ್ನು ಪಡೆದುಕೊಂಡು ಮನೆ-ಮನೆಗೆ ಭೇಟಿ ನೀಡಿ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ನಡೆಯುವ ಸಭೆ ಸಮಾರಂಭ, ಮದುವೆ ಕಾರ್ಯಗಳಲ್ಲಿ ಸರ್ಕಾರದ ಆದೇಶದಂತೆ 100 ಕ್ಕಿಂತ ಹೆಚ್ಚಿನ ಜನರು ಪಾಲ್ಗೊಂಡಿರುವುದು ಕಂಡು ಬಂದಲ್ಲಿ ಕೂಡಲೆ ದಂಡ ವಿಧಿಸಿ ಪ್ರಕರಣ ದಾಖಲಿಸಿಬೇಕು. ಹಾಗೂ ಮದುವೆ ಕಾರ್ಯಕ್ರಮದಲ್ಲಿ ಚಿತ್ರೀಕರಿಸಲಾದ ವಿಡಿಯೋವನ್ನು ಸಂಬಂಧಿಸಿದ ಅಧಿಕಾರಿಗಳು ವೀಕ್ಷಿಸಿ ನಿಗದಿಗಿಂತ ಹೆಚ್ಚು ಜನ ಸೇರಿದಲ್ಲಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಾದ ದಿನಸಿ ಅಂಗಡಿ, ಹಾಲಿನ ಡೈರಿ, ಮಾರುಕಟ್ಟೆ, ಹಾಗೂ ದೇವಸ್ಥಾನಗಳಲ್ಲಿ ಜನರು ಗುಂಪಿನಲ್ಲಿ ಸೇರುತ್ತಿದ್ದು, ಅದರಲ್ಲೂ ಶ್ರಾವಣ ಮಾಸದಲ್ಲಿ ಜನರು ದೇವಸ್ಥಾನಗಳಿಗೆ ಹೋಗುವುದು ಹೆಚ್ಚು. ಜನರು ಆದಷ್ಟು ಮುಂಜಾಗ್ರತ ಕ್ರಮಗಳನ್ನು ವಹಿಸಿದರೆ ಸೋಂಕನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಜನರು ಬೇಜವಾಬ್ದಾರಿಯಾಗಿ ವರ್ತಿಸಬಾರದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ, 3ನೇ ಅಲೆ ಬಂದೆ ಬರುತ್ತದೆ ಎಂಬುದು ಖಾತರಿಯಾಗಿದ್ದು, ಮಕ್ಕಳಿಗೆ ಬಂದರೆ ಪೋಷಕರು ಬಹಳಷ್ಟು ಆತಂಕಕ್ಕೊಳಗಾಗುತ್ತಾರೆ. ಸಾಮಾನ್ಯವಾಗಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಪ್ರಮಾಣದಲ್ಲಿರುತ್ತದೆ. ಅವರಲ್ಲಿ ಸೋಂಕು ತಗುಲಿದರೆ ಅದರೊಂದಿಗೆ ಹೋರಾಡುವಷ್ಟು ಶಕ್ತಿ ಅವರಲ್ಲಿ ಇರುವುದಿಲ್ಲ, ಇದರಿಂದಾಗಿ ಪೋಷಕರು ಬಹಳಷ್ಟು ಭಯಭೀತರಾಗುತ್ತಾರೆ. ಆದ್ದರಿಂದ ಆದಷ್ಟು ಜನರಲ್ಲಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಮಹಾನಗರಪಾಲಿಕೆಯ ಗಾಡಿಗಳಲ್ಲಿ ಹಾಗೂ ಪೊಲೀಸ್ ಗಸ್ತು ವಾಹನಗಳಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಧ್ವನಿ ವರ್ಧಕಗಳ ಮೂಲಕ ಅರಿವು ಮೂಡಿಸಬೇಕು ಎಂದರು.

ಈ ಬಗೆಗೆ ಅರಿವು ಮೂಡಿಸಿದ ನಂತರವೂ ಜನರು ಕ್ರಮಗಳನ್ನು ಉಲ್ಲಂಘಿಸಿದರೆ ಅವರಿಗೆ ದಂಡ ವಿಧಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಹಾಗೂ ದೇವಸ್ಥಾನಗಳು, ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಿನಲ್ಲಿ ಜನರು ಸೇರಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದ ಅವರು, ಹೆಚ್ಚು ಜನಜಂಗುಳಿ ಸೇರುವ ಮಾಹಿತಿಯನ್ನು ಮೊದಲೇ ಪಡೆದು ಆ ಸ್ಥಳಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಕೋವಿಡ್ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಬಡ್ತಿಯೊಂದಿಗೆ ವರ್ಗಾವಣೆ ಹೊಂದಿರುವ ಪ್ರಮೋದ್ ನಾಯಕ್ ರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ಆರ್‍ಸಿಹೆಚ್ ಡಾ.ಮೀನಾಕ್ಷಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.


  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಉಳಿದ ಸೇವೆಗಳಿಗೆ ಅನುಮತಿಯಿಲ್ಲದಿದ್ದರು ಹೆಚ್ಚು ಜನ ಸೇರುವ ವರದಿಯಿದ್ದು, ಸಂಬಂಧಿಸಿದ ಪೂಜಾ ಸ್ಥಳಗಳ ಮುಖ್ಯಸ್ಥರು ಜನಜಂಗುಳಿಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಎರಡು ಮೂರು ದಿನಗಳ ಗಡುವು ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ದೇವಸ್ಥಾನಗಳನ್ನು ಬಂದ್ ಮಾಡಿಸಲು ಆದೇಶ ಮಾಡಲಾಗುತ್ತದೆ.

| ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ


  • ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಮಳೆಯ ನಂತರ ಚಿಕನ್‍ಗುನ್ಯ, ಡೆಂಗ್ಯುನಂತಹ ಸಾಂಕ್ರಾಮಿಕ ರೋಗಗಳು ಹರಡುವ ಹಿನ್ನೆಲೆಯಲ್ಲಿ ನೀರು ನಿಲ್ಲುವ ಸ್ಥಳಗಳ ಸ್ವಚ್ಚತೆ, ಡಿಡಿಟಿ ಸಿಂಪರಣೆ ಮಾಡಲು ಸ್ಥಳೀಯ ಆಡಳಿತಗಳು ಗಮನಹರಿಸಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು.

| ಸಿಇಓ ವಿಜಯ ಮಹಾಂತೇಶ ದಾನಮ್ಮನವರ್


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending